ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕಾರಣ ನೀಡಿ ದಸರಾ ರಜೆ ವಿಸ್ತರಿಸಿರುವ ಸರ್ಕಾರದ ನಿರ್ಧಾರಕ್ಕೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಕ್ಸ್ನಲ್ಲಿ ಟ್ವೀಟ್ ಮಾಡಿರುವ ಅವರು, ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುತ್ತಿದೆ ಎಂದು ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ್ದಾರೆ.
ಪೂರ್ವ ತಯಾರಿ ಇಲ್ಲದೆ, ಯಾರದೋ ಒತ್ತಡಕ್ಕೆ ಮಣಿದು ಸರ್ಕಾರ ಆತುರದಲ್ಲಿ...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ನಲ್ಲಿ ಗಣತಿದಾರರ ಮೇಲೆ ಹಲ್ಲೆ ಮತ್ತು ದಾಖಲೆ ಕಿತ್ತುಕೊಂಡ ಘಟನೆ ನಡೆದಿದೆ. ಸಮೀಕ್ಷೆಗಾಗಿ ಮನೆಗೆ ತೆರಳಿದ್ದ ಗಣತಿದಾರ ಜನಾರ್ಧನ ಅವರ ಬಳಿ, ಒಂದು ಕುಟುಂಬ ದಾಖಲೆ ಕಿತ್ತುಕೊಂಡು ನಂತರ ವಾಪಸು ಕಳಿಸಿದ್ದೆಂದು ಆರೋಪಿಸಲಾಗಿದೆ.
ಆ ಮನೆಯ R.R ನಂಬರ್ ಹಾಗೂ ರೇಷನ್ ಕಾರ್ಡ್ ಮಾಹಿತಿ ಕೇಳಿದ್ದಕ್ಕೆ ಕುಟುಂಬದ ಸದಸ್ಯರು ಗಣತಿದಾರರೊಂದಿಗೆ...
ರಾಜ್ಯ ಸರ್ಕಾರ ಕೈಗೊಂಡಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವಿರುದ್ಧ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಸಂಸದ ತೇಜಸ್ವಿ ಸೂರ್ಯ ಇಬ್ಬರೂ ತಮ್ಮ ಮನೆಗೆ ಸಮೀಕ್ಷೆದಾರರು ಬಂದರೆ ಯಾವುದೇ ಮಾಹಿತಿಯನ್ನು ನೀಡುವುದಿಲ್ಲ ಎಂದು ಘೋಷಿಸಿದ್ದಾರೆ.
ಹುಬ್ಬಳಿಯಲ್ಲಿ ಮಾತನಾಡಿದ ಪ್ರಹ್ಲಾದ್ ಜೋಶಿ, ಸಮೀಕ್ಷೆಯಲ್ಲಿ ಅನಗತ್ಯ ಮಾಹಿತಿಗಳನ್ನು ಕೇಳಲಾಗುತ್ತಿದೆ ಎಂದು...
ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ನಿಧಾನಗತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎಚ್ಚರಿಕೆಯ ಬಳಿಕ ಸಮೀಕ್ಷಾ ಕಾರ್ಯ ತೀವ್ರಗತಿಯಲ್ಲಿ ಮುಂದುವರಿದಿದೆ. ಭಾನುವಾರ ಮಾತ್ರವೇ 12 ಲಕ್ಷಕ್ಕೂ ಹೆಚ್ಚು ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ.
ಶುಕ್ರವಾರ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ದಿನನಿತ್ಯದ ಸಮೀಕ್ಷಾ ಗುರಿ ನಿಗದಿ ಮಾಡಿ, ಪ್ರತಿದಿನ ಕನಿಷ್ಠ 11.85 ಲಕ್ಷ ಕುಟುಂಬಗಳ ಮಾಹಿತಿ...
ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಜಾತಿಗಣತಿ ಪ್ರಕ್ರಿಯೆ ಆರಂಭವಾಗಲಿದೆ. ಕ್ರಿಶ್ಚಿಯನ್ ಜೊತೆ ಹಿಂದೂ ಜಾತಿಗಳ ಹೆಸರು ಇರೋದಕ್ಕೆ ಬಿಜೆಪಿ ವಿರೋಧಿಸಿದೆ. ಈ ನಡುವೆ ಲಿಂಗಾಯತ ಸಮುದಾಯದಲ್ಲಿ ಧರ್ಮ ಮತ್ತು ಜಾತಿ ಕಾಲಂನಲ್ಲಿ ಏನು ಬರೆಸಬೇಕು ಎಂಬ ಬಗ್ಗೆ ಗೊಂದಲ ಉಂಟಾಗಿದೆ. ಈ ಹಿನ್ನೆಲೆಯಲ್ಲಿ,ಪಂಚಮಸಾಲಿ ಲಿಂಗಾಯತ ಮುಖಂಡರ ಸಭೆಯಲ್ಲಿ ತೀವ್ರ ಚರ್ಚೆ ಹಾಗೂ ಗದ್ದಲ ಉಂಟಾಗಿದೆ.
ಪಂಚಮಸಾಲಿ...
ಬೆಂಗಳೂರು : ರಾಜ್ಯದಲ್ಲಿ ಜಾತಿ ಗಣತಿ ಜಾರಿಯ ವಿಚಾರಕ್ಕೆ ಸಂಬಂಧಿಸಿದ್ದಂತೆ ಸಮುದಾಯಗಳು ಹಾಗೂ ಸರ್ಕಾರದ ನಡುವೆ ತೀವ್ರ ಜಟಾಪಟಿ ಮುಂದುವರೆದಿದೆ. ಪ್ರಬಲ ಸಮುದಾಯಗಳು ಇದನ್ನು ವಿರೋಧಿಸಿದ್ದರೆ, ಹಿಂದುಳಿದ ಹಾಗೂ ದಲಿತ ಸಮುದಾಯಗಳು ಇದಕ್ಕೆ ಬೆಂಬಲ ಸೂಚಿಸುತ್ತಿವೆ. ಅಲ್ಲದೆ ಸರ್ಕಾರದಲ್ಲಿನ ಸಚಿವರು ಸಹ ಸಮುದಾಯಗಳ ಮಾರ್ಗಾದರ್ಶನದಲ್ಲಿ ಸಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಆದರೆ ಈ ಎಲ್ಲದರ ನಡುವೆ...
ನವದೆಹಲಿ: ಬಹು ಚರ್ಚಿತ ಜಾತಿ ಗಣತಿ (Caste Census)ಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಬೆಂಬಲ ಸೂಚಿಸಿದ್ದು, ಕಾಂಗ್ರೆಸ್ನ ಜಾತಿ ಗಣತಿ ಗ್ಯಾರಂಟಿಯನ್ನು ಬಿಜೆಪಿ ಹೈಜಾಕ್ ಮಾಡುತ್ತಿದೆಯಾ..? ಇಂಥದ್ದೊಂದು ಪ್ರಶ್ನೆ ಸದ್ಯ ಎಲ್ಲರಲ್ಲೂ ಮೂಡಿದೆ. ಚುನಾವಣಾ ಲಾಭಕ್ಕಾಗಿ ಜಾತಿ ಗಣತಿಯನ್ನು ಮಾಡಬಾರದು. ಬದಲಿಗೆ ಜನರ ಒಳಿತಿಗಾಗಿ ಜಾತಿ ಗಣತಿ ನಡೆಯಬೇಕು ಎನ್ನುವ ಮೂಲಕ...