ಬೆಂಗಳೂರು: ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಗರಸಭೆ ಇಂಜಿನಿಯರ್ ಪ್ರವೀಣ್ ಇಂದು ಬೆಂಗಳೂರಿನಲ್ಲಿ ವಿಧಿವಶ ರಾಗಿದ್ದಾರೆ. ಹಾಸನ ನಗರಸಭೆಯ ಇಂಜಿನಿಯರ್ ಆಗಿದ್ದಂತ ಪ್ರವೀಣ್ ಅವರಿಗೆ 45 ವರ್ಷ ವಯಸ್ಸಾಗಿದ್ದು. ಸುಮಾರು 15 ವರ್ಷಗಳ ಕಾಲ ನಗರಸಭೆಯಲ್ಲಿ ಸೇವೆ ಸಲ್ಲಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಪ್ರವೀಣ್ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಇಂದು ಬೆಳಿಗ್ಗೆ ಚಿಕಿತ್ಸೆಗೆ ಸ್ಪಂದಿಸದೇ...
ಬೆಂಗಳೂರು: ಬಿಜೆಪಿ ಅಧಿಕಾರಕ್ಕೆ ಬಂದು ಮೂರೂವರೆ ವರ್ಷಗಳಾದರೂ ಮಹಿಳೆಯರ ಪರವಾಗಿ ಯೋಜನೆಗಳನ್ನು ನೀಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಅರಮನೆ ಮೈದಾನದ ಬಳಿ ಕಾಂಗ್ರೆಸ್ ಆಯೋಜಿಸಿರುವ ‘ನಾ ನಾಯಕಿ’ ಸಮಾವೇಶದಲ್ಲಿ ಮಾತನಾಡಿದ ಅವರು ಬಿಜೆಪಿಯನ್ನು ಟೀಕಿಸಿದರು. ಬಿಜೆಪಿ ಸರ್ಕಾರ ಇವತ್ತು ದೊಡ್ಡದಾಗಿ ಜಾಹೀರಾತು ನೀಡಿದೆ. ಇವರು ಅಧಿಕಾರಕ್ಕೆ ಬಂದು ಇಷ್ಟು...
Political news
ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೆಪಿಸಿಸಿ ವತಿಯಿಂದ ಹಮ್ಮಿಕೊಂಡಿರುವ 'ನಾ ನಾಯಕಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಿದರು. ಸಮಾವೇಶದಲ್ಲಿ ಭಾಗಿಯಾಗಲು ರಾಜ್ಯದ ಹಲವು ಭಾಗಗಳಿಂದ ಮಹಿಳಾ ನಾಯಕಿಯರು ಆಗಮಿಸಿದ್ದರು. ಮೊದಲ ಬಾರಿ ವೇದಿಕೆಯ ಮೇಲೆ ಮಹಿಳೆಯರು ಆಸೀನರಾದರು. ಸಹಸ್ರ ಸಂಖ್ಯೆಯಲ್ಲಿ ಆಗಮಿಸಿ...
ಬೆಂಗಳೂರು: ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ 'ನಾ ನಾಯಕಿ' ಸಮಾವೇಶ ಆಯೋಜನೆ ಮಾಡಲಾಗಿದ್ದು,12.30ಕ್ಕೆ ಸಮಾವೇಶ ಆರಂಭವಾಗಲಿದೆ. 11 ಗಂಟೆಗೆ ದೆಹಲಿಯಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆ. ವಿಮಾನ ನಿಲ್ದಾಣದಿಂದ ನೇರವಾಗಿ ಅರಮನೆ ಮೈದಾನಕ್ಕೆ ಆಗಮಿಸಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಇಂದು ಬೆಂಗಳೂರಿಗೆ ಆಗಮಿಸುತ್ತಿರುವ...
ಬೆಂಗಳೂರು: ಇಂದು ಪ್ರಿಯಾಂಕಾ ಗಾಂಧಿ ಬೆಂಗಳೂರಿಗೆ ಆಗಮಿಸಿತ್ತಿದ್ದು, ಅರಮನೆ ಮೈದಾನದಲ್ಲಿ ನಡೆಯಲಿರುವ ನಾ ನಾಯಕಿ ಎಂಬ ಮಹಿಳಾ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಗಳೂರಿಗೆ ಆಗಮಿಸುತ್ತಿದ್ದು, ರಸ್ತೆಗಳಲ್ಲಿ ಪ್ರಿಯಾಂಕಾ ಗಾಂಧಿ ಅವರ ಬೃಹತ್ ಕಟೌಟ್ಗಳು ರಾರಾಜಿಸುತ್ತಿವೆ. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರಕ್ಕೆ...
ಬೆಂಗಳೂರು: ಸಹಕಾರ ರಂಗದಲ್ಲಿ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡು ಹೋಗುವುದು ಬಹಳ ಮುಖ್ಯ, ನಂಬಿಕೆಯನ್ನು ಉಳಿಸಿಕೊಳ್ಳಲು ಕಟಿಬದ್ಧವಾಗಿ ಆಗಿ ಕರ್ತವ್ಯ ನಿರ್ವಹಿಸಬೇಕು. ರಾಜ್ಯದ ಆರ್ಥಿಕ ಪ್ರಗತಿಗೆ ಸಹಕಾರ ರಂಗ ದೊಡ್ಡ ಕೊಡುಗೆಯನ್ನು ನೀಡಲು ಸಾಧ್ಯವಿದ್ದು, ಕರ್ನಾಟಕದಲ್ಲಿ ಸಹಕಾರ ಸಾಮರ್ಥ್ಯ ಪೂರ್ಣಪ್ರಮಾಣದಲ್ಲಿ ಬಳಕೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಸಹಕಾರ ಇಲಾಖೆ & ರಾಜ್ಯದ ಎಲ್ಲಾ ಸಹಕಾರ...
ಬೆಂಗಳೂರು: 2023ರ ವಿಧಾನಸಭಾ ಚುನಾವಣೆಗೆ ರಾಜ್ಯದಲ್ಲಿ ಗೃಹ ಸಚಿವ ಅಮಿತ್ ಶಾ ಅವರು ತಯಾರಿ ಆರಂಭಿಸಿದ್ದಾರೆ. ಇದೇ ವಿಚಾರವಾಗಿ ಚರ್ಚಿಸಲು ಇಂದು ಕರ್ನಾಟಕದ ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಅಮಿತ್ ಶಾ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ವೇಳೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯದ ಕಂದಾಯ ಸಚಿವ ಆರ್.ಅಶೋಕ್, ಗೃಹ ಸಚಿವ ಆರಗ...
ಬೆಂಗಳೂರು: ಇಂದು ಮಧ್ಯರಾತ್ರಿ ಹೊಸ ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸಲು ದೇಶದ ಜನ ಸಜ್ಜಾಗಿದ್ದಾರೆ. ಇತ್ತ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಬ್ರಿಗೇಡ್, ಎಂಜಿ ರಸ್ತೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಅವಕಾಶ ನೀಡಲಾಗಿಡಿದೆ. ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 1 ಗಂಟೆವರೆಗೆ ಬ್ರಿಗೇಡ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಪೊಲೀಸರು ಬಿಗಿ ಭದ್ರತೆ...
ಬೆಂಗಳೂರು: ಮಂಡ್ಯದಲ್ಲಿ ರೈತರು ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಗೆ ಆಗ್ರಹಿಸಿ ಪ್ರತಿಭಟನೆಯನ್ನು ನಡೆಸುತ್ತಿದ್ದರು, ಅದನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿರುವ ಹಿನ್ನೆಲೆ ಬಲವಂತವಾಗಿ ಹತ್ತಿಕ್ಕಿದ ಪೊಲೀಸರ ಕ್ರಮವನ್ನು ಆಮ್ ಆದ್ಮಿ ಪಾರ್ಟಿ ರಾಜ್ಯ ಕಾರ್ಯದರ್ಶಿ ಬಿ.ಟಿ.ನಾಗಣ್ಣ ಖಂಡಿಸಿದ್ದಾರೆ.
ಬೆಂಗಳೂರು ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿ.ಟಿ.ನಾಗಣ್ಣ, ನ್ಯಾಯಯುತ ಬೇಡಿಕೆಗಳನ್ನು...
ಬೆಂಗಳೂರು: ಹೊಸ ವರ್ಷಕ್ಕೆ ಇನ್ನೇನು ಎರಡೇ ದಿನ ಬಾಕಿ ಇದ್ದು, ಸಂಭ್ರಮಿಸಲು ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ. ಬೆಂಗಳೂರಿನ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಮತ್ತು ಚರ್ಚ್ ಸ್ಟ್ರೀಟ್ಗಳಲ್ಲಿ ಜನರು ಜಾಸ್ತಿ ಸೇರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲು 500ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ನಾವು ನಮ್ಮ ಬೆಂಗಳೂರು ಸುರಕ್ಷಿತವಾಗಿಡಲು ಹೆಚ್ಚಿನ ಸಮಯ...
Hubli News: ಶಾಂತವಾಗಿದ್ದ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇದೀಗ ಐತಿಹಾಸಿಕ ಪುಷ್ಕರಣಿ ವಿಚಾರ ವಿವಾದದ ಕೇಂದ್ರವಾಗಿದೆ. ದೇವಸ್ಥಾನದ ಪುಷ್ಕರಣಿ ಜಾಗದಲ್ಲಿ ಮಹಾನಗರ ಪಾಲಿಕೆ ರಸ್ತೆ ನಿರ್ಮಿಸಿದೆ...