Tuesday, October 28, 2025

Hassan

ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಅ*ಪಘಾತದಲ್ಲಿ ಸಾ*ವು..

Hassan News:  ಹಾಸನದಲ್ಲಿ ಅಪಘಾತಗೊಂಡು ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೂಲತಃ ಬಿಹಾರದವರಾಗಿದ್ದ ಹರ್ಷವರ್ಧನ್ ಎಂಬ 26 ವರ್ಷದ ಅಧಿಕಾರಿ, ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ, ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. https://youtu.be/-L5OeCDH-xg 2022ರಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲಿಯೇ ಹರ್ಷವರ್ಧನ್ 153ನೇ ರ್ಯಾಂಕ್ ಪಡೆದಿದ್ದರು. ಹಾಸನ ಜಿಲ್ಲೆಗೆ ಡಿವೈಎಸ್‌ಪಿಯಾಗಿ ಹರ್ಷವರ್ಧನ್ ನಿಯೋಜನೆಗೊಂಡಿದ್ದರು. ಅವರು...

ಬಿಜೆಪಿ ಕೇಂದ್ರ ಸರಕಾರ-ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಮುಖಂಡರಿಂದ ಪ್ರತಿಭಟನೆ

Hassan News: ಹಾಸನ: ದ್ವೇಷದ ರಾಜಕಾರಣಕ್ಕಾಗಿ ಬಿಜೆಪಿಯ ಸತ್ಯ ಮರೆಮಾಚಿಸಿ ಕೇಂದ್ರ ಸರಕಾರದ ಏಜೆಂಟರಂತೆ ವರ್ತಿಸಿ ನೋಟಿಸ್ ನೀಡಿರುವುದನ್ನು ಕೂಡಲೇ ಹಿಂಪಡೆಯದೇ ಮುನ್ನುಡಿ ಬರೆಯುವುದಾದರೇ ಕರ್ನಾಟಕದಲ್ಲಿ ರಕ್ತಕ್ರಾಂತಿಗೆ ಸಿದ್ದರಾಗಬೇಕಾಗತ್ತದೆ ಎಂದು ಕರೆ ನೀಡಿ ರಾಜ್ಯಪಾಲರ ವಿರುದ್ಧ ಅರಸೀಕೆರೆ ಕ್ಷೇತ್ರದ ಶಾಸಕ ಕೆ.ಎಂ. ಶಿವಲಿಂಗೇಗೌಡ ನೇತೃತ್ವದಲ್ಲಿ ಪ್ರತಿಭಟಿಸಿ ಜಿಲ್ಲಾಧಿಕಾರಿ ಡಿಸಿ ಸಿ. ಸತ್ಯಭಾಮ ಅವರಿಗೆ ಮನವಿ...

ದೋಷ ನಿವಾರಣೆಗೆ ಪೂಜೆ ಮಾಡಿಸಲು ಬಂದ ಭಕ್ತೆಯ ಮೇಲೆ ಅ*ತ್ಯಾಚಾರ: ಪೂಜಾರಿ ಅರೆಸ್ಟ್

Bengaluru News: ದೋಷ ನಿವಾರಣೆಗೆಂದು ಪೂಜೆ ಮಾಡಿಸಲು ಬಂದಿದ್ದ ಭಕ್ತೆಯ ಮೇಲೆ ಅತ್ಯಾಚಾರವೆಸಗಿದ್ದ ಪೂಜಾರಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. https://youtu.be/2e_4iS4peP4 ಆರೋಪಿಯಾಗಿರುವ ಹಾಸನ ಜಿಲ್ಲೆಯ ಅರಸಿಕೆರೆಯಲ್ಲಿರುವ ಪುರದಮ್ಮ ದೇವಸ್ಥಾನದ ಪೂಜಾರಿ ದಯಾನಂದ್ (39) ಎಂಬಾತನನ್ನು, ಬಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. https://youtu.be/_0W_x2G8H_k ಕೆಲ ದಿನಗಳ ಹಿಂದೆ ಮಹಿಳೆಗೆ ಇರುವ ದೋಷವನ್ನು ನಿವಾರಿಸುತ್ತೇನೆ ಎಂದು ಹೇಳಿ, ದುಡ್ಡು ಪಡೆದು ಪೂಜಾರಿ ಪೂಜೆ ಮಾಡಿಸಲು...

ನಾನು ಕರ್ನಾಟಕಕ್ಕೆ ಬರ್ತಿನಿ ಎಂದರೆ ಅವರಿಗೆ ಕೈಕಾಲು ನಡುಗುತ್ತೆ: ಕುಮಾರಸ್ವಾಮಿ ಟಾಂಗ್‌

Hassan News: ಹಾಸನ : ಯಾವ ಸರ್ಕಾರವೂ ಹತ್ತು ಲಕ್ಷ ಪರಿಹಾರ ನೀಡಲು ಸಾಧ್ಯವೇ ಇಲ್ಲ ಎಂಬ ಸಚಿವ ಮಂಕಾಳ ವೈದ್ಯ ಹೇಳಿಕೆಗೆ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಇಂದು ಹಾಸನದ ಸಕಲೇಶಪುರ ತಾಾಲೂಕಿನ ದೊಡ್ಡತಪ್ಪಲು ಗ್ರಾಮದಲ್ಲಿ ಮಾತನಾಡಿದ ಕುಮಾರಸ್ವಾಮಿ,  ಅವರಿಗೆ ಸಮಯ ಸಿಕ್ಕಿದರೆ ಕೊಡುಗಿಗೆ ಭೇಟಿ ನೀಡಲಿ. ನನ್ನ ಕಾಲದಲ್ಲಿ ಹತ್ತು ಲಕ್ಷ...

ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ರೇವಣ್ಣ: ಐಸಿಯುನಲ್ಲಿ ಚಿಕಿತ್ಸೆ

Hassan News: ಹಾಸನ : ಮಾಜಿ ಸಚಿವ ಹೆಚ್.ಡಿ.ರೇವಣ್ಣ ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದಿದ್ದು, ಪಕ್ಕೆಲುಬಿಗೆ ಪೆಟ್ಟಾಗಿದೆ. ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ, ಹರದನಹಳ್ಳಿ ದೇವಾಲಯದಲ್ಲಿ ಈ ಘಟನೆ ನಡೆದಿದ್ದು, ಏಕಾದಶಿ ಪ್ರಯುಕ್ತ ರೇವಣ್ಣ ಉಪವಾಸವಿದ್ದರು. https://youtu.be/bE1cynKQlg8 ಹರದನಹಳ್ಳಿಯ ದೇವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಬಳಿಕ ಅಲ್ಲಿಂದ ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹ ದೇವಾಲಯಕ್ಕೆ ಹೊರಟಿದ್ದರು, ಈ ವೇಳೆ ರೇವಣ್ಣ ಕಾಲು...

2 ತಿಂಗಳ ಮಗುವಿಗೆ ಅನಾರೋಗ್ಯ ಹಿನ್ನೆಲೆ ಆತ್ಮಹ*ತ್ಯೆಗೆ ಯತ್ನಿಸಿದ ತಂದೆ

Hassan News: ಮಗುವಿನ ಅನಾರೋಗ್ಯದಿಂದ ಮನನೊಂದು ತಂದೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಹಿಮ್ಸ್ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ವ್ಯಕ್ತಿ ಯತ್ನಿಸಿದ್ದಾರೆ. https://youtu.be/LDamrjJi8Ek ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಹಳೆಬೀಡು ಸಮೀಪದ ಬಸವರಾಯನಪುರ ಗ್ರಾಮದ ಗಂಗಸ್ವಾಮಿಯಿಂದ ಆತ್ಮಹತ್ಯೆ ಯತ್ನ ನಡೆದಿದ್ದು, ಕಟ್ಟಡದ 5ನೇ ಮಹಡಿಯ ತುದಿಯಲ್ಲಿ ನಿಂತು...

ಆದಾಯಕ್ಕಿಂತ ಹೆಚ್ಚು ಗಳಿಕೆ ಆರೋಪ: ಭ್ರಷ್ಟ ಅಧಿಕಾರಿ ಜಗದೀಶ್‌ ಮನೆ ಮೇಲೆ ಲೋಕಾಯುಕ್ತ ದಾಳಿ

Hassan News: ಹಾಸನ: ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದು, ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಗೆ ಆರೋಪದಡಿ, ಗ್ರೇಡ್ 1 ಕಾರ್ಯದರ್ಶಿ ಎನ್.ಎಂ.ಜಗದೀಶ್ ಅವರ ನಿವಾಸ ಹಾಗೂ ಬೆಂಗಳೂರಿನ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. https://youtu.be/FFKlj5BMAl4 ಲೋಕಾಯುಕ್ತ ಡಿವೈಎಸ್‌ಪಿ ಹಾಗೂ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದಾರೆ. ಎನ್.ಎಂ.ಜಗದೀಶ್ ಬೇಲೂರು...

ಬೈಕ್‌ಗೆ ಕಾರ್ ಟಚ್ ಆಗಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿದ ಪುಂಡರು

Hassan News ಹಾಸನ : ಹಾಸನದಲ್ಲಿ ಪುಂಡರ ಹಾವಳಿ ಜೋರಾಗಿದ್ದು, ಪುಂಡರು ಯುವಕನ ಮೇಲೆ ಹಲ್ಲೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. https://youtu.be/u-vuz0NDqy0 ಹಾಸನದ ಕೆ.ಆರ್.ಪುರಂನಲ್ಲಿ ಈ ಘಟನೆ ನಡೆದಿದ್ದು, ಬೈಕ್‌ಗೆ ಕಾರ್ ಟಚ್ ಆದ ಹಿನ್ನೆಲೆ, ಬೈಕ್‌ನಲ್ಲಿದ್ದವರು, ಕಾರ್ ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ. ಇವರು ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೈಕ್ ಕಾರ್‌ಗೆ...

ಶಿಷ್ಟಾಚಾರ ಪಾಲಿಸದ ಯಸಳೂರು ಪಿಡಿಓ ದೇವರಾಜ್‌ರವರಿಗೆ ಶಾಸಕರ ತರಾಟೆ

Hassan News: ಹಾಸನ: ಸಕಲೇಶಪುರ: ಇತ್ತೀಚೆಗಷ್ಟೆ ಯಸಳೂರು ಗ್ರಾ.ಪಂ ವ್ಯಾಪ್ತಿಯ ದಬ್ಬಳ್ಳಿಕಟ್ಟೆ ಅರಣ್ಯ ಪ್ರದೇಶದಲ್ಲಿ ಮೃತ ಅರ್ಜುನ ಕಾಡಾನೆಯ ಸ್ಮಾರಕದ ಉದ್ಘಾಟನೆ ಸಮಾರಂಭದ ವೇಳೆ ಅರಣ್ಯ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಜರಿದ್ದು ಆದರೆ ಆ ಕಾರ್ಯಕ್ರಮಕ್ಕೆ ಪಿಡಿಓ ಗೈರುಹಾಜರಾದ ಹಿನ್ನೆಲೆಯಲ್ಲಿ ಶಾಸಕರು ಡೆಂಗ್ಯೂ ಜ್ವರ ನಿಯಂತ್ರಣ ಸಭೆಯಲ್ಲಿ ತರಾಟೆಗೆ ತೆಗೆದುಕೊಂಡು ಶಿಸ್ತು...

ಆಹಾರಕ್ಕಾಗಿ ಮನೆಗೆ ಬಂದ ಚಿರತೆ, ಕಾರ್‌ ಮೇಲೆ ಉರುಳಿ ಬಿದ್ದ ಮರ: Hassan News

Hassan News: ಹಾಸನ :ಹಾಸನದಲ್ಲಿ ಚಿರತೆಯೊಂದು ಆಹಾರ ಅರಸಿ ಮನೆಯ ಬಳಿ ಬಂದ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ, ಜಾವಗಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ 8.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಇಂದ್ರೇಶ್ ಎಂಬುವರ ಮನೆಗೆ ಚಿರತೆ ಬಂದಿದೆ. ಚಿರತೆಯನ್ನು ಕಂಡು ಮಹಿಳೆ ಗಾಬರಿಯಿಂದ ಕೂಗಾಡಿದ್ದಾರೆ. ಮಹಿಳೆಯ ಕೂಗು...
- Advertisement -spot_img

Latest News

ಸಿಜೆಐ ಸ್ಥಾನಕ್ಕೆ ಸೂರ್ಯಕಾಂತ್ – ನವೆಂಬರ್ 24ಕ್ಕೆ ಅಧಿಕಾರ ಸ್ವೀಕಾರ!

ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಸುಪ್ರೀಂ ಕೋರ್ಟ್‌ನ ಎರಡನೇ ಹಿರಿಯ ನ್ಯಾಯಾಧೀಶ, ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ....
- Advertisement -spot_img