ಬೆಂಗಳೂರು : ರಾಜ್ಯದಲ್ಲಿ ಜಾತಿ ಗಣತಿ ಜಾರಿಯ ವಿಚಾರಕ್ಕೆ ಸಂಬಂಧಿಸಿದ್ದಂತೆ ಸಮುದಾಯಗಳು ಹಾಗೂ ಸರ್ಕಾರದ ನಡುವೆ ತೀವ್ರ ಜಟಾಪಟಿ ಮುಂದುವರೆದಿದೆ. ಪ್ರಬಲ ಸಮುದಾಯಗಳು ಇದನ್ನು ವಿರೋಧಿಸಿದ್ದರೆ, ಹಿಂದುಳಿದ ಹಾಗೂ ದಲಿತ ಸಮುದಾಯಗಳು ಇದಕ್ಕೆ ಬೆಂಬಲ ಸೂಚಿಸುತ್ತಿವೆ. ಅಲ್ಲದೆ ಸರ್ಕಾರದಲ್ಲಿನ ಸಚಿವರು ಸಹ ಸಮುದಾಯಗಳ ಮಾರ್ಗಾದರ್ಶನದಲ್ಲಿ ಸಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಆದರೆ ಈ ಎಲ್ಲದರ ನಡುವೆ...
ಬೆಂಗಳೂರು : ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ತಡರಾತ್ರಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದ್ದು, ಬೆಂಗಳೂರು ಬೆಚ್ಚಿ ಬಿದ್ದಿದೆ. ಇನ್ನೂ ರಾಮನಗರ ಬಿಡದಿಯಲ್ಲಿರುವ ಅವರ ನಿವಾಸದ ಎದುರು ರಿಕ್ಕಿ ರೈ ಮೇಲೆ ಅಟ್ಯಾಕ್ ಮಾಡಲಾಗಿದ್ದು, ಗಂಭೀರ ಗಾಯಗೊಂಡಿರುವ ಮಾಜಿ ಡಾನ್ ಪುತ್ರನನ್ನು ಆಸ್ಪತ್ರೆಗೆ ದಾಖಲಿಸಿ...
Bengaluru News: ತೀವ್ರ ಕುತೂಹಲ ಹಾಗೂ ಪ್ರತಿಷ್ಠೆಯ ವಿಚಾರವಾಗಿರುವ ಬೆಂಗಳೂರಿನಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ಎಎಐ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿದೆ. ಈಗಾಗಲೇ ಗೊತ್ತು ಮಾಡಿರುವ ಮೂರು ಸ್ಥಳಗಳ ಪೈಕಿ 2ರ ಕುರಿತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಇನ್ನೂ ಪ್ರಮುಖವಾಗಿ ನಗರದಲ್ಲಿ ಎರಡನೇಯ ಅಂತರಾಷ್ಟ್ರೀಯ...
Bengaluru News: ಕಳೆದೆರಡು ದಿನಗಳ ಹಿಂದಷ್ಟೇ ಅಣ್ಣನ ಬೈಕ್ ಮೇಲೆ ಹೊರಟಿದ್ದ ತಂಗಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿರುವ ಪ್ರಕರಣ ಮಾಸುವ ಮುನ್ನವೇ ಇದೀಗ ಮತ್ತೆ ರಾಜ್ಯದಲ್ಲಿ ಇಂಥದ್ದೊಂದು ಪೈಶಾಚಿಕ ಕೃತ್ಯ ನಡೆದಿದೆ. ಬ್ಯಾಡ್ಮಿಂಟನ್ ಕೋಚಿಂಗ್ ಸೆಂಟರ್ ಗೆ ತೆರಳುತ್ತಿದ್ದ 16 ವರ್ಷದ ಬಾಲಕಿಯ ಮೇಲೆ ಕೋಚ್ ಒಬ್ಬ ಅತ್ಯಾಚಾರ ಎಸಗಿರುವ ಘಟನೆಗೆ ಬೆಂಗಳೂರು ಸಾಕ್ಷಿಯಾಗಿದೆ....
Bengaluru News: ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಡದಿ ಉಪನಗರ ಯೋಜನೆಯ ಜಾರಿಗಾಗಿ ಇದೀಗ ರಾಜ್ಯ ಸರ್ಕಾರ ಮುಂದಾಗಿದ್ದು, ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೂಲಕ ಈ ಯೋಜನೆಯನ್ನು ಕೈಗೆತ್ತಿಕೊಂಡಿದೆ.
https://youtu.be/THPk-QvGYcs
ಇನ್ನೂ ಈ ಸಂಬಂಧ ಕಳೆದ ಮಾರ್ಚ್ 13ರಂದು ಸರ್ಕಾರದಿಂದ ಅಧಿಕೃತ ಅಧಿಸೂಚನೆ ಹೊರಬಿದ್ದಿದ್ದು, ಈ ಯೋಜನೆಗೆ ಬೇಕಾಗುವ ಒಟ್ಟು 8,940 ಎಕರೆ...
Political News: ಬೆಂಗಳೂರಿನಲ್ಲಿ ಮೆಟ್ರೋ ದರ ಏರಿಕೆಯಾಗಿದ್ದು, ನಿನ್ನೆಯಿಂದ ಮೆಟ್ರೋ ಖಾಲಿ ಖಾಲಿಯಾಗಿದೆ. ಪ್ರತಿದಿನ ಜನಜಂಗುಳಿಯಿಂದ ತುಂಬಿರುತ್ತಿದ್ದ ಮೆಟ್ರೋ ಬಳಿ ಜನ ಬರುವುದನ್ನೇ ನಿಲ್ಲಿಸಿದ್ದಾರೆ. ಮೆಟ್ರೋದಲ್ಲಿ ಹೋಗುವ ಬದಲು, ಕ್ಯಾಬ್ ಮಾಡಿಕೊಂಡು ಹೋಗುವುದೇ ಲೇಸು. ಅದರಲ್ಲಾದರೂ ಅಷ್ಟೇ ಹಣ ನೀಡಿ, ಆರಾಮವಾಗಿ ಹೋಗಬಹುದು ಅಂತಾ ಹೇಳ್ತಿದ್ದಾರೆ.
ಈ ಮೂಲಕ ಮೆಟ್ರೋ ದರ ಹೆಚ್ಚಳದ ಬಗ್ಗೆ ಆಕ್ರೋಶ...
ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಪುಡಿ ರೌಡಿಗಳ ಪುಂಡಾಟ ಹೆಚ್ಚಾಗಿದೆ. ರೌಡಿ ಶೀಟರ್ ಒಬ್ಬ ಸಿಕ್ಕ ಸಿಕ್ಕವರ ಮೇಲೆ ಚೂರಿಯಿಂದ ಹಲ್ಲೆಯನ್ನ ನಡೆಸಿ ಆತಂಕ ಮೂಡಿಸಿದ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾತ್ರಿ ಸಮಯ ಸುಮಾರು ಐದು ಗಂಟೆಗಳಲ್ಲಿ ಅಮಲಿನಲ್ಲಿ ಬರೋಬ್ಬರಿ ನಾಲ್ವರ ಮೇಲೆ ದಾಳಿ ನಡೆಸಿದ್ದಾನೆ ಈ ರೌಡಿ ಶೀಟರ್. ಹಲ್ಲೆಗೊಳಗಾದ ನಾಲ್ಕು...
Bengaluru News: ಬೆಂಗಳೂರು: ಗೋಪಾಲನ್ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಮತ್ತು ಪ್ಲಾನಿಂಗ್ನ ಮಾಸ್ಟರ್ ಆಫ್ ಆರ್ಕಿಟೆಕ್ಚರ್ ನಲ್ಲಿ ವಿದ್ಯಾರ್ಥಿನಿ ಮೆರಿನ್ ಮ್ಯಾಥ್ಯೂ ಅವರು ಪ್ರಥಮ ರ್ಯಾಂಕ್ ಪಡೆದು ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಅಡಿಯಲ್ಲಿ 9.76 ಸಿಜಿಪಿಎ ಅಂಕಗಳೊಂದಿಗೆ ಮಾಸ್ಟರ್ ಆಫ್ ಆರ್ಕಿಟೆಕ್ಚರ್ ನ ಕನ್ಸ್ಟ್ರಕ್ಷನ್ ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ನಲ್ಲಿ ಮಹತ್ತರ ಸಾಧನೆಗೈದಿರುವುದು ಹೆಮ್ಮೆಯ...
Bengaluru News: ಬೆಂಗಳೂರು: ಪ್ರಕ್ರಿಯಾ ಆಸ್ಪತ್ರೆಯ ಸಹಯೋಗದೊಂದಿಗೆ ಅದ್ವಿಕಾ ಫೌಂಡೇಶನ್ ಆಯೋಜಿಸಿದ್ದ ಬೃಹತ್ ವಾಕಥಾನ್ ನಲ್ಲಿ ಸಾವಿರಾರು ಜನ ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಿದರು.
ವಿಧಾನಸೌಧದಿಂದ ಪ್ರಾರಂಭವಾದ ಈ ವಾಕಥಾನ್ ಬಾಲ ಭವನದಲ್ಲಿ ಮುಕ್ತಾಯಗೊಂಡಿತು. ಈ ಸಂದರ್ಭದಲ್ಲಿ ಕ್ಯಾನ್ಸರ್ ನಿಂದ ಗುಣಮುಖರಾದವರು ಈ ಕಾಯಿಲೆಯ ವಿರುದ್ಧದ ತಮ್ಮ ಹೋರಾಟದ ಸ್ಪೂರ್ತಿದಾಯಕ ಕಥೆಗಳನ್ನು ಹಂಚಿಕೊಂಡರು.
ಈ ಕಾರ್ಯಕ್ರಮದಲ್ಲಿ ಮಾತನಾಡಿದ...
Bengaluru News: ಬೆಂಗಳೂರು, ನ. 23: ನಗರದ ಕೋರಮಂಗಲ ಕ್ಲಬ್ನಲ್ಲಿ ವಿದ್ಯಾರ್ಥಿಗಳಲ್ಲಿನ ವಿನ್ಯಾಸ ಕಲೆ, ಸೃಜನಶೀಲತೆ, ನಾವೀನ್ಯತೆಯನ್ನು ಗುರುತಿಸುವ ನಿಟ್ಟಿನಲ್ಲಿ ʼಲೀವ್ ಇನ್ ದಿ ಮೂಮೆಂಟ್ʼ ಎಂಬ ಥೀಮ್ನೊಂದಿಗೆ ಫ್ಯಾಷನ್ ಶೋ ಕಾರ್ಯಕ್ರಮವನ್ನು ಜೆಡಿ ಇನ್ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿಯು ಆಯೋಜಿಸಿತ್ತು. ಉತ್ತಮ ವಿನ್ಯಾಸ ರೂಪಿಸಿದ ವಿದ್ಯಾರ್ಥಿಗಳಿಗೆ 2025ರ ಉತ್ತಮ ವಿನ್ಯಾಸ ಪ್ರಶಸ್ತಿ ಪ್ರದಾನ...
ಬೆಂಗಳೂರು:ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಅಂದರೆ KPTCL ವತಿಯಿಂದ ತುರ್ತು...