ರಾಜ್ಯ ರಾಜಕೀಯದಲ್ಲಿ ಮತ್ತೆ ಕದನವಾಡಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಹೊಸ ಮಾಸ್ಟರ್ ಪ್ಲಾನ್ ರೂಪಿಸಿರುವ ಮಾಹಿತಿ ಬಹಿರಂಗವಾಗಿದೆ. ಜೆಡಿಎಸ್ನ ಬಲ ಕುಗ್ಗಿಸುವ ಉದ್ದೇಶದಿಂದ ಅವರು ಕೆಲವು ಶಾಸಕರನ್ನು ಸೆಳೆಯಲು ಕಮಲ ಹಾಕಿದ್ದಾರೆ ಎನ್ನಲಾಗಿದೆ. ಈಗಾಗಲೇ ಬಲ ಕುಗ್ಗಿಸಿಕೊಂಡಿರುವ ಜೆಡಿಎಸ್, ಬಿಜೆಪಿ ಮೈತ್ರಿಯಿಂದ ಉಸಿರಾಡುತ್ತಿದ್ದರೆ, ಡಿಕೆಶಿಯ ಈ ತಂತ್ರ ದಳಪತಿಗಳಿಗೆ ಹೊಸ ತಲೆನೋವು ತಂದಿದೆ.
2023ರ ವಿಧಾನಸಭಾ...
ಶಬರಿಮಲೆ ಅಯ್ಯಪ್ಪ ದೇವಾಸ್ಥಾನದ ಚಿನ್ನದ ತಟ್ಟೆಗಳ ಕಳ್ಳತನ ಪ್ರಕರಣಕ್ಕೆ ಹೊಸ ಬೆಳಕು ಬಂದಿದೆ. ದೇವಸ್ಥಾನಕ್ಕೆ ನೀಡಿರುವ ಚಿನ್ನದ ತಟ್ಟೆಗಳನ್ನು ಪ್ರಾಯೋಜಕರು ತಮ್ಮ ಕುಟುಂಬದ ಮದುವೆ ಉದ್ದೇಶಕ್ಕಾಗಿ ಬಳಸಲು ಅನುಮತಿ ಕೇಳಿದ್ದರು ಎಂಬುದು ಇದೀಗ ಮುಂಗಡ ದಾಖಲೆಗಳಿಂದ ಹೊರಬಂದಿದೆ.
ಪ್ರಾಯೋಜಕರಾದ ಉನ್ನಿಕೃಷ್ಣನ್ ಪೊಟ್ಟಿ ಡಿಸೆಂಬರ್ 9, 2019ರಂದು ತಿರುವಾಂಕೂರು ದೇವಸ್ವಂ ಮಂಡಳಿಗೆ ಪತ್ರ ಬರೆದು, ದೇವಾಲಯದ ಗರ್ಭಗುಡಿಯಲ್ಲಿ...
ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ನಡೆದ ವಿಚಿತ್ರ ಘಟನೆ ಅಧಿಕಾರಿಗಳನ್ನು ಅಚ್ಚರಿಗೊಳಿಸಿದೆ. ಸಾಮಾನ್ಯವಾಗಿ ಈ ಜಿಲ್ಲೆಯಲ್ಲಿ ಸಮಾಧಾನ್ ದಿವಸ್ ಕಾರ್ಯಕ್ರಮದ ವೇಳೆ ನಿವಾಸಿಗಳು ವಿದ್ಯುತ್, ರಸ್ತೆ ಹಾಗೂ ಪಡಿತರ ಚೀಟಿಗಳಿಗೆ ಸಂಬಂಧಿಸಿದ ವಿಷಯಗಳನ್ನು ಸರ್ಕಾರಕ್ಕೆ ಸಲ್ಲಿಸುತ್ತಾರೆ. ಆದರೆ ಮಹಮೂದಾಬಾದ್ ಪ್ರದೇಶದ ಲೋಧ್ಸಾ ಗ್ರಾಮದ ನಿವಾಸಿ ಮೆರಾಜ್ ಈ ಬಾರಿ ವಿಚಿತ್ರ ಕೌಟುಂಬಿಕ ವಿಷಯವನ್ನು ಮನಗಂಡಿದ್ದಾರೆ.
ಮೆರಾಜ್...
ಮೈಸೂರು ವಸ್ತುಪ್ರದರ್ಶನ ಮೈದಾನದ ಸಮೀಪ ಮಧ್ಯಾಹ್ನ ನಡೆದ ಭೀಕರ ಘಟನೆ ನಗರವನ್ನೇ ಬೆಚ್ಚಿಬೀಳಿಸಿದೆ. ದುಷ್ಕರ್ಮಿಗಳ ಗುಂಪೊಂದು ಕಾರಿನಲ್ಲಿ ಸಾಗುತ್ತಿದ್ದ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಕ್ಯಾತಮಾರನಹಳ್ಳಿ ನಿವಾಸಿ ವೆಂಕಟೇಶ್ ಅಲಿಯಾಸ್ ಮುಖಾಮುಚ್ಚಿ, ಅಲಿಯಾಸ್ ಗಿಲಿಗಿಲಿ ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ವೆಂಕಟೇಶ್ ಕಾರಿನಲ್ಲಿದ್ದಾಗ ಯುವಕರ ಗುಂಪೊಂದು ಲಾಂಗ್...
ಲಾಟರಿ ಲಾಟರಿ ಬಂಪರ್ ಲಾಟರಿ… ಅದೃಷ್ಟ ಎಂದರೆ ಇದೇ ಇರಬಹುದು. ಆಲಪ್ಪುಳ ಜಿಲ್ಲೆಯ ತುರವೂರಿನ ಶರತ್ ಎಸ್. ನಾಯರ್ ಅವರ ಜೀವನ ಒಂದು ಕ್ಷಣದಲ್ಲಿ ಬದಲಾದಂತಾಗಿದೆ. ನೆಟ್ಟೂರಿನ ನಿಪ್ಪಾನ್ ಪೇಂಟ್ಸ್ ಅಂಗಡಿಯಲ್ಲಿ ಕೆಲಸ ಮಾಡುವ ಈ ಯುವಕ, ಮೊದಲ ಬಾರಿಗೆ ಓಣಂ ಬಂಪರ್ ಲಾಟರಿ ಟಿಕೆಟ್ ಖರೀದಿಸಿದ್ದರು. ಅದೇ ಟಿಕೆಟ್ 2025ರ ಓಣಂ ಬಂಪರ್ನಲ್ಲಿ...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ನಲ್ಲಿ ಗಣತಿದಾರರ ಮೇಲೆ ಹಲ್ಲೆ ಮತ್ತು ದಾಖಲೆ ಕಿತ್ತುಕೊಂಡ ಘಟನೆ ನಡೆದಿದೆ. ಸಮೀಕ್ಷೆಗಾಗಿ ಮನೆಗೆ ತೆರಳಿದ್ದ ಗಣತಿದಾರ ಜನಾರ್ಧನ ಅವರ ಬಳಿ, ಒಂದು ಕುಟುಂಬ ದಾಖಲೆ ಕಿತ್ತುಕೊಂಡು ನಂತರ ವಾಪಸು ಕಳಿಸಿದ್ದೆಂದು ಆರೋಪಿಸಲಾಗಿದೆ.
ಆ ಮನೆಯ R.R ನಂಬರ್ ಹಾಗೂ ರೇಷನ್ ಕಾರ್ಡ್ ಮಾಹಿತಿ ಕೇಳಿದ್ದಕ್ಕೆ ಕುಟುಂಬದ ಸದಸ್ಯರು ಗಣತಿದಾರರೊಂದಿಗೆ...
ಕಾಂತಾರ ಚಾಪ್ಟರ್ 1 ಸಿನಿಮಾ ಬಿಡುಗಡೆಯಾಗಿ ಕೆಲವು ದಿನಗಳೇ ಆಗಿದ್ದರೂ, ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಭರ್ಜರಿ ಯಶಸ್ಸು ಕಂಡು ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಸಿನಿಮಾ ನೋಡಿದ ಪ್ರೇಕ್ಷಕರು ಕಥೆ, ಅಭಿನಯ ಮತ್ತು ದೈವಾರಾಧನೆ ಚಿತ್ರಣಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಸಿನಿಮಾದ ಯಶಸ್ಸಿನ ನಡುವೆ, ಕೆಲವು ಪ್ರೇಕ್ಷಕರ ವರ್ತನೆ ಈಗ ಹೊಸ ವಿವಾದಕ್ಕೆ ಕಾರಣವಾಗಿದೆ. ಚಿತ್ರಮಂದಿರಗಳಲ್ಲಿ ಹಾಗೂ...
ಕಿರುತೆರೆಯ ಅತಿ ಜನಪ್ರಿಯ ಹಾಗೂ ದೊಡ್ಡ ರಿಯಾಲಿಟಿ ಶೋ ಎಂದೇ ಪ್ರಸಿದ್ಧಿ ಪಡೆದಿರುವ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಇದೀಗ ಹೊಸ ವಿವಾದಕ್ಕೆ ಸಿಲುಕಿದೆ. ಕಳೆದ ಸೀಸನ್ನಲ್ಲಿ ಮಹಿಳಾ ಆಯೋಗದಿಂದ ನೋಟಿಸ್ ಬಂದಿದ್ದರೆ, ಈ ಬಾರಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬಿಗ್ ಬಾಸ್ ಆಯೋಜಕರಿಗೆ ನೋಟಿಸ್ ಜಾರಿ ಮಾಡಿದೆ.
ಮಂಡಳಿಯ ಹೇಳಿಕೆಯ...
ಬಿಹಾರದಲ್ಲಿ ರಾಜಕೀಯ ಕಾದಾಟ ಮತ್ತೊಮ್ಮೆ ಬಿಸಿ ಬಿಸಿ ಹಂತಕ್ಕೆ ತಲುಪಿದೆ. 2025ರ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಕೇಂದ್ರ ಚುನಾವಣಾ ಆಯೋಗವು ಘೋಷಿಸಿದೆ. ರಾಜ್ಯದ 243 ಸ್ಥಾನಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತ ನವೆಂಬರ್ 6ರಂದು ಮತ್ತು ಎರಡನೇ ಹಂತ ನವೆಂಬರ್ 11ರಂದು ನಡೆಯಲಿದೆ. ಮತ ಎಣಿಕೆ ಮತ್ತು ಫಲಿತಾಂಶ ಪ್ರಕಟಣೆ ನವೆಂಬರ್...
ವಿಧಾನಸಭೆ ಚುನಾವಣಾ ದಿನಾಂಕ ಘೋಷಣೆ ಸನ್ನಿಹಿತವಾಗುತ್ತಿದ್ದಂತೆ ಬಿಹಾರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇಂಡಿಯಾ ಮೈತ್ರಿಕೂಟದ ಪಕ್ಷಗಳು ಶನಿವಾರ ರಾತ್ರಿ ಸಭೆ ಸೇರಿ, ಸೀಟು ಹಂಚಿಕೆ ಸೂತ್ರವನ್ನು ಒಂದೆರಡು ದಿನಗಳಲ್ಲಿ ಬಹಿರಂಗಪಡಿಸುವ ನಿರ್ಧಾರ ಕೈಗೊಂಡಿವೆ ಎಂದು ಮೂಲಗಳು ತಿಳಿಸಿವೆ.
ಈ ಮಹತ್ವದ ಸಭೆ, ಇಂಡಿಯಾ ಬಣದ ಸಹಕಾರ ಸಮಿತಿಯ ಮುಖ್ಯಸ್ಥ ಮತ್ತು ರಾಷ್ಟ್ರೀಯ ಜನತಾದಳದ ನಾಯಕ ತೇಜಸ್ವಿ...