ಅಡುಗೆ ಸಿಲಿಂಡರ್ ಕೊರತೆಯನ್ನು ದುರ್ಬಳಕೆ ಮಾಡಿಕೊಂಡು ಕಾಳಸಂತೆಯಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬೀದರ್ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿ 105 LPG ಸಿಲಿಂಡರ್ಗಳನ್ನು ಜಪ್ತಿ ಮಾಡಲಾಗಿದೆ.
ಜಪ್ತಿಗೊಂಡ ಸಿಲಿಂಡರ್ಗಳ ಒಟ್ಟು ಮೌಲ್ಯ ಸುಮಾರು ₹2.55 ಲಕ್ಷಕ್ಕೂ ಅಧಿಕವಾಗಿದ್ದು, ಗೃಹ ಬಳಕೆಯ ಸಿಲಿಂಡರ್ಗಳನ್ನು ಕಾಳಸಂತೆಯಲ್ಲಿ ದ್ವಿಗುಣ ಬೆಲೆಗೆ ಮಾರಾಟ ಮಾಡಲಾಗುತ್ತಿತ್ತು ಎಂಬುದು ತನಿಖೆಯಿಂದ...
ಬೈಕ್ ಕಳ್ಳರ ವಿರುದ್ಧ ಮಂಡ್ಯ ಪೂರ್ವ ಪೊಲೀಸ್ ಠಾಣೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಡ್ಯ ಹಾಗೂ ಮೈಸೂರು ಜಿಲ್ಲೆಯ ವಿವಿಧೆಡೆ ಕ್ಷಣಾರ್ಧದಲ್ಲಿ ಬೈಕ್ಗಳನ್ನು ಕದ್ದು ಪರಾರಿಯಾಗುತ್ತಿದ್ದ ಖದೀಮರ ವಿರುದ್ಧ ಕಾರ್ಯಾಚರಣೆ ನಡೆಸಿದ ಪೊಲೀಸರು, ಒಟ್ಟು 27 ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ವಾಹನಗಳ ಒಟ್ಟು ಮೌಲ್ಯ...
ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಏಕವಚನ ಬಳಸಿದಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ರಾಜೀವ್ ಗೌಡ ಜೊತೆಗೆ ಪ್ರಕರಣದಲ್ಲಿ ಆರೋಪಿಯಾಗಿರುವ ಮತ್ತೊಬ್ಬ ವ್ಯಕ್ತಿ ಮೈಕಲ್ನನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಮೈಕಲ್ ಮಂಗಳೂರು ಮೂಲದ ಉದ್ಯಮಿಯಾಗಿದ್ದು, ರಾಜೀವ್ ಗೌಡಗೆ...
2 ಗುಂಪುಗಳ ಮಧ್ಯೆ ಜಗಳ ತಾರಕಕ್ಕೇರಿ ಗ್ರಾಮ ಪಂಚಾಯತ್ ಸದಸ್ಯ ಮೃತಪಟ್ಟಿ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಪಟ್ಟಣದ ಸಮೀಪದ, ಕಲ್ಮುರುಡೇಶ್ಚರ ಮಠದ ಘಟನೆ ಸಂಭವಿಸಿದೆ. ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ.
38 ವರ್ಷದ ಗಣೇಶ್ ಗೌಡ ಮೃತ ದುರ್ದೈವಿ. ಗಣೇಶ್ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ...
ಮಹಿಳೆಯರನ್ನು ಗುರಿಯಾಗಿಸಿಕೊಂಡು ಕೋಟ್ಯಂತರ ರೂಪಾಯಿ ವಂಚಿಸಿರುವ ಆಘಾತಕಾರಿ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. ಮಹಾರಾಷ್ಟ್ರ ಮೂಲದ ಬಾಬಾಸಾಹೇಬ್ ಕೋಳೇಕರ್ ಎಂಬಾತ ಹಲವಾರು ಮಹಿಳೆಯರಿಂದ ಸುಮಾರು 12 ಕೋಟಿ ರೂ. ವಂಚಿಸಿದ ಆರೋಪ ಎದುರಿಸುತ್ತಿದ್ದಾನೆ.
ಮಹಿಳೆಯರಿಗೆ ಅಗರಬತ್ತಿ ಪ್ಯಾಕಿಂಗ್ ಕೆಲಸ ಕೊಡಲಾಗುತ್ತದೆ ಎಂದು ನಂಬಿಸಿ, ಬಾಬಾಸಾಹೇಬ್ ಕೋಳೇಕರ್ ಮಹಿಳಾ ಗೃಹ ಉದ್ಯೋಗ ಸಮೂಹ ಬೆಳಗಾವಿ ಎಂಬ ಹೆಸರಿನಲ್ಲಿ...
ಮುತ್ತು ಕೊಡ್ತೀನಿ ಬಾ ಅಂತ ಮನೆಗೆ ಕರೆದಿದ್ದ ಆಂಟಿಗೋಸ್ಕರ ಮಹಾರಾಷ್ಟ್ರದಿಂದ ಓಡೋಡಿ ಬಂದಿದ್ದ ಯುವಕ ಆಂಟಿ ಮೋಹಕ್ಕೆ ಬಿದ್ದು ಬೀದಿ ಹೆಣವಾಗಿ ಹೋಗಿದ್ದಾನೆ. ಪ್ರೀತಿ - ಪ್ರೇಮದ ಹಿನ್ನಲೆಯಲ್ಲಿ ಯುವಕನನ್ನು ಕ್ರೂರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ನಾಗನಪಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಮೃತ ಯುವಕ ಮಹಾರಾಷ್ಟ್ರದ ನಾಂದೇಡ್...
ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ ನಾಪತ್ತೆ ಹಿಂದಿನ ಮರ್ಡರ್ ಹಿಸ್ಟರಿ ತೆರೆದುಕೊಂಡಿದ್ದು, ಇಡೀ ಚಿಕ್ಕಮಗಳೂರು ಜಿಲ್ಲೆಯ ಜನರನ್ನ ಬೆಚ್ಚಿ ಬೀಳಿಸಿದೆ.
ಭಾರತಿ ತವರು ಮನೆಯಿಂದ ಎರಡು ಲಕ್ಷ ಹಣ ತರಲಿಲ್ಲ ಎಂಬ ಕಾರಣಕ್ಕೆ ತಮ್ಮ...
ಮೈಸೂರು ದಸರಾ ರಾಜ್ಯವನ್ನ ಕಂಗೊಳಿಸಿದ ಮೈಸೂರು ದಸರಾ ಹಬ್ಬದ ಹಿನ್ನಲೆಯಲ್ಲಿ ನಡೆದ ಅಮಾನುಷ ಘಟನೆಗೆ ಕರ್ನಾಟಕದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಹೊಟ್ಟೆಪಾಡಿಗಾಗಿ ಕುಟುಂಬದೊಂದಿಗೆ ಮೈಸೂರಿಗೆ ಬಂದು ಬಲೂನ್ ಮಾರುತ್ತಿದ್ದ 9 ವರ್ಷದ ಬಾಲಕಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾಗಿರುವ ಘೋರ ಘಟನೆ ನಡೆದಿದೆ. ಈ ಪ್ರಕರಣದ ಸಂಬಂಧದ ಆರೋಪಿ ಕಾರ್ತಿಕ್ನನ್ನು ಮೈಸೂರು ಪೊಲೀಸರು ಬಂಧಿಸಿದ್ದು, ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗುಂಡೇಟು...
ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೀವಿತಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ. ತಮ್ಮ ವಿರುದ್ಧ ಬಂದಿರುವ ತೀರ್ಪು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನೀಡಿದ್ದ ಶಿಕ್ಷೆಯನ್ನ ರದ್ದುಗೊಳಿಸುವಂತೆ ಅವರು ಮೇಲ್ಮನವಿ ಸಲ್ಲಿಸಿದ್ದಾರೆ. ಮೊದಲ ಹಂತದಲ್ಲಿ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಅಕ್ಟೋಬರ್...
ಮಹೇಶ್ ಶೆಟ್ಟಿ ತಿಮರೋಡಿಗೆ ಬಂಧನದ ಭೀತಿ ಶುರುವಾಗಿದೆ. ಅಕ್ರಮ ಶಸ್ತ್ರಾಸ್ತ್ರ ಪ್ರಕರಣ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪೊಲೀಸ್ ಇಲಾಖೆಯು ವಿಚಾರಣೆಗೆ ಹಾಜರಾಗುವಂತೆ ಮೂರನೇ ನೋಟಿಸ್ ಜಾರಿ ಮಾಡಿದೆ. ತನಿಖಾ ತಂಡವು ಅವರ ಮನೆಯಲ್ಲಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆ ಮಾಡಿತ್ತು. ಕಳೆದ ಹತ್ತು ದಿನಗಳಿಂದ ತಿಮರೋಡಿ ವಿಚಾರಣೆಗೆ ಹಾಜರಾಗುತ್ತಿರಲಿಲ್ಲ.
ಮಹೇಶ್...