Wednesday, May 13, 2026

JDS

ಕರ್ನಾಟಕ ಬಂದ್ ಗೆ ಹುಬ್ಬಳ್ಳಿಯಲ್ಲಿ ನೀರಸ ಪ್ರತಿಕ್ರಿಯೆ: ಸಹಜ ಸ್ಥಿತಿಯಲ್ಲಿ ವಾಣಿಜ್ಯನಗರ

Hubli News: ಹುಬ್ಬಳ್ಳಿ: ಕನ್ನಡಪರ ಹೋರಾಟಗಾರ ವಾಟಾಳ ನಾಗರಾಜ ನೇತೃತ್ವದಲ್ಲಿ ಕರೆ ನೀಡಿರುವ ಕರ್ನಾಟಕ ಬಂದ್ ಗೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅವಳಿನಗರದ ಜನರಿಗೆ ಯಾವುದೇ ಬಂದ್ ಬಿಸಿ ತಟ್ಟಿಲ್ಲ. ಈ ನಿಟ್ಟಿನಲ್ಲಿ ವಾಹನ ಸಂಚಾರ, ಜನರ ಓಡಾಟ ಹಾಗೂ ಆಟೋ ಕಾರ್ಯಾಚರಣೆ ಎಂದಿನಂತೆ ಮುಂದುವರೆದಿದೆ. ಉತ್ತರ ಕರ್ನಾಟಕದ ಹೆಬ್ಬಾಗಿಲು ಹುಬ್ಬಳ್ಳಿಯಲ್ಲಿಯೇ ಬಂದ್ ಗೆ...

71 ಎಕರೆ ಗೋಮಾಳ ಭೂಮಿ ಕಬಳಿಸಿದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ: ಎಸ್.ಆರ್.ಹಿರೇಮಠ

Hubli News: ಹುಬ್ಬಳ್ಳಿ: ಕೇತಗಾನಹಳ್ಳಿಯಲ್ಲಿ 71 ಎಕರೆ ಗೋಮಾಳ ಭೂಮಿಯನ್ನು ಕಬಳಿಸಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಡಿ.ಸಿ.ತಮ್ಮಣ್ಣ, ಸಂಸದ ಡಾ.ಸಿ.ಎನ್. ಮಂಜುನಾಥ್ ಮುಂತಾದ ಪ್ರಭಾವಶಾಲಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕು ಎಂದು ಸಿಟಿಜನ್ ಫಾರ್ ಡೆಮಾಕ್ರಸಿ ಮುಖ್ಯಸ್ಥ ಎಸ್.ಆರ್.ಹಿರೇಮಠ ಹೇಳಿದರು. ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕೇತಗಾನಹಳ್ಳಿಯಲ್ಲಿ ಕಬಳಿಸಿರುವ ಭೂಮಿ 14 ಎಕರೆ...

Hubli News: ಗುಲಾಬಿ ಹೂವು ನೀಡಿ ಕರ್ನಾಟಕ ಬಂದ್ ಇಲ್ಲ ಎಂದ ಆಟೋ ಚಾಲಕರು…!

Hubli News: ಹುಬ್ಬಳ್ಳಿ: ಕರ್ನಾಟಕ ಬಂದ್ ಕರೆ ಹಿನ್ನೆಲೆಯಲ್ಲಿ, ಒಂದು ಕಡೆ ಜೋರಾದ ಪ್ರತಿಭಟನೆಯ ಕಾವು, ಮತ್ತೊಂದೆಡೆ ಬಂದ್ ವಿರೋಧಿಸಿ ಹೂವು ಕೊಟ್ಟು ಆಟೋ ಚಾಲಕರು ವಿಶೇಷ ಜಾಗೃತಿ ಮೂಡಿಸಿದರು. ವಿಶೇಷ ಪ್ರತಿಭಟನೆಗೆ ಸಾಕ್ಷಿಯಾದ ಹುಬ್ಬಳ್ಳಿಯ ಚನ್ನಮ್ಮ ವೃತ್ತ, ಉತ್ತರ ಕರ್ನಾಟಕ ಆಟೋ ಚಾಲಕರು, ಸಾರ್ವಜನಿಕರಿಗೆ, ವಾಹನ ಸವಾರರಿಗೆ ಗುಲಾಬಿ ಹೂ ಕೊಡುವ ಮೂಲಕ, ಇಂದು...

ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲ ಸೃಷ್ಟಿ.. ಕನ್ನಡತಿ ದಿಶಾ ಸಾಲಿಯಾನ್‌ ಡೆತ್‌ ಕೇಸ್‌ಗೆ ಬಿಗ್‌ ಟ್ವಿಸ್ಟ್‌..!

Bollywood News: ಬಾಲಿವುಡ್‌ ನಟ ದಿವಂಗತ ಸುಶಾಂತ್‌ ಸಿಂಗ್‌ ರಜಪೂತ್‌ ಅವರ ಮಾಜಿ ಮ್ಯಾನೇಜರ್‌ ಆಗಿದ್ದ ಕನ್ನಡತಿ ದಿಶಾ ಸಾಲಿಯಾನ್‌ ಅವರ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಇದೀಗ ಟ್ವಿಸ್ಟ್‌ ಸಿಕ್ಕಿದೆ. ಅಲ್ಲದೆ ಶಿವಸೇನಯ ಉದ್ದವ್‌ ಠಾಕ್ರೆ ಬಣದ ಶಾಸಕ ಆದಿತ್ಯ ಠಾಕ್ರೆ ಅವರ ಮೇಲೆ ಎಫ್‌ಐಆರ್‌ ದಾಖಲಿಸಿ ಸಿಬಿಐ ತನಿಖೆಗೆ ವಹಿಸಬೇಕೆಂದು ದಿಶಾ ತಂದೆ...

Chhattisgarh News: ಛತ್ತೀಸ್‌ಗಢ ಎನ್‌ಕೌಂಟರ್‌ : ಭದ್ರತಾ ಪಡೆಗಳ ಗುಂಡಿಗೆ 30 ನಕ್ಸಲರ ಉಡೀಸ್‌

Chhattisgarh News: ಛತ್ತೀಸ್‌ಗಢದಲ್ಲಿ ನಕ್ಸಲರ ವಿರುದ್ಧದ ಕಾರ್ಯಾಚರಣೆ ಚುರುಕುಗೊಂಡಿದ್ದು, ಭದ್ರತಾ ಪಡೆಗಳು 30 ನಕ್ಸಲರನ್ನು ಪ್ರತ್ಯೇಕವಾದ ಎರಡು ಪ್ರಕರಣಗಳಲ್ಲಿ ಹೊಡೆದುರುಳಿದ್ದಾರೆ. ಅಲ್ಲದೆ ಇದೇ ವೇಳೆ ಒಬ್ಬರು ಭದ್ರತಾ ಸಿಬ್ಬಂದಿಯು ಹತರಾಗಿದ್ದಾರೆ. ಇನ್ನೂ ಇಲ್ಲಿನ ಬಿಜಾಪುರ ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು 26 ನಕ್ಸಲೀಯರನ್ನು ಹತ್ಯೆ ಮಾಡಿವೆ. ಅಲ್ಲದೆ ಕಂಕೇರ್ ಪ್ರದೇಶದಲ್ಲಿ ಬಿಎಸ್‌ಎಫ್ ಮತ್ತು...

ಹಠಕ್ಕೆ ಬಿದ್ದ ಮಗುವಿನ ಮೇಲೆ ವಿಕೃತಿ : ಅಂಗನವಾಡಿ ಸಹಾಯಕಿ ಮಾಡಿದ್ದೇನು ಗೊತ್ತಾ..?

Ramanagara News: ಅಂಗನವಾಡಿಯಲ್ಲಿ ಮಗು ಹಠ ಮಾಡುತ್ತಿದೆ ಎನ್ನುವ ಕಾರಣಕ್ಕೆ ಅಂಗನವಾಡಿ ಸಹಾಯಕಿಯೊಬ್ಬಳು ಕಂದಮ್ಮನ ಮೇಲೆ ಅಮಾನವೀಯ ಕೃತ್ಯವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮಹಾರಾಜರ ಕಟ್ಟೆ ಗ್ರಾಮದ ಅಂಗನವಾಡಿ ಸಹಾಯಕಿ ಚಂದ್ರಮ್ಮ ಎನ್ನುವವಳ ವಿರುದ್ಧ ಪ್ರಕರಣ ದಾಖಲಾಗಿದೆ. ಅಂದಹಾಗೆ ಎರಡೂವರೆ ವರ್ಷದ ದೀಕ್ಷಿತ್‌ ಎಂಬ ಮಗು...

900 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಡ್ಯ ವರ್ತುಲ ರಸ್ತೆ ಯೋಜನೆ ಕೈಗೆತ್ತಿಕೊಳ್ಳಲು ಕೇಂದ್ರ ಸಮ್ಮತಿ

Political News: ಮಂಡ್ಯದ ವರ್ತುಲ ರಸ್ತೆಯನ್ನು ಆದಷ್ಟು ಬೇಗ ಅನುಷ್ಠಾನಕ್ಕೆ ತರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಭೂಸಾರಿಗೆ ಸಚಿವರಾದ ನಿತೀನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಸಂಸತ್ ಭವನದಲ್ಲಿರುವ ನಿತೀನ್ ಗಡ್ಕರಿ ನಿವಾಸಕ್ಕೆ ಭೇಟಿ ನೀಡಿ, ಚರ್ಚೆ ನಡೆಸಿರುವ ಕುಮಾರಸ್ವಾಮಿಯವರು ಈಗಾಗಲೇ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರವು ಯೋಜನೆಗೆ ಡಿಪಿಆರ್ ಮಾಡಿದೆ....

ಸ್ಪೀಕರ್‌ ಪೀಠಕ್ಕೆ ಅಗೌರವ ತೋರಿದ ಆರೋಪ : 18 ಬಿಜೆಪಿ ಎಂಎಲ್‌ಎಗಳು ಸದನದಿಂದ‌ 6 ತಿಂಗಳು ಔಟ್

Political News: ಸ್ಪೀಕರ್‌ ಪೀಠಕ್ಕೆ ಅಗೌರವ ತೋರಿದ್ದು ಹಾಗೂ ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ವಿಪಕ್ಷ ಬಿಜೆಪಿಯ 18 ಸದಸ್ಯರುಗಳನ್ನು 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್‌ ಯು.ಟಿ ಖಾದರ್‌ ಆದೇಶ ಹೊರಡಿಸಿದ್ದಾರೆ. ಅಲ್ಲದೆ ಈ ಕೂಡಲೇ ಅವರನ್ನು ಸದನದ ಹೊರಗೆ ಕಳುಹಿಸಬೇಕೆಂದು ಅವರು ತಿಳಿಸಿದ್ದಾರೆ. ಸ್ಪೀಕರ್ ರೂಲಿಂಗ್‌ಗೆ ವಿಪಕ್ಷ ಸದಸ್ಯರು...

ಅಮೆಜಾನ್‌, ಫ್ಲಿಪ್‌ಕಾರ್ಟ್‌ಗಳಿಗೆ ಶಾಕ್!‌ : ದೇಶದ ವಿವಿಧೆಡೆ ಬಿಐಎಸ್‌ ಅಧಿಕಾರಿಗಳಿಂದ ರೇಡ್‌

News: ಕಳಪೆ ಗುಣಮಟ್ಟದ ಹಾಗೂ ಪ್ರಮಾಣೀಕರಿಸದ ಉತ್ಪನ್ನಗಳನ್ನು ಮಾರಾಟ ಮಾಡಿದ ಆರೋಪದ ಹಿನ್ನೆಲೆ ಇ-ಕಾಮರ್ಸ್‌ ಜಾಲತಾಣ ಕಂಪನಿಗಳಾಗಿರುವ ಅಮೆಜಾನ್‌, ಫ್ಲಿಪ್‌ಕಾರ್ಟ್‌ ಗೋದಾಮುಗಳ ಮೇಲೆ ದೇಶದ ವಿವಿಧೆಡೆ ಭಾರತೀಯ ಮಾನಕ ಬ್ಯೂರೋ ಬಿಐಎಸ್‌ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಐಎಸ್‌ ಇಲಾಖೆಯ ಮಾನದಂಡಗಳನ್ನು ಪಾಲನೆ ಮಾಡದೆ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಈ ಎರಡೂ ಕಂಪೆನಿಗಳಿಗೆ ಸಂಬಂಧಿಸಿರುವ...

Gadag News: ಪ್ರೀತಿಸೆಂದು ಹಿಂದೆ ಬಿದ್ದವನ ಕಿರುಕುಳ ತಾಳಲಾರದೇ ಜೀವಬಿಟ್ಟ ವಿದ್ಯಾರ್ಥಿನಿ

Gadag News: ಗದಗ: ಯುವಕನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗದಲ್ಲಿ ನಡೆದಿದೆ. ಜಿಮ್ಸ್ ನ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ವಂದನಾ ಸಾವನ್ನಪ್ಪಿದ ಯುವತಿಯಾಗಿದ್ದಾಳೆ. ಗದಗದ ಬೆಟಗೇರಿ ಸಮಾಜ ಕಲ್ಯಾಣ ಇಲಾಖೆ ಸರ್ಕಾರಿ ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ಹಾಸ್ಟೇಲ್‌ನಲ್ಲಿ ಈ ಘಟನೆ ನಡೆದಿದ್ದು, ಫಿನಾಾಯಿಲ್ ಸೇವಿಸಿ ಯುವತಿ...
- Advertisement -spot_img

Latest News

ಸರಳತೆಯ ಶ್ರೇಷ್ಠ ಕಲಾವಿದ ʼಲವ್‌-ಗುರುʼ ದಿಲೀಪ್‌ ಇನ್ನಿಲ್ಲ!

ಕನ್ನಡ ಕಿರುತೆರೆ ಪ್ರೇಕ್ಷಕರ ಮನಸ್ಸಿನಲ್ಲಿ ತನ್ನದೇ ಆದ ವಿಶೇಷ ಸ್ಥಾನ ಪಡೆದಿದ್ದ ನಟ ದಿಲೀಪ್ ರಾಜ್‌ ಇನ್ನು ನೆನಪು ಮಾತ್ರ. ತೆರೆ ಮೇಲೆ ಸದಾ ನಗುತ್ತಾ...
- Advertisement -spot_img