ಕಲ್ಲು ತೂರಾಟ ಘಟನೆ ಬಳಿಕ ಮದ್ದೂರಿನಲ್ಲಿ, ಹಿಂದುತ್ವದ ಕೂಗು ಜೋರಾಗಿದೆ. ಈ ಅವಕಾಶವನ್ನೇ ಬಳಸಿಕೊಂಡು ರಾಜ್ಯ ಬಿಜೆಪಿ ನಾಯಕರು, ಮದ್ದೂರಿನಲ್ಲಿ ಹಿಂದುತ್ವದ ಕಹಳೆ ಮೊಳಗಿಸಿದ್ರು. ಬಳಿಕ ಹಿಂದೂ ಫೈರ್ ಬ್ರ್ಯಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಎಂಟ್ರಿ ಕೊಟ್ಟಿದ್ದಾರೆ.
ಸೆಪ್ಟೆಂಬರ್ 9ರಂದು ಬೆಳ್ಳಂಬೆಳಗ್ಗೆಯೇ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ದೌಡಾಯಿಸಿದ್ರು. ಮಧ್ಯಾಹ್ನದ ಬಳಿಕ...
ರಾಜ್ಯದಲ್ಲಿ ಬಿಡದಿ ಟೌನ್ಶಿಪ್ ಜಟಾಪಟಿ ತಾರಕಕ್ಕೇರಿದೆ. ಕಾಂಗ್ರೆಸ್-ಜೆಡಿಎಸ್ ನಾಯಕರ ನಡುವಿನ ಟಾಕ್ ವಾರ್ ಜೋರಾಗಿದೆ. ಈ ಬಾರಿ ಡಿ.ಕೆ. ಶಿವಕುಮಾರ್ ಆರೋಪಗಳಿಗೆಲ್ಲಾ, ನಿಖಿಲ್ ಕುಮಾರಸ್ವಾಮಿ ಖಡಕ್ ಟಾಂಗ್ ಕೊಟ್ಟಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಜನರೊಂದಿಗೆ ಜನತಾದಳ ಕಾರ್ಯಕ್ರದಲ್ಲಿ ನಿಖಿಲ್ ಭಾಗಿಯಾಗಿದ್ರು. ಭಾಷಣದಲ್ಲಿ ಡಿಕೆಶಿ ವಿರುದ್ಧ ಗುಡುಗಿದ್ದಾರೆ.
ಮಿಸ್ಟರ್ ಶಿವಕುಮಾರ್ ಅವರೇ ಸುಳ್ಳು ನಿಮ್ಮನೆ ದೇವರು....
ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎನ್ಐಎಗೇ ವಹಿಸಬೇಕು. ವಿಪಕ್ಷ ಬಿಜೆಪಿ-ಜೆಡಿಎಸ್ ಆಗ್ರಹ ಜೋರಾಗಿದೆ. ಕೇಂದ್ರ ಸರ್ಕಾರಕ್ಕೂ ಮನವಿ ಮಾಡಲು ದೋಸ್ತಿ ನಾಯಕರು ಸಜ್ಜಾಗಿದ್ದಾರೆ. ಇನ್ನೆರಡು ದಿನಗಳಲ್ಲಿ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಲು, ಹೆಚ್.ಡಿ. ಕುಮಾರಸ್ವಾಮಿ ತಯಾರಿ ಮಾಡಿಕೊಂಡಿದ್ದಾರೆ. ಆದರೆ, ಕಾಂಗ್ರೆಸ್ಸಿಗರು ಮಾತ್ರ ಎನ್ಐಎ ತನಿಖೆಯ ಅಗತ್ಯವಿಲ್ಲ ಅಂತಾ ಪದೇ ಪದೇ ಹೇಳ್ತಿದ್ದಾರೆ. ಆದರೆ ಧರ್ಮಸ್ಥಳ...
ಧರ್ಮಸ್ಥಳಕ್ಕೆ ಬೆಂಬಲ ವ್ಯಕ್ತಪಡಿಸುವ ಹೆಸರಿನಲ್ಲಿ ರಾಜಕೀಯ ಪೈಪೋಟಿ ಹೆಚ್ಚಾಗಿದೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿಗಳಿಗೆ ಬೆಂಬಲ ಕೊಟ್ಟಿದ್ದಾರೆ. ಇದೀಗ ಕಾಂಗ್ರೆಸ್ ಕೂಡ ಶಾಂತಿ ಯಾತ್ರೆ ಮೂಲಕ ತನ್ನ ಶಕ್ತಿಯನ್ನು ಪ್ರದರ್ಶಿಸಲು ಸಜ್ಜಾಗಿದೆ.
ಧರ್ಮಸ್ಥಳ ಪ್ರಕರಣ ಸಂಬಂಧ SIT ರಚಿಸಿದ ಬಳಿಕ ಕಾಂಗ್ರೆಸ್ ನಾಯಕರು ಕ್ಷೇತ್ರಕ್ಕೆ ಭೇಟಿ ನೀಡದೆ ದೂರ ಉಳಿದಿದ್ದರು....
ಬಿಜೆಪಿಗರಿಗಿಂತ ಒಂದು ದಿನ ಮೊದಲೇ ನಡೆದ ಜೆಡಿಎಸ್ನ ಸತ್ಯಯಾತ್ರೆ ಯಶಸ್ವಿಯಾಗಿದೆ. ಆಗಸ್ಟ್ 31ರಂದು ಹಾಸನದಿಂದ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಹೊರಟ ಸತ್ಯ ಯಾತ್ರೆ, ಧರ್ಮಸ್ಥಳದಲ್ಲಿ ಕಹಳೆ ಮೊಳಗಿಸಿತ್ತು. ಎಲ್ಲಿ ನೋಡಿದ್ರೂ ಕೇಸರಿ ಬಾವುಟಗಳೇ ರಾರಾಜಿಸಿದ್ವು. ಧರ್ಮಸ್ಥಳದ ಪರ ನಾವಿದ್ದೇವೆ ಅಂತಾ ಸಾರಿ ಸಾರಿ ಹೇಳಿದಂತೆ ಭಾಸವಾಗಿತ್ತು.
ಸತ್ಯಯಾತ್ರೆಯ ಯಶಸ್ಸಿಗೆ ನಿಖಿಲ್ ಕುಮಾರಸ್ವಾಮಿ, ಟ್ವೀಟ್...
ಅರಸೀಕೆರೆಯಲ್ಲಿ ಜೆಡಿಎಸ್ ವಿರುದ್ಧ ಶಾಸಕ ಕೆ.ಎಂ ಶಿವಲಿಂಗೇಗೌಡರು ಸಮರ ಸಾರಿದ್ದಾರೆ. ಜೆಡಿಎಸ್ ಮುಖಂಡ ಎನ್.ಆರ್. ಸಂತೋಷ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಶಿವಲಿಂಗೇಗೌಡ್ರು ಹೇಳಿದ್ದಾರೆ. ವಸತಿ ಯೋಜನೆ ಅನುಷ್ಠಾನದ ವೇಳೆ ನಡೆದಿರುವ ಹಗರಣದಲ್ಲಿ ನನ್ನ ಹಸ್ತಕ್ಷೇಪವಿದೆ ಎಂದು ಆರೋಪಿಸಲಾಗಿದೆ. ಇದು ಜನಪ್ರತಿನಿಧಿಗಳ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಸೆಪ್ಟಂಬರ್ 1ರಂದು ರಾಜ್ಯ ಹೈಕೋರ್ಟ್ನಲ್ಲಿ ಮೊಕದ್ದಮೆ ದಾಖಲಿಸುತೇನೆಂದು...
ಡಿಕೆಶಿ RSS ಗೀತೆ ವಿಚಾರವಾಗಿ, ರಾಜ್ಯ ಕಾಂಗೆಸ್ಸಲ್ಲಿ ಆಕ್ರೋಶ ಭುಗಿಲೆದ್ದಿದೆ. ಸೆಪ್ಟಂಬರ್ ಕ್ರಾಂತಿ ಬಳಿಕ ಕಾಂಗ್ರೆಸ್ಸಿಗರ ವಿರುದ್ಧ ಮೈತ್ರಿ ಪಕ್ಷಗಳಿಗೆ ಪ್ರಬಲ ಅಸ್ತ್ರ ಸಿಕ್ಕಂತಾಗಿತ್ತು.
2024ರ ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿತ್ತು. ಆಗ ಮತದಾರರ ಪಟ್ಟಿ ಸಿದ್ಧವಾಗಿತ್ತು. ಆಗ ಕಣ್ಮುಚ್ಚಿ ಕುಳಿತುಕೊಂಡು, ಈಗ ಹೇಳಿದ್ರೆ ಏನು ಪ್ರಯೋಜನ ಅಂತಾ ಕೆ.ಎನ್. ರಾಜಣ್ಣ...
ಬಿಜೆಪಿ ಪಕ್ಷದಿಂದ ಉಚ್ಚಾಟನೆ ಬಳಿಕ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಹೊಸ ಪಕ್ಷ ಕಟ್ಟುವ ಸುಳಿವು ಕೊಡುತ್ತಲೇ ಬಂದಿದ್ರು. ಇದೀಗ ಹಿಂದುತ್ವಕ್ಕೆ ಹೊಸ ವೇದಿಕೆ ಕಲ್ಪಿಸುವ ದೃಷ್ಟಿಯಿಂದ ಸೃಷ್ಟಿಯಾಗುತ್ತಿರುವ, ಹೊಸ ಪಕ್ಷದ ಹೆಸರು, ಫೋಟೋ ವೈರಲ್ ಆಗಿದೆ.
ಭಾರತ ರಾಷ್ಟ್ರ ಹಿತ ಪಾರ್ಟಿ ಹೆಸರಿನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗ್ತಿದೆ. ಆದರೆ...
ಧರ್ಮಸ್ಥಳ ಪ್ರಕರಣ ದಿನಕ್ಕೂಂದು ತಿರುವು ಪಡೆದುಕೊಳ್ಳುತ್ತಿದೆ. ತೀವ್ರ ಕುತೂಹಲ ಕೆರಳಿಸಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ ಎಂದು BJP ಆರೋಪ ಮಾಡಿದೆ. ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಮಾತನಾಡಿದ ಶಾಸಕ ಎಸ್ಆರ್ ವಿಶ್ವನಾಥ್, ನಾಳೆ ಸದನದಲ್ಲಿ ಸರ್ಕಾರದ ಉತ್ತರವನ್ನು ಎದುರು ನೋಡುತ್ತಿದ್ದೇವೆ. ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡೋದನ್ನು ನಾವು ಸಹಿಸಲ್ಲ.
ತನಿಖೆ...
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮತ್ತೆ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸೂಪರ್ ಸಿಎಂ ರೀತಿ ವರ್ತಿಸುತ್ತಿದ್ದು, ಸರ್ಕಾರಿ ಅಧಿಕಾರಿಗಳ ಜೊತೆಗೂ ಮೀಟಿಂಗ್ ಮಾಡಿದ್ದಾರಂತೆ. ಹಲವು ಇಲಾಖೆಗಳ ಕಾರ್ಯದರ್ಶಿ, ಅಧಿಕಾರಿಗಳ ಜೊತೆ ಸಭೆ ಮಾಡಿ, ಹಲವು ಮಾಹಿತಿಗಳನ್ನು ಪಡೆದಿದ್ದಾರಂತೆ.
ಸಹಕಾರ ಇಲಾಖೆ ಅಧಿಕಾರಿಗಳಿಗೂ ಫೋನ್ ಬಂದಿದೆ. ಈ ವಿಚಾರ ಸಹಕಾರ ಸಚಿವ ಕೆ.ಎನ್.ರಾಜಣ್ಣಗೆ...
ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಧಾರಾಕಾರ ಮಳೆಯಾಗುತ್ತಿದೆ. ಕರ್ನಾಟಕದ ಹವಾಮಾನ ಇಲಾಖೆ 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ್ದು, ರಾಜ್ಯಾದ್ಯಂತ ಇಂದು ಸಾಧಾರಣ...