Bengaluru Crime News: ಬಾಣಸವಾಡಿಯ ಇಂದಿರಾ ಸ್ಟ್ರೀಟ್ನಲ್ಲಿ ಎರಡು ವರ್ಷದ ಹೆಣ್ಣುಮಗು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದ್ದು, ಲಿವ್-ಇನ್ ಸಂಬಂಧದಲ್ಲಿದ್ದ ಪೋಷಕರ ವಿರುದ್ಧ ಅನುಮಾನ ವ್ಯಕ್ತವಾಗಿದೆ. ಮೃತ ಮಗುವನ್ನು ಕಾರ್ಲೆಟ್ ಡೈಸಿ ಎಂದು ಗುರುತಿಸಲಾಗಿದೆ.
ಮಗುವಿಗೆ ಏಕಾಏಕಿ ಉಸಿರಾಟದ ತೊಂದರೆ ಕಾಣಿಸಿಕೊಂಡು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದೆ ಎಂದು ಪೋಷಕರು ತಿಳಿಸಿದ್ದಾರೆ. ಆದರೆ, ಮಗುವಿನ ತಾಯಿಯ...
ಮ್ಯಾಟ್ರಿಮೋನಿಯಲ್ ಸೈಟ್ನಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿ ಮದುವೆ ಆಸೆ ತೋರಿಸಿ ಯುವತಿಗೆ ಕೋಟಿ ಕೋಟಿ ರೂಪಾಯಿಗಳ ವಂಚನೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ, ವಿಜಯ್ ರಾಜ್ ಗೌಡ, ಬೋರೆಗೌಡ ಮತ್ತು ಸೌಮ್ಯ ಎಂಬ ಮೂವರ ವಿರುದ್ಧ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ವೈಟ್ಫೀಲ್ಡ್ ಮೂಲದ ಯುವತಿ, ವೃತ್ತಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್, ಮ್ಯಾಟ್ರಿಮೋನಿಯಲ್ ಮೂಲಕ ಪರಿಚಯವಾದ ವ್ಯಕ್ತಿಯ...
ಉದ್ಯಮಿಯ ಜತೆಯಲ್ಲೇ ಕೆಲಸ ಮಾಡುತ್ತಿದ್ದ ಕಾರು ಚಾಲಕನೇ ಸ್ನೇಹಿತರ ಸಹಾಯದಿಂದ ವಿಲ್ಲಾದಲ್ಲಿ ಭಾರಿ ಆಭರಣ ಕಳ್ಳತನ ಮಾಡಿಸಿರುವ ಪ್ರಕರಣವನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಕಾರು ಚಾಲಕ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ದೊಡ್ಡಬಳ್ಳಾಪುರದ ಚಂದನ್ (27), ಮಂಜುನಾಥ್ (36), ಎನ್. ನರೇಂದ್ರ (28) ಹಾಗೂ ಬಿಹಾರ ಮೂಲದ ಮಂಜಿತ್...
ಪೊಲೀಸ್ ಯೂನಿಫಾರಂ ಹಾಕ್ಕೊಂಡು ರಿಯಲ್ ಪೊಲೀಸ್ ಅಂತ ಬಿಲ್ಡಪ್ ಕೊಟ್ಟು, ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ ನಕಲಿ PSI ಸೇರಿ ನಾಲ್ವರನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಲಾಗಿದೆ. PSI ಎಂಬ ಸೋಗಿನಲ್ಲಿ ಮನೆಗೆ ನುಗ್ಗಿ ಯುವಕನೊಬ್ಬನನ್ನು ಬೆದರಿಸಿ ಹಣ ಸುಲಿಗೆ ಮಾಡಿದ್ದಾರೆ. ಬಂಧಿತರಿಂದ ರೂ.45 ಸಾವಿರ ನಗದು, ಕೃತ್ಯಕ್ಕೆ ಬಳಸಿದ್ದ ಕಾರು ಮತ್ತು...
ಎಟಿಎಂಗಳಿಗೆ ಹಣ ಸಾಗಿಸುತ್ತಿದ್ದ ವಾಹನವನ್ನು ಅಧಿಕಾರಿಗಳ ಸೋಗಿನಲ್ಲಿ ತಡೆದು ನಡೆದ 7.11 ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ, ಪೊಲೀಸರು ಇನ್ನೂ 47 ಲಕ್ಷ ರೂಪಾಯಿಗಳನ್ನು ಜಪ್ತಿ ಮಾಡಿದ್ದಾರೆ. ಈ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 7.01 ಕೋಟಿ ರೂಪಾಯಿ ಹಣವನ್ನು ಪೊಲೀಸರು ಈಗಾಗಲೇ ರಿಕವರ್ ಮಾಡಿದ್ದಾರೆ. ಉಳಿದ 10 ಲಕ್ಷ ರೂಪಾಯಿ ಬಗ್ಗೆ ತನಿಖೆ...
ಬೆಂಗಳೂರಿನಲ್ಲಿ RBI ಅಧಿಕಾರಿಗಳ ಸೋಗಿನಲ್ಲಿ 7 ಕೋಟಿ 11 ಲಕ್ಷ ರೂಪಾಯಿ ದರೋಡೆ ನಡೆದಿದೆ. ಈ ಪ್ರಕರಣಕ್ಕೆ ಈಗ ವೆಬ್ ಸೀರೀಸ್ಗಳು ಸ್ಫೂರ್ತಿಯಾಗಿರಬಹುದೇ ಎಂಬ ಅನುಮಾನ ತನಿಖಾ ತಂಡಕ್ಕೆ ವ್ಯಕ್ತವಾಗಿದೆ. ಮೂರು ಪೊಲೀಸ್ ಠಾಣೆಗಳ ಗಡಿ ಭಾಗದಲ್ಲಿ ಆರೋಪಿಗಳು ದೋಚಿದ ವಾಹನವನ್ನು ಬಿಟ್ಟು ಹೋಗಿರುವುದು ಪ್ಲ್ಯಾನ್ ಬೇಸ್ನ ಆಪರೇಷನ್ ಆಗಿರಬಹುದೆಂಬ ಶಂಕೆಯನ್ನು ಗಾಢಗೊಳಿಸಿದೆ.
ATM ಗಳಿಗೆ...
ಬೆಂಗಳೂರು ನಗರವನ್ನು ಬೆಚ್ಚಿಬೀಳಿಸಿದ ಡಾ. ಕೃತಿಕಾ ರೆಡ್ಡಿ ಕೊಲೆ ಪ್ರಕರಣದಲ್ಲಿ ಈಗ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ನಾನು ಮಾಡ್ಲಿಲ್ಲ ಅಂತಿದ್ದ ಕಿಲ್ಲರ್ ಡಾಕ್ಟರ್ ಮಹೇಂದ್ರ ರೆಡ್ಡಿಯೇ, ಪೊಲೀಸರ ಮುಂದೆ ಕೊನೆಗೂ ತಪ್ಪೊಪ್ಪಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ವಿಚಾರಣೆ ವೇಳೆ ಆತ ಮಾಡಿದ ಒಪ್ಪಂಗೆಯಿಂದ ತನಿಖೆ ಹೊಸ ತಿರುವು ಪಡೆದುಕೊಂಡಿದೆ. ಮಾರತ್ತಹಳ್ಳಿ ಪೊಲೀಸರು ನಡೆಸುತ್ತಿರುವ ತನಿಖೆಯಲ್ಲಿ...
ಯಲಹಂಕ ನ್ಯೂ ಟೌನ್ನಲ್ಲಿರುವ ಲಾಡ್ಜ್ನಲ್ಲಿ ಯುವಕ ಸುಟ್ಟ ಸ್ಥಿತಿಯಲ್ಲಿ ಹಾಗೂ ಯುವತಿ ಬಾತ್ರೂಂನಲ್ಲಿ ಉಸಿರುಗಟ್ಟಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣ ತೀವ್ರ ಚರ್ಚೆಗೆ ಕಾರಣವಾಗಿತ್ತು. ಪ್ರಾಥಮಿಕವಾಗಿ ಆತ್ಮಹತ್ಯೆ ಎಂದು ಶಂಕಿಸಲಾಗಿದ್ದ ಈ ಪ್ರಕರಣದ ಹಿನ್ನೆಲೆ ಈಗ ಬಯಲಾಗಿದೆ. ಮೃತ ಯುವತಿ ಮೂರು ಮಕ್ಕಳ ತಾಯಿ ಎನ್ನುವ ವಿಚಾರ ಮತ್ತು ಘಟನೆ ಸಮಯದಲ್ಲಿ ಸ್ಥಳದಲ್ಲಿದ್ದ ಮೂರನೇ...
ರಾಜಧಾನಿ ಬೆಂಗಳೂರಿನಲ್ಲಿ ಸದ್ದುಮಾಡಿದ ಬಿಕ್ಲು ಶಿವ ಕೊಲೆ ಪ್ರಕರಣವು ರಾಜಧಾನಿಯಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಈಗ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಮತ್ತೊಮ್ಮೆ ಸಂಕಷ್ಟ ಸುತ್ತಿಕೊಂಡಿದೆ. ಸದ್ಯ ಬಂಧನದಿಂದ ರಕ್ಷಣೆ ಪಡೆದಿರುವ ಭೈರತಿ ಬಸವರಾಜ್ಗೆ ಸಂಕಷ್ಟ ಎದುರಾಗಿದೆ. ಈ ಸಂಬಂಧ ವಿಚಾರಣೆಗಾಗಿ ಕರ್ನಾಟಕ ಹೈಕೋರ್ಟ್ ಅಕ್ಟೋಬರ್ 23ಕ್ಕೆ ಅಂತಿಮ ವಿಚಾರಣೆಯನ್ನು ನಿಗದಿಪಡಿಸಿದೆ.
ಹೈಕೋರ್ಟ್ ಪೀಠದ...
ಪ್ರೀತಿ ಸಂಬಂಧಗಳ ಹಿನ್ನೆಲೆಯಲ್ಲಿ ಮೂಡಿದ ವಿವಾದವು ಕೊಲೆಯಲ್ಲಿ ಅಂತ್ಯಗೊಂಡಿದೆ. ಬೆಂಗಳೂರಿನ ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಯನಗರದಲ್ಲಿ ಈ ಘಟನೆ ನಡೆದಿದೆ. ಮಾಜಿ ಪ್ರೇಮಿಯ ಕಣ್ಣೆದುರು ಯುವಕನ ಎದೆಗೆ ಚಾಕು ಇರಿದು ಹತ್ಯೆ ಮಾಡಿರುವ ಭೀಕರ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.
ಮೃತ ಯುವಕನನ್ನು ಕಿರಣ್ ಎಂದು ಗುರುತಿಸಲಾಗಿದೆ. ಆರೋಪಿ ಯುವಕ ಜೀವನ್ ಮತ್ತು...