ರಾಯಚೂರು: ಮಾಜಿ ರಾಜ್ಯಸಭಾ ಸದಸ್ಯರಾದ ಅಬ್ದುಲ್ ಸಮದ್ ಸಿದ್ದೀಖಿ (87) ವಿಧಿವಶರಾಗಿದ್ದಾರೆ. ರಾಯಚೂರಿನ ತಮ್ಮ ನಿವಾಸದಲ್ಲಿ ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ಅಬ್ದುಲ್ ಸಮದ್ ಅವರು ಜನತಾದಳದಿಂದ 1988ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿ ಅಲ್ಲಿಂದ 1994ರವರೆಗೆ ರಾಜ್ಯಸಭಾ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ವಯೋಸಹಜ ಕಾಯಿಲೆಯಿಂದ ಹೈದ್ರಾಬಾದ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ತಮ್ಮ ನಿವಾಸದಲ್ಲಿ ರಾತ್ರಿ ಕೊನೆಯುಸಿರೆಳಿದ್ದಾರೆ.
ಆಧಾರ್ ಮತ್ತು ಪಾನ್...
ಬಿಹಾರ: ವೈಶಾಲಿ ಜಿಲ್ಲೆಯ ಮೆಹನಾರ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 15 ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 7 ಮಕ್ಕಳೂ ಸೇರಿ 15 ಜನರ ದುರ್ಮರಣವಾಗಿದೆ. ರಸ್ತೆ ಬಳಿಯ ಜನವಸತಿ ಪ್ರದೇಶಕ್ಕೆ ಟ್ರಕ್ ವೇಗವಾಗಿ ಬಂದು ಎಲ್ಲರ ಮೇಲೆ ಹರಿದಿದೆ. ಘಟನೆಯಲ್ಲಿ ಮಕ್ಕಳು ಸೇರಿ 15 ಜನರು ಸಾವನ್ನಪ್ಪಿದ್ದಾರೆ ಮತ್ತು ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ...
ಹಾಸನ: ಜಮೀನು ವಿಷಯದಲ್ಲಿ ಇಬ್ಬರು ಯೋಧರ ಕುಟುಂಬಗಳ ನಡುವೆ ಗಲಾಟೆಯಾಗಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ. ಯಶ್ವಂತ್ ಮತ್ತು ಯಶ್ವಂತ್ ಸಹೋದರ ಯೋಧ ಯತೀಶ್ ಮೇಲೆ ಹಲ್ಲೆ ಮಾಡಿದ್ದು, ಜಗಳದಲ್ಲಿ ಯಶ್ವಂತ್ ಎಂಬುವವರು ಮೃತಪಟ್ಟಿದ್ದಾರೆ. ಬೇಲೂರು ತಾಲ್ಲೂಕಿನ ತಿರುಮನಹಳ್ಳಿಯಲ್ಲಿ ಘಟನೆ ನಡೆದಿದೆ. ಯೋಧರ ಕುಟುಂಬಗಳ ನಡುವೆ ಜಮೀನು ವಿಷಯವಾಗಿ ಗಲಾಟೆ ನಡೆದಿದ್ದು, ಜಗಳದ ವೇಳೆ ಕುಡುಗೋಲಿನಿಂದ ಮಾರಣಾಂತಿಕ...
ದೆಹಲಿ: ಎಕ್ಸ್ ಪ್ರೆಸ್ ರೈಲುಗಳಿಗೆ ಡಿಕ್ಕಿ ಹೊಡೆದು ದನಕರುಗಳು ಸಾವನ್ನಪ್ಪುತ್ತಿವೆ. ಈ ಹಿನ್ನೆಲೆ ಹಳಿಗಳ ಪಕ್ಕದಲ್ಲಿ ಬೇಲಿ ಹಾಕಲು ರೈಲ್ವೆ ಇಲಾಖೆ ಚಿಂತನೆ ನಡೆಸಿದೆ. ವರ್ಷದಿಂದ ವರ್ಷಕ್ಕೆ ಜಾನುವಾರಗಳ ಸಾವಿನ ಸಂಖ್ಯೆ ಹೆಚ್ಚುತ್ತಿರುವುದರಿಂದ ಇಲಾಖೆ ಬೇಲಿ ಹಾಕುವ ನಿರ್ಧಾರ ಮಾಡಿದೆ. ಏಪ್ರೀಲ್ ನಿಂದ ಇಲ್ಲಿಯವರೆಗೆ 2,650 ದನಗಳು ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿವೆ. ಐದಾರು...
ಕೊಪ್ಪಳ: ತಾಲ್ಲೂಕಿನ ದನಕನಕೊಡ್ಡಿ, ಕೂಕನಪಳ್ಳಿ, ಕಾಮನೂರು, ಕೆರಳ್ಳಿ, ಗ್ರಾಮಗಳಲ್ಲಿ ಹೆಚ್ಚು ಜಾನುವಾರಗಳು ಮೃತಪಟ್ಟಿದ್ದು, ಕಳೆದ 15 ದಿನಗಳಿಂದ 50ಕ್ಕೂ ಹೆಚ್ಚು ಜಾನುವಾರಗಳು ತಿರುಗಿತಿರುಗಿ ಸಾಯುತ್ತಿವೆ. ಜಾನುವಾರಗಳಿಗೆ ವಿಚಿತ್ರ ಕಾಯಿಲೆಯೊಂದು ಕಾಡುತ್ತಿದ್ದು, ಕಾಯಿಲೆ ಹೆಸರು, ಚಿಕಿತ್ಸಾ ವಿಧಾನದ ಬಗ್ಗೆ ಮಾಹಿತಿ ಸಿಗದೆ ರೈತರು ಕಂಗಾಲಾಗಿದ್ದಾರೆ.
ಆಸ್ಪತ್ರೆ ನಿರ್ಮಾಣಕ್ಕೆ ಭೂಮಿ ದಾನ ಮಾಡಿದ ರೈತ
ಕೊಪ್ಪಳದ ಜಿಲ್ಲಾಡಳಿತ ಭವನದ ಮುಂದೆ...
ಮಂಡ್ಯ: ಮೃತ ಯೋಧ ಕುಮಾರ್ ಮನೆಗೆ ಜೆಡಿಎಸ್ ಜಿಲ್ಲಾ ವಕ್ತಾರ ಮುದ್ದನಘಟ್ಟ ಮಹಾಲಿಂಗೇ ಗೌಡ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಮಂಡ್ಯ ತಾಲ್ಲೂಕಿನ ಸಾತನೂರು ಗ್ರಾಮದಲ್ಲಿ ನಿವಾಸಕ್ಕೆ ಭೇಟಿ ನೀಡಿ ಮಹಾಲಿಂಗೇಗೌಡ ಸಾಂತ್ವನ ಹೇಳಿದ್ದಾರೆ. ಮಂಡ್ಯದ ಕಾರೆಮನೆ ಗೇಟ್ ಬಳಿ ರಸ್ತೆ ಗುಂಡಿಗೆ ನಿವೃತ್ತ ಯೋಧ ಕುಮಾರ್ ಬಲಿಯಾಗಿದ್ದರು. ಈ ಹಿನ್ನೆಲೆ ಮೃತ...
ಗುವಾಹಟಿ: ಮಿಜೋರಾಂನಲ್ಲಿ ಕಲ್ಲು ಕ್ವಾರಿಯೊಂದು ಕುಸಿದುಬಿದ್ದು 8 ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನು 4 ವಲಸೆ ಕಾರ್ಮಿಕರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು, ಅವರು ಕಲ್ಲಿನ ಕ್ವಾರಿಯಲ್ಲೇ ಸಿಕ್ಕಿಬಿದ್ದಿರುವ ಶಂಕೆ ಇದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೇಯ ನಂತರ ಗುರುತಿಸಲಾಗುವುದು. ಶೋಧ ಕಾರ್ಯಾಚರಣೆ ನಡೆದಿದ್ದು, ಕಾಣೆಯಾದವರೆಲ್ಲ ಪತ್ತೆಯಾಗುವವರೆಗೂ ಮುಂದುವರೆಸಲಾಗುವುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಿಳಿಸಿದೆ.
ಇಂಡೋನೇಷ್ಯಾದ...
ಹೈದರಾಬಾದ್: ಹಿರಿಯ ತೆಲುಗು ನಟ ಕೃಷ್ಣ ಅವರು ಹೃದಯಾಘಾತದಿಂದ ಚಿಕಿತ್ಸೆ ಪಡೆಯುತ್ತಿದ್ದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ತಂದೆ ಶ್ರೀ ಕೃಷ್ಣ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ವೆಂಟಿಲೇಟರ್ ನಲ್ಲಿ ಇರಿಸಲಾಗಿತ್ತು.
ಹೃದಯ ಸ್ತಂಭನದ ನಂತರ ಅವರಿಗೆ ನುರಿತ...
ಮಂಡ್ಯ: ರಸ್ತೆ ಗುಂಡಿಗೆ ಬಿದ್ದು ನಿವೃತ್ತ ಯೋಧರೊಬ್ಬರು ಬಲಿಯಾಗಿದ್ದಾರೆ. ಮಂಡ್ಯದ ಕಾರಿಮನೆ ಗೇಟ್ ಬಳಿ ಘಟನೆ ನಡೆದಿದೆ. ಕುಮಾರ್(38) ಮೃತ ನಿವೃತ್ತ ಯೋಧ. ಇತ್ತೀಚೆಗಷ್ಟೇ ಸೇನೆಯಿಂದ ನಿವೃತ್ತಿ ಪಡೆದಿದ್ದ ಕುಮಾರ್ ಅವರು ಬೆಂಗಳೂರಿನಲ್ಲೇ ಪೊಲೀಸ್ ಪೇದೆ ಹುದ್ದೆಯ ನೇಮಕಕ್ಕೆ ತರಬೇತಿ ಪಡೆಯುತ್ತಿದ್ದರು. ತಂದೆ ಜೊತೆ ಸಾತನೂರು ಗ್ರಾಮಕ್ಕೆ ತೆರಳುವಾಗ ಮಂಡ್ಯದ ಕಾರಿಮನೆ ಗೇಟ್ ಬಳಿ...
ಏರ್ ಶೋ ವೇಳೆ ವಿಮಾನಗಳು ವಿಂಗ್ಸ್ ಡಿಕ್ಕಿಯಾಗಿದ್ದು ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಮೇರಿಕಾದ ಟೆಕ್ಸಾಸ್ ನಗರದ ಬಳಿ ಘಟನೆ ನಡೆದಿದೆ. ಅಪಘಾತದ ದೃಶ್ಯಗಳು ಸಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಎರಡನೇ ವಿಶ್ವಯುದ್ಧದ ಸ್ಮರಣಾರ್ಥಕವಾಗಿ ನಡೆದ ಏರ್ ಶೋ. 2ನೇ ವಿಶ್ವ ಯುದ್ಧದ ಸಮಯದಲ್ಲಿನ ಎರಡು ವಿಮಾನಗಳ ನಡುವೆ ಪರಸ್ಪರ ಡಿಕ್ಕಿ ಹೊಡೆದಿದ್ದು, ಮೂವರು ಸಾವನ್ನಿಪ್ಪಿದ್ದಾರೆ.
ಬೋಯಿಂಗ್ ಬಿ-17...