Sunday, August 10, 2025

Latest Posts

ತಡಕೋಡ ಗಲಾಟೆ ಪ್ರಕರಣ: ಗರಗ ಠಾಣೆ ಪಿಎಸ್‌ಐ ಪ್ರಕಾಶ್ ಡಿ ಅಮಾನತು

- Advertisement -

Dharwad News: ಧಾರವಾಡ: ಧಾರವಾಡದ ತಡಕೋಡ ಗ್ರಾಮದಲ್ಲಿ ಸದ್ದಾಂ ಹುಸೇನ್ ಎಂಬ ಯುವಕ ರಾಮಮಂದಿರ ಫೋಟೋ ಮೇಲೆ ಹಸಿರು ಧ್ವಜ ಹಾರಿಸಿದಂತೆ ಫೋಟೋ ಎಡಿಟ್ ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದ. ಇದಾದ ಬಳಿಕ ಆ ಗ್ರಾಮದಲ್ಲಿ ದೊಡ್ಡ ಗಲಾಟೆ ನಡೆದಿತ್ತು.

ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು, ಸದ್ದಾಂನನ್ನು ಬಂಧಿಸಿದ್ದರು. ಬಳಿಕ ಆ ಗ್ರಾಮದಲ್ಲಿ ಗಲಾಟೆ ನಡೆದಿತ್ತು. ಸದ್ದಾ ಮನೆ ಮುಂದೆ ಜಮಾಯಿಸಿದ ಕೆಲವರು ಗಲಾಟೆ ಮಾಡಿದ್ದರು. ಈ ವೇಳೆ ಗ್ರಾಮದಲ್ಲಿ ಅಶಾಂತಿ ಉಂಟಾಗಿತ್ತು.

ಈ ಕೇಸ್‌ಗೆ ಸಂಬಂಧಿಸಿದಂತೆ ಗರಗ ಠಾಣೆ ಪಿಎಸ್‌ಐ ತಲೆದಂಡವಾಗಿದೆ. ಪ್ರಕಾಶ್ ಡಿ ಎಂಬ ಗರಗ ಪಿಎಸ್‌ಐ ಅವರನ್ನು ಅಮಾನತು ಮಾಡಲಾಗಿದೆ. ಉತ್ತರವಲಯ ಐಜಿ ವಿಕಾಸ್ ಕುಮಾರ್ ಅಮಾನತು ಮಾಡುವಂತೆ ಆದೇಶ ಹೊರಡಿಸಿದ್ದಾರೆ. ಮುಂಜಾಗೃತಾ ಕ್ರಮ ಕೈಗೊಳ್ಳದ ಕಾರಣಕ್ಕೆ ಪ್ರಕಾಶ್ ಅವರನ್ನು ಅಮಾನತು ಮಾಡಲಾಗಿದೆ.

ಆಸ್ಟ್ರೇಲಿಯಾಕ್ಕೆ ಕೊಕೇನ್‌ ರಫ್ತು ಮಾಡುತ್ತಿದ್ದ ಭಾರತೀಯ ದಂಪತಿಯ ಬಂಧನ

ಸಾವರ್ಕರ್‌ ಪತ್ನಿ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ ನಟಿ, ಬಿಗ್‌ಬಾಸ್ ಚೆಲುವೆ ಅಂಕಿತಾ ಲೋಖಂಡೆ

ಅಭಿಮಾನಿಯ ನಡೆಗೆ ಸಿಟ್ಟಾಗಿ, ಮೈಕ್ ಬಿಸಾಡಿದ ಪಾಕಿಸ್ತಾನಿ ಸಿಂಗರ್

- Advertisement -

Latest Posts

Don't Miss