ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಜಾರಿಗೊಂಡಿದ್ದ ಗಡಿಪಾರು ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಬ್ರೇಕ್ ಹಾಕಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿಗೆ ಜಾರಿಗೊಂಡಿದ್ದ ಗಡಿಪಾರು ಕ್ರಮವನ್ನು ಪ್ರಶ್ನಿಸಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಪುರಸ್ಕರಿಸಿಕೊಂಡು, ಗಡಿಪಾರು ಆದೇಶವನ್ನು ರದ್ದುಪಡಿಸಿ ಹೊಸದಾಗಿ ವಿಚಾರಣೆ ನಡೆಸುವಂತೆ ಸೂಚಿಸಿದೆ.
ಪುತ್ತೂರು ಉಪ ವಿಭಾಗಾಧಿಕಾರಿ ಸೂಕ್ತ ಕಾರಣಗಳು ಹಾಗೂ...
ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ವಿರೋಧ ಪಕ್ಷದ ಶಾಸಕರಿಗೆ ಅನುದಾನ ಹಂಚಿಕೆಯಲ್ಲಿ, ತಾರತಮ್ಯ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಹಣಕಾಸು ಇಲಾಖೆಗೆ ನೋಟಿಸ್ ಜಾರಿ ಮಾಡಿದೆ.
ಆಡಳಿತ ಪಕ್ಷದ ಶಾಸಕರಿಗೆ 50 ಕೋಟಿ ರೂ. ಹಾಗೂ ವಿರೋಧ ಪಕ್ಷದ ಶಾಸಕರಿಗೆ...
ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ತಲೆ ಮೇಲೆ, ಎರಡೆರಡು ತೂಗುಗತ್ತಿ ನೇತಾಡುತ್ತಿದೆ. ದಕ್ಷಿಣ ಕನ್ನಡದಿಂದಲೇ ಗಡಿಪಾರು ಮಾಡಲಾಗಿದೆ. ಮತ್ತು ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣದಲ್ಲಿ, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಸೆಪ್ಟೆಂಬರ್ 21, 25ರಂದು ವಿಚಾರಣೆಗೆ ಬರಲು ನೋಟಿಸ್ ನೀಡಲಾಗಿತ್ತು. ಆದ್ರೆ ತಿಮರೋಡಿ ಗೈರಾಗಿದ್ರು.
ಇದೀಗ 3ನೇ ಬಾರಿ ನೋಟಿಸ್ ನೀಡಿದ್ದು ವಿಚಾರಣೆಗೆ...
ಬಿಡಿಎ ಕಿಕ್ಬ್ಯಾಕ್ ಪ್ರಕರಣ ಸಂಬಂಧ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಫ್ಯಾಮಿಲಿಗೆ ಬಿಗ್ ರಿಲೀಫ್ ಸಿಕ್ಕಿದೆ. 12 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದ ಕೇಸ್ ಸಂಬಂಧ, ಬಿಎಸ್ವೈ, ಪುತ್ರ ಬಿ.ವೈ. ವಿಜಯೇಂದ್ರ, ಕುಟುಂಬ ಸದಸ್ಯರು ಹಾಗೂ ಉಚ್ಚಾಟಿತ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ಗೆ, ಲೋಕಾಯುಕ್ತ ಪೊಲೀಸರು ಕ್ಲೀನ್ಚಿಟ್ ನೀಡಿದ್ದಾರೆ.
ಲಂಚ ಸ್ವೀಕಾರ ಆರೋಪಕ್ಕೆ ಸಾಕ್ಷ್ಯಾಧಾರಗಳ ಕೊರತೆ...
ಸೆಪ್ಟೆಂಬರ್ 22ರಿಂದ ರಾಜ್ಯದಲ್ಲಿ ಜಾತಿ ಗಣತಿ ಶುರುವಾಗ್ತಿದೆ. ಆದ್ರೀಗ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಹೊಸ ತಲೆ ನೋವು ಶುರುವಾಗಿದೆ. ಜಾತಿಗಣತಿಗೆ ಭಾರೀ ವಿರೋಧ ವ್ಯಕ್ತವಾಗ್ತಿದ್ದು, ನ್ಯಾಯಾಲಯದ ಮೆಟ್ಟಿಲೇರಿದೆ. ಹೊಸ ಉಪಜಾತಿಗಳ ಸೃಷ್ಟಿ ಆರೋಪ ಬೆನ್ನಲ್ಲೇ, ಹೈಕೋರ್ಟ್ಗೆ 2 ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ದಾಖಲಾಗಿವೆ. ರಾಜ್ಯದಲ್ಲಿ ಜಾತಿ ಗಣತಿಯನ್ನೇ ರದ್ದುಪಡಿಸುವಂತೆ ಕೋರಲಾಗಿದೆ.
ವಕೀಲ ಕೆ.ಎನ್. ಸುಬ್ಬಾರೆಡ್ಡಿ ಸೇರಿ...
'ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣದ ವ್ಯವಹಾರ ನಡೆದಿದೆ’ ಎಂಬ ವದಂತಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ. ಅವರು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಅಪಪ್ರಚಾರದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, 20 ಕೋಟಿ, 10 ಕೋಟಿ ಕೊಟ್ಟರು ಎಂಬುದು ಶುದ್ಧ ಸುಳ್ಳು. ಯಾರಿಂದಲೂ ನಾವು ಹಣ ತೆಗೆದುಕೊಂಡಿಲ್ಲ ಎಂದು ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.
ಫೇಸ್ಬುಕ್ನಲ್ಲಿ ಏನೇನೋ...
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ಗೆ ಅನುಮತಿ ಕೊಟ್ಟಿದ್ದಾರೆ. ಪ್ರಾಸಿಕ್ಯೂಷನ್ ವಿರುದ್ಧ ಸಿದ್ದರಾಮಯ್ಯ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದು, ವಿಚಾರಣೆ ಪೂರ್ಣಗೊಂಡಿದೆ. ವಾದ-ಪ್ರತಿವಾದಗಳನ್ನು ಆಲಿಸಿರೋ ಹೈಕೋರ್ಟ್ ಏಕಸದಸ್ಯ ಪೀಠ, ತೀರ್ಪುನ್ನು ಕಾಯ್ದಿರಿಸಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ತೀರ್ಪು ಬರೋವರೆಗೂ ತಾತ್ಕಾಲಿಕ ರಿಲೀಫ್ ಸಿಕ್ಕತಾಂಗಿದೆ. ಆದ್ರೆ, ತೀರ್ಪು...
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದ ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಏಕಸದಸ್ಯ ಪೀಠ, ಆಗಸ್ಟ್ 29ಕ್ಕೆ ವಿಚಾರಣೆಯನ್ನು ಮುಂದೂಡಿ ಮಧ್ಯಂತರ ಆದೇಶ ನೀಡಿದೆ. ಈ ಮೂಲಕ ಸಿಎಂ 10 ದಿನಗಳ ಕಾಲ ನಿರಾಳವಾಗಿರಬಹುದು. ಇದೇ ವೇಳೆ ಜನಪ್ರತಿನಿಧಿಗಳ...
ಮಂಬೈನ ಕಾಲೇಜು ಆವರಣದಲ್ಲಿ ಹಿಜಾಬ್, ನಖಾಬ್, ಬುರ್ಖಾ, ಕ್ಯಾಪ್ ಇತ್ಯಾದಿಗಳನ್ನು ಧರಿಸುವುದನ್ನು ನಿಷೇಧ ಮಾಡಲಾಗಿತ್ತು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರಶ್ನಿಸಿ ಮಹಿಳಾ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. ಮುಂಬೈ ನಗರದ ಕಾಲೇಜೊಂದು ತೆಗೆದುಕೊಂಡ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ ನ್ಯಾಯಮೂರ್ತಿಗಳಾದ ಎಎಸ್ಚಂದೂರ್ಕರ್ ಮತ್ತು ರಾಜೇಶ್ ಪಾಟೀಲ್ ಅವರ ವಿಭಾಗೀಯ ಪೀಠವು ಕಾಲೇಜು...
ಪರಿಶಷ್ಟ ಜಾತಿ, ಪರಿಶಷ್ಟ ಪಂಗಡ ಮತ್ತು ಬುಡಕಟ್ಟು ಜನಾಂಗದವರಿಗೆ ಶಿಕ್ಷಣ ಸಂಸ್ಥೆ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿಯನ್ನು ಶೇ.50 ರಿಂದ 65ಕ್ಕೆ ಹೆಚ್ಚಿಸಿರುವ ಬಿಹಾರ ಸರ್ಕಾರದ ನಿರ್ಧಾರವನ್ನು ಪಟ್ನಾ ಹೈಕೋರ್ಟ್ ತಳ್ಳಿ ಹಾಕಿದೆ.
ಸಿಎಂ ನಿತೀಶ್ ಕುಮಾರ್ ನೇತೃತ್ವದ ಬಿಹಾರ ವಿಧಾನಸಭೆಯು ಕಳೆದ ವರ್ಷ ನವೆಂಬರ್ನಲ್ಲಿ ಬಿಹಾರದ ಹುದ್ದೆಗಳು ಮತ್ತು ಸೇವೆಗಳಲ್ಲಿನ ಖಾಲಿ ಹುದ್ದೆಗಳ ತಿದ್ದುಪಡಿ...
ವೈಟ್ಫೀಲ್ಡ್ ಪ್ರದೇಶದಲ್ಲಿ ಸಾಫ್ಟ್ವೇರ್ ಇಂಜಿನಿಯರ್ 45 ವರ್ಷದ ಮುರುಳಿ ಗೋವಿಂದರಾಜು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಬೆಳಕಿಗೆ ಬಂದಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ನೇಣು ಬಿಗಿದುಕೊಂಡಿರುವ...