Sunday, August 9, 2026

karnataka congress

ಗ್ರೇಟರ್ ಬೆಂಗಳೂರಿಗೆ ಶೀಘ್ರವೇ ಎಲೆಕ್ಷನ್‌ ಫಿಕ್ಸ್‌!

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ ಇತಿಶ್ರೀ ಹಾಡಿ, ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚಿಸಲಾಗಿದೆ. ಕಾಂಗ್ರೆಸ್‌ ಸರ್ಕಾರ ಇದೀಗ 5 ನಗರ ಪಾಲಿಕೆಗಳ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಕಾಲಮಿತಿಯೊಳಗೆ ಚುನಾವಣೆ ನಡೆಸುವುದಕ್ಕೆ, ಸಿದ್ಧತೆ ಮಾಡಿಕೊಳ್ಳುವಂತೆ ಕೋರಿ, ಚುನಾವಣಾ ಆಯೋಗಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಪತ್ರ ಬರೆದಿದ್ದಾರೆ. ಸುಪ್ರೀಂಕೋರ್ಟಿಗೆ ಅಫಿಡೆವಿಟ್‌ ಸಲ್ಲಿಸಿದ್ದು, ನಮಗೆ ಕಾಲಮಿತಿ ಇದೆ. ನ್ಯಾಯಾಲಯ ಕೂಡ...

ಧರ್ಮಸ್ಥಳ ಕೇಸ್‌ನಲ್ಲಿ ರಾಜಕೀಯ ಯುದ್ಧ!

ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎನ್‌ಐಎಗೇ ವಹಿಸಬೇಕು. ವಿಪಕ್ಷ ಬಿಜೆಪಿ-ಜೆಡಿಎಸ್ ಆಗ್ರಹ ಜೋರಾಗಿದೆ. ಕೇಂದ್ರ ಸರ್ಕಾರಕ್ಕೂ ಮನವಿ ಮಾಡಲು ದೋಸ್ತಿ ನಾಯಕರು ಸಜ್ಜಾಗಿದ್ದಾರೆ. ಇನ್ನೆರಡು ದಿನಗಳಲ್ಲಿ ಗೃಹ ಸಚಿವ ಅಮಿತ್‌ ಶಾರನ್ನು ಭೇಟಿಯಾಗಲು, ಹೆಚ್‌.ಡಿ. ಕುಮಾರಸ್ವಾಮಿ ತಯಾರಿ ಮಾಡಿಕೊಂಡಿದ್ದಾರೆ. ಆದರೆ, ಕಾಂಗ್ರೆಸ್ಸಿಗರು ಮಾತ್ರ ಎನ್‌ಐಎ ತನಿಖೆಯ ಅಗತ್ಯವಿಲ್ಲ ಅಂತಾ ಪದೇ ಪದೇ ಹೇಳ್ತಿದ್ದಾರೆ. ಆದರೆ ಧರ್ಮಸ್ಥಳ...

ನಿನ್ನ ಹೆರಿಗೆ ಮಾಡಿಸ್ತೀನಿ.. ದೇಶಪಾಂಡೆ ಧಿಮಾಕಿಗೆ ಭುಗಿಲೆದ್ದ ಆಕ್ರೋಶ

ಕಾಂಗ್ರೆಸ್ಸಿನ ಹಿರಿಯ ನಾಯಕ ಆರ್‌.ವಿ ದೇಶಪಾಂಡೆಯವರು ಮಹಿಳೆಯರ ಬಗ್ಗೆ ನಾಲಗೆ ಹರಿಬಿಟ್ಟು ವಿವಾದ ಸೃಷ್ಟಿಸಿದ್ದಾರೆ. ಉತ್ತರ ಕನ್ನಡದ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಬಗ್ಗೆ ಉಡಾಫೆ ಉತ್ತರ ಕೊಟ್ಟಿದ್ದು, ಭಾರೀ ಟೀಕೆಗೆ ಗುರಿಯಾಗಿದ್ದಾರೆ. ಜಿಲ್ಲಾ ಉಪವಿಭಾಗ ಜೋಯಿಡಾ ತಾಲೂಕಿಗೆ ಆಸ್ಪತ್ರೆ ಬೇಕೆಂದು ಹಲವಾರು ವರ್ಷಗಳಿಂದ ಸ್ಥಳೀಯರು ಆಗ್ರಹಿಸುತ್ತಲೇ ಬಂದಿದ್ದಾರೆ. ಗರ್ಭಿಣಿಯರು ಸೂಕ್ತ ವೈದ್ಯಕೀಯ ಸೌಲಭ್ಯವಿಲ್ಲದೇ ಪರದಾಡುತ್ತಿದ್ದಾರೆ....

K.N. ರಾಜಣ್ಣ ವಜಾ ಆಗಲು ಒಂದಲ್ಲ 3 ಕಾರಣಗಳು

ಸಿದ್ದರಾಮಯ್ಯ ಸಂಪುಟದಿಂದ ಕೆ.ಎನ್. ‌ರಾಜಣ್ಣ ವಜಾ ಮಾಡಿದ್ದಕ್ಕೆ, ಕೇವಲ ಮತಗಳ್ಳತನದ ಬಗ್ಗೆ ನೀಡಿದ್ದ ಹೇಳಿಕೆ ಕಾರಣವಲ್ಲ. ಬೇರೆ ಕಾರಣವೂ ಇದೆ ಅಂತೆ. ಇದನ್ನ ಸ್ವತಃ ರಾಜಣ್ಣ ಅವರೇ ಒಪ್ಪಿಕೊಂಡಿದ್ದಾರೆ. ನಾನು ಹನಿಟ್ರ್ಯಾಪ್ ಪ್ರಯತ್ನದ ಬಗ್ಗೆಯೂ ಹೇಳಿದ್ದೆ. ಡಿಸಿಎಂ ಬಗ್ಗೆಯೂ ಹೇಳಿದ್ದೆ. ಸಂಪುಟದಿಂದ ವಜಾ ಮಾಡುವುದಕ್ಕೆ ಇದೆಲ್ಲಾ ಕಾರಣ ಅನಿಸುತ್ತೆ. ಹೀಗಂತ ಶಾಂಕಿಂಗ್‌ ಸ್ಟೇಟ್‌ಮೆಂಟ್‌ ನೀಡಿದ್ದಾರೆ. ಸಂಪುಟಕ್ಕೆ...

ಕಾಂಗ್ರೆಸ್‌ ಬುಡಕ್ಕೆ ಕೈ ಇಟ್ಟ ಯತ್ನಾಳ್‌!

ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಹಿಂದೆ ಗಾಂಧಿ ಕುಟುಂಬದ ಷಡ್ಯಂತ್ರ ಇದೆಯಂತೆ. ಹೀಗಂತ, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಗಂಭೀರ ಆರೋಪ ಮಾಡಿದ್ದಾರೆ. ಹಿಂದೂ ಧಾರ್ಮಿಕ ಸ್ಥಳಗಳಿಗೆ ಅಪಚಾರ ಮಾಡುವ ಸಲುವಾಗಿ ಸೋನಿಯಾ ಗಾಂಧಿ, ರಾಹುಲ್‌ಗಾಂಧಿ ಒತ್ತಾಯಕ್ಕೆ, ಎಸ್‌ಐಟಿ ರಚನೆ ಮಾಡಲಾಗಿದೆ. ತನಿಖೆಯಲ್ಲಿ ಒಂದಾದರೂ ಬುರುಡೆ, ಮೂಳೆಗಳು ಸಿಕ್ಕಿವೆಯೇ? ಪಾನ್‌ಪರಾಗ್‌ ಚೀಟಿ ಸಿಕ್ಕಿದೆ. ಅದಕ್ಕಾಗಿ 20...

ಧರ್ಮ ಯುದ್ಧದಲ್ಲಿ ಸುಳ್ಳು V/S ಸತ್ಯ

ಧರ್ಮಸ್ಥಳ ಪ್ರಕರಣದಲ್ಲಿ ಕಾಂಗ್ರೆಸ್, ಬಿಜೆಪಿ ನಾಯಕರ ವಾಗ್ವಾದಗಳು ಜೋರಾಗಿವೆ. ಧರ್ಮಸ್ಥಳದಲ್ಲಿ ವಿಪಕ್ಷ ನಾಯಕ ಆರ್‌. ಅಶೋಕ್‌ ಅವರು ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ. ಎಸ್‌ಐಟಿ ತನಿಖೆಗೆ ಕೊಟ್ಟಾಗಲೇ ಹಿಂದೂ ಧರ್ಮದ ವಿರೋಧಿಗಳಾಗಿರುವುದು ಗೊತ್ತಾಗಿದೆ. ನಿಮ್ಮ ಸರ್ಕಾರ ಬಂದ ಇಷ್ಟು ವರ್ಷದಲ್ಲಿ, ಮಸೀದಿಯಲ್ಲಿ ತಲೆ ಬುರುಡೆ, ಕಾಲು ಮೂಳೆ, ಕೈ ಮೂಳೆ, ಬೆರಳು ಮೂಳೆ ಸಿಕ್ಕಿದೆ...

ಹೈಕಮಾಂಡ್‌ ಅಂಗಳಕ್ಕೆ KMF ಗದ್ದುಗೆ ಗುದ್ದಾಟ

ಕೆಎಂಎಫ್‌ ಚುನಾವಣೆ, ವಿಧಾನಸಭಾ, ಲೋಕಸಭಾ ಚುನಾವಣೆಗಳಿಗೂ ಕಮ್ಮಿ ಇಲ್ಲ. ಘಟಾನುಘಟಿ ನಾಯಕರ ಪ್ರತಿಷ್ಠೆ ಕಣವಾಗಿ ಮಾರ್ಪಟ್ಟಿದೆ. ಅಧ್ಯಕ್ಷ ಹುದ್ದೆಗೆ ನಾಲ್ವರು ಕಾಂಗ್ರೆಸ್ ನಾಯಕರ ನಡುವೆ ಭಾರೀ ಪೈಪೋಟಿ ನಡೆಯುತ್ತಿದೆ. ಹೀಗಾಗಿ ಈ ವಿಚಾರ ಹೈಕಮಾಂಡ್ ಅಂಗಳ ತಲುಪಿದೆ. 23 ಲಕ್ಷ ಸದಸ್ಯತ್ವವನ್ನು ಹೊಂದಿರುವ ಕೆಎಂಎಫ್‌, 4 ಒಕ್ಕೂಟದಿಂದ ಆರಂಭವಾಗಿ 16 ಒಕ್ಕೂಟಗಳವರೆಗೆ ಬೆಳೆದು ನಿಂತಿದೆ. ಗುಜರಾತ್...

ಗೃಹಲಕ್ಷ್ಮೀಗಾಗಿ ಸರ್ಕಾರದಿಂದ ಕೋಟಿ ಕೋಟಿ ಖರ್ಚು!!

ರಾಜ್ಯ ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ, ಗೃಹಲಕ್ಷ್ಮೀ ಯೋಜನೆ ಪ್ರಮುಖವಾಗಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ಮಾತುಕೊಟ್ಟಂತೆ, ಮನೆಯ ಒಡತಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಹಣ ನೀಡಲಾಗ್ತಿದೆ. ಗ್ಯಾರಂಟಿ ಯೋಜನೆಯು ಗೃಹಿಣಿಯರ ಮನ ಗೆದ್ದಿದ್ದು, 2023ರಿಂದ ಇಲ್ಲಿಯವರೆಗೆ 20 ಕಂತುಗಳಲ್ಲಿ ಹಣ ನೀಡಲಾಗಿದೆ. ಇಲ್ಲಿಯವರೆಗೆ 47 ಸಾವಿರದ 487.90 ಕೋಟಿ ವೆಚ್ಚ ಭರಿಸಲಾಗಿದೆ. ಒಟ್ಟು 1.24 ಕೋಟಿ...

K.N. ರಾಜಣ್ಣ ಪರ ನಿಂತ B.K. ಹರಿಪ್ರಸಾದ್‌!

ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಕ್ಷಮೆಯಾಚಿಸಿದ್ದಾರೆ. ಇದಾದ ಬಳಿಕ ಮಾಜಿ ಸಚಿವ ಕೆ.ಎನ್ ರಾಜಣ್ಣ ಅವರ ವಿಚಾರ ಮುನ್ನೆಲೆಗೆ ಬಂದಿದೆ. ಡಿಕೆಶಿಗೆ ಇರುವ ಅವಕಾಶ, ರಾಜಣ್ಣ ವಿಚಾರದಲ್ಲಿ ಏಕಿಲ್ಲ? ಅನ್ನೋ ಪ್ರಶ್ನೆಗಳು ಎದ್ದಿವೆ. ಇದಕ್ಕೆ ಹಿರಿಯ ಕಾಂಗ್ರೆಸ್ಸಿಗ ಬಿ.ಕೆ. ಹರಿಪ್ರಸಾದ್‌ ಪ್ರತಿಕ್ರಿಯಿಸಿದ್ದು, ರಾಜಣ್ಣ ಅವರು ರಾಹುಲ್‌ ಗಾಂಧಿ ವಿರುದ್ಧ ಎಲ್ಲಿಯೂ ಮಾತಾಡಿಲ್ಲ....

ಕೊನೆಗೂ ಕ್ಷಮೆ ಕೇಳಿದ DK – ತಪ್ಪು ಅಂದವ್ರಿಗೆಲ್ಲಾ ಟಾಂಗ್

ವಿಧಾನಸಭೆಯಲ್ಲಿ RSS ಗೀತೆ ಹಾಡಿದ್ದಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್‌ ಕೊನೆಗೂ ಕ್ಷಮೆಯಾಚಿಸಿದ್ದಾರೆ. ನನ್ನಿಂದ ಯಾರಿಗಾದರೂ ನೋವಾಗಿದ್ದರೆ, ತಪ್ಪು ಮಾಡಿದ್ದೇನೆಂದು ಭಾವಿಸಿದ್ರೆ ಕ್ಷಮೆ ಇರಲಿ ಅಂತಾ ಮನವಿ ಮಾಡಿದ್ದಾರೆ. ಕಳೆದ ಆಗಸ್ಟ್‌ 22ರಂದು ವಿಧಾನಸಭಾ ಅಧಿವೇಶನದಲ್ಲಿ, ನಮಸ್ತೆ ಸದಾ ವತ್ಸಲೇ ಮಾತೃಭೂಮಿ ಎಂಬ ಗೀತೆಯನ್ನ ಡಿಕೆಶಿ ಹಾಡಿದ್ರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಕುರಿತು ಚರ್ಚೆ ನಡೆಯುತ್ತಿದ್ದಾಗ ಗದ್ದಲ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img