Tuesday, August 25, 2026

#congress government

ದಳಪತಿಗಳ ಬಲ ಕುಗ್ಗಿಸಲು ಡಿಕೆಶಿ ಮಾಸ್ಟರ್ ಪ್ಲಾನ್!

ರಾಜ್ಯ ರಾಜಕೀಯದಲ್ಲಿ ಮತ್ತೆ ಕದನವಾಡಿಸಲು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೊಸ ಮಾಸ್ಟರ್ ಪ್ಲಾನ್ ರೂಪಿಸಿರುವ ಮಾಹಿತಿ ಬಹಿರಂಗವಾಗಿದೆ. ಜೆಡಿಎಸ್‌ನ ಬಲ ಕುಗ್ಗಿಸುವ ಉದ್ದೇಶದಿಂದ ಅವರು ಕೆಲವು ಶಾಸಕರನ್ನು ಸೆಳೆಯಲು ಕಮಲ ಹಾಕಿದ್ದಾರೆ ಎನ್ನಲಾಗಿದೆ. ಈಗಾಗಲೇ ಬಲ ಕುಗ್ಗಿಸಿಕೊಂಡಿರುವ ಜೆಡಿಎಸ್, ಬಿಜೆಪಿ ಮೈತ್ರಿಯಿಂದ ಉಸಿರಾಡುತ್ತಿದ್ದರೆ, ಡಿಕೆಶಿಯ ಈ ತಂತ್ರ ದಳಪತಿಗಳಿಗೆ ಹೊಸ ತಲೆನೋವು ತಂದಿದೆ. 2023ರ ವಿಧಾನಸಭಾ...

ರಾಜಕೀಯದಲ್ಲಿ ನವೆಂಬರ್​ ಕ್ರಾಂತಿ? ಸುರ್ಜೇವಾಲ ಸ್ಫೋಟಕ ಹೇಳಿಕೆ

ರಾಜ್ಯ ರಾಜಕೀಯದಲ್ಲಿ ಚರ್ಚೆಯ ವಿಷಯವಾಗಿರುವ ನವೆಂಬರ್ ಕ್ರಾಂತಿ ಕುರಿತು ಸಿಎಂ ಹಾಗೂ ಡಿಸಿಎಂ ಬಳಿಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಕುರಿತು ಪಕ್ಷದೊಳಗೆ ಯಾವುದೇ ರೀತಿಯ ಚರ್ಚೆ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ನಂತರ ಬೆಂಗಳೂರಿನ ಸದಾಶಿವನಗರದಲ್ಲಿ...

ಪರಿಹಾರವಿಲ್ಲ ಬರೀ ಹೆಲಿಕಾಪ್ಟರ್ ಸಮೀಕ್ಷೆ : ಸಿಎಂ ಸಮೀಕ್ಷೆಗೂ ಅಶೋಕ್ ತೀವ್ರ ಟೀಕೆ

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರವಾಹ ಸಮೀಕ್ಷೆಯ ಮೇಲೆ ತೀವ್ರ ಟೀಕೆ ಮಾಡಿದ್ದಾರೆ. ಮೊದಲು ಪ್ರವಾಹ ಸಂತ್ರಸ್ತರಿಗೆ ಪರಿಹಾರ ಘೋಷಿಸಿ, ನಂತರ ವೈಮಾನಿಕ ಸಮೀಕ್ಷೆ ಮಾಡಬೇಕಿತ್ತು. ಪರಿಹಾರವನ್ನೇ ತಿಳಿಸದೆ ಕೇವಲ ಸಮೀಕ್ಷೆ ಮಾಡುತ್ತಿದ್ದಾರೆ ಎಂದು ಅಶೋಕ್ ಕಿಡಿಕಾರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ ಅಶೋಕ್‌, ಉತ್ತರ ಕರ್ನಾಟಕದ ಪ್ರವಾಹ ಪರಿಸ್ಥಿತಿ...

ಗೆದ್ದು ಬೀಗಿದ​​ ಮೈತ್ರಿ ಪಡೆ : ಕಾಂಗ್ರೆಸ್​​ಗೆ ಭಾರೀ ಮುಖಭಂಗ!

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರುಕಟ್ಟೆ ಸೊಸೈಟಿ (TAPCMS) ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದೆ. ಒಟ್ಟು 14 ನಿರ್ದೇಶಕ ಸ್ಥಾನಗಳಲ್ಲಿ 11 ಸ್ಥಾನಗಳನ್ನು ಮೈತ್ರಿಕೂಟ ವಶಪಡಿಸಿಕೊಂಡಿದ್ದು, ಕಾಂಗ್ರೆಸ್‌ಗೆ ಕೇವಲ 3 ಸ್ಥಾನ ಸಿಕ್ಕಿದೆ. ಈ ಫಲಿತಾಂಶ ಕಾಂಗ್ರೆಸ್‌ಗೆ ಭಾರೀ ಮುಖಭಂಗ ತಂದಿದೆ. ಈ ಗೆಲುವಿಗೆ ಶಾಸಕ ಎಚ್.ಟಿ. ಮಂಜು...

ಶೃಂಗೇರಿ ಕಾಂಗ್ರೆಸ್ ಶಾಸಕ ರಾಜೇಗೌಡ ಮೇಲೆ ಲೋಕಾಯುಕ್ತ ರೇಡ್

ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರ ಮೇಲೆ ಅಕ್ರಮ ಆಸ್ತಿ ಪ್ರಕರಣದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾಸನ ಲೋಕಾಯುಕ್ತ ಎಸ್‌ಪಿ ಸ್ನೇಹಾ ಅವರ ನೇತೃತ್ವದಲ್ಲಿ ಮಂಗಳವಾರ ಬೆಳಿಗ್ಗೆ ನಾಲ್ಕು ವಾಹನಗಳಲ್ಲಿ ಬಂದ ತಂಡವು ಬೆಂಗಳೂರಿನ ಹೊಸಮನೆ, ಚಿಕ್ಕಮಗಳೂರಿನ ಬಸಾಪುರ ಮತ್ತು ಹಲಸೂರ ತೋಟದ ನಿವಾಸ ಸೇರಿದಂತೆ ಹಲವು...

ಶಾಸಕರ ವಿರುದ್ಧ ತೆರಿಗೆ ವಂಚನೆ ಆರೋಪ!

ಹಣ ಉಳಿಸೋಕೆ ಐಡಿಯಾ ಮಾಡಿದ ಕಾಂಗ್ರೆಸ್‌ ಶಾಸಕರೊಬ್ರು, ಪುದುಚೇರಿಯಲ್ಲಿ ಕಾರು ನೋಂದಣಿ ಮಾಡಿಸಿ ಸಿಕ್ಕಿಬಿದ್ದಿದ್ದಾರೆ. ನಾಗಠಾಣ ಮೀಸಲು ಕ್ಷೇತ್ರದ ಶಾಸಕ ವಿಠ್ಠಲ ಕಟಕದೊಂಡ ವಿರುದ್ಧ ಸರ್ಕಾರಕ್ಕೆ ತೆರಿಗೆ ಕಟ್ಟದ ಆರೋಪ ಕೇಳಿ ಬಂದಿದೆ. ಶಾಸಕ ವಿಠ್ಠಲ ಕಟಕದೊಂಡ ಬಳಸುತ್ತಿರುವ ಕಾರು, ಪುದುಚೇರಿಯ ವಿಲ್ಲೈನೂರ್‌ ಆರ್‌ಟಿಒ ಕಚೇರಿಯಲ್ಲಿ ನೋಂದಣಿಯಾಗಿದೆ. 2024ರ ಜುಲೈ 17ರಂದು ಖರೀದಿಸಿರುವ PY05 VE9836...

ಜೀವನ ಕೊಟ್ಟ ಗೃಹಲಕ್ಷ್ಮೀ ಯೋಜನೆ

ರಾಜ್ಯದಲ್ಲಿರುವ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು, ಈಗ ಸ್ವಯಂ ಉದ್ಯೋಗಿಗಳಾಗಿದ್ದಾರೆ. ಪ್ರತಿ ತಿಂಗಳು ಗೃಹಲಕ್ಷ್ಮೀಯಿಂದ ಬಂದ ಹಣವನ್ನು ಕೂಡಿಟ್ಟು, ಬಂಡವಾಳ ಮಾಡಿಕೊಂಡು ವ್ಯಾಪಾರ ಶುರು ಮಾಡಿದ್ದಾರೆ. ಮಹಿಳಾ ದಸರಾದಲ್ಲಿ ಗೃಹಲಕ್ಷ್ಮೀ ಫಲಾನುಭವಿಗಳ ಮಳಿಗೆಗಳು, ಎಲ್ಲರ ಗಮನ ಸೆಳೆದಿವೆ. ತಿಂಡಿ ತಿನಿಸುಗಳ ಮಳಿಗೆ, ಬ್ಯಾಂಗಲ್ಸ್‌ ಸ್ಟೋರ್‌ ಹಾಗೂ ಬಟ್ಟೆ ಮಳಿಗೆ ತೆರೆದಿದ್ದು, ಸ್ವಯಂ ಉದ್ಯೋಗಿಗಳಾಗಿ ಫಲಾನುಭವಿಗಳು ಬದಲಾಗಿದ್ದಾರೆ. ವರಲಕ್ಷ್ಮಿ...

CM ಓರ್ವ ಲೆಪ್ಟಿಸ್ಟ್ : ಕಾಂಗ್ರೆಸ್‌ ಕೆಟ್ಟ ಮತಾಂಧ ಪಾರ್ಟಿ- ಜೋಶಿ

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾಂಗ್ರೆಸ್‌ ವಿರುದ್ದ ಗುಡುಗಿದ್ದಾರೆ. ರಾಜ್ಯದಲ್ಲಿ ಜಾತಿ ಗಣತಿ ವಿಚಾರ ಇಟ್ಟುಕೊಂಡು, ಹಿಂದೂ ಧರ್ಮ ಒಡೆಯುವ ಷಡ್ಯಂತ್ರ ಕಾಂಗ್ರೆಸ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ನವರು ಮಹಾನ್ ಕಳ್ಳರು ದುಷ್ಟರು ಇದ್ದೀರಿ, ರಾಜ್ಯದ ಸಿಎಂ ಓರ್ವ ಅಲ್ಟಾ ಲೆಪ್ಟಿಸ್ಟ್ ಇದ್ದಾರೆ. ಕಾಣದ ಮತಾಂದ ಶಕ್ತಿಗಳಿಗೆ ಪ್ರೇರಣೆ ನೀಡ್ತಿರೋರೆ ಅವರೇ ಎಂದು...

ವಿರೋಧಗಳಿಗೆ ಮಣಿಯದ ಸಿದ್ದರಾಮಯ್ಯ

ಮನೆ, ಮನೆಗೂ ತೆರಳಿ ಜಾತಿಗಣತಿ ನಡೆಸುವ ಸರ್ಕಾರದ ನಿರ್ಧಾರಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮೇಲೆ ಹಲವು ಸಚಿವರು ಸಿಡಿಮಿಡಿಯಾಗಿದ್ದಾರೆ. ಜಾತಿ ಕಿಚ್ಚು, ಸರ್ಕಾರದ ಗೊಂದಲ ನಿವಾರಣೆಗಾಗಿ ದೆಹಲಿಯಿಂದ ಕಾಂಗ್ರೆಸ್ ಹೈಕಮಾಂಡ್ ನಾಯಕರೇ ಎಂಟ್ರಿ ಕೊಡಬೇಕಾಗಿ ಬಂದಿದೆ. ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ದಿಢೀರ್...

ರಾಜ್ಯದಲ್ಲಿ ಆಪ‘ರೇಷನ್’ BPL ಕಾರ್ಡ್‌

ಅನರ್ಹ ಬಿಪಿಎಲ್‌ ಕಾರ್ಡ್‌ಗಳ ವಿರುದ್ಧ ರಾಜ್ಯದ ಆಹಾರ ಇಲಾಖೆ ಸಮರ ಸಾರಿದೆ. ಪಡಿತರ ವ್ಯವಸ್ಥೆಯಲ್ಲಿ ಮೇಜರ್‌ ಸರ್ಜರಿ ಮಾಡಲು ಸರ್ಕಾರ ಮುಂದಾಗಿದೆ. ಪಡಿತರ ಅಕ್ಕಿ ಅನರ್ಹರ ಕೈಸೇರುತ್ತಿದ್ದು, ಬರೋಬ್ಬರಿ 8 ಲಕ್ಷ ಕಾರ್ಡ್‌ ರದ್ದು ಮಾಡುವ ಸಾಧ್ಯತೆ ಇದೆ. ಇಂದು ಆಹಾರ ಇಲಾಖೆ ಸಚಿವ ಕೆ.ಹೆಚ್‌. ಮುನಿಯಪ್ಪ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಲಾಗುತ್ತಿದೆ. ಎಕರೆಗಟ್ಟಲೆ ಜಮೀನು,...
- Advertisement -spot_img

Latest News

Hubli News: ಪುಷ್ಕರಣಿ ಉಳಿಸುವ ಹೋರಾಟದಲ್ಲಿ ಯಾವುದೇ ರಾಜಕೀಯ ಇಲ್ಲ : ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿಯ ಹಳೇ ಹುಬ್ಬಳ್ಳಿಯ ಭವಾನಿ ಶಂಕರ್ ದೇವಸ್ಥಾನದ ವಿವಾದಿತ ಪುಷ್ಕರಣಿ ವಿಚಾರ ಇದೀಗ ಮತ್ತಷ್ಟು ತೀವ್ರಗೊಂಡಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್...
- Advertisement -spot_img