Tuesday, October 28, 2025

karnataka congress

CM ಸಿದ್ದು ದೆಹಲಿ ಪ್ರವಾಸದ ಗುಟ್ಟೇನು?

ಸಿಎಂ ಉತ್ತರಾಧಿಕಾರಿ, ನವೆಂಬರ್ ಕ್ರಾಂತಿ ವದಂತಿ ನಡುವೆ ಸಿದ್ದರಾಮಯ್ಯರ ನಡೆ ಕುತೂಹಲ ಕೆರಳಿಸಿದೆ. ಇದೇ ನವೆಂಬರ್‌ 15ರಂದು ಸಿಎಂ ದೆಹಲಿಗೆ ತೆರಳುತ್ತಿದ್ದಾರೆ ಎನ್ನಲಾಗಿದೆ. ನವೆಂಬರ್ 15ರಿಂದ 3 ದಿನ ದಿಲ್ಲಿಯಲ್ಲೇ ವಾಸ್ತವ್ಯ ಹೂಡಲಿದ್ದು, ಈ ಪ್ರವಾಸ ರಾಜ್ಯ ರಾಜಕೀಯದ ಕುತೂಹಲಕ್ಕೆ ಮತ್ತಷ್ಟು ಪುಷ್ಠಿ ನೀಡಿದೆ. ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ನವೆಂಬರ್‌ 14ರಂದು ಪ್ರಕಟವಾಗಲಿದೆ. ಅದಾದ...

ಯತೀಂದ್ರ ಮಾತಿಗೆ ರಂಗನಾಥ್ ಕೌಂಟರ್!

ಸಿದ್ದರಾಮಯ್ಯ ಉತ್ತರಾಧಿಕಾರಿಯ ಯತೀಂದ್ರ ಹೇಳಿಕೆಗೆ ಕುಣಿಗಲ್ ಶಾಸಕ ರಂಗನಾಥ್‌ ಟಾಂಗ್‌ ಕೊಟ್ಟಿದ್ದಾರೆ. ಇಂಥಾ ಹೇಳಿಕೆಗಳಿಂದ ಯಾವುದೇ ಗೊಂದಲ ಆಗುವುದಿಲ್ಲ. ಹೈಕಮಾಂಡ್‌ ತೆಗೆದುಕೊಂಡಿರುವ ನಿರ್ಧಾರ ಅನ್ನೋದು ಎಲ್ಲರಿಗೂ ಗೊತ್ತು. ನೀವು ಚಿಂತೆ ಮಾಡ್ಬೇಡಿ ಕಾಂಗ್ರೆಸ್‌ ಪಕ್ಷ ಚೆನ್ನಾಗಿದೆ. ಹೀಗಂತ ಕುಣಿಗಲ್ ಶಾಸಕ ರಂಗನಾಥ್‌ ತಿರುಗೇಟು ಕೊಟ್ಟಿದ್ದಾರೆ. ಮೊದಲು ಗ್ಯಾರಂಟಿ ಸ್ಕೀಮ್‌ ತಲುಪಿದೆಯಾ ಇಲ್ವಾ ಅನ್ನೋದನ್ನ ತಿಳಿದುಕೊಳ್ಳಬೇಕಿದೆ. ನೆರೆ...

ಖರ್ಗೆಗೂ ಸಿಗದ “CM” ಪಟ್ಟ ಸತೀಶ್‌ ಜಾರಕಿಹೊಳಿ ಪಾಲಾಗುತ್ತಾ?

ರಾಜ್ಯ ರಾಜಕೀಯದಲ್ಲಿ ದಲಿತ ನಾಯಕರಿಗೆ ಉನ್ನತ ಹುದ್ದೆ ಸಿಕ್ಕಿಲ್ಲ ಅನ್ನುವ ಕೊರಗಿತ್ತು. ಆ ಕೊರಗಿಗೆ ಕೊನೆಗಾಲ ಬಂದಿದೆ ಅನ್ಸುತ್ತೆ. ಸಿದ್ದರಾಮಯ್ಯ ಪುತ್ರ ಯತೀಂದ್ರರ ಆ ಒಂದು ಹೇಳಿಕೆ, ಅಹಿಂದ ನಾಯಕರೇ ಮುಂದಿನ ಸಿಎಂ ಎಂಬುದನ್ನ ಸಾರಿ ಸಾರಿ ಹೇಳುತ್ತಿದೆ. ಸೆಪ್ಟೆಂಬರ್‌ ಕ್ರಾಂತಿ, ನವೆಂಬರ್‌ ಕ್ರಾಂತಿ, ಸಿಎಂ ಬದಲಾವಣೆ, ಪವರ್‌ ಶೇರಿಂಗ್‌ ವಿಚಾರ ಬಂದಾಗೆಲ್ಲಾ, ದಲಿತ ನಾಯಕತ್ವದ...

ಅಡ್ವಾಣಿ, BSY ಬಳಿಕ ಮುಂದಿನ ಸರದಿ ಯಾರದ್ದು?

RSS ಬಗ್ಗೆ ಬಿಜೆಪಿ ಶಾಸಕ ಸುರೇಶ್‌ ಗೌಡ ಆರೋಪದ ಬಗ್ಗೆ, ಕಾಂಗ್ರೆಸ್ಸಿಗ ಬಿ.ಕೆ. ಹರಿಪ್ರಸಾದ್‌ ವಿಡಿಯೋವೊಂದನ್ನ ರಿಲೀಸ್‌ ಮಾಡಿದ್ದಾರೆ. ಅಡ್ವಾಣಿಯವರನ್ನು ಮೂಲೆಗೆ ತಳ್ಳಿದ ಇದೇ RSS ಯಡಿಯೂರಪ್ಪ ಅವರನ್ನೂ ನೆಮ್ಮದಿಯಾಗಿರಲು ಬಿಟ್ಟಿರಲಿಲ್ಲ. ಕೊನೆಗೂ ಎಳೆದು ಮೂಲೆಗೆ ಕೂರಿಸುವಲ್ಲಿ ಯಶಸ್ವಿಯಾಗಿತ್ತು. RSSನವರು ಕಡು ಭ್ರಷ್ಟರು ಎಂಬ ಸತ್ಯವನ್ನು, ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಶಾಸಕ...

ಗೃಹಲಕ್ಷ್ಮೀಯರಿಗೆ ದೀಪಾವಳಿ ಹಬ್ಬಕ್ಕೆ ₹6000

ರಾಜ್ಯದ ಗೃಹಲಕ್ಷ್ಮೀ ಫಲಾನುಭವಿಗಳಿಗೆ ಕಾಂಗ್ರೆಸ್‌ ಸರ್ಕಾರ ಭರ್ಜರಿ ಗಿಫ್ಟ್‌ ಕೊಟ್ಟಿದೆ. ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು 2 ಸಾವಿರ ರೂಪಾಯಿ ಕೊಡ್ತಿದ್ದ ಸರ್ಕಾರ, ಈ ಬಾರಿ 3 ತಿಂಗಳು ಒಟ್ಟಿಗೆ ಸೇರಿಸಿ 6 ಸಾವಿರ ರೂಪಾಯಿ ರಿಲೀಸ್‌ ಮಾಡಲಿದೆಯಂತೆ. ಕಳೆದ ಕೆಲ ತಿಂಗಳಿಂದ ಗೃಹಲಕ್ಷ್ಮೀ ಹಣ ಬಂದಿಲ್ಲ ಅಂತಾ, ಫಲಾನುಭವಿಗಳು ಆಕ್ರೋಶ ಹೊರಹಾಕ್ತಿದ್ರು. ಈಗ ಎಲ್ಲರ...

ನವೆಂಬರ್ ಕ್ರಾಂತಿ ನಡೆದೇ ನಡೆಯುತ್ತಾ?

ರಾಜ್ಯ ರಾಜಕೀಯಕ್ಕೆ ಸಂಬಂಧಿಸಿದಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಬಿಹಾರ ಚುನಾವಣೆ ನಂತರ ರಾಜ್ಯದಲ್ಲಿ ಸಾಕಷ್ಟು ಬದಲಾವಣೆಗಳು ಆಗಲಿದೆ. ಅಲ್ಲೋಲ ಕಲ್ಲೋಲ ಸೃಷ್ಟಿಯಾಗಲಿದೆ ಎಂದು ಬಾಂಬ್‌ ಸಿಡಿಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್‌ ಅವರೇ ಹೇಳಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಏನೂ ಚರ್ಚೆ ಮಾಡ್ಬೇಡಿ. ಏನೇ ಇದ್ರೂ ಹೈಕಮಾಂಡ್‌ ತೀರ್ಮಾನ ಮಾಡುತ್ತೆ...

ಸರ್ಕಾರಿ ವೇದಿಕೆಯಲ್ಲಿ ಸಚಿವನ ಮೊಮ್ಮಗ – ಪ್ರೋಟೋಕಾಲ್‌ ಉಲ್ಲಂಘನೆ!!!

ಮೈಸೂರಿನಲ್ಲಿ ದಸರಾ ಮಹೋತ್ಸವದ ಭಾಗವಾಗಿ ನಡೆದ ಬೃಹತ್ ದಸರಾ ಜಂಬೂ ಸವಾರಿ ಹಾಗೂ ತೆರೆದ ವಾಹನದ ಪರೇಡ್‌ ಭವ್ಯವಾಗಿ ನಡೆದಿದೆ. ಈ ತೆರೆದ ವಾಹನದ ಪರೇಡ್‌ ನಲ್ಲಿ ಸಂಭವಿಸಿದ ಘಟನೆ ಇದೀಗ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಸರ್ಕಾರಿ ಸಭಾ ಕಾರ್ಯಕ್ರಮವಾಗಿರುವ ಈ ಕಾರ್ಯಕ್ರಮದಲ್ಲಿ ಸಚಿವ ಹೆಚ್.ಸಿ. ಮಹದೇವಪ್ಪ ಅವರ ಮೊಮ್ಮಗ ಭಾಗವಹಿಸಿರುವುದು ಕಾಂಗ್ರೆಸ್ ಹೈಕಮಾಂಡ್‌...

“ಗ್ಯಾರಂಟಿ ನಿಲ್ಲಿಸಲು ಜಾತಿಗಣತಿ ಮಾಡ್ತಿಲ್ಲ”

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಕಾಂಗ್ರೆಸ್ ಸರ್ಕಾರ, ಜಾತಿ ಸಮೀಕ್ಷೆ ನಡೆಸುತ್ತಿದೆ ಅನ್ನೋ ಮಾತುಗಳು ವಿಪಕ್ಷಗಳಿಂದ ಕೇಳಿ ಬಂದಿದೆ. ಇದಕ್ಕೆಲ್ಲಾ ಖುದ್ದು ಡಿಸಿಎಂ ಡಿ.ಕೆ. ಶಿವಕುಮಾರ್‌ ತೆರೆ ಎಳೆದಿದ್ದಾರೆ. ಜಾತಿ ಆಧಾರಿತ ಜನಗಣತಿ ಮಾಡುತ್ತಿರುವುದು ಗ್ಯಾರಂಟಿ ಕಡಿತಕ್ಕೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಡಿಕೆಶಿ ಪ್ರತಿಕ್ರಿಯಿಸಿದ್ದು, ಇದೆಲ್ಲಾ ಸುಳ್ಳು ಅಂತಾ ಸ್ಪಷ್ಟಪಡಿಸಿದ್ದಾರೆ.‌ ಗ್ಯಾರಂಟಿ ಯೋಜನೆಗಳನ್ನು ಯಾರೂ...

ಸಿದ್ದರಾಮಯ್ಯ – ಡಿಕೆಶಿಗೆ ಸುರ್ಜೇವಾಲಾ ವಾರ್ನ್!

ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗಳ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಎಚ್ಚೆತ್ತುಕೊಂಡಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ತಕ್ಷಣ ರಸ್ತೆ ಸುಧಾರಣೆಗೆ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ವಾರ್ನ್ ಮಾಡಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಮಹತ್ವದ ಸಭೆ ನಡೆದಿದೆ. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ...

ವಿರೋಧಗಳಿಗೆ ಮಣಿಯದ ಸಿದ್ದರಾಮಯ್ಯ

ಮನೆ, ಮನೆಗೂ ತೆರಳಿ ಜಾತಿಗಣತಿ ನಡೆಸುವ ಸರ್ಕಾರದ ನಿರ್ಧಾರಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮೇಲೆ ಹಲವು ಸಚಿವರು ಸಿಡಿಮಿಡಿಯಾಗಿದ್ದಾರೆ. ಜಾತಿ ಕಿಚ್ಚು, ಸರ್ಕಾರದ ಗೊಂದಲ ನಿವಾರಣೆಗಾಗಿ ದೆಹಲಿಯಿಂದ ಕಾಂಗ್ರೆಸ್ ಹೈಕಮಾಂಡ್ ನಾಯಕರೇ ಎಂಟ್ರಿ ಕೊಡಬೇಕಾಗಿ ಬಂದಿದೆ. ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ದಿಢೀರ್...
- Advertisement -spot_img

Latest News

ಸಿಜೆಐ ಸ್ಥಾನಕ್ಕೆ ಸೂರ್ಯಕಾಂತ್ – ನವೆಂಬರ್ 24ಕ್ಕೆ ಅಧಿಕಾರ ಸ್ವೀಕಾರ!

ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಸುಪ್ರೀಂ ಕೋರ್ಟ್‌ನ ಎರಡನೇ ಹಿರಿಯ ನ್ಯಾಯಾಧೀಶ, ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ....
- Advertisement -spot_img