ನವದೆಹಲಿ : ಪಹಲ್ಗಾಮ್ ಉಗ್ರ ದಾಳಿಯ ಕುರಿತು ಭಾರತದಲ್ಲಿ ಆಕ್ರೋಶ ಹೆಚ್ಚಾಗಿದೆ. ಉಗ್ರರನ್ನು ಮಟ್ಟ ಹಾಕುವಂತೆ ಬಲವಾದ ಪ್ರತೀಕಾರದ ಕೂಗು ಅಧಿಕವಾಗಿದೆ, ಇದಕ್ಕೆ ಪೂರಕವಾಗಿಯೇ ಭಾರತದ ಸೇನೆಯು ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡುತ್ತಿದೆ. ಆದರೆ ನಡುವೆಯೇ ಪಾಕಿಸ್ತಾನಿ ಭಯೋತ್ಪಾದನೆಯ ಇನ್ನೊಂದು ಕರಾಳ ಮುಖವನ್ನು ಬಿಜೆಪಿ ಸಂಸದ ನಿಶಿಕಾಂತ್ ದುಬೆ ತೆರೆದಿಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ...