Saturday, February 21, 2026

Farmers protest

ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಕಾಂಗ್ರೆಸ್ ನಾಯಕ ಸಿಧು

ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಆಶೀಶ್ ಮಿಶ್ರಾ ಪೊಲೀಸರೆದುರು ವಿಚಾರಣೆಗೆ ಹಾಜರಾಗುತ್ತಿದ್ದಂತೆ ಆತನನ್ನು ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ತಾವು ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಕೈ ಬಿಟ್ಟಿದ್ದಾರೆ. ಘಟನೆ ನಡೆದು ಒಂದು ವಾರವಾದ್ರೂ ಪ್ರಕರಣದ ಪ್ರಮುಖ ಆರೋಪಿಯನ್ನು ಈವರೆಗೂ ಬಂಧಿಸಲಾಗಿಲ್ಲ ಅಂತ ಆರೋಪಿಸಿದ  ಕಾಂಗ್ರೆಸ್ ನಾಯಕ...

ಕಡೆಗೂ ವಿಚಾರಣೆಗೆ ಹಾಜರಾದ ಕೇಂದ್ರ ಸಚಿವರ ಪುತ್ರ ಆಶೀಶ್ ಮಿಶ್ರಾ..!

ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಕೇಂದ್ರ ಸಚಿವ ಅಜಯ್​ ಮಿಶ್ರಾ ಪುತ್ರ ಆಶೀಶ್​ ಮಿಶ್ರಾ ಇಂದು ಪೊಲೀಸರೆದುರು ವಿಚಾರಣೆಗೆ ಹಾಜರಾಗಿದ್ದಾರೆ. ನಿನ್ನೆ ವಿಚಾರಣೆಗೆ ಹಾಜರಾಗಬೇಕಿದ್ದು ಆಶೀಶ್ ಮಿಶ್ರಾ ಅನಾರೋಗ್ಯದ ಕಾರಣ ನೀಡಿ ಗೈರಾಗಿದ್ದರು. ಆದ್ರೆ ಇಂದು ಉತ್ತರಪ್ರದೇಶದ ಅಪರಾಧ ವಿಭಾಗದ ಪೊಲೀಸರೆದುರು ಹಾಜರಾಗಿದ್ದಾರೆ. ಮಾಧ್ಯಮದವರಿಂದ ತಪ್ಪಿಸಿಕೊಳ್ಳೋ ಸಲುವಾಗಿ ಪೊಲೀಸ್​...

ಲಖಿಂಪುರ್ ಖೇರಿ ಹತ್ಯಾಕಾಂಡ – ಇಬ್ಬರ ಬಂಧನ, ಸಚಿವರ ಪುತ್ರ ಇನ್ನೂ ನಾಪತ್ತೆ…!

ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಇಂದು ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.  ಬಂಧಿತರನ್ನು ಆಶೀಶ್​ ಪಾಂಡೆ ಮತ್ತು ಲವಕುಶ್​ ಅಂತ ಗುರುತಿಸಲಾಗಿದೆ. ಬಂಧಿತರಿಬ್ಬರೂ ಹಿಂಸಾಚಾರ ನಡೆದ ದಿನ  ರೈತರ ಮೇಲೆ ಹರಿದ ಬೆಂಗಾವಲು ವಾಹನದಲ್ಲಿದ್ದರು ಅಂತ ಲಖಿಂಪುರ್ ಖೇರಿ ಪೊಲೀಸರು ಮಾಹಿತಿ ನೀಡಿದ್ದಾರೆ.  ಅಲ್ಲದೆ ಈ ಇಬ್ಬರೂ  ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ...

ಲಖಿಂಪುರ್ ಖೇರಿ ಹತ್ಯಾಕಾಂಡ ತನಿಖೆಗೆ ಆಯೋಗ ರಚನೆ

ಉತ್ತರಪ್ರದೇಶ: ಲಖಿಂಪುರ್ ಖೇರಿಯಲ್ಲಿ ನಡೆದ 9 ಮಂದಿ ಹತ್ಯಾಕಾಂಡ ಪ್ರಕರಣದ ತನಿಖೆಗೆ ಉತ್ತರ ಪ್ರದೇಶ ಸರ್ಕಾರ ಮುಂದಾಗಿದ್ದು, ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಏಕ ಸದಸ್ಯ ಆಯೋಗವನ್ನೂ  ರಚಿಸಿದೆ. ನಿವೃತ್ತ ನ್ಯಾಯಾಧೀಶ ಪ್ರದೀಪ್ ಕುಮಾರ್ ಶ್ರೀವಾಸ್ತವ ವರಿಂದ ಪ್ರಕರಣದ ಸ್ವತಂತ್ರ ತನಿಖೆಗೆ ತಿರ್ಮಾನಿಸಿದೆ. ಈ ಕುರಿತು ರಾಜ್ಯಪಾಲರು ಇಂದು ಅಧಿಕೃತ ಮಾಹಿತಿ ಹೊರಡಿಸಿದ್ದಾರೆ. ಸೆಕ್ಷನ್ 3, 1952 ವಿಚಾರಣಾ...

ಇಂದಿನ ಪ್ರಮುಖ ಟಾಪ್ 10 ಸುದ್ದಿಗಳು

ಜಪಾನ್ 100ನೇ ಪ್ರಧಾನಿಯಾಗಿ ಕಿಶಿಡಾ ಅಧಿಕಾರ ಸ್ವೀಕಾರ ಜಪಾನಿನ 100ನೇ ಪ್ರಧಾನಿಯಾಗಿ ಫುಮಿಯೋ ಕಿಶಿಡಾ ಅಧಿಕಾರ ಸ್ವೀಕರಿಸಿದ್ದಾರೆ. ಲಿಬರಲ್ ಡೆಮಾಕ್ರೆಟಿಕ್ ಪಾರ್ಟಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಕಿಶಿಡಾ ಇಂದು ಪ್ರಧಾನಿ ಗದ್ದುಗೆ ಏರಿದ್ದಾರೆ. ವಿದೇಶಾಂಗ ವ್ಯವಹಾರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಕಿಶಿಡಾ, ಪ್ರಧಾನಿ ಹುದ್ದೆಗೆ ಆಯ್ಕೆಯಾಗುತ್ತಿದ್ದಂತೆ ತಮ್ಮ ನೂತನ ಕ್ಯಾಬಿನೆಟ್​ನ್ನು ಘೋಷಿಸಿದ್ದಾರೆ. 20 ಮಂದಿ...

ಪತ್ನಿಯನ್ನು 500 ರೂಪಾಯಿಗೆ ಮಾರಿದ ಪತಿ…!

ಅಹಮದಾಬಾದ್: ಅಹಮದಾಬಾದ್ ನಲ್ಲಿ ವ್ಯಕ್ತಿಯೋರ್ವ ಕೈಹಿಡಿದ ಪತ್ನಿಯನ್ನು 500 ರೂಪಾಯಿಗೆ ಮಾರಾಟ ಮಾಡಿದ್ದಾನೆ. ಊಟ ಕೊಡಿಸೋದಾಗಿ ಹೇಳಿದ್ದ ಪತಿ ತನ್ನ 21ವರ್ಷದ ಪತ್ನಿಯನ್ನು ಹೋಟೆಲ್ ವೊಂದಕ್ಕೆ ಕರೆದೊಯ್ದಿದ್ದ. ಆದ್ರೆ ಅಲ್ಲಿ ಆತ ಸೋನು ಶರ್ಮಾ ಎಂಬ ವ್ಯಕ್ತಿಗೆ ತನ್ನ ಪತ್ನಿಯನ್ನು ಮಾರಾಟ ಮಾಡಿದ್ದಾನೆ. ಅಲ್ಲದೆ ಆತನಿಂದ 500ರೂಪಾಯಿಯನ್ನೂ ಪಡೆದಿದ್ದಾನೆ. ಇನ್ನು ಆಕೆಯನ್ನು ನಿರ್ಜನ ಪ್ರದೇಶಕ್ಕೆ...

ಉತ್ತರಪ್ರದೇಶದಲ್ಲಿ ಪ್ರತಿಭಟನೆ ಕೈಬಿಟ್ಟ ರೈತರು- ಮೃತರ ಕುಟುಂಬಕ್ಕೆ ತಲಾ 45 ಲಕ್ಷ ಪರಿಹಾರ…!

ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ರೈತರು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರೊಂದಿಗೆ ಉತ್ತರಪ್ರದೇಶ ಸರ್ಕಾರ ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಈ ಹಿನ್ನೆಲೆಯಲ್ಲಿ ಹೋರಾಟವನ್ನು ಕೈಬಿಡುವುದಾಗಿ ರೈತರು ತಿಳಿಸಿದ್ದಾರೆ. ಇನ್ನು ಹಿಂಸಾಚಾರದಲ್ಲಿ ಮೃತಪಟ್ಟ ನಾಲ್ಕು ರೈತರ ಕುಟುಂಬಗಳಿಗೆ ಉತ್ತರಪ್ರದೇಶ  ಸರ್ಕಾರ ತಲಾ 45 ಲಕ್ಷ ರೂಪಾಯಿ ಪರಿಹಾರ ಘೋಷಣೆ...

ಅಖಿಲೇಶ್ ಯಾದವ್ ಪೊಲೀಸರ ವಶಕ್ಕೆ

ಉತ್ತರ ಪ್ರದೇಶದ : ಉತ್ತರ ಪ್ರದೇಶದ ಲಖಿಮ್ ಪುರ್ ಖೇರಿಯಲ್ಲಿ ನಡೆದ ಪ್ರತಿಭಟನಾ ನಿರತ ರೈತರ ಹತ್ಯೆ ಖಂಡಿಸಿ ಧರಣಿ ನಡೆಸುತ್ತಿದ್ದ   ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃಷಿ ಕಾಯ್ದೆ ಜಾರಿ ಖಂಡಿಸಿ ಪ್ರತಿಭಟನೆ ಕೈಗೊಂಡಿದ್ದ ರೈತರ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ...

ಬೆಂಗಳೂರಿನ ಲಕ್ಕಸಂದ್ರದಲ್ಲಿ ಕಟ್ಟಡ ಕುಸಿತ…!

ಬೆಂಗಳೂರು: ಬೆಂಗಳೂರಿನ ಲಕ್ಕಸಂದ್ರದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಕುಸಿದುಬಿದ್ದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಇಂದು ಬೆಳಗ್ಗೆ 10.30ರ ಸುಮಾರಿನಲ್ಲಿ ಸಿಲಿಕಾನ್ ಸಿಟಿಯ ಮೂರಂತಸ್ಥಿನ ಕಟ್ಟಡವೊಂದು ಕುಸಿದುಬಿದ್ದಿದೆ. ಇಲ್ಲಿನ ಲಕ್ಕಸಂದ್ರದಲ್ಲಿ ಈ ಘಟನೆ ನಡೆದಿದ್ದು ಸುಮಾರು 50 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಕಟ್ಟಡ ಇಂದು ಏಕಾಏಕಿ ಕುಸಿದಿದೆ. ಇನ್ನು ಈ ಕಟ್ಟಡದಲ್ಲಿ ಸುಮಾರು 20ಕ್ಕೂ...

ಹುಬ್ಬಳ್ಳಿಯಲ್ಲಿ ಹಿಟ್ & ರನ್- ಬೈಕ್ ಸವಾರ ಸಾವು

ಹುಬ್ಬಳ್ಳಿ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ  ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಕಾರವಾರ ರಸ್ತೆಯ ಸೇತುವೆ ಬಳಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಪುಂಡಲೀಕ ಎಂಬ ಯುವಕ ಈ ರಸ್ತೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಅಪರಿಚಿತ ವಾಹನವೊಂದು ಡಿಕ್ಕಿಯಾಗಿದೆ. ಪರಿಣಾಮ, ಬೈಕ್ ಸಮೇತ ಸವಾರ ರಸ್ತೆ ಪಕ್ಕಕ್ಕೆ ಹಾರಿ...
- Advertisement -spot_img

Latest News

ದೇಶದ ಘನತೆಗೆ ಕುಂದುಂಟು ಮಾಡುವ ಯೂತ್ ಕಾಂಗ್ರೆಸ್ಸಿನ ಅಸಭ್ಯ ನಡೆ ಅತ್ಯಂತ ಖಂಡನೀಯ: ಬಿ.ವೈ.ವಿಜಯೇಂದ್ರ

Political News: ದೆಹಲಿಯಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿತ್ತು. ಈ ವಿರುದ್ಧ ಬೆಂಗಳೂರಿನಲ್ಲಿಂದು ಬಿಜೆಪಿ ಯುವಮೋರ್ಚಾದವರು ಕೂಡ ಪ್ರತಿಭಟಿಸಿದ್ದಾರೆ. ಯುವ ಮೋರ್ಚಾ...
- Advertisement -spot_img