Sunday, August 23, 2026

Farmers protest

ಫ್ರೀಡಂ ಪಾರ್ಕ್‌ನಲ್ಲಿ ಜೆಡಿಎಸ್ ಬೃಹತ್ ಪ್ರತಿಭಟನೆ

ಬೆಂಗಳೂರು: ಬಿಡದಿ ಟೌನ್‌ಶಿಪ್ ಹಾಗೂ NICE Road ಯೋಜನೆಗೆ ಸಂಬಂಧಿಸಿದಂತೆ ಜೆಡಿಎಸ್ ಪಕ್ಷದ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಬಿಡದಿ ಭಾಗದಲ್ಲಿ ನಡೆಯುತ್ತಿದ್ದ ಜೆಡಿಎಸ್ ಪಾದಯಾತ್ರೆಯನ್ನು ಪೊಲೀಸರು ತಡೆದ ಹಿನ್ನೆಲೆಯಲ್ಲಿ, ಜೆಡಿಎಸ್ ನಾಯಕರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಕರೆ ನೀಡಿದ್ದರು. ಇಂದು ಬೆಳಗ್ಗೆಯಿಂದಲೇ ಫ್ರೀಡಂ ಪಾರ್ಕ್‌ನಲ್ಲಿ ಜೆಡಿಎಸ್ ಕಾರ್ಯಕರ್ತರು...

ಬಿಡದಿಯಲ್ಲಿ ಶುರುವಾಯ್ತು ಮಹಾ ಹೋರಾಟ!

ಬಿಡದಿ ಸಮೀಪದ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆ ವಿರುದ್ಧ ಆಕ್ರೋಶ ತೀವ್ರವಾಗುತ್ತಿರುವ ನಡುವೆ, ಭೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರ ನಿಯೋಗವು ಭಾನುವಾರ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಯೋಜನೆ ಮರುಪರಿಶೀಲನೆ ನಡೆಸುವಂತೆ ಆಗ್ರಹಿಸಿತು. 'ಬೈರಮಂಗಲ, ಕಂಚುಗಾರನಹಳ್ಳಿ ಗ್ರಾಮ ಪಂಚಾಯತ್‌ಗಳ ರೈತ ಭೂ ಹಿತರಕ್ಷಣಾ ಸಮಿತಿ'ಯ ಭಾಗವಾಗಿರುವ ರೈತರು,...

ತುಮಕೂರಿನಲ್ಲಿ 39,000 ಅರ್ಜಿ ಬಾಕಿ; ಕಂಗಾಲಾದ ರೈತರು!

ರೈತರು ಮತ್ತು ಸರ್ಕಾರದ ಮಧ್ಯೆ ಸೇತುವೆಯಂತೆ ಕೆಲಸ ಮಾಡುತ್ತಿರುವ ಭೂ ಮಾಪಕರು ಕಳೆದ ಎರಡು ತಿಂಗಳಿನಿಂದ ಕರ್ತವ್ಯಕ್ಕೆ ಗೈರಾಗಿದ್ದು, ಸಾವಿರಾರು ಅರ್ಜಿಗಳು ವಿಲೇವಾರಿಗಾಗಿ ಎದುರು ನೋಡುತ್ತಿವೆ. ಸೇವೆ ಕಾಯಮಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ ಪಡೆದ ಭೂ ಮಾಪಕರು ಕಳೆದ ಫೆಬ್ರುವರಿ ತಿಂಗಳಿನಿಂದ...

ಬಿಜೆಪಿ–ಜೆಡಿಎಸ್ ರಹಸ್ಯ ತಂತ್ರ: ಅಧಿವೇಶನದ ‘ಸೀಕ್ರೆಟ್’ ಹೈಲೈಟ್ಸ್!

ಕುಂದಾ ನಗರಿ ಬೆಳಗಾವಿಯಲ್ಲಿ ಇಂದು ಆರಂಭವಾಗುತ್ತಿರುವ ಚಳಿಗಾಲದ ಅಧಿವೇಶನ ರಾಜಕೀಯವಾಗಿ ತೀವ್ರ ಕಾದಾಟಕ್ಕೆ ವೇದಿಯಾಗಲಿದೆಯೆಂಬ ಸೂಚನೆಗಳು ಸ್ಪಷ್ಟವಾಗಿವೆ. ಹತ್ತು ದಿನಗಳ ಕಾಲ ನಡೆಯಲಿರುವ ಈ ಸಭೆಯಲ್ಲಿ ಹಲವು ಪ್ರಮುಖ ವಿಧೇಯಕಗಳ ಮಂಡನೆ ಜೊತೆಗೆ, ಸರ್ಕಾರ ಮತ್ತು ವಿಪಕ್ಷಗಳ ನಡುವೆ ಗಟ್ಟಿಯಾದ ಮುಖಾಮುಖಿ ಎದುರಾಗುವ ಸಾಧ್ಯತೆವಿದೆ. ಬೆಳಗಾವಿಯ ಚಳಿಯ ನಡುವೆ ಸದನದ ರಾಜಕೀಯ ತಾಪಮಾನ ಗರಿಷ್ಠ...

ಅಧಿವೇಶನಕ್ಕೆ ತಟ್ಟಲಿದ್ಯಾ ರೈತರ ಹೋರಾಟದ ಬಿಸಿ: ಪರಂ ಹೇಳಿದ್ದೇನು?

ಬೆಳಗಾವಿಯಲ್ಲಿ ಡಿಸೆಂಬರ್ 8ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೆ ಈ ಬಾರಿ ಗುರ್ಲಾಪುರ ಮತ್ತು ಮುಧೋಳ ರೈತರ ಹೋರಾಟದ ಬಿಸಿ ತಟ್ಟಿದೆ. ರೈತರ ಸಂಘಟನೆಗಳ ಜೊತೆಗೆ ಮೀಸಲಾತಿ ಸೇರಿದಂತೆ ನೂರಕ್ಕೂ ಹೆಚ್ಚು ಸಂಘಟನೆಗಳು ಅಧಿವೇಶನ ಸಮಯದಲ್ಲೇ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರಿಂದ, ಸರ್ಕಾರವು ಬೀಗಿ ಭದ್ರತೆಗೆ ಕೈ ಹಾಕಿದೆ. ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಹತ್ತು ದಿನಗಳ ಅಧಿವೇಶನಕ್ಕಾಗಿ 6...

ಬೆಳಗಾವಿಯಲ್ಲಿ ಕುದಿಯುತ್ತಿದೆ ಕಬ್ಬಿನ ಜ್ವಾಲೆ

ಕಬ್ಬಿಗೆ ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹಿಸಿ ನಡೆಯುತ್ತಿರುವ ರೈತರ ಹೋರಾಟ, 7ನೇ ದಿನಕ್ಕೆ ಕಾಲಿಟ್ಟಿದೆ. ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ, ಅಹೋರಾತ್ರಿ ಹೋರಾಟ ಮುಂದುವರೆದಿದೆ. ರಾಜ್ಯ ಬಿಜೆಪಿ ನಾಯಕರೂ ಕೂಡ ಪ್ರತಿಭಟನೆಗೆ ಸಾಥ್‌ ಕೊಟ್ಟಿದ್ದು, ನಿನ್ನೆಯಿಂದ ಹೋರಾಟ ತೀವ್ರಗೊಂಡಿದೆ. ಅಹೋರಾತ್ರಿ ಹೋರಾಟದ ಸ್ಥಳದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೊಕ್ಕಾಂ ಹೂಡಿದ್ದಾರೆ. ನಿನ್ನೆ...

“ರಾಜ್ಯದಲ್ಲಿ ಭೂಸ್ವಾಧೀನದ ವಿರುದ್ಧ ಈ ಮಟ್ಟದ ಪ್ರತಿಭಟನೆ ನಡೆದಿಲ್ಲ, ರೈತರ ಹಿತಕ್ಕಾಗಿ ನಾವು ಪ್ರಕ್ರಿಯೆ ಕೈ ಬಿಟ್ಟಿದ್ದೇವೆ”

ಬೆಂಗಳೂರು : ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ. ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯಿಂದ ಹಿಂದೆ ಸರಿಯುವ ಮಹತ್ವದ ತೀರ್ಮಾನಕ್ಕೆ ಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ತಮ್ಮ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳ...

Kangana On Farmers Protest: ರೈತ ಹೋರಾಟವನ್ನು ನಿಭಾಯಿಸದಿದ್ರೆ ಭಾರತ ಬಾಂಗ್ಲಾ ಆಗುತ್ತಿತ್ತು: ಕಂಗನಾ ಹೇಳಿಕೆಗೆ ಬಿಜೆಪಿ ಗರಂ

ನವದೆಹಲಿ: ರೈತರ ಹೋರಾಟ (Farmers Protest)ವನ್ನು ಕೇಂದ್ರ ಸರ್ಕಾರ ಸೂಕ್ತ ರೀತಿಯಲ್ಲಿ ನಿಭಾಯಿಸದೇ ಇದ್ದಿದ್ದರೆ ನಮ್ಮ ದೇಶದಲ್ಲೂ ಬಾಂಗ್ಲಾ ದೇಶದ ಪರಿಸ್ಥಿತಿ ಎದುರಾಗುತ್ತಿತ್ತು ಎಂದು ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರಣಾವತ್ (Kangana Ranaut) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹರಿಯಾಣ ವಿಧಾನಸಭೆ ಚುನಾವಣೆ ಘೋಷಣೆಯಾಗಿರುವ ಹೊತ್ತಲ್ಲೇ ತಮ್ಮ ಎಕ್ಸ್​ ಖಾತೆಯಲ್ಲಿ ವಿಡಿಯೋ ಅಪ್​ಲೋಡ್​ ಮಾಡಿರುವ...

ಹತ್ತು ಜಿಲ್ಲೆಯ ರೈತರ ಮಹತ್ವದ ಸಭೆ: ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ನಿರ್ಧಾರ..!

Hubli News: ಹುಬ್ಬಳ್ಳಿ: ಕಳಸಾ ಬಂಡೂರಿ, ಮಹದಾಯಿ ಹಾಗೂ ಉತ್ತರ ಕರ್ನಾಟಕ ಭಾಗದ ಜನರ ಜ್ವಲಂತ ಸಮಸ್ಯೆಗಳ ಬಗ್ಗೆ ಈಗಾಗಲೇ ಕೇಂದ್ರ ಸಚಿವರಿಗೆ ಹಾಗೂ ವಿರೋಧ ಪಕ್ಷದ ನಾಯಕರಿಗೆ ಹಾಗೂ ರಾಜ್ಯ ಸರ್ಕಾರಕ್ಕೂ‌ ಮನವಿ ಸಲ್ಲಿಸಿರುವ ರೈತರು ಈಗ ಮಹತ್ವದ ಸಭೆಯ ಮೂಲಕ ಮುಂದಿನ ನಿರ್ಧಾರಕ್ಕೆ ಅಣಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಮತ್ತಷ್ಟು ಹೋರಾಟದ ರೂಪುರೇಷೆಗಳನ್ನು...

ವಿವಿಧ ಬೇಡಿಕೆಗಳನ್ನು ಈಡೇರಿಕೆಗಾಗಿ ಆಗ್ರಹಿಸಿ ರೈತರಿಂದ ಬೃಹತ್ ಪ್ರತಿಭಟನೆ

Hubballi News: ವಿವಿಧ ಬೇಡಿಕೆಗಳನ್ನು ಈಡೇರಿಕೆಗಾಗಿ ಒತ್ತಾಯಿಸಿ ಹುಬ್ಬಳ್ಳಿಯಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು. ರೈತರ ಸಾಲ ಮನ್ನಾ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಬೆಳೆ ವಿಮೆ ಸೇರಿದಂತೆ ಕೆಲವೊಂದಿಷ್ಟು ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಿ ರೈತರು ನಗರದಲ್ಲಿ ಪ್ರತಿಭಟನೆ ಮಾಡಿದರು. ಸರ್ಕಾರದ ವಿರುದ್ದ ಸಿಡಿದೆದ್ದ ರೈತರು ನಗರದಲ್ಲಿ ಬೃಹತ್ ಪ್ರಮಾಣದಲ್ಲಿ ಪ್ರತಿಭಟನಾ ಮೆರವಣಿಗೆ ಮಾಡಿದರು. ರೈಲ್ವೆ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img