Friday, August 7, 2026

Hubli

Hubli News: ವಿನಯ್ ಕುಲಕರ್ಣಿಗೆ ಜಾಮೀನು; ಧಾರವಾಡದಲ್ಲಿ ಸಂಭ್ರಮ

Hubli : ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವ ಬೆನ್ನಲ್ಲೇ, ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಹೈಕೋರ್ಟ್ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿ, ಜೀವಾವಧಿ ಶಿಕ್ಷೆಯ ಆದೇಶವನ್ನು ಅಮಾನತಿನಲ್ಲಿಟ್ಟ ಬೆನ್ನಲ್ಲೇ ಧಾರವಾಡದಲ್ಲಿ ಅವರ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದರು. ಧಾರವಾಡದ ಜುಬ್ಲಿ...

Hubli News: ಪ್ರಿಯಾಂಕಾ ಗಾಂಧಿ ಹೇಳಿಕೆ ಖಂಡನೆ; ಕಾಂಗ್ರೆಸ್ ಕಚೇರಿಗೆ ಬಿಜೆಪಿ ಯುವ ಮೋರ್ಚಾ ಮುತ್ತಿಗೆ ಯತ್ನ

Hubli News: ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಕುರಿತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ನೀಡಿದ ಹೇಳಿಕೆಯನ್ನು ಖಂಡಿಸಿ, ಹುಬ್ಬಳ್ಳಿಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಕಾಂಗ್ರೆಸ್ ನಾಯಕಿ...

Hubli News: ಗುತ್ತಿಗೆದಾರನ ಆರೋಪಕ್ಕೆ ಆಕ್ರೋಶ; ಕ್ಷಮೆಯಾಚನೆ ಬಳಿಕ ಪ್ರತಿಭಟನೆ ವಾಪಸ್

Hubli News: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಗುತ್ತಿಗೆದಾರ ಶರತ್ ದೊಡ್ಡಮನಿ ಮಾಡಿದ್ದ ಆರೋಪ ಭಾರೀ ವಿವಾದಕ್ಕೆ ಕಾರಣವಾಗಿದೆ. ಆರೋಪಗಳನ್ನು ತೀವ್ರವಾಗಿ ಖಂಡಿಸಿದ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಪ್ರತಿಭಟನೆ ನಡೆಸಿ, ಶರತ್ ದೊಡ್ಡಮನಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿದರು. ಬಳಿಕ ಆಯುಕ್ತರು, ಪೊಲೀಸ್ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಸಂಘದ ಮಧ್ಯಸ್ಥಿಕೆಯಲ್ಲಿ ಶರತ್ ದೊಡ್ಡಮನಿ ಕ್ಷಮೆಯಾಚನೆ...

Hubli: ಎಸ್‌ಐಆರ್ ನೆಪ ಹೇಳಿ ಕೆಲಸಕ್ಕೆ ಚಕ್ಕರ್ ಆರೋಪ: ಸಮಸ್ಯೆಗೆ ಸ್ಪಂದಿಸಿ ಎಂದು ಸಾರ್ವಜನಿಕರ ಆಗ್ರಹ

Hubli News: ಕಳ್ಳನಿಗೊಂದು ಪಿಳ್ಳೆ ನೆವ ಎನ್ನುವಂತಾಗಿದೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿ ನಡೆ.. ಎಸ್ ಐ ಆರ್ ನೆಪದಲ್ಲಿ ತಮ್ಮ ಮೂಲ ಕರ್ತವ್ಯಕ್ಕೆ ಚೆಕ್ಕರ್ ಹೊಡೆಯುತ್ತಿದ್ದಾರೆ. ಇದರಿಂದಾಗಿ ಸಕಾಲದಲ್ಲಿ ಅಗತ್ಯ ದಾಖಲೆಗಳು ಲಭ್ಯವಾಗದೆ, ಜನ ಸಂಕಷ್ಟ ಎದುರಿಸುತ್ತಿದ್ದಾರೆ.. ಪಾಲಿಕೆ ಅಧಿಕಾರಿಗಳ ನಡೆ ಹಲವು ಅನುಮಾನಕ್ಕೆ ಕಾರಣವಾಗಿದೆ. ಮಹಾನಗರ ಪಾಲಿಕೆಯ ಸಿಬ್ಬಂದಿ...

Hubli News: ನೀಟ್ ಹೋರಾಟಕ್ಕೆ ಬೆಂಬಲ; ಕಾಂಗ್ರೆಸ್‌ಗೆ ನೈತಿಕ ಹಕ್ಕಿಲ್ಲ: ಪ್ರಮೋದ್ ಮುತಾಲೀಕ್

Hubli News: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ವಿದ್ಯಾರ್ಥಿಗಳ ಹೋರಾಟಕ್ಕೆ ಶ್ರೀರಾಮ ಸೇನೆ ಬೆಂಬಲ ಸೂಚಿಸಿದೆ. ಆದರೆ ಈ ಹೋರಾಟವನ್ನು ಮುನ್ನಡೆಸಲು ಕಾಂಗ್ರೆಸ್‌ಗೆ ನೈತಿಕ ಹಕ್ಕಿಲ್ಲ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲೀಕ್ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲೀಕ್, ನೀಟ್ ಪ್ರಶ್ನೆಪತ್ರಿಕೆ...

Hubli News: ನಿರ್ಮಿತಿ ಕೇಂದ್ರ ಅವ್ಯವಹಾರಕ್ಕೆ ಸಿಐಡಿ ತನಿಖೆ ಆಗ್ರಹ

Hubli News: ಧಾರವಾಡ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಶಿವಕುಮಾರ ಪಾಟೀಲ ಅವರನ್ನು ತಕ್ಷಣ ವಜಾಗೊಳಿಸಿ, ನಿರ್ಮಿತಿ ಕೇಂದ್ರದಲ್ಲಿ ನಡೆದಿರುವ ಕೋಟ್ಯಂತರ ರೂಪಾಯಿ ಅವ್ಯವಹಾರದ ಬಗ್ಗೆ ಸಿಐಡಿ ತನಿಖೆ ನಡೆಸಬೇಕು ಎಂದು ಸಮತಾ ಸೇನಾ ಕರ್ನಾಟಕ ಆಗ್ರಹಿಸಿದೆ. ಈ ಸಂಬಂಧ ಜಿಲ್ಲಾಡಳಿತಕ್ಕೆ 15 ದಿನಗಳ ಗಡುವು ನೀಡಲಾಗಿದೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಮತಾ ಸೇನಾ ಕರ್ನಾಟಕದ...

Hubli : ಹಿಂದಿನಿಂದ ಬಂದ ಟ್ರಕ್ ಬೈಕ್‌ಗೆ ಡಿಕ್ಕಿ: ಓರ್ವ ಸಾ*, ಚಾಲಕ ಪೊಲೀಸರ ವಶಕ್ಕೆ

Hubli News: ಹುಬ್ಬಳ್ಳಿಯ ಶಿಮ್ಲಾ ನಗರದ ಸೇತುವೆ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂದಿನಿಂದ ಬಂದ ಟ್ರಕ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಹುಬ್ಬಳ್ಳಿಯ ಶಿಮ್ಲಾ ನಗರದ ಸೇತುವೆ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 40 ವರ್ಷದ ಮಹಬೂಬ್ ಅಲಿ ಶೇಖ್ ಎಂಬ...

Koppala: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Koppala News: ಕೊಪ್ಪಳದಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ನಾಯಕರು ಮತ್ತು ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬೃಹತ್ ಹೋರಾಟದಲ್ಲಿ ಕೊಪ್ಪಳದ ಬಿಜೆಪಿ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣನವರ್ ಮತ್ತು ಪರಣ್ಣ ಮಳವಳ್ಳಿ ಹಾಗೂ ಹೇಮಲತಾ ನಾಯಕ್ ಅವರು ಬಿಜೆಪಿ ಧ್ವಜಗಳು, ಬಿತ್ತಿಪತ್ರಗಳನ್ನು ಹಿಡಿದು ಕಾಂಗ್ರೆಸ್ ವಿರುದ್ಧ...

Haveri News: ಹಾವೇರಿಯ ಹಾನಗಲ್‌ನಲ್ಲಿ ನೂತನ ಗ್ರಾಮದೇವಿ ದೇವಸ್ಥಾನ ಲೋಕಾರ್ಪಣೆ

Haveri News: ಹಾನಗಲ್: ಪಟ್ಟಣ ಅಂಬೇಡ್ಕರ್ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ದೇವಸ್ಥಾನದ ಸಮಿತಿಯ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸದಸ್ಯರು ಗ್ರಾಮ ದೇವಿಯ ದೇವಸ್ಥಾನದ ಲೋಕಾರ್ಪಣೆಯ ಪೋಸ್ಟರ್ ಬಿಡುಗಡೆ ಮಾಡಿದರು. ಬಳಿಕ ಮಾಧ್ಯಮದ ಜತೆ ಮಾತನಾಡಿರುವ ದೇವಸ್ಥಾನ ಸಮಿತಿಯ ಖಜಾಂಚಿಯಾದ ರಾಜು ಗೌಳಿ ಅವರು,ಗ್ರಾಮದೇವಿ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಹೆಸರಾಂತ ಮಠಾಧೀಶರು ಗಣ್ಯರು ವಿವಿಧ ಪ್ರಮುಖರು ಆಗಮಸಲಿದ್ದಾರೆ...

Dharwad News: ನೆಮ್ಮದಿ ಹಾಳು ಮಾಡಿದ ಸಾಲದ ಹೊರೆ: ಬರಗಾಲಕ್ಕೆ ಬೇಸತ್ತು ಜೀವ ಬಲಿ ನೀಡಿದ ರೈತ

Dharwad News: ಧಾರವಾಡ ಜಿಲ್ಲೆಯಲ್ಲಿ ಮಳೆ ಅಭಾವ ಹಾಗೂ ಸಾಲದ ಹೊರೆ ಮತ್ತೊಂದು ರೈತ ಕುಟುಂಬವನ್ನು ಕಣ್ಣೀರಿನಲ್ಲಿ ಮುಳುಗಿಸಿದೆ. ಬೆಳೆ ಕೈಕೊಟ್ಟ ಹಿನ್ನೆಲೆ, ಹೆಂಡತಿ ಮತ್ತು ಮಗಳ ಬಂಗಾರವನ್ನು ಅಡವಿಟ್ಟು ಬಿತ್ತನೆ ಮಾಡಿದ್ದ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಕಬ್ಬೇನೂರ ಗ್ರಾಮದಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯ ಕಬ್ಬೇನೂರ ಗ್ರಾಮದ 45 ವರ್ಷದ ರೈತ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img