Friday, November 28, 2025

]karnataka tv

ದಲಿತ ಸಿಎಂಗೆ ಸಮಯ ಬಂದಿದೆ ಜಿ. ಪರಮೇಶ್ವರ್ ಸಿಎಂ ಆಗಬೇಕು !

ಪವರ್ ಶೇರಿಂಗ್ ಪ್ರಕ್ರಿಯೆ ನಡೆದರೆ, ದಲಿತ ಸಮುದಾಯದ ವ್ಯಕ್ತಿಗೆ ಮುಖ್ಯಮಂತ್ರಿ ಹುದ್ದೆಯ ಅವಕಾಶ ನೀಡಿದರೆ ಸಂತೋಷವಾಗುತ್ತದೆ ಎಂದು ಪಾವಗಡ ಶಾಸಕ ಹೆಚ್‌.ವಿ‌. ವೆಂಕಟೇಶ್ ಅಭಿಪ್ರಾಯಪಟ್ಟಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಮುಂದುವರಿದರೂ, ಡಿ.ಕೆ. ಶಿವಕುಮಾರ್ ಸಾಹೇಬರಿಗೆ ಸಿಎಂ ಸ್ಥಾನ ನೀಡಿದರೂ ಅಥವಾ ದಲಿತರನ್ನು ಮುಖ್ಯಮಂತ್ರಿಯಾಗಿ ನೇಮಿಸಿದರೂ ನಮಗೆ ಸಂತೋಷ ಎಂದು ಹೇಳಿದರು. ವೆಂಕಟೇಶ್ ಅವರು 2013ರ...

CM ಕುರ್ಚಿಗಾಗಿ ದೇವರ ಮೊರೆ : ಕೆರೆ ಅಜ್ಜಯ್ಯನ ಗದ್ದುಗೆ ಡಿಕೆಶಿ ಮನೆಗೆ

ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಹುದ್ದೆ ಕುರಿತು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಶೀತಲ ಸಮರ ಮತ್ತಷ್ಟು ತೀವ್ರಗೊಂಡಿದೆ. ಇದುವರೆಗೆ ಪರಿಸ್ಥಿತಿಯನ್ನು ದಿನ ದೂಡುತ್ತಿದ್ದ ಹೈಕಮಾಂಡ್, ಈಗ ಕುರ್ಚಿ ಕದನಕ್ಕೆ ಬ್ರೇಕ್ ಹಾಕಲೇಬೇಕಾದ ಅನಿವಾರ್ಯತೆಯಲ್ಲಿದೆ. ಈ ನಡುವೆ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ದೇವರ ಮೊರೆ ಹೋಗುವ ಪ್ರಯತ್ನವನ್ನು ಮುಂದುವರಿಸಿದ್ದಾರೆ. ಇತ್ತೀಚೆಗೆ ಕಾಶಿಯಿಂದ ಆಗಮಿಸಿದ ನಾಗಸಾಧುಗಳು ಡಿ.ಕೆ....

ಇಂದು ರಾಜ್ಯದೆಲ್ಲೆಡೆ ಒಣಹವೆ : ಮಳೆಯ ಸಾಧ್ಯತೆ ಕಡಿಮೆ

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಸಾಧಾರಣ ಮಳೆಯಾಗುತ್ತಿದ್ದರೂ, ನಿನ್ನೆ ಹಲವೆಡೆ ಒಣ ಹವೆಯ ವಾತಾವರಣ ವಲಯಿತ್ತು. ಇಂದು ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಒಣ ಹವೆಯೇ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬೆಂಗಳೂರಿನ ಕೆಲವೆಡೆ ಮಾತ್ರ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,...

ಧಾರವಾಡ ಜಿಲ್ಲಾಡಳಿತಕ್ಕೆ ಹಿನ್ನಡೆ – ಕನ್ನೇರಿ ಶ್ರೀಗಳ ಪ್ರವೇಶಕ್ಕೆ ಅನುಮತಿ

ಧಾರವಾಡದಲ್ಲಿ ಕನ್ನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿಗಳಿಗೆ ಪ್ರವೇಶದ ಮೇಲೆ ಜಿಲ್ಲಾಡಳಿತ ಹಾಕಿದ್ದ ನಿರ್ಬಂಧವನ್ನು ಧಾರವಾಡ ಹೈಕೋರ್ಟ್ ಪೀಠ ತೆರವು ಮಾಡಿದೆ. ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ನವೆಂಬರ್ 5ರಿಂದ 7ರವರೆಗೆ ಸ್ವಾಮೀಜಿಗಳ ಧಾರ್ಮಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳು ನಡೆಯಬೇಕಾಗಿತ್ತು. ಆದರೆ ಧಾರವಾಡ ಜಿಲ್ಲಾಡಳಿತದಿಂದ, ಸ್ವಾಮೀಜಿಗಳ ಜಿಲ್ಲೆ ಪ್ರವೇಶಕ್ಕೆ ಸಂಪೂರ್ಣ ತಡೆ ಆದೇಶ ಹೊರಡಿಸಿತ್ತು. ಈ...

ಭ್ರಷ್ಟರ ಬೆವರಿಳಿಸಿದ ಲೋಕಾಯುಕ್ತ ಕೋಟಿ ಕೋಟಿ ಆಸ್ತಿ, ಚಿನ್ನ ಪತ್ತೆ!

ರಾಜ್ಯದ ವ್ಯಾಪ್ತಿಯಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರು ದೊಡ್ಡ ಮಟ್ಟದ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಮೈಸೂರು, ಬೆಂಗಳೂರು ಸೇರಿದಂತೆ ಒಟ್ಟು ಹತ್ತು ಜಿಲ್ಲೆಗಳಲ್ಲಿ ಇಂದು ಬೆಳಿಗ್ಗೆಯಿಂದಲೇ ಅಧಿಕಾರಿಗಳ ಮನೆ–ಕಚೇರಿಗಳ ಮೇಲೆ ದಾಳಿ ನಡೆದಿದೆ. ಹಲವು ಅಧಿಕಾರಿಗಳ ವಸತಿ ಮತ್ತು ಕಚೇರಿಗಳಲ್ಲಿ ಬೃಹತ್ ಪ್ರಮಾಣದ ನಗದು, ಚಿನ್ನ–ಬೆಳ್ಳಿ ಹಾಗೂ ಆಸ್ತಿ ದಾಖಲೆಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಲೋಕಾಯುಕ್ತ ದಾಳಿಯ...

₹200 ಕಟ್ಟದ್ದಕ್ಕೆ ನಾಮಪತ್ರ ತಿರಸ್ಕಾರ : ವೆಂಕಟೇಶ್ ಗೆ ಒಲಿದ ಅಧ್ಯಕ್ಷ ಪಟ್ಟ

ಕೆಎಸ್‌ಸಿಎ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ದೊಡ್ಡ ತಿರುವು ಕಂಡುಬಂದಿದೆ. ಸ್ಪರ್ಧೆಗೆ ಇಳಿದಿದ್ದ ಕೆ.ಎನ್. ಶಾಂತಕುಮಾರ್ ಅವರ ನಾಮಪತ್ರ ಕೇವಲ ₹200 ಶುಲ್ಕ ಪಾವತಿಸದ ಕಾರಣ ತಿರಸ್ಕೃತಗೊಂಡಿದೆ. ಇದರ ಪರಿಣಾಮವಾಗಿ ಅವರ ಪ್ರತಿಸ್ಪರ್ಧಿ ಮಾಜಿ ಭಾರತೀಯ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರು ಅವಿರೋಧವಾಗಿ ಕೆಎಸ್‌ಸಿಎ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ವಿಚಾರ ಕ್ರಿಕೆಟ್ ವಲಯದಲ್ಲಿ ದೊಡ್ಡ...

CM ಕುರ್ಚಿ ಡಿಕೆಶಿಗೂ ಸಿಗಬೇಕಿತ್ತು : DK ಪರ ಪ್ರತಾಪ್‌ ಸಿಂಹ ಬ್ಯಾಟಿಂಗ್

ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನ ಕುರಿತು ಮತ್ತೆ ರಾಜಕೀಯ ಚರ್ಚೆ ಶುರುವಾಗಿದೆ. ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ಸಿಎಂ ಸ್ಥಾನ ಡಿ.ಕೆ. ಶಿವಕುಮಾರ್‌ ಅವರಿಗೆ ನ್ಯಾಯಯುತವಾಗಿ ಸಿಗಬೇಕಾಗಿತ್ತು. ಆದರೆ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ರಾಜಕೀಯವಾಗಿ ಬಲಹೀನರಾಗಿದ್ದಾರೆ. ಎಲ್ಲರಿಗೂ ಹೆದರಿಕೊಳ್ಳುವ ಹೈಕಮಾಂಡ್‌ನ ಕಾರಣ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು ಎಂದು ಆರೋಪ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರತಾಪ್...

ಆಸ್ಪತ್ರೆ ‘ಡಿ ಗ್ರೇಡ್’ ವಿವಾದ ಗ್ರಾಮಸ್ಥರ ರಸ್ತೆ ತಡೆ ಪ್ರತಿಭಟನೆ!

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕನಕರೆ ಸಮುದಾಯ ಆರೋಗ್ಯ ಕೇಂದ್ರವನ್ನು ‘ಡಿ ಗ್ರೇಡ್’ ಗೆ ಇಳಿಸಿರುವ ರಾಜ್ಯ ಆರೋಗ್ಯ ಇಲಾಖೆಯ ನಿರ್ಧಾರಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಗ್ರಾಮದ ಸರ್ಕಲ್ ಬಳಿ ಸಂಪರ್ಕ ರಸ್ತೆ ತಡೆದು 60ಕ್ಕೂ ಹೆಚ್ಚು ಹಳ್ಳಿ ಜನರು ಪ್ರತಿಭಟನೆ ನಡೆಸಿದರು. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಹುಟ್ಟೂರಾದ...

ರೋಗದ ಎದುರು ಸೋತ ಜೀವ : 25ರಲ್ಲೇ ದಯಾಮರಣಕ್ಕೆ ತೀರ್ಮಾನ

ದಕ್ಷಿಣ ಆಸ್ಟ್ರೇಲಿಯಾದ 25 ವರ್ಷದ ಅನ್ನಾಲೀಸ್ ಹಾಲೆಂಡ್ ಅಪರೂಪದ ಆಟೋಇಮ್ಯೂನ್ ಆಟೋನೊಮಿಕ್ ಗ್ಯಾಂಗ್ಲಿಯೊಪತಿ (AAG) ರೋಗದಿಂದ ಹಲವು ವರ್ಷಗಳಿಂದ ನರಳುತ್ತಿದ್ದು, ಈಗ ಸ್ವಯಂಪ್ರೇರಿತ ದಯಾಮರಣಕ್ಕೆ ಮುಂದಾಗಿದ್ದಾರೆ. 18ನೇ ವಯಸ್ಸಿನಲ್ಲಿ ಪತ್ತೆಯಾದ ಈ ಕಾಯಿಲೆಯಲ್ಲಿ ರೋಗನಿರೋಧಕ ವ್ಯವಸ್ಥೆಯೇ ನರಕೋಶಗಳ ಮೇಲೆ ದಾಳಿ ನಡೆಸಿ, ಹೃದಯ ಬಡಿತ, ರಕ್ತದೊತ್ತಡ, ಜೀರ್ಣಕ್ರಿಯೆ ಸೇರಿದಂತೆ ದೇಹದ ಸ್ವಯಂಚಾಲಿತ ಕಾರ್ಯಗಳನ್ನು ಗಂಭೀರವಾಗಿ...

2026ಕ್ಕೆ ಚಿನ್ನದ ದರ ಭಾರಿ ಜಿಗಿತ! ಎಷ್ಟಾಗಬಹುದು ಗೋಲ್ಡ್‌ ರೇಟ್‌

ಚಿನ್ನದ ಬೆಲೆಯಲ್ಲಿ ಕಳೆದ ಒಂದು–ಎರಡು ವರ್ಷಗಳಿಂದ ಅತೀವ ಏರಿಕೆ ಕಂಡುಬಂದಿದೆ. ಒಂದು ವರ್ಷದೊಳಗೆ ಚಿನ್ನದ ಬೆಲೆ ಅರ್ಧದಷ್ಟು ಹೆಚ್ಚಳ ಕಂಡಿದ್ದು, ಹೂಡಿಕೆದಾರರನ್ನು ಮತ್ತೆ ಚಿನ್ನದತ್ತ ಸೆಳೆದಿದೆ. ಕಳೆದ ಎರಡು ವಾರಗಳಿಂದ ಸ್ಥಿರವಾಗಿದ್ದ ಸ್ವರ್ಣದ ದರ ಈಗ ಮತ್ತೆ ಏರಿಕೆಯ ಹಾದಿಯಲ್ಲಿದೆ. ಅಮೆರಿಕಾ ಫೆಡರಲ್‌ ರಿಸರ್ವ್ ಬಡ್ಡಿದರ ಕಡಿತಗೊಳಿಸುವ ಸಾಧ್ಯತೆ ಜೋರಾಗಿರುವುದರಿಂದ, ಜಾಗತಿಕ ಮಾರುಕಟ್ಟೆಯಲ್ಲಿ ಹೂಡಿಕೆದಾರರು ಚಿನ್ನವನ್ನು...
- Advertisement -spot_img

Latest News

ಕೃಷ್ಣನೂರಿನಲ್ಲಿ ‘ನಮೋ’ ಭಾಷಣ: ಮೋದಿ ಕೊಟ್ಟ ಸಂದೇಶ ಏನು?

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉಡುಪಿಯ ಐತಿಹಾಸಿಕ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ಶ್ರೀ ಕೃಷ್ಣನ ದರ್ಶನ ಪಡೆದರು. ಈ ಸಂದರ್ಭದಲ್ಲಿ ಮಾಜಿ ಸಚಿವ...
- Advertisement -spot_img