Thursday, July 23, 2026

karnataka newz

‘ಕೈ-ಜೆಡಿಎಸ್ ಶಾಸಕರ ತಂಟೆಗೆ ಹೋಗಿಲ್ಲ- ಪಕ್ಷೇತರರ ಬೆಂಬಲ ಮಾತ್ರ ಕೇಳಿದ್ವಿ’- ಮಾಜಿ ಡಿಸಿಎಂ ಅಶೋಕ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಎದುರಾಗಿರುವ ಬಿಕ್ಕಟ್ಟಿಗೆ ಬಿಜೆಪಿ ಕಾರಣ ಅಲ್ಲವೇ ಅಲ್ಲ. ಆದ್ರೆ ಪಕ್ಷೇತರರ ಬೆಂಬಲ ಮಾತ್ರ ಕೇಳಿದೆವು ಅಂತ ಮಾಜಿ ಡಿಸಿಎಂ, ಬಿಜೆಪಿ ಶಾಸಕ ಆರ್. ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಆಶೋಕ್,ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ ಮತ್ತು ಡಿಕೆಶಿ ಅತೃಪ್ತರ ಸಮಸ್ಯೆ ಆಲಿಸದೆ ನಿರ್ಲಕ್ಷ್ಯ ಮಾಡಿದ್ದೇ ರಾಜ್ಯದಲ್ಲಿ ಇಂತಹ ಪರಿಸ್ಥಿತಿ ಎದುರಾಗಲು ಕಾರಣವಾಗಿದೆ....

ಅತೃಪ್ತರ ಕಣ್ಣಾಮುಚ್ಚಾಲೆಗೆ ಬ್ರೇಕ್- ಸಂಜೆ ಸ್ಪೀಕರ್ ಭೇಟಿಯಾಗುವಂತೆ ಸುಪ್ರೀಂ ಆದೇಶ..!

ನವದೆಹಲಿ: ಕಳೆದೊಂದು ವಾರದಿಂದ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಅತೃಪ್ತ ಶಾಸಕರ ಮುಂಬೈ ವಾಸ್ತವ್ಯಕ್ಕೆ ಇಂದು ಸುಪ್ರೀಂ ಕೋರ್ಟ್ ತೆರೆ ಎಳೆದಿದೆ. ಇಂದು ಸಂಜೆಯೊಳಗೆ ಬೆಂಗಳೂರಿಗೆ ತೆರಳಿ ಸ್ಪೀಕರ್ ಭೇಟಿಯಾಗುವಂತೆ ಸುಪ್ರೀಂ ಕೋರ್ಟ್ ಅತೃಪ್ತ ಶಾಸಕರಿಗೆ ಸೂಚನೆ ನೀಡಿದೆ. ರಾಜ್ಯದಲ್ಲಿ ಬಿಕ್ಕಟ್ಟಿಗೆ ಕಾರಣರಾಗಿರೋ ಅತೃಪ್ತ ಶಾಸಕರು ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಸ್ಪೀಕರ್ ರಾಜೀನಾಮೆ ಅಂಗೀಕಾರ ಮಾಡೋದಕ್ಕೆ ಇಲ್ಲ...

‘ನಾನ್ಯಾಕೆ ರಾಜೀನಾಮೆ ಕೊಡಬೇಕು?’- ಸಿಎಂ ಕುಮಾರಸ್ವಾಮಿ

ಬೆಂಗಳೂರು: ಶಾಸಕರ ಸಾಲು ಸಾಲು ರಾಜೀನಾಮೆಯಿಂದ ಸರ್ಕಾರ ಸಂಖ್ಯಾಬಲವನ್ನೇ ಕಳೆದುಕೊಂಡಿದ್ದು ಸಿಎಂ ರಾಜೀನಾಮೆ ನೀಡಬೇಕು ಅನ್ನೋ ಬಿಜೆಪಿ ಒತ್ತಾಯಕ್ಕೆ ಪ್ರತಿಕ್ರಿಯೆ ನೀಡಿರೋ ಕುಮಾರಸ್ವಾಮಿ, ನಾನೇಕೆ ರಾಜೀನಾಮೆ ಕೊಡಬೇಕು ಅಂತ ಪ್ರಶ್ನಿಸಿದ್ದಾರೆ. ಬೆಂಗಳೂರಿನ ಕೆ.ಕೆ ಗೆಸ್ಟ್ ಹೌಸ್ ಬಳಿ ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಎಚ್. ಡಿ ಕುಮಾರಸ್ವಾಮಿ, ನಾನ್ಯಾಕೆ ರಾಜೀನಾಮೆ...

‘ರಾಜೀನಾಮೆ ಅಂಗೀಕಾರಕ್ಕೆ ಬಿಜೆಪಿಗೆ ಅವಸರವೇಕೆ..?’- ಸ್ಪೀಕರ್ ರಮೇಶ್ ಕುಮಾರ್ ಪ್ರಶ್ನೆ

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಕುರಿತಾಗಿ ಸ್ಪೀಕರ್ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಅನ್ನೋ ಆರೋಪಕ್ಕೆ ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ರಾಜೀನಾಮೆ ಅಂಗೀಕಾರ ವಿಚಾರದಲ್ಲಿ ಬಿಜೆಪಿಯವರು ಅವಸರ ಯಾಕೆ ಅಂತ ಪ್ರಶ್ನಿಸಿದ್ದಾರೆ. ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಶಾಸಕರ ರಾಜೀನಾಮೆ ಅಂಗೀಕರಿಸೋ ವಿಚಾರದಲ್ಲಿ ಪಕ್ಷದ ನಾಯಕರ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಅನ್ನೋ ಬಿಜೆಪಿ ಆರೋಪಕ್ಕೆ...

ಸಚಿವ ಡಿ.ಕೆ ಶಿವಕುಮಾರ್ ಬರಿಗೈಲಿ ವಾಪಸ್..!

ಬೆಂಗಳೂರು: ಮುಂಬೈನಲ್ಲಿರೋ ಅತೃಪ್ತ ಶಾಸಕರೆಲ್ಲರೂ ನನ್ನ ಸ್ನೇಹಿತರು ಅವರಿಗೆ ತಿಳುವಳಿಕೆ ಹೇಳಿ ವೈಯಕ್ತಿಕವಾಗಿ ಮಾತನಾಡಿಕೊಂಡು ಬರ್ತೀನಿ ಅಂತ ಬಹಳ ಹುಮ್ಮಸ್ಸಿನಿಂದ ಮುಂಬೈಗೆ ತೆರಳಿದ್ದ ಸಚಿವ ಡಿಕೆಶಿ ಇದೀಗ ಬರಿಗೈಲಿ ವಾಪಸ್ಸಾಗಲಿದ್ದಾರೆ. ಇಂದು ಬೆಳಗ್ಗೆ 8 ಗಂಟೆ ವೇಳೆಗೆ ಅತೃಪ್ತರು ತಂಗಿದ್ದ ರಿನೈಸೆನ್ಸ್ ಹೋಟೆಲ್ ಒಳಕ್ಕೆ ಹೋಗಲು ಯತ್ನಸಿದ್ದ ಸಚಿವ ಡಿಕೆಶಿಗೆ ಮುಂಬೈ ಪೊಲೀಸರು ತಡೆಯೊಡ್ಡಿದ್ರು....

ವಿಧಾನಸೌಧದಲ್ಲಿ ಬಿಜೆಪಿ-ಕಾಂಗ್ರೆಸ್ ಗಲಾಟೆ..!

ಬೆಂಗಳೂರು: ಸ್ವೀಕರ್ ಗೆ ರಾಜೀನಾಮೆ ಸಲ್ಲಿಸಿ ತೆರಳುತ್ತಿದ್ದ ಶಾಸಕ ಸುಧಾಕರ್ ರನ್ನು ಕಾಂಗ್ರೆಸ್ ಮುಖಂಡರು ಕೂಡಿ ಹಾಕಿದ್ದಾರೆ ಅಂತ ಆರೋಪಿಸಿ ಬಿಜೆಪಿ ವಿಧಾನಸೌಧದಲ್ಲಿ ಕಾಂಗ್ರೆಸ್ ಮುಖಂಡರೊಂದಿಗೆ ವಾಗ್ವಾದಕ್ಕಿಳಿದು ಶಕ್ತಿ ಸೌಧದಲ್ಲಿ ಗದ್ದಲಕ್ಕೆ ನಾಂದಿ ಹಾಡಿದೆ. ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಸುಧಾಕರ್ ರಾಜೀನಾಮೆ ನೀಡಿ ಸ್ಪೀಕರ್ ಕಚೇರಿಯಿಂದ ಹೊರಬರುತ್ತಿದ್ದಂತೆಯೇ ಪ್ರಿಯಾಂಕ್ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ...

ಕಾಂಗ್ರೆಸ್ ನ ಮತ್ತೆರಡು ವಿಕೆಟ್ ಪತನ- ಶಾಸಕ ಸುಧಾಕರ್, ಎಂ.ಟಿ.ಬಿ ನಾಗರಾಜ್ ರಾಜೀನಾಮೆ..!

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಉಂಟಾಗಿರೋ ಬಿಕ್ಕಟ್ಟು ಮತ್ತಷ್ಟು ಕಗ್ಗಾಂಟಾಗುತ್ತಿದ್ದು ಇಂದು ಕಾಂಗ್ರೆಸ್ ನ ಇಬ್ಬರು ಶಾಸಕರು ರಾಜೀನಾಮೆ ನೀಡಿ ದೋಸ್ತಿಗೆ ಗುಡ್ ಬೈ ಹೇಳಿದ್ದಾರೆ. ಈ ಮೂಲಕ ದೋಸ್ತಿಗಳು ಕಣ್ ಕಣ್ ಬಿಡುವಂತಾಗಿದೆ. ಮಂತ್ರಿಗಿರಿ ಕೈ ತಪ್ಪಿದ ಹಿನ್ನೆಲೆಯಲ್ಲಿ ದೋಸ್ತಿ ವಿರುದ್ಧ ಅಸಮಾಧಾನಗೊಂಡು ರೆಬೆಲ್ ಆಗಿದ್ದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಸುಧಾಕರ್ ಸ್ಪೀಕರ್ ಕಚೇರಿಗೆ...

ರೈಲುಗಳಲ್ಲಿ ನಕಲಿ ನೀರು ಮಾರಾಟ- 800 ಜನರ ಬಂಧನ

ನವದೆಹಲಿ: ಇನ್ನು ಮುಂದೆ ರೈಲುಗಳಲ್ಲಿ ಪ್ರಯಾಣ ಮಾಡೋವಾಗ ಬಾಟಲಿ ನೀರುಗಳನ್ನು ಕೊಂಡುಕೊಳ್ಳೋ ಮುನ್ನ ಎಚ್ಚರದಿಂದಿರಿ. ಯಾಕಂದ್ರೆ ದೇಶಾದ್ಯಂತ ರೈಲುಗಳಲ್ಲಿ ನಕಲಿ ನೀರು ಬಾಟಲಿಗಳ ಮಾರಾಟ ಜಾಲ ಬೆಳಕಿಗೆ ಬಂದಿದ್ದು, ಸುಮಾರು 800 ಮಂದಿಯನ್ನು ಬಂಧಿಸಲಾಗಿದೆ. ರೈಲುಗಳಲ್ಲಿ ನೀರು ಬಾಟಲಿಗಳಿಗೆ ನಕಲಿ ಲೇಬಲ್ ಅಂಟಿಸಿ ಮಾರಾಟ ಮಾಡಲಾಗುತ್ತಿರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿದ ರೈಲ್ವೇ...

ಐಸಿಸಿ ವಿಶ್ವಕಪ್- ಭಾರತಕ್ಕೆ 240 ರನ್ ಗುರಿ ನೀಡಿದ ನ್ಯೂಜಿಲೆಂಡ್

ಇಂಗ್ಲೆಂಡ್: ಟೀಂ ಇಂಡಿಯಾ- ನ್ಯೂಜಿಲೆಂಡ್ ನಡುವಿನ ಏಕ ದಿನ ವಿಶ್ವಕಪ್ ನಲ್ಲಿ ಮೊದಲ ಸೆಮಿಫೈನಲ್ ಪಂದ್ಯ ಇದೀಗ ಕ್ಲೈಮಾಕ್ಸ್ ತಲುಪಿದೆ. ಇಂದು ಇನ್ನಿಂಗ್ಸ್ ಪೂರೈಸಿರೋ ನ್ಯೂಜಿಲೆಂಡ್ ತಂಡ ಭಾರತಕ್ಕೆ 240 ರನ್ ಗಳ ಗುರಿ ನೀಡಿದೆ. ನಿನ್ನೆ ಮಂಗಳವಾರ ಮಳೆಯಿಂದಾಗಿ ನ್ಯೂಜಿಲೆಂಡ್-ಭಾರತ ನಡುವಿನ ಪಂದ್ಯ ಸ್ಥಗಿತಗೊಂಡಿತ್ತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದ ನ್ಯೂಜಿಲೆಂಡ್...

ಕೈ ಚೆಲ್ಲಿದ ರಾಜ್ಯಪಾಲರು- ಬಿಜೆಪಿ ನಿಯೋಗಕ್ಕೆ ಹಿನ್ನಡೆ..!

ಬೆಂಗಳೂರು: ಶಾಸಕರ ರಾಜೀನಾಮೆ ಅಂಗೀಕಾರ ವಿಚಾರದಲ್ಲಿ ಮಧ್ಯ ಪ್ರವೇಶಿಸಿ ಅತೃಪ್ತರ ರಾಜೀನಾಮೆಯನ್ನು ಊರ್ಜಿತ ಗೊಳಿಸಿ ಬಿಜೆಪಿಗೆ ಸರ್ಕಾರ ರಚಿಸಲು ಅನುವು ಮಾಡಿಕೊಡಬೇಕು ಎಂದು ರಾಜ್ಯಪಾಲರನ್ನು ಭೇಟಿ ಮಾಡಿದ್ದ ಬಿಜೆಪಿ ನಿಯೋಗಕ್ಕೆ ಹಿನ್ನಡೆಯಾಗಿದೆ. ಶಾಸಕರ ರಾಜೀನಾಮೆ ಅಂಗೀಕಾರ ವಿಚಾರವಾಗಿ ವಿಧಾನಸಭಾ ಸ್ವೀಕರ್ ರಮೇಶ್ ಕುಮಾರ್ ವಿಳಂಬ ಮಾಡುತ್ತಿದ್ದಾರೆ ಈ ಕೂಡಲೇ ರಾಜ್ಯಪಾಲರು ಮಧ್ಯ ಪ್ರವೇಶಿಸಿ ಶಾಸಕರ ರಾಜೀನಾಮೆಯನ್ನು...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img