ರಾಜ್ಯ ರಾಜಕೀಯದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಸೇಫಾ? ಅಥವಾ ಬದಲಾವಣೆ ಆಗುತ್ತದೆಯೇ ಎಂಬ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ. ಜ್ಯೋತಿಷಿಗಳಿಂದ ಹಿಡಿದು ಪ್ರತಿಪಕ್ಷಗಳವರೆಗೆ ಎಲ್ಲರೂ ಈ ಬಗ್ಗೆ ಮಾತಾಡುತ್ತಿದ್ದಾರೆ. ಸಿದ್ದರಾಮಯ್ಯ ಸ್ವತಃ ನಾನು 5 ವರ್ಷಗಳ ಕಾಲ ಸಿಎಂ ಆಗಿ ಇರುತ್ತೇನೆ ಎಂದು ಘೋಷಣೆ ಮಾಡಿದ್ದಾರೆ. ಆದರೂ ಚರ್ಚೆಗೆ ವಿರಾಮ ಬಿದ್ದಿಲ್ಲ. ಹಾಗಾದರೆ...
ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಗ್ರೇಟರ್ ಬೆಂಗಳೂರು ಗದ್ದುಗೆ ಹಿಡಿಯಲು ಕಾಂಗ್ರೆಸ್ ಸಜ್ಜಾಗಿದೆ. ಉತ್ತಮ ಆಡಳಿತದ ಜೊತೆಗೆ ನಗರಾಭಿವೃದ್ದಿಗೆ ಹೆಚ್ಚು ಒತ್ತು ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ವಿಧಾನಸೌಧದಲ್ಲಿ ಬೆಂಗಳೂರಿನ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಸಿಎಂ ಚರ್ಚೆ ನಡೆಸಿದರು. ಜನಸೇವೆಯ ಸುಧಾರಣೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಬೇಕಾದ ಅನುದಾನವನ್ನು ಸರ್ಕಾರದಿಂದ ಒದಗಿಸಲಾಗುವುದು ಎಂದು...
ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ನಡೆದ ಗಣೇಶನ ಮೆರವಣಿಗೆ ಕಲ್ಲು ತೂರಾಟದ ಘಟನೆ ಆಕಸ್ಮಿಕ ಅಲ್ಲ, ಅದು ಪೂರ್ವ ನಿಯೋಜಿತ ಸಂಚು. ಮಸೀದಿಗಳಲ್ಲಿ ಮೊದಲೇ ಪ್ಲಾನ್ ಮಾಡಿ ಲೋಡ್ಗಟ್ಟಲೆ ಕಲ್ಲನ್ನು ಇಟ್ಟುಕೊಂಡಿದ್ದರು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಗಂಭೀರ ಆರೋಪ ಮಾಡಿದ್ದಾರೆ.
ಗಣೇಶ ಮೆರವಣಿಗೆ ವೇಳೆ ಮದ್ದೂರಿನ ಲೈಟ್ ಯಾಕೆ ಆಫ್ ಮಾಡಿದ್ರು? ಮಸೀದಿಯೊಳಗೆ ಕಲ್ಲು...
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶೋತ್ಸವ ಮೆರವಣಿಗೆ ಸಂದರ್ಭ ನಡೆದ ಕಲ್ಲು ತೂರಾಟ ಪ್ರಕರಣ ಇದೀಗ ರಾಜ್ಯವ್ಯಾಪಿ ಆಕ್ರೋಶಕ್ಕೆ ಕಾರಣವಾಗಿದೆ. ಮೆರವಣಿಗೆಯ ಮಾರ್ಗದ ಸಮೀಪದಲ್ಲಿದ್ದ ಮಸೀದಿಯಿಂದ ಕಲ್ಲು ತೂರಾಟ ನಡೆದಿದೆ ಎಂಬ ಆರೋಪ ಹೊರಬಿದ್ದ ಹಿನ್ನೆಲೆಯಲ್ಲಿ, ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ.
ಇದೀಗ, ಮದ್ದೂರಿನ ಚನ್ನೆಗೌಡ ಬಡಾವಣೆ ಬಳಿ ಇರುವ ಆ ಮಸೀದಿಯೇ ಅಕ್ರಮ ನಿರ್ಮಾಣ ಎಂಬ...
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದನ್ನು ವಿರೋಧಿಸಿ, ಬಿಜೆಪಿ ನಾಯಕರು ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮ ಕೈಗೊಂಡರು. ಈ ಸಂದರ್ಭದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕ ಶ್ರೀವತ್ಸ, ಮಾಜಿ ಶಾಸಕ ಎಲ್. ನಾಗೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಸರ್ಕಾರದ ಈ ನಿರ್ಧಾರವನ್ನು ಮೊದಲ ದಿನದಿಂದಲೇ ನಾವು ಆಕ್ರೋಶದಿಂದ...
ಮಂಡ್ಯದ ಮದ್ದೂರಿನಲ್ಲಿ ನಡೆದ ಕಲ್ಲು ತೂರಾಟಕ್ಕೆ BJP MLC ಸಿ.ಟಿ. ರವಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಂತಿದೂತರನ್ನು ಹೊಗಳಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ತೀವ್ರ ಟೀಕೆ ಮಾಡಿದ್ದಾರೆ.
ಮಾನ್ಯ ಮುಖ್ಯಮಂತ್ರಿಗಳೇ, ನೀವು ಎರಡು ದಿನದ ಹಿಂದೆ ಹೊಗಳಿದ ಶಾಂತಿದೂತರು ಈಗ...
ಮದ್ದೂರಿನಲ್ಲಾದ ಕಲ್ಲು ತೂರಾಟ ಪ್ರಕರಣಕ್ಕೆ, ಸಿಎಂ ಸಿದ್ದರಾಮಯ್ಯನವರೇ ಕಾರಣ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರ ಬಂದ್ಮೇಲೆ, ರಾಜ್ಯದಲ್ಲಿ ಹಿಂದೂಗಳಿಗೆ ಗ್ರಹಣ ಹಿಡಿದಿದೆ. ಧರ್ಮಸ್ಥಳ ಆಯ್ತು. ಚಾಮುಂಡೇಶ್ವರಿ ಆಯ್ತು. ಕಳೆದ ಬಾರಿಯೂ ನಾಗಮಂಗಲದಲ್ಲಿ ಗಲಾಟೆ ಆಯ್ತು. ಈಗ ಮದ್ದೂರಲ್ಲಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಮದ್ದೂರಿನಲ್ಲಿ, ಮಸೀದಿಯಲ್ಲಿ, ಧರ್ಮಾಂಧರು...
ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡುವುದನ್ನು ಬಿಜೆಪಿ ವಿರೋಧಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇದು ರಾಜಕೀಯ ದುರುದ್ದೇಶದಿಂದ ಮಾಡಿದ ವಿರೋಧ, ಸರ್ಕಾರವೂ ರಾಜಕೀಯವಾಗಿಯೇ ಉತ್ತರ ನೀಡಲಿದೆ ಎಂದು ಅವರು ಸ್ಪಷ್ಟಪಡಿಸಿದರು.
ಅವರು ಕನ್ನಡ ಸಾಹಿತ್ಯದಲ್ಲಿ ತಮ್ಮದೇ ಆದ ಸ್ಥಾನ ಹೊಂದಿದ್ದಾರೆ. ಬಾನು ಮುಷ್ತಾಕ್ ಅವರ ಕೃತಿ ಅನುವಾದಕ್ಕೆ ಬುಕರ್ ಪ್ರಶಸ್ತಿ ದೊರೆತಿದ್ದು, ಅದಕ್ಕಾಗಿ...
ಬೂಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ಕುರಿತು ವಿರೋಧ ವ್ಯಕ್ತವಾಗಿದ್ದರೂ, ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದೆ, ಇತ್ತೀಚೆಗೆ ಹಾಸನದ ಅಮೀರ್ ಮೊಹಲ್ಲಾದಲ್ಲಿರುವ ಅವರ ನಿವಾಸಕ್ಕೆ ತೆರಳಿ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ನೀಡಿತ್ತು. ಇದೇ ವೇಳೆ, ಈ ನಿರ್ಧಾರದ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಮೆಟ್ಟಿಲೇರಿದ್ದು,...
ಜಿಎಸ್ಟಿ ಸರಳೀಕರಣದಿಂದ ರಾಜ್ಯಕ್ಕೆ 15,000 ರಿಂದ 20,000 ಕೋಟಿ ರೂ. ನಷ್ಟ ಸಂಭವಿಸುವುದಾಗಿದೆ. ಆದರೂ ಜನಸಾಮಾನ್ಯರ ಮೇಲಿನ ಆರ್ಥಿಕ ಭಾರ ಕಡಿಮೆ ಮಾಡುವ ಉದ್ದೇಶದಿಂದ ಈ ನಿರ್ಧಾರವನ್ನು ಸ್ವಾಗತಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ, ಈ ಲಾಭವನ್ನು ಬಳಕೆದಾರರಿಗೆ ತಲುಪಿಸದೇ ವ್ಯಾಪಾರಿಗಳು ಮತ್ತು ಉದ್ಯಮಿಗಳು ದುರುಪಯೋಗ ಮಾಡಿಕೊಳ್ಳದಂತೆ ತಡೆಯಬೇಕೆಂದು ಅವರು ಕೇಂದ್ರ ಸರ್ಕಾರಕ್ಕೆ...