Saturday, March 7, 2026

Karnataka Crisis

ಇನ್ನೆರಡು ದಿನ ಟೈಂ ಕೊಡಿ- ಸ್ಪೀಕರ್ ಗೆ ಸಿಎಂ ಕುಮಾರಸ್ವಾಮಿ ಮನವಿ

ಬೆಂಗಳೂರು: ವಿಶ್ವಾಸಮತ ಯಾಚನೆ ಇಂದೇ ಆಗಬೇಕು ಅಂತ ಬಿಜೆಪಿ ಪಟ್ಟು ಹಿಡಿದಿದೆ. ಆದ್ರೆ ಸಂಜೆಯಾಗುತ್ತಲೇ ವರಸೆ ಬದಲಿಸಿದ ಸಿಎಂ ಕುಮಾರಸ್ವಾಮಿ, ಸ್ಪೀಕರ್ ರನ್ನು ಭೇಟಿಯಾಗಿ ಇನ್ನೆರಡು ದಿನ ಸಮಯ ನೀಡಲು ಕೋರಿದ್ದಾರೆ. ಶುಕ್ರವಾರದ ಕಲಾಪದಲ್ಲಿ ಸೋಮವಾರ ವಿಶ್ವಾಸಮತ ಯಾಚನೆ ಮಾಡೋದು ಫೈನಲ್ ಅಂತ ಹೇಳಿದ್ದ ಸಿಎಂ ಕುಮಾರಸ್ವಾಮಿ ಇದೀಗ ಯಾಕೋ ತಮ್ಮ ನಿರ್ಧಾರ ಬದಲಿಸಿದ್ದಾರೆ....

ಅತೃಪ್ತ ಶಾಸಕರಿಗೆ ಜೀರೋ ಟ್ರಾಫಿಕ್- ಗೃಹ ಸಚಿವರಿಗೆ ಸ್ಪೀಕರ್ ಕ್ಲಾಸ್…!

ಬೆಂಗಳೂರು: ಸುಪ್ರೀಂಕೋರ್ಟ್ ಸೂಚನೆಯಂತೆ ಸ್ಪೀಕರ್ ಭೇಟಿಯಾಗಲು ಮುಂಬೈನಿಂದ ಬೆಂಗಳೂರಿಗೆ ಹಾಜರಾಗಿದ್ದ ಅತೃಪ್ತ ಶಾಸಕರಿಗೆ ಜೀರೋ ಟ್ರಾಫಿಕ್ ವ್ಯವಸ್ಥೆ ಕುರಿತು ಸ್ಪೀಕರ್ ಗೃಹಸಚಿವ ಎಂ.ಬಿ ಪಾಟೀಲರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ವಿಧಾನಸಭೆಯಲ್ಲಿಂದು ಅತೃಪ್ತ ಶಾಸಕರು ಸ್ಪೀಕರ್ ಭೇಟಿಯಾಗಲು ಬಂದಿದ್ದಾಗ ಕಲ್ಪಿಸಲಾಗಿದ್ದ ಜೀರೋ ಟ್ರಾಫಿಕ್ ವ್ಯವಸ್ಥೆ ಕುರಿತು ಜೆಡಿಎಸ್ ಶಾಸಕ ಎ.ಟಿ ರಾಮಸ್ವಾಮಿ ಸದನದ ಗಮನ ಸೆಳೆದರು. ಈ...

‘ನನ್ನ ದಯನೀಯ ಪರಿಸ್ಥಿತಿ ಯಾರಿಗೂ ಬಂದಿಲ್ಲ’- ಸದನದಲ್ಲಿ ಸ್ಪೀಕರ್ ಬೇಸರ..!

ಬೆಂಗಳೂರು: ಸದನಕ್ಕೆ ಹಾಜರಾಗದ ಸದಸ್ಯರ ಕುರಿತ ಚರ್ಚೆ ವೇಳೆ ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ನನಗೆ ಬಂದಿರುವ ಈ ಪರಿಸ್ಥಿತಿ ಭಾರತ ದೇಶಕ್ಕೆ ಸ್ವತಂತ್ರ್ಯ ಬಂದ ನಂತರ ಯಾವ ಸ್ಪೀಕರ್ ಗೂ ಬಂದಿಲ್ಲ ಅಂತ ವಿಷಾದ ವ್ಯಕ್ತಪಡಿಸಿದ್ದಾರೆ. ಸದನದಲ್ಲಿ ಕಾಂಗ್ರೆಸ್ ನ ಹಿರೇಕೆರೂರು ಶಾಸಕ ಬಿ.ಸಿ ಪಾಟೀಲ್ ಗೈರು ಹಾಜರಿ...

ಇಂದೂ ಪಾಲನೆಯಗಲಿಲ್ಲ ರಾಜ್ಯಪಾಲರ ಸೂಚನೆ…!

ಬೆಂಗಳೂರು: ವಿಶ್ವಾಸಮತ ಯಾಚನೆ ಕುರಿತಾಗಿ ಮೈತ್ರಿ ಮತ್ತು ಬಿಜೆಪಿ ಸದಸ್ಯರ ಜಂಗೀ ಕುಸ್ತಿ ಇನ್ನೂ ಮುಂದುವರಿದಿದೆ. ಈ ಮೂಲಕ ಇಂದು ಮಧ್ಯಾಹ್ನದ ವೇಳೆಗೆ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಪೂರ್ಣಗೊಳಿಸಿ ಅಂತ ರಾಜ್ಯಪಾಲರು ನೀಡಿದ್ದ ಸೂಚನೆ ಪಾಲನೆಯಾಗಲಿಲ್ಲ. ಇಂದಾದರೂ ಸಿಎಂ ವಿಶ್ವಾಸಮತಯಾಚನೆ ಮಾಡುತ್ತಾರೆ ಅಂತ ತುದಿಗಾಲಲ್ಲಿ ಕಾದು ಕುಳಿತಿದ್ದ ಬಿಜೆಪಿಗೆ ಮತ್ತೆ ಹಿನ್ನೆಯಾಗಿದೆ. ಇಂದು ಮಧ್ಯಾಹ್ನ...

ಈಗ ಖುಷಿ ಪಡುತ್ತಿದ್ದೀರಿ- ಮುಂದೆ ಕಾದಿದೆ ನಿಮಗೆ- ಬಿಜೆಪಿಗೆ ಸಿಎಂ ಚಾಟಿ..!

ಬೆಂಗಳೂರು: ವಿಧಾನಸಭೆಯಲ್ಲಿನ ಇಂದಿನ ಕಲಾಪ ನಿನ್ನೆಗಿಂತಲೂ ತೀವ್ರ ಕುತೂಹಲಕಾರಿಯಾಗಿದೆ. ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಉರುಳಿಸೋ ಸಲುವಾಗಿ ಬಿಜೆಪಯವರು ಷಡ್ಯಂತ್ರ ನಡೆಸುತ್ತಿದ್ದು ಶಾಸಕರನ್ನು ಸೆಳೆಯೋ ಪ್ರಯತ್ನ ಮಾಡ್ತಿದ್ದಾರೆ. ತಾತ್ಕಾಲಿಕವಾಗಿ ಖುಷಿ ಪಡುತ್ತಿದ್ದೀರಿ, ಆದ್ರೆ ನಿಮಗೆ ಮುಂದೆ ಕಾದಿದೆ ಅಂತ ಸಿಎಂ ಪ್ರತಿಪಕ್ಷಕ್ಕೆ ಮಾತಿನ ಚಾಟಿ ಬೀಸಿದ್ರು. ವಿಶ್ವಾಸಮತ ಯಾಚನೆ ಕುರಿತಾಗಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ ಇಂದೂ...

ನಿಮ್ಮನ್ನ ಯಾವ ಕೋರ್ಟ್ ಕೂಡ ರಕ್ಷಿಸೋಕೆ ಸಾಧ್ಯವಿಲ್ಲ- ಅತೃಪ್ತರಿಗೆ ಡಿಕೆಶಿ ಸಂದೇಶ

ಬೆಂಗಳೂರು: ವಿಶ್ವಾಸಮತ ಯಾಚನೆ ಕುರಿತು ಬಿಜೆಪಿ ಪಟ್ಟು ಹಿಡಿದು ಕುಳಿತಿದ್ರೆ, ಮತ್ತೊಂದೆಡೆ ದೋಸ್ತಿಗಳು ಸಂಖ್ಯಾಬಲದಲ್ಲಿ ಮೇಲುಗೈ ಸಾಧಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಹೀಗಾಗಿ ನಿನ್ನೆಯ ವಿಶ್ವಾಸಮತ ಯಾಚನೆಯನ್ನು ಉಪಾಯವಾಗಿ ಮುಂದೂಡಿಕೆ ಮಾಡಿಸುವಲ್ಲಿ ಯಶಸ್ವಿಯಾಗಿರೋ ದೋಸ್ತಿ ಮತ್ತೆ ಅತೃಪ್ತರನ್ನು ಸಮಾಧಾನ ಪಡಿಸೋ ಕೆಲಸ ನಡೆಸುತ್ತಿದೆ. ವಿಧಾನಸಭಾ ಕಲಾಪ ಆರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ...

ಬೀಸೋ ದೊಣ್ಣೆಯಿಂದ ಪಾರಾದ ದೋಸ್ತಿ- ಅಹೋರಾತ್ರಿ ಧರಣಿಗೆ ಬಿಜೆಪಿ ನಿರ್ಧಾರ..!

ಬೆಂಗಳೂರು: ಇಂದು ನಿಗದಿಯಾಗಿದ್ದ ಸದನದ ಕಲಾಪದಲ್ಲಿ ಕೊನೆಗೂ ವಿಶ್ವಾಸಮತ ಯಾಚನೆಯಾಗದೇ ಮುಂದೂಡಿಕೆಯಾಗಿದೆ. ಇಂದು ಬೆಳಗ್ಗಿನಿಂದ ಕಾಂಗ್ರೆಸ್-ಜೆಡಿಎಸ್ ಮತ್ತು ಬಿಜೆಪಿ ಹೈಡ್ರಾಮಾಕ್ಕೆ ಸಾಕ್ಷಿಯಾಗಿದ್ದ ವಿಧಾನಸಭಾ ಕಲಾಪ ಮೈತ್ರಿ ಸರ್ಕಾರದ ಅಳಿವು-ಉಳಿವು ನಿರ್ಧರಿಸಲಾಗಲಿಲ್ಲ. ವಿಶ್ವಾಸಮತ ಯಾಚನೆ ಮಾಡಿದ್ರೆ ಮೈತ್ರಿ ಸರ್ಕಾರಕ್ಕೆ ಕಂಟಕ ಕಟ್ಟಿಟ್ಟ ಬುತ್ತಿ ಅಂತ ಅರಿತಿದ್ದ ದೋಸ್ತಿಗಳೂ ಕೊನೆಗೂ ಇಂದಿನ ಸದನವನ್ನು ಮುಂದೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು...

ಬಿಜೆಪಿಗೆ ಸ್ಪಂದಿಸಿದ ರಾಜ್ಯಪಾಲರು- ಇಂದು ವಿಸ್ವಾಸಮತ ಯಾಚನೆ ಪೂರ್ಣಗೊಳಿಸುವಂತೆ ಸೂಚನೆ

ಬೆಂಗಳೂರು: ವಿಶ್ವಾಸಮತ ಯಾಚನೆ ಕುರಿತು ಸದನದಲ್ಲಿ ಉಂಟಾಗಿರುವ ಗದ್ದಲ ರಾಜ್ಯಪಾಲರ ಬಾಗಿಲು ಬಡಿಸಿತು. ಕಾಂಗ್ರೆಸ್-ಜೆಡಿಎಸ್ ವಿಶ್ವಾಸಮತ ಯಾಚನೆ ಮುಂದೂಡಿಕೆ ಮಾಡಬೇಕೆಂದು ಸ್ಪೀಕರ್ ಗೆ ಮನವಿ ಮಾಡಿದ್ದನ್ನು ವಿರೋಧಿಸಿ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿತ್ತು. ಇದಕ್ಕೆ ಸ್ಪಂದಿಸಿರೋ ರಾಜ್ಯಪಾಲರು ಇಂದೇ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಮುಗಿಸಲು ಸೂಚನೆ ನೀಡಿದ್ದಾರೆ. ಅತೃಪ್ತ ಶಾಸಕರು ವಿಪ್ ಉಲ್ಲಂಘನೆ...

ವಿಶ್ವಾಸಮತ ಯಾಚನೆಗೆ ಪಟ್ಟು- ರಾಜ್ಯಪಾಲರ ಮೊರೆಹೋದ ಬಿಜೆಪಿ

ಬೆಂಗಳೂರು: ಅತೃಪ್ತ ಶಾಸಕರ ವಿಪ್ ಉಲ್ಲಂಘನೆ ವಿಚಾರವಾಗಿ ನಿರ್ಧಾರ ಕೈಗೊಳ್ಳುವವರೆಗೂ ವಿಶ್ವಾಸಮತ ಯಾಚನೆ ಪ್ರಸ್ತಾಪ ಮುಂದೂಡಿಕೆ ಮಾಡಿ ಅನ್ನೋ ದೋಸ್ತಿ ಮನವಿಗೆ ಬಿಜೆಪಿ ಸಿಡಿದೆದ್ದಿದೆ. ಇಂದೇ ವಿಶ್ವಾಸಮತ ಯಾಚನೆಯಾಗಬೇಕು ಅಂತ ಪಟ್ಟು ಹಿಡಿದಿರೋ ಬಿಜೆಪಿ, ಇದೀಗ ರಾಜ್ಯಪಾಲರ ಮೊರೆ ಹೋಗಿದೆ. ಇವತ್ತು ವಿಶ್ವಾಸಮತ ಯಾಚನೆಯಲ್ಲಿ ದೋಸ್ತಿಗಳಿಗೆ ಹಿನ್ನಡೆ ಫಿಕ್ಸ್ ಅಂತ ಬೀಗುತ್ತಿದ್ದ ಬಿಜೆಪಿ...

ಕೈ ಶಾಸಕನನ್ನು ಅಪಹರಿಸಿ ಬಿಜೆಪಿ ಆಸ್ಪತ್ರೆಗೆ ಸೇರಿಸಿದೆ- ದೋಸ್ತಿ ಆರೋಪ

ಬೆಂಗಳೂರು: ನಿನ್ನೆ ರಾತ್ರಿ ವರೆಗೂ ಆರೋಗ್ಯವಾಗಿದ್ದ ಕಾಗವಾಡದ ಕಾಂಗ್ರೆಸ್ ಶಾಸಕ ಆರೋಗ್ಯದ ನೆಪವೊಡ್ಡಿ ಮುಂಬೈನಲ್ಲಿ ಪ್ರತ್ಯಕ್ಷವಾದ ಘಟನೆ ಇದೀಗ ಮತ್ತೊಂದು ತಿರುವು ಪಡೆದಿದೆ. ಇದರ ಹಿಂದೆ ಬಿಜೆಪಿ ಕೈವಾಡ ನಡೆಸಿ ಶಾಸಕರನ್ನು ಬಲವಂತದಿಂದ ಕರೆದೊಯ್ದಿದೆ ಅಂತ ದೋಸ್ತಿ ಆರೋಪಿಸಿದ್ದಾರೆ. ಇಂದಿನ ವಿಶ್ವಾಸಮತ ಯಾಚನೆಯಲ್ಲಿ ಸರ್ಕಾರಕ್ಕೆ ಹಿನ್ನಡೆಯುಂಟು ಮಾಡುವ ಉದ್ದೇಶದಿಂದ ಕಾಗವಾಡದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲರನ್ನು...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img