- Advertisement -
State News:
ಅ ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಮಳೆ ತಂದ ಅವಾಂತರಕ್ಕೆ ಜನರು ಹೈರಾಣಾಗಿದ್ದಾರೆ. ಮನೆಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ಅವಾಂತರವೇ ಸೃಷ್ಟಿಯಾಗಿದೆ.ನರಸೀಪುರ ತಾಲ್ಲೂಕಿನ ಗ್ರಾಮದಲ್ಲಿ ಘಟನೆ ನಡೆದಿದೆ. ಜನರ ಕಷ್ಟಗಳಿಗೆ ಸ್ಪಂದಿಸದ ಜನ ಪ್ರತಿನಿಧಿಗಳಿಗೆ ಜನರು ಛೀಮಾರಿ ಹಾಕಿದ್ದಾರೆ. ರೊಚ್ಚಿಗೆದ್ದ ಗ್ರಾಮಸ್ಥರಿಂದ ಪಂಚಾಯಿತಿಗೆ ಬೀಗ ಜೆಡಿದು ಪ್ರತಿಭಟನೆ ನಡೆಸಲಾಗಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನಡೆಗೆ ಗ್ರಾಮಸ್ಥರು ಚೀಮಾರಿ ಹಾಕುತ್ತಿದ್ದಾರೆ.ವಾಟಾಳು ಗ್ರಾಪಂ ನಡೆಯುತ್ತಿರುವ ಅವೈಜ್ಞಾನಿಕ ಕಾಮಗಾರಿಯಿಂದ ಮನೆಗಳಿಗೆ ನೀರು ತುಂಬಿದೆ. ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಎರಡು ಮನೆ ಕುಸಿತಗೊಂಡಿದೆ. ಅದೃಷ್ಟವಶಾತ್ ಕುಟುಂಬಸ್ಥರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕಿಸದ ಅಧಿಕಾರಿಗಳ ನಡೆಗೆ ಗ್ರಾಮಸ್ಥರು ಬೇಸರ ವ್ಯಕ್ತ ಪಡಿಸಿದ್ದಾರೆ.
- Advertisement -