ಹಾಸನ: ಹಾಸನದ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಗೌಡ, ಇಂದು ಚುನಾವಣಾಧಿಕಾರಿ ಕಚೇರಿಗೆ ಬಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮೆರವಣಿಗೆ ಮೂಲಕ, ತಮ್ಮ ಕಾರ್ಯಕರ್ತರೊಂದಿಗೆ ಕಚೇರಿಗೆ ಬಂದ ಸ್ವರೂಪ್ ನಾಮಪತ್ರ ಸಲ್ಲಿಸಿದ್ದಾರೆ.
ಈ ವೇಳೆ ಮಾತನಾಡಿದ ಸ್ವರೂಪ್, ನಮ್ಮ ನಾಯಕರಾದಂಥ ದೇವೇಗೌಡರು, ಕುಮಾರಣ್ಣನವರು, ರೇವಣ್ಣನವರು, ಪ್ರಜ್ವಲ್, ಸೂರಜ್, ಭವಾನಿ ಮೇಡಂ ಆಶೀರ್ವಾದದೊಂದಿಗೆ ನಾನು ಇಂದು ನಾಮಪತ್ರ ಸಲ್ಲಿಸಿದ್ದೇನೆ. ಜೊತೆಗೆ ದೇವರ ಆಶೀರ್ವಾದವೂ ಪಡೆದಿದ್ದೇನೆ. ಇದೇ 20ನೇ ತಾರೀಖು ಹಾಸನದಲ್ಲಿ ದೊಡ್ಡ ಜೆಡಿಎಸ್ ಸಮಾವೇಶ ನಡೆಯಲಿದೆ. ಆ ಸಂದರ್ಭ ಮೆರವಣಿಗೆ ನಡೆಸಿ, ನಂತರ ಇನ್ನೊಮ್ಮೆ ನಾಮಪತ್ರ ಸಲ್ಲಿಕೆ ಮಾಡಲಿದ್ದೇನೆ. ಆ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿಯವರು, ರೇವಣ್ಣನವರು, ಪ್ರಜ್ವಲ್, ಸೂರಜ್ ಎಲ್ಲರೂ ಭಾಗಿಯಾಗಲಿದ್ದಾರೆ. ಹಲವು ಕಾರ್ಯಕರ್ತರು ಒಗ್ಗೂಡಿ ಈ ಕಾರ್ಯಕ್ರಮ ಮಾಡಬೇಕೆಂದಿದ್ದೇವೆ ಎಂದು ಸ್ವರೂಪ್ ಹೇಳಿದ್ದಾರೆ.
‘ನನ್ನನು ಹೊರತು ಪಡಿಸಿ ಇನ್ನೆಲ್ಲಾ ಅಭ್ಯರ್ಥಿಗಳು ಕೂಡ ನನಗೆ ಎದುರಾಳಿಗಳೇ’
ಶ್ರೀರಂಗಪಟ್ಟಣಕ್ಕೆ ಚಾಲೆಂಜಿಂಗ್ ಸ್ಟಾರ್ ಎಂಟ್ರಿ, ಸಚ್ಚಿದಾನಂದ್ಗೆ ಸಾಥ್ ಕೊಟ್ಟ ದರ್ಶನ್ ..
ನಾಮಪತ್ರ ಸಲ್ಲಿಸಿದ ಎಸ್.ಎನ್.ನಾರಾಯಣಸ್ವಾಮಿ ಮತ್ತು ವರ್ತೂರು ಪ್ರಕಾಶ್..