Thursday, June 19, 2025

Belagavi winter session

ಕರ್ನಾಟಕ ವಿಧಾನಮಂಡಲ 70 ವರ್ಷಗಳಲ್ಲಿ ಹಲವು ಪ್ರಥಮಗಳನ್ನು ದಾಖಲಿಸಿದೆ : ಸಿಎಂ ಬೊಮ್ಮಾಯಿ

ಬೆಳಗಾವಿ: ರಾಜ್ಯದ ವಿಧಾನಮಂಡಲದಲ್ಲಿ ಕ್ರಾಂತಿಕಾರಿ ಮಸೂದೆಗಳು, ಭೂ ಸುಧಾರಣೆ ಕಾಯ್ದೆಗಳು, ಕರ್ನಾಟಕ ಜಿಲ್ಲಾ ಪಂಚಾಯತ್ ಅಧಿಕಾರ ವಿಕೇಂದ್ರೀಕರಣ ಕಾನೂನು ದೇಶದಲ್ಲಿಯೇ ಪ್ರಥಮವಾಗಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಿನ್ನೆ 'ಸದನ ಶೂರರು- ಕಾಫಿ ಟೇಬಲ್' ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿ, ರಾಜ್ಯದ ವಿಧಾನಮಂಡಲದಲ್ಲಿ ಕ್ರಾಂತಿಕಾರಿ ಮಸೂದೆಗಳು, ಬೇರೆ ರಾಜ್ಯಗಳಲ್ಲಿ ಇಂತಹ ಮಸೂದೆಗಳ...

ಬೆಳಗಾವಿ ಹೊರವಲಯದ ರಕ್ಷಣಾ ಇಲಾಖೆಯ 700 ಎಕರೆ ಭೂಮಿಯನ್ನು ಕೈಗಾರಿಕೆಗಳ ಸ್ಥಾಪನೆ ಕೋರಿ ಕೇಂದ್ರಕ್ಕೆ ಪ್ರಸ್ತಾವನೆ : ಮುರುಗೇಶ್ ನಿರಾಣಿ

ಬೆಳಗಾವಿ: ಬೆಳಗಾವಿಯ ಹೊರವಲಯದಲ್ಲಿರುವ ರಕ್ಷಣಾ ಇಲಾಖೆಗೆ ಸೇರಿದ ಸುಮಾರು 700 ಎಕರೆ ಭೂಮಿಯನ್ನು ಕೈಗಾರಿಕೆಗಳ ಸ್ಥಾಪನೆಗೆ ಒದಗಿಸಿದರೆ,ರಾಜ್ಯ ಸರ್ಕಾರದಿಂದ ಪರ್ಯಾಯವಾಗಿ ಖಾನಾಪುರ ತಾಲೂಕಿನಲ್ಲಿ ಒಂದು ಸಾವಿರ ಎಕರೆ ಭೂಮಿಯನ್ನು ರಕ್ಷಣಾ ಇಲಾಖೆಗೆ ಒದಗಿಸಲಾಗುವುದು ಎಂಬ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಹೇಳಿದರು. ಇದು ಸೇತುವೆ...

ಕೋವಿಡ್‌ ನಿಯಂತ್ರಣಕ್ಕೆ ಕ್ರಮ ವಹಿಸಿರುವುದು ವೈಜ್ಞಾನಿಕ ಹಿನ್ನೆಲೆಯಿಂದಲೇ ಹೊರತು, ರಾಜಕೀಯಕ್ಕಲ್ಲ : ಕೆ.ಸುಧಾಕರ್

ಬೆಳಗಾವಿ: ಚೀನಾದಲ್ಲಿ ಕೊರೊನ ಪ್ರಕರಣಗಳು ಹೆಚ್ಚುತ್ತಿದ್ದು, ಕೋವಿಡ್ ನಿಯಂತ್ರಣಕ್ಕೆ ಎಲ್ಲೆಡೆ ಮುನ್ನೆಚ್ಚಿರಿಕೆ ಕ್ರಮವಹಿಸುತ್ತಿದ್ದಾರೆ. ಕೋವಿಡ್‌ ನಿಯಂತ್ರಣಕ್ಕೆ ಕ್ರಮ ವಹಿಸಿರುವುದು ವೈಜ್ಞಾನಿಕ ಹಿನ್ನೆಲೆಯಿಂದಲೇ ಹೊರತು, ರಾಜಕೀಯ ಕಾರಣಕ್ಕಲ್ಲ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ. ಜೆಡಿಎಸ್‌ ನಾಯಕರಾದ ಎಚ್‌.ಡಿ.ಕುಮಾರಸ್ವಾಮಿಯವರು ಹಲವು ದಿನಗಳಿಂದ ಯಾತ್ರೆ ಮಾಡುತ್ತಿದ್ದಾರೆ. ರಾಹುಲ್‌ ಗಾಂಧಿಯುವರು ನೂರು ದಿನಕ್ಕೂ ಹೆಚ್ಚು ಕಾಲ ಯಾತ್ರೆ ಮಾಡಿದ್ದಾರೆ....

ವಿಧಾನಪರಿಷತ್ ನೂತನ ಉಪ ಸಭಾಪತಿಯಾಗಿ ಎಂ.ಕೆ ಪ್ರಾಣೇಶ್ ಆಯ್ಕೆ

ಬೆಳಗಾವಿ: ಇಂದು ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಚುನಾವಣೆ ನಡೆಯಿತು. ಎಂ,ಕೆ ಪ್ರಾಣೇಶ್ ನಾಮಪತ್ರ ಸಲ್ಲಿಸಿದ್ದರು. 39 ಮತ ಪಡೆಯುವ ಮೂಲಕ ಸಭಾಪತಿಯಾಗಿ ಎಂ,ಕೆ ಪ್ರಾಣೇಶ್ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಅರವಿಂದ ಅರಳಿ 26 ಮತ ಪಡೆದಿದ್ದಾರೆ. ಇವರು ಉಪ ಸಭಾಪತಿ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು. ಕೋಟಾ ಶ್ರೀನಿವಾಸ್ ಪೂಜಾರಿ, ಎಸ್....

ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ನೀಡುವ ಪರಿಹಾರಧನ 15 ಲಕ್ಷಕ್ಕೆ ಹೆಚ್ಚಳ: ಆರ್.ಅಶೋಕ

ಬೆಳಗಾವಿ: ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬದವರಿಗೆ ರಾಜ್ಯ ಸರ್ಕಾರ 7.5 ಲಕ್ಷ ರೂಪಾಯಿ ಪರಿಹಾರಧನವನ್ನು ನೀಡುತ್ತಿತ್ತು. ಈಗ 15 ಲಕ್ಷಕ್ಕೆ ಹೆಚ್ಚಳ ಮಾಡಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಕಾಡನೆ ಹಾವಳಿ ಜಾಸ್ತಿ ಇರುವ ಚಿಕ್ಕಮಗಳೂರು, ಹಾಸನ, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಗಜ ಕಾರ್ಯಪಡೆ ರಚಿಸಲಾಗಿದೆ ಎಂದು ತಿಳಿಸಿದರು. ಗುರುವಾರ ವಿಧಾನ...

ಭೂ ಪರಿವರ್ತನೆ ಕಾಲಾವಧಿಯನ್ನು ಏಳು ದಿನಗಳಿಗೆ ಇಳಿಸುವ ಮಸೂದೆ ಅಂಗೀಕಾರ

ಬೆಳಗಾವಿ: ಭೂ ಪರಿವರ್ತನೆ ಕಾಲಾವಧಿಯನ್ನು ಒಂದು ತಿಂಗಳಿನಿಂದ ಏಳು ದಿನಗಳಿಗೆ ಇಳಿಸುವ ಮಸೂದೆಗೆ ವಿಧಾನಸಭೆಯಲ್ಲಿ ಗುರುವಾರ ಅಂಗೀಕಾರ ದೊರೆಯಿತು. ವಿಧಾನಸಭೆಯಲ್ಲಿ ಕಂದಾಯ ಸಚಿವ ಆರ್. ಅಶೋಕ ಕರ್ನಾಟಕ ಭೂ ಕಂದಾಯ ವಿಧೇಯಕ -22 ಮಂಡಿಸಿದರು. ಕೆಲವು ಸಲಹೆ ಸೂಚನೆಗಳನ್ನು ನೀಡಿ ಒಪ್ಪಿಗೆ ನೀಡಲಾಯಿತು. ಕೃಷಿ ಭೂಮಿಯನ್ನು ಕೃಷಿಯೇತರ ಭೂಮಿಯನ್ನಾಗಿ ಪರಿವರ್ತನೆ ಮಾಡಲು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ...

ಒಕ್ಕಲಿಗರ ಮೀಸಲಾತಿ ಹೆಚ್ಚಳದ ಬಗ್ಗೆ ಸಿಎಂ ಬಳಿ ಚರ್ಚಿಸಲಾಗುವುದು : ಡಾ.ಕೆ.ಸುಧಾಕರ್‌

ಬೆಳಗಾವಿ: ಒಕ್ಕಲಿಗರು ಮೀಸಲಾತಿ ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದಾರೆ. ಮೀಸಲಾತಿಗೆ ಆಗ್ರಹಿಸಿ ಅನೇಕ ಸಮುದಾಯಗಳು ಹೋರಾಟ ಮಾಡುತ್ತಿವೆ. ಈ ಬಗ್ಗೆ ಕಂದಾಯ ಸಚಿವರಾದ ಆರ್‌.ಅಶೋಕ್‌ ಅವರ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಬಳಿಕ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. ಬೆಳಗಾವಿಯ ಸುವರ್ಣಸೌಧದಲ್ಲಿ ಮಾತನಾಡಿ, ಕೃಷಿಯನ್ನೇ ಆಧಾರವಾಗಿಟ್ಟುಕೊಂಡು ಬದುಕುತ್ತಿರುವ...

ಅವಧಿಗೂ ಮುನ್ನ ಚುನಾವಣೆಯ ಯಾವುದೇ ಪ್ರಸ್ತಾವನೆ ಇಲ್ಲ : ಸಿಎಂ ಬೊಮ್ಮಾಯಿ

ಬೆಳಗಾವಿ: ಕೋವಿಡ್ ನಿಂದಾಗಿ ಅವಧಿ ಮುಂಚಿತವಾಗಿ ಚುನಾವಣೆ ನಡೆಯಲಿದೆ ಹಾಗೂ ದೆಹಲಿಯ ನಾಯಕರು ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಂದು ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ದೆಹಲಿಯ ನಾಯಕರು ಈ ವಿಚಾರವಾಗಿ ಮಾತನಾಡಿಲ್ಲ. ಅವಧಿಗೂ ಮುಂಚಿತವಾಗಿ ಚುನಾವಣೆ ಮಾಡುವ ಯಾವುದೇ ಪ್ರಸ್ತಾವನೆ ನಮ್ಮ...

ಆಟೋ, ಕ್ಯಾಬ್ ಚಾಲಕರಿಗೆ ಉಚಿತ ಚಿಕಿತ್ಸೆ: ಬಿ. ಶ್ರೀರಾಮುಲು

ಬೆಳಗಾವಿ: ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಭಾರತ್ ಆರೊಗ್ಯ ಯೋಜನೆಯಡಿ ಆಟೋ ಮತ್ತು ಕ್ಯಾಬ್ ಚಾಲಕರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ. ಶ್ರೀರಾಮುಲು ತಿಳಿಸಿದ್ದಾರೆ. ನಿನ್ನೆ ನಡೆದ ಕಲಾಪದಲ್ಲಿ ಶಾಸಕ ಮಂಜುನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು,ರಾಜ್ಯ ಸರ್ಕಾರವು 2011-12 ನೇ ಸಾಲಿನಿಂದ ಕರ್ನಾಟಕ...

5 ಕೋಟಿಗೆ ಉಪಕುಲಪತಿ ಹುದ್ದೆ ಮಾರಾಟ : ತನಿಖೆಗೆ ಡಿ.ಕೆ.ಶಿವಕುಮಾರ್ ಒತ್ತಾಯ

ಬೆಳಗಾವಿ: ಉಪಕುಲಪತಿ ಹುದ್ದೆ 5 ಕೋಟಿಗೆ ಮಾರಾಟ ಆಗುತ್ತಿದೆ ಎಂಬ ಸಂಸದ ಪ್ರತಾಪ್‌ ಸಿಂಹ ಅವರ ಹೇಳಿಕೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ಆಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ. ಉಪಕುಲಪತಿ ಹುದ್ದೆಗೆ ಲಂಚ ನೀಡಬೇಕು ಎಂದು ಹೇಳಿಕೆ ನೀಡಿರುವ ಬಿಜೆಪಿ ನಾಯಕರು ಬಹಳ ಅನುಭವ ಹೊಂದಿರುವ ವಿದ್ಯಾವಂತರು. ಉಪಕುಲಪತಿಗಳ ಹುದ್ದೆಗೆ 5...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img