Tuesday, April 28, 2026

Congress karnataka

ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿದ BJPಗೆ ಸವಾಲ್ ಎಸೆದ ಖರ್ಗೆ

ಅಬಕಾರಿ ಸಚಿವ ಆರ್‌ಬಿ ತಿಮ್ಮಾಪುರ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರೋಪ ಮಾಡುವ ಮೊದಲು ದೃಢವಾದ ಪುರಾವೆಗಳನ್ನು ಮುಂದಿಡಲಿ ಎಂದು ಅವರು ಸವಾಲು ಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಕಳೆದ ಹತ್ತು ದಿನಗಳಿಂದ ಬಿಜೆಪಿ ವಿಧಾನಪರಿಷತ್ ಮತ್ತು ವಿಧಾನಸಭೆಯಲ್ಲಿ ಈ ವಿಚಾರವನ್ನು ಎತ್ತುತ್ತಿದೆ....

ಟಗರು ಸಿದ್ದುಗೆ ಸಾಟಿ ಯಾರು? ನಾಯಕತ್ವವೇ ಕಾಂಗ್ರೆಸ್‌ ಬಲ

ಸಿದ್ದರಾಮಯ್ಯನವರಿಗೆ ಸಿದ್ದರಾಮಯ್ಯನವರೇ ಸಾಟಿ. ಅವರು ಉತ್ತಮ ನಾಯಕರಿಗೆ ಅವಕಾಶ ನೀಡಿದರೆ ಮುಂದಿನ 15 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲೇ ಮುಂದುವರಿಯಲಿದೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದ್ದಾರೆ.ಬಾಚೇನಹಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ್ದಾರೆ. ದಿ. ದೇವರಾಜು ಅರಸು ಅವರ ಆಡಳಿತದ ದಾಖಲೆಯನ್ನು ಸಿದ್ದರಾಮಯ್ಯನವರು ಸಮರ್ಥವಾಗಿ ಮೀರಿಸಿದ್ದಾರೆ. ತಮ್ಮ...

ಬಿಜೆಪಿ ಬಗ್ಗೆ ಕಾಂಗ್ರೆಸಿಗರಿಗೆ ಸಂತೋಷ್ ಲಾಡ್ ಸಂದೇಶ!

ಬಿಜೆಪಿಯನ್ನು ಏಕೆ ಸೋಲಿಸಬೇಕು ಎಂಬ ವಿಷಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಪೂರ್ಣ ಸ್ಪಷ್ಟತೆ ಇರಲಿ. ಈ ಕುರಿತಾಗಿ ಜನರ ಮುಂದೆ ಗಟ್ಟಿಯಾಗಿ ಮಾತನಾಡಬೇಕು. ಆಗ ಮಾತ್ರ ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಧ್ಯ ಎಂದು ಕಾರ್ಮಿಕ ಖಾತೆ ಸಚಿವ ಸಂತೋಷ್ ಲಾಡ್ ಹೇಳಿದರು. ಬುಧವಾರ ಮಡಿಕೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಕಚೇರಿ ಸಭೆಯಲ್ಲಿ ಸಂತೋಷ್ ಲಾಡ್ ಮಾತನಾಡಿದರು. ದೇಶದ...

“ಕಳ್ಳಾಟ ಆಗಿದ್ರೆ ಸಿದ್ದು ಸಿಎಂ ಆಗ್ತಿರಲಿಲ್ಲ , ಕೂಡಲೇ ಸಿದ್ದರಾಮಯ್ಯ, ಡಿಕೆಶಿ ಕ್ಷಮೆಯಾಚಿಸಲಿ”

ಬೆಂಗಳೂರು : ರಾಜ್ಯದ ಒಂದು ಲೋಕಸಭಾ ಕ್ಷೇತ್ರದಲ್ಲಿ ಮತ ಕಳ್ಳಾಟವಾಗಿದೆ ಎಂದು ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಗಂಭೀರವಾಗಿ ಆರೋಪಿಸಿದ್ದಾರೆ. ಇದಕ್ಕೆ ಸಿಎಂ, ಡಿಸಿಎಂ ಸೇರಿದಂತೆ ಹಲವು ಕೈ ನಾಯಕರು ಧ್ವನಿ ಗೂಡಿಸಿದ್ದಾರೆ. ರಾಹುಲ್‌ ಗಾಂಧಿಯವರ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂದು ಸಮರ್ಥನೆಗಳಿದಿದ್ದಾರೆ. ಈ ನಡುವೆ ಕಾಂಗ್ರೆಸ್‌ ನಾಯಕರ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮುಗಿಬಿದ್ದಿದ್ದಾರೆ....

ದೇಶದಲ್ಲಿ ಚುನಾವಣೆಗಳು ಸರಿಯಾಗಿ ನಡೆಯುತ್ತಿಲ್ಲ : ರಾಗಾ ಪರ ಜಾರ್ಜ್‌ ಬ್ಯಾಟಿಂಗ್!

ಬೆಂಗಳೂರು : ದೇಶದ ಚುನಾವಣಾ ವ್ಯವಸ್ಧೆಯಲ್ಲಿ ಸಾಕಷ್ಟು ಅಕ್ರಮಗಳು ನಡೆದಿವೆ. ಅವುಗಳ ಬಗ್ಗೆ ಬೇಕಾದ ಎಲ್ಲ ಪುರಾವೆಗಳು ನಮ್ಮ ಬಳಿ ಇವೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹೇಳಿಕೆ ನೀಡಿದ್ದಾರೆ. ಇಡೀ ಚುನಾವಣಾ ಪ್ರಕ್ರಿಯೆಯನ್ನು ಅನುಮಾನಾಸ್ಪದವಾಗಿ ನೋಡುವಂತೆ ಸ್ಫೋಟಿಸಿರುವ ಈ ಬಾಂಬ್‌ ಬಗ್ಗೆ ದೇಶಾದ್ಯಂತ ತೀವ್ರ ಚರ್ಚೆ ಶುರುವಾಗಿದೆ. ಇನ್ನೂ ಬಿಹಾರ ಮಾತ್ರವಲ್ಲ,...

“ಕುಮಾರಸ್ವಾಮಿ ಅವ್ರನ್ನ ಮತ್ತೊಮ್ಮೆ ಈ ರಾಜ್ಯದ ಸಿಎಂ ಮಾಡಬೇಕಿದೆ”

ಶಿವಮೊಗ್ಗ : ಜೆಡಿಎಸ್‌ ಪಕ್ಷದ ಸಂಘಟನೆಯ ಛಲ ಹೊತ್ತು ರಾಜ್ಯಾದ್ಯಂತ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಪ್ರವಾಸದಲ್ಲಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಪಕ್ಷದತ್ತ ಯುವ ಸಮೂಹವನ್ನು ಸೆಳೆಯುವುದರೊಂದಿಗೆ ಕಾರ್ಯಕರ್ತರ ನೋವು- ನಲಿವುಗಳಿಗೆ ಧ್ವನಿಯಾಗುತ್ತಿದ್ದಾರೆ. ಈಗಾಗಲೇ ನಿಖಿಲ್ ಉತ್ತರ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ತಮ್ಮ...

ರಾಜ್ಯದಲ್ಲಿ ಮರು ಜಾತಿಗಣತಿ : ಸಿದ್ದು ಮಹತ್ವದ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ಮರು ಜಾತಿಗಣತಿ ನಡೆಸಲು, ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಸೆಪ್ಟೆಂಬರ್‌ 22ರಿಂದ ಅಕ್ಟೋಬರ್‌ 7ರವರೆಗೆ ಜಾತಿ ಗಣತಿ ನಡೆಸಲು ಸೂಚಿಸಲಾಗಿದೆ. ಅಕ್ಟೋಬರ್‌ ತಿಂಗಳು ಮುಗಿಯುವುದರೊಳಗೆ, ವರದಿ ಸಲ್ಲಿಸಲು ಸೂಚಿಸಲಾಗಿದೆ. ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತು, ಸರ್ಕಾರಕ್ಕೆ ಪಸ್ತಾವನೆ ಸಲ್ಲಿಸಿದೆ. ಇದರಂತೆ ರಾಜ್ಯದ ಎಲ್ಲಾ 7...

ಕಿವಿ ತುಂಬಬೇಡ : ಎಚ್ಚರಿಕೆಯೋ? ಉದ್ದೇಶ ಪೂರ್ವಕವೋ?

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಬಣ ಬಡಿದಾಟಕ್ಕೆ ಅಂತಿಮ ತೆರೆ ಬೀಳುವ ಹಂತ ತಲುಪಿಲ್ಲ. ರಾಜ್ಯದಲ್ಲಿ ಎರಡೂ ಪ್ರಮುಖ ಹುದ್ದೆಗಳ ಬದಲಾವಣೆಯ ವಿಚಾದಲ್ಲಿ ಬಣ ರಾಜಕೀಯ ಜೋರಾಗಿದೆ. ಹಾಲಿ ಸಿಎಂ ಸಿದ್ದರಾಮಯ್ಗ ಅವರನ್ನು ಕೆಳಗಿಳಿಸಬೇಕು. ಬದಲಿಗೆ ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನು ಆ ಸ್ಥಾನಕ್ಕೆ ತಂದು ಕೂರಿಸಲು ಒಂದು ಬಣ ಸಿದ್ದವಾಗಿದೆ. ಇನ್ನೂ ಯಾವುದೇ...

ಡಿಕೆ ಸುರೇಶ್ ನಂಗೆ ಫೋನೇ ಮಾಡಿಲ್ಲ : ಬೆದರಿಕೆ ವದಂತಿಗೆ ಸಚಿವ ಮಹದೇವಪ್ಪ ಸ್ಪಷ್ಟನೆ

ಬೆಂಗಳೂರು : ನನಗೆ ಯಾರೂ ಬೆದರಿಕೆ ಹಾಕಿಲ್ಲ. ಅಂತಹ ಯಾವುದೇ ಘಟನೆ ನಡೆದೇ ಇಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ. ಸಿಎಂ ಹುದ್ದೆಯ ವಿಚಾರದಲ್ಲಿ ಸಿದ್ದರಾಮಯ್ಯ ಪರ ಬ್ಯಾಟ್ ಮಾಡಿದ್ದರು ಎಂಬ ಕಾರಣಕ್ಕಾಗಿ ಅವರಿಗೆ ಬೆದರಿಕೆ ಹಾಕಲಾಗಿದೆ. ಮಾಜಿ ಸಂಸದ ಡಿಕೆ ಸುರೇಶ್ ಕಡೆಯಿಂದ ಬೆದರಿಕೆ ಕರೆ ಬಂದಿದೆ...

“ಅವ್ರೇ ಹೊಂದಾಣಿಕೆ ಮಾಡಿಕೊಂಡ ಮೇಲೆ ನಮ್ದೇನೂ?”

ವಿಜಯಪುರ : ಇಷ್ಟು ದಿನಗಳ ಕಾಲ ರಾಜ್ಯದಲ್ಲಿ ಜೋರಾಗಿದ್ದ ನಾಯಕತ್ವ ಬದಲಾವಣೆಯ ವಿಚಾರಕ್ಕೆ ತಾತ್ಕಲಿಕ ಬ್ರೇಕ್ ಬಿದ್ದಂತಾಗಿದೆ. ಖುದ್ದು ಸಿಎಂ ಸಿದ್ದರಾಮಯ್ಯ, ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ ಎಂದು ಖಡಕ್ ಸಂದೇಶವನ್ನು ದೆಹಲಿ ಅಂಗಳದಿಂದಲೇ ರವಾನಿಸಿದ್ದಾರೆ. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸೈಲೆಂಟ್ ಆಗಿದ್ದಾರೆ. ಈ ನಡುವೆಯೇ ಸಚಿವ ಸತೀಶ್ ಜಾರಕಿಹೊಳಿ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img