Thursday, February 12, 2026

Chikkamagaluru

ಪರಂ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಯುವ ಮುಖಂಡ ಈಗ ಸಂಕಷ್ಟದಲ್ಲಿ!

ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಿಜೆಪಿ ಯುವಮೋರ್ಚಾ ಜಿಲ್ಲಾ ಅಧ್ಯಕ್ಷ ಸಂತೋಷ್ ಕೊಟ್ಯಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳನ್ನು ಖಂಡಿಸಿ ಮಂಗಳವಾರ ನಡೆದಿದ್ದ ಬಿಜೆಪಿ ನೇತೃತ್ವದ ಪ್ರತಿಭಟನೆಯಲ್ಲಿ ಸಂತೋಷ್ ಕೊಟ್ಯಾನ್ ಮಾತನಾಡಿದ್ದರು. ಈ ವೇಳೆ ಅವರು ಗೃಹ ಸಚಿವರ ವಿರುದ್ಧ...

ಸೀಜ್‌ ಮಾಡಿ ನಿಲ್ಲಿಸಿದ್ದ ಕಾರಲ್ಲಿ KG ಗಟ್ಟಲೇ ಬಂಗಾರ, ಹಣ!

ಸೀಜ್‌ ಆಗಿ ಪೊಲೀಸ್​ ಠಾಣೆಯಲ್ಲಿ ನಿಂತಿದ್ದ ಕಾರಿನಲ್ಲಿ ಕಂತೆ, ಕಂತೆ ಹಣ, ಚಿನ್ನ ಮತ್ತು ಬೆಳ್ಳಿ ಪತ್ತೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಮಾಜಿ ಶಿಕ್ಷಣ ‌ಸಚಿವ ದಿವಂಗತ ಗೋವಿಂದೇಗೌಡರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣ ಸಂಬಂಧ, ಸಾಂಗ್ಲಿ ಪೊಲೀಸರ ನೆರವು ಪಡೆದು ನೇಪಾಳಿ ಗ್ಯಾಂಗ್‌​ ಅನ್ನು ಬಂಧಿಸಲಾಗಿತ್ತು. ಈ ವೇಳೆ...

ನಾಳೆ ಹಸೆಮಣೆ ಏರಬೇಕಿದ್ದ ಯುವತಿ ಸಾವು

ಹೊಸಬಾಳಿನ ಕನಸು ಕಂಡಿದ್ದ ಯುವತಿ ಬಾಳಲ್ಲಿ, ವಿಧಿ ಬೇರೆಯದ್ದೇ ಆಟ ಆಡಿದೆ. ಜೀವನದ ಹೊಸ ಅಧ್ಯಾಯಕ್ಕೆ ಸಜ್ಜಾಗಿದ್ದ ಯುವತಿ, ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ. ಮದುವೆಗೆ ಕೇವಲ ಒಂದು ದಿನ ಬಾಕಿ ಇರುವಾಗ, ಸೊಲ್ಲಾಪುರ ಗ್ರಾಮದ 24 ವರ್ಷದ ಶೃತಿ, ಸಾವನ್ನಪ್ಪಿದ್ದಾರೆ. ವೈದ್ಯರ ಪ್ರಾಥಮಿಕ ವರದಿ ಪ್ರಕಾರ, ಶೃತಿ ಅವರಿಗೆ ಲೋ...

ಅಕ್ಟೋಬರ್ 29ರವರೆಗೂ ರಾಜ್ಯದಲ್ಲಿ ಭಾರಿ ಮಳೆ – 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕಡಿಮೆಯಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಒಂದು ದಿನ ಬಿಡುವು ಕೊಟ್ಟರೆ ಮರುದಿನವೇ ಮತ್ತೆ ಮಳೆ ಶುರುವಾಗುತ್ತಿದೆ. ಈಗ ಮತ್ತೆ ಕಳೆದ ಮೂರು ದಿನಗಳಿಂದ ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದೆ. 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಅಕ್ಟೋಬರ್ 29ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ...

ಮೈಲಾರ ಲಿಂಗೇಶ್ವರ ಕಾರ್ಣಿಕ ಭವಿಷ್ಯವಾಣಿಯಿಂದ ಆತಂಕ

ಇಟ್ಟ ರಾಮರ ಬಾಣ ಹುಸಿಯಿಲ್ಲ. ಧರ್ಮ-ಅಧರ್ಮ ಸಂಕಷ್ಟವಾಯಿತು. ವಿಶ್ವಕ್ಕೆ ಶಾಂತಿಯ ಭಂಗವಾಯಿತು. ಧರೆಗೆ ವರುಣನ ಆಗಮನವಾಯಿತು. ಸರ್ವರೂ ಎಚ್ಚರದಿಂದಿರಬೇಕು ಪರಾಕ್. ಇದು ಮೈಲಾರ ಲಿಂಗೇಶ್ವರ ದೇವರ ಗೊರವಯ್ಯ ದಶರಥ ಪೂಜಾರಿಯವರ ಭವಿಷ್ಯವಾಣಿ. ಚಿಕ್ಕಮಗಳೂರು ಜಿಲ್ಲೆಯ ಬೀರೂರು ಪಟ್ಟಣದ ಮಹಾನವಮಿ ಬಯಲಿನಲ್ಲಿ, ಮೈಲಾರಲಿಂಗೇಶ್ವರ ಕಾರ್ಣಿಕ ಹೊರಬಿದ್ದಿದೆ. ಸಾವಿರಾರು ಭಕ್ತರ ಸಮ್ಮುಖದಲ್ಲಿ, ಬೆಣ್ಣೆ ಮೆತ್ತಿದ ದೊಡ್ಡಬಿಲ್ಲಯ್ಯನನ್ನ ಏರಿ ಕಾರ್ಣಿಕ...

ರಾಜ್ಯದಲ್ಲಿ ಮಳೆಯ ಅಬ್ಬರ – ಶಾಲಾ-ಕಾಲೇಜುಗಳಿಗೆ ರಜೆ!

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮವಾಗಿ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುತ್ತಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಸೆಪ್ಟೆಂಬರ್ 5ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಇದರ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 30 ರಂದು ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳಸ,...

ಕಾಫಿನಾಡಿನಿಂದ ತಿಮ್ಮಪ್ಪನ ಸನ್ನಿಧಿಗೆ ಹೊಸ ರೈಲು!

ಚಿಕ್ಕಮಗಳೂರು-ತಿರುಪತಿ ನಡುವೆ, ಹೊಸ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಸೇವೆಗೆ ಅನುಮೋದನೆ ಸಿಕ್ಕಿದೆ. ಇದು ಆಂಧ್ರಪ್ರದೇಶ ಮತ್ತು ಕರ್ನಾಟಕದ ಮಲೆನಾಡು ಪ್ರದೇಶದ ನಡುವಿನ ಸಂಪರ್ಕವನ್ನು ಹೆಚ್ಚಿಸುತ್ತದೆ. ಜುಲೈ 11ರಂದು ಮಧ್ಯಾಹ್ನ 12 ಗಂಟೆಗೆ ಚಿಕ್ಕಮಗಳೂರಿನಿಂದ ಹೊರಡಲಿರುವ ಸಾಪ್ತಾಹಿಕ ಎಕ್ಸ್ ಪ್ರೆಸ್​ ಗೆ, ಕೇಂದ್ರ ಸಚಿವ ವಿ. ಸೋಮಣ್ಣ ಚಾಲನೆ ನೀಡಲಿದ್ದಾರೆ. ಮರುದಿನ ಬೆಳಗ್ಗೆ 2.30ಕ್ಕೆ ತಿರುಪತಿ...

Kottigehara: ಯುವ ಕೃಷಿಕನಿಗೆ ಹೃದಯಾಘಾತ: ಚಿಕಿತ್ಸೆ ಕೊಡಿಸುವ ಮುನ್ನವೇ ಕೊನೆಯುಸಿರು

Chikkamagaluru News: ಚಿಕ್ಕಮಗಳೂರಿನ ಮೂಡಿಗೆರೆಯ ಕೊಟ್ಟಿಗೆಹಾರದಲ್ಲಿ ಯುವ ಕೃಷಿಕನೋರ್ವ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. 35 ವರ್ಷ ವಯಸ್ಸಿನ ಹೆಚ್.ಆರ್.ಚೇತನ್ ಎಂಬಾತನೇ ಮೃತ ದುರ್ದೈವಿಯಾಗಿದ್ದು, ಇವರು ಬಿಜೆಪಿಯ ಯುವ ಮುಖಂಡರಾಗಿದ್ದರು. ಕೂವೆ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷರಾದ ರಮೇಶ್ ಗೌಡ ಅವರ ಏಕೈಕ ಪುತ್ರನಾದ ಚೇತನ್ ವಿವಾಹಿತರಾಗಿದ್ದರು. ಅವರಿಗೆ ಇಬ್ಬರು ಪುಟ್ಟ ಪುಟ್ಟ ಮಕ್ಕಳೂ ಇದ್ದಾರೆ. ಬೆಳಿಗ್ಗೆ ಹೊತ್ತು...

ಸಕಲೇಶಪುರದ ಪಟ್ಲ ಬೆಟ್ಟದಲ್ಲಿ ಸ್ಥಳೀಯರಿಂದ ರೌಡಿಸಂ..? ಪ್ರವಾಸಿಗರ ಆಕ್ರೋಶ

Hassan News: ಹಾಸನ :ಸಕಲೇಶಪುರ: ಪಶ್ಚಿಮ ಘಟ್ಟದ ಸೌಂದರ್ಯ ಸವಿಯಲು ಬಂದ ಪ್ರವಾಸಿಗರ ಮೇಲೆ ಹಲ್ಲೆ ನಡಿಸಿದ ತಿಳಿಗೇಡಿಗಳ ಕ್ರೌರ್ಯತನಕ್ಕೆ ತಾಲೂಕಿನ ಸಾರ್ವಜನಿಕರು ಅಸಮಾದಾನ ವ್ಯಕ್ತಪಡಿಸಿದ್ದಾರೆ. ಸಕಲೇಶಪುರದಿಂದ ಸುಮಾರು 43 ಕಿಲೋ ಮೀಟರ್ ಹಾಗೂ ಬಿಸಲೆಗೆ 6 ಕಿಲೋ ಮೀಟರ್ ಇರುವ ಪಟ್ಲ ಬೆಟ್ಟಕ್ಕೆ ದಿನಕ್ಕೆ ನೂರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಇದ್ದನ್ನೆ ಬಂಡವಾಳವಾಗಿಸಿಕೊಂಡ ಕೆಲವರು...

ಮನೆಯಲ್ಲಿ ಬಿರಿಯಾನಿ ತಿಂದ 17 ಜನರು ಅಸ್ವಸ್ಥ

Chikkamagaluru News: ಚಿಕ್ಕಮಗಳೂರು: ನಗರದ ಮರವಂಜಿ ಗ್ರಾಮದ ಮನೆಯೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿರಿಯಾನಿ ತಿಂದ 17 ಜನರು ಅಸ್ವಸ್ಥಗೊಂಡಿದ್ದಾರೆ. ಕಡೂರು ಆಸ್ಪತ್ರೆಯಲ್ಲಿ ಎಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಗ್ರಾಮಸ್ಥರು ಸೋಮವಾರ ವಿಷಪೂರಿತವಾದ ಮಾಂಸಹಾರ ಸೇವಿಸಿ ಅಸ್ವಸ್ಥರಾಗಿದ್ದಾರೆ. ಘಟನೆ ವಿವರ: ಭಾನುವಾರ ನಡೆದ ಕಾರ್ಯಕ್ರಮದಲ್ಲಿ ತಯಾರಿಸಿದ್ದ ಬಿರಿಯಾನಿಯನ್ನು ಸೋಮವಾರ ಕುಟುಂಬಸ್ಥರು ಹಾಗೂ ಕೆಲ ಗ್ರಾಮಸ್ಥರು...
- Advertisement -spot_img

Latest News

ಬದುಕಿದ ಅಪ್ಪನಿಗೆ ಶ್ರಾದ್ಧ ಮಾಡಲು ಮುಂದಾಗಿದ್ದ ಮಗನ ಕಥೆ: ಮಕ್ಕಳಿಗೆ ಸಂಸ್ಕಾರ ಏಕೆ ಮುಖ್ಯ..?

Spiritual: ಪರ್ತಗಾಳಿಮಠದ ಶ್ರೀಗಳಾದ ವಿದ್ಯಾಧೀಶತೀರ್ಥರು ವಚನಾಮೃತ ಕಾರ್ಯಕ್ರಮದಲ್ಲಿ ಹಲವು ಹಿತ ವಚನಗಳನ್ನು ಹೇಳುತ್ತಾರೆ. ಅದೇ ರೀತಿ 1 ಕಥೆಯನ್ನು ಹೇಳುವ ಮೂಲಕ, ನಮ್ಮ ಮಕ್ಕಳಿಗೆ ನಾವು...
- Advertisement -spot_img