Saturday, July 25, 2026

Heart Attack

ಅಪ್ಪು ಫೋಟೋವನ್ನು ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ..!

www.karnatakatv.net: ರಾಯಚೂರು: ನಟ ಪುನೀತ್ ನಿಧನದಿಂದ ತೀವ್ರ ನೋವಿನಲ್ಲಿರೋ ಅಭಿಮಾನಿಗಳು ಹೇಗಾದ್ರೂ ಮಾಡಿ ಕೊನೆಯ ಬಾರಿಗೆ ಅವರನ್ನು ಕಾಣಬೇಕು ಅಂತ ಬೆಂಗಳೂರಿನತ್ತ ಧಾವಿಸುತ್ತಿದ್ದಾರೆ. ಇನ್ನು ಬೆಂಗಳೂರಿಗೆ ಆಗಮಿಸಲು ಸಾಧ್ಯವಾಗದ ರಾಯಚೂರಿನ ಅಭಿಮಾನಿಯೊಬ್ಬ ತನ್ನ ನೆಚ್ಚಿನ ನಟನ ಫೋಟೋವನ್ನು ಎದೆಯ ಮೇಲೆ ಟ್ಯಾಟೂ ಹಾಕಿಸಿಕೊಳ್ಳೋ ಮೂಲಕ ಅಭಿಮಾನ ಮೆರೆದಿದ್ದಾನೆ. ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಯುವಕ ಲಿಂಗರಾಜು...

ನಾಳೆ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ

www.karnatakatv.net: ಇಂದು ನೆರವೇರಬೇಕಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆಯನ್ನು ನಾಳೆಗೆ ಮುಂದೂಡಲಾಗಿದೆ. ಪುನೀತ್ ಅಂತಿಮ ದರ್ಶನಕ್ಕಾಗಿ ಲಕ್ಷಾಂತರ ಸಂಖ್ಯೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಆಗಮಿಸುತ್ತಿರೋ ಹಿನ್ನೆಲೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಅಂತ ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಇನ್ನು ಪುನೀತ್ ಪುತ್ರಿ ದ್ರಿತಿ ಬೆಂಗಳೂರಿಗೆ ಆಗಮಿಸಲು ಸ್ವಲ್ಪ ತಡವಾಗಬಹುದು ಇದರಿಂದ...

ರಾಘವೇಂದ್ರ ರಾಜ್ ಕುಮಾರ್ ಪುತ್ರನಿಂದ ಅಪ್ಪು ಅಂತಿಮ ವಿಧಿವಿಧಾನ..!

www.karnatakatv.net : ನಟ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತಿಮ ವಿಧಿವಿಧಾನಕ್ಕೆ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ. ಇನ್ನು ಈ ಕಾರ್ಯವನ್ನು ಪುನೀತ್ ರಾಜ್ ಕುಮಾರ್ ರವರ ಹಿರಿಯ ಸಹೋದರ ರಾಘವೇಂದ್ರ ರಾಜ್ ಕುಮಾರ್ ರವರ ಪುತ್ರ ವಿನಯ್ ರಾಜ್ ಕುಮಾರ್ ನೆರವೇರಿಸಲಿದ್ದಾರೆ. ಪುನೀತ್ ರಾಜ್ ಕುಮಾರ್ ಅವರಿಗೆ ಇಬ್ಬರು ಹೆಣ್ಣು...

ಪಾಕಿಸ್ತಾನ ಅಭಿಮಾನಿಯಿಂದ ಪುನೀತ್ ಗೆ ಗಾನ ನಮನ..!

www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನಕ್ಕೆ ಇಡೀ ಕರುನಾಡಷ್ಟೇ ಅಲ್ಲ, ದೇಶದ ಗಣ್ಯಾತಿಗಣ್ಯರು ಕಂಬನಿಗರೆದಿದ್ದಾರೆ. ಈ ಮಧ್ಯೆ ಪಾಕಿಸ್ತಾನದ ಅಪ್ಪು ಅಭಿಮಾನಿಯೊಬ್ಬರು ಪುನೀತ್ ನಟನೆಯ ಚಿತ್ರದ ಹಾಡುಗಳನ್ನು ಹಾಡೋ ಮೂಲಕ ಅವರಿಗೆ ಗಾನ ನಮನ ಸಲ್ಲಿಸಿದ್ದಾರೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಿದೆ. ಪಾಕಿಸ್ತಾನದ ಲಾಹೋರ್ ಮೂಲದ...

ಈ ಮಾರ್ಗದಲ್ಲಿ ಸಾಗಲಿದೆ ಅಪ್ಪು ಪಾರ್ಥಿವ ಶರೀರದ ಮೆರವಣಿಗೆ..!

www.karnatakatv.net: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಿನ್ನೆಯಿಂದಲೂ ನಟ ಪುನೀತ್ ರಾಜ್ ಕುಮಾರ್ ರವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ. ಇನ್ನು ಇಂದು ಸಂಜೆಯೇ ಅಂತ್ಯ ಸಂಸ್ಕಾರ ನೆರವೇರಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಹೀಗಾಗಿ 3 ಗಂಟೆ ಹೊತ್ತಿಗೆ ಕಂಠೀರವ ಕ್ರೀಡಾಂಗಣದಿoದ ಅಪ್ಪು ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದೆ. ಪಾರ್ಥಿವ ಶರೀರ ಹೊತ್ತ ವಾಹನ ನಗರದ ಪ್ರಮುಖ...

ಬೆಂಗಳೂರಲ್ಲಿ ಪೊಲೀಸರ ಹದ್ದಿನ ಕಣ್ಣು..!

www.karnatakatv.net: ಇನ್ನೊಂದು ದಿನ ಕಳೆದರೆ ನಾಡಿನಲ್ಲಿ ಕನ್ನಡ ರಾಜ್ಯೋತ್ಸವ ಕಳೆಕಟ್ಟಬೇಕಿತ್ತು. ಆದ್ರೆ ಅದರ ಮುನ್ನವೇ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದಿಂದಾಗಿ ಇಡೀ ಕರುನಾಡಿನಲ್ಲಿ ಸೂತಕದ ಛಾಯೆ ಆವರಿಸಿದೆ. ರಾಜ್ಯದ ನಾನಾ ಮೂಲೆಗಳಿಂದ ಅಗಲಿದ ನಟನನ್ನು ಕಾಣಲು ಅಭಿಮಾನಿಗಳು ಸಾಗರೋಪಾದಿಯಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದತ್ತ ಧಾವಿಸುತ್ತಿದ್ದಾರೆ. ನೆಚ್ಚಿನ ನಟ ಸಾವಿನಿಂದ ತೀವ್ರ ಬೇಸರಗೊಂಡಿರುವ...

ಇಂದೇ ಪುನೀತ್ ರಾಜ್ ಕುಮಾರ್ ಅಂತ್ಯಸoಸ್ಕಾರ..!

www.karnatakatv.net: ನಿನ್ನೆ ಬೆಳಗ್ಗೆ ಹೃದಯಾಘಾತಕ್ಕೊಳಗಾಗಿಡಿ ನಿಧನರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ಅಂತ್ಯಕ್ರಿಯೆಯನ್ನು ಇಂದೇ ನೆರವೇರಿಸಲು ಕುಟಂಬಸ್ಥರು ನಿರ್ಧರಿಸಿದ್ದಾರೆ. ಪುನೀತ್ ಪುತ್ರಿ ದ್ರಿತಿ ಅಮೆರಿಕದಿಂದ ಸುಮಾರು 5 ಗಂಟೆ ಹೊತ್ತಿಗೆ ಆಗಮಿಸಲಿದ್ದಾರೆ. ದ್ರಿತಿ ಬಂದ ಕೂಡಲೇ ಅಂತಿಮ ವಿಧಿವಿಧಾನಗಳನ್ನು ಕೈಗೊಳ್ಳಲಾಗುತ್ತೆ. ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ದ್ರಿತಿ ಆಗಮಿಸಲಿದ್ದಾರೆ. ಹೀಗಾಗಿ ಮಧ್ಯಾಹ್ನ 3...

ಇಂದು ರಾಜ್ಯದ ಎಲ್ಲಾ ಖಾಸಗಿ ಶಾಲೆಗಳಿಗೆ ರಜೆ..!

www.karnatakatv.net: ಸ್ಯಾಂಡಲ್ ವುಡ್ ನಟ ಪುನೀತ್ ಇಹಲೋಕ ತ್ಯಜಿಸಿದ ಹಿನ್ನೆಯಲ್ಲಿ ಇಂದು ರಾಜ್ಯದ ಎಲ್ಲಾ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಪ್ರಕಟಣೆ ಹೊರಡಿಸಿದ್ದಾರೆ. ಪುನೀತ್ ರಾಜ್ ಕುಮಾರ್ ಅಗಲಿಕೆ ಹಿನ್ನೆಲೆಯಲ್ಲಿ ಶೋಕಾಚರಣೆ ನಿಮಿತ್ತ ಖಾಸಗಿ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ ಎಂದು ರುಪ್ಸಾ ಒಕ್ಕೂಟ ಅಧ್ಯಕ್ಷ ಲೋಕೇಶ್...

ನೆಚ್ಚಿನ ನಟನ ಅಂತಿಮ ದರ್ಶನಕ್ಕೆ ಹರಿದು ಬಂದ ಜನಸಾಗರ..!

www.karnatakatv.net: ಪುನೀತ್ ರಾಜ್ ಕುಮಾರ್ ಅವರು ಅಗಲಿಕೆಯ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯಾದ್ಯಂತ ಆಕ್ರಂದನ ಮುಗಿಲು ಮುಟ್ಟಿದೆ. ನಾಡಿನ ಮೂಲೆ ಮೂಲೆಯಿಂದ ಲಕ್ಷಾಂತರ ಅಭಿಮಾನಿಗಳು ಬೆಂಗಳೂರಿನತ್ತ ಬರುತ್ತಿತ್ತಾರೆ. ನಗರದ ಕಂಠೀರವ ಸ್ಟೇಡಿಯಂಗೆ ಭೇಟಿ ನೀಡುತ್ತಿದ್ದು, ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಕಂಠೀರವ ಸ್ಟೇಡಿಯಂನಲ್ಲಿ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದ್ದು, ಜತೆಗೆ ಸ್ಯಾಂಡಲ್ ವುಡ್ ಸೇರಿ ಭಾರತೀಯ...

ನನಸಾಗಲಿಲ್ಲ ಪುನೀತ್ ಕನಸು..!

www.karnatakatv.net: ತಾವು ಹುಟ್ಟಿದ 9ನೇ ತಿಂಗಳಲ್ಲಿಯೇ ಚಿತ್ರರಂಗ ಪ್ರವೇಶಿಸಿದ್ದ ನಟ ಪುನೀತ್ ರಾಜ್ ಕುಮಾರ್ 49 ಚಿತ್ರಗಳಲ್ಲಿ ನಟಿಸಿದ್ದಾರೆ. ಈ ಪೈಕಿ 29 ಸಿನಿಮಾಗಳಲ್ಲಿ ನಾಯಕ ನಟನಾಗಿ ಮಿಂಚಿದ್ದಾರೆ. ತಮ್ಮ ನಟನೆ, ಡ್ಯಾನ್ಸ್ ಶೈಲಿ, ವಿನಯತೆಯಿಂದ ಕರುನಾಡಿನಾದ್ಯಂತ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ ಅಪ್ಪು ಚಿತ್ರರಂಗದಲ್ಲಿ ಸಾಕಷ್ಟು ಮಂದಿ ಹೊಸ ಪ್ರತಿಭೆಗಳನ್ನು ಹುರಿದುಂಬಿಸುತ್ತಿದ್ರು. ಹೊಸಬರ ಸಿನಿಮಾಗಳಿಗೆ ಮೊದಲಿನಿಂದಲೂ...
- Advertisement -spot_img

Latest News

ಕರ್ನಾಟಕ ರಾಜಕೀಯದಲ್ಲಿ ಸಂಪುಟ ವಿಸ್ತರಣೆ ಹೈಡ್ರಾಮಾ – ಸಂಭಾವ್ಯರ ಪಟ್ಟಿ ಅಂತಿಮ!

ಕರ್ನಾಟಕ ರಾಜಕೀಯದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆ ವಿಚಾರವೇ ಅತ್ಯಂತ ಬಿಸಿಬಿಸಿ ಚರ್ಚೆಯ ವಿಷಯವಾಗಿದೆ. ಕಳೆದ ಕೆಲವು ದಿನಗಳಿಂದ ಸದ್ದು ಮಾಡುತ್ತಿದ್ದ ಈ ವಿಚಾರದಲ್ಲಿ ಈಗ...
- Advertisement -spot_img