Wednesday, May 27, 2026

karnataka tv news

ವಿಶ್ವ ಹೃದಯ ದಿನಾಚರಣೆಯ ಅಂಗವಾಗಿ ಪ್ರತಿಜ್ಞೆಯನ್ನು ಮಾಡಿದ ಬೊಮ್ಮಾಯಿ ..!

www.karnatakatv.net :ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಶ್ವ ಆರೋಗ್ಯ ದಿನದ ಅಂಗವಾಗಿ ಇಂದು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಈ ಸಂಧರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಜ್ಞೆಯನ್ನು ಮಾಡಿದ್ದಾರೆ. "ಹೃದಯದ ಆರೋಗ್ಯ ರಕ್ಷಣೆಗಾಗಿ ಇನ್ನು ಮುಂದೆ ದಿನನಿತ್ಯ ಅರ್ಧ ತಾಸು ಬಿರುಸಿನ ನಡಿಗೆ ಮಾಡುತ್ತೇನೆ" ಎಂದು ಪ್ರತಿಜ್ಞೆಯನ್ನು ಮಾಡಿ, ನಂತರ ವಿಧಾನಸೌಧದಿಂದ ಕಬ್ಬನ್ ಉದ್ಯಾನವನ...

ಪೊಲೀಸರು-ಪ್ರತಿಭಟನಾಕಾರರ ನಡುವೆ ನೂಕಾಟ-ತಳ್ಳಾಟ…!

ಹುಬ್ಬಳ್ಳಿ: ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಬಂದ್ ಗೆ ಬೆಂಬಲಿಸಿ ಕಳಸಾ ಬಂಡೂರಿ ಹೋರಾಟ ಸಮಿತಿ ಸೇರಿದಂತೆ ವಿವಿಧ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದವು‌. ನಗರದ ಚೆನ್ನಮ್ಮ ವೃತ್ತದಲ್ಲಿ ರಸ್ತೆಯ ಮಧ್ಯೆಯೇ ಮಲಗಿ ಪ್ರತಿಭಟನೆ ನಡೆಸಿದರು.‌ ಇದಲ್ಲದೇ ರಸ್ತೆ ಬಂದ್ ಮಾಡಿ ವಾಹನಗಳನ್ನು ತಡೆಯಲು ರೈತರು ಮುಂದಾದಾಗ ಪೊಲೀಸರು...

ಬೆಂಗಳೂರಿನ ಲಕ್ಕಸಂದ್ರದಲ್ಲಿ ಕಟ್ಟಡ ಕುಸಿತ…!

ಬೆಂಗಳೂರು: ಬೆಂಗಳೂರಿನ ಲಕ್ಕಸಂದ್ರದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಕುಸಿದುಬಿದ್ದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಇಂದು ಬೆಳಗ್ಗೆ 10.30ರ ಸುಮಾರಿನಲ್ಲಿ ಸಿಲಿಕಾನ್ ಸಿಟಿಯ ಮೂರಂತಸ್ಥಿನ ಕಟ್ಟಡವೊಂದು ಕುಸಿದುಬಿದ್ದಿದೆ. ಇಲ್ಲಿನ ಲಕ್ಕಸಂದ್ರದಲ್ಲಿ ಈ ಘಟನೆ ನಡೆದಿದ್ದು ಸುಮಾರು 50 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಕಟ್ಟಡ ಇಂದು ಏಕಾಏಕಿ ಕುಸಿದಿದೆ. ಇನ್ನು ಈ ಕಟ್ಟಡದಲ್ಲಿ ಸುಮಾರು 20ಕ್ಕೂ...

ಹುಬ್ಬಳ್ಳಿಯಲ್ಲಿ ಹಿಟ್ & ರನ್- ಬೈಕ್ ಸವಾರ ಸಾವು

ಹುಬ್ಬಳ್ಳಿ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ  ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಕಾರವಾರ ರಸ್ತೆಯ ಸೇತುವೆ ಬಳಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಪುಂಡಲೀಕ ಎಂಬ ಯುವಕ ಈ ರಸ್ತೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಅಪರಿಚಿತ ವಾಹನವೊಂದು ಡಿಕ್ಕಿಯಾಗಿದೆ. ಪರಿಣಾಮ, ಬೈಕ್ ಸಮೇತ ಸವಾರ ರಸ್ತೆ ಪಕ್ಕಕ್ಕೆ ಹಾರಿ...

‘ಭಾರತ್ ಬಂದ್ ಯಶಸ್ವಿಯಾಗಲ್ಲ’- ಗೃಹಸಚಿವ ಆರಗ ಜ್ಞಾನೇಂದ್ರ

ಹುಬ್ಬಳ್ಳಿ: ಯಾವುದೇ ಕಾರಣಕ್ಕೂ ಭಾರತ್ ಬಂದ್ ಯಶಸ್ವಿಯಾಗಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಯಾವುದೇ ರೈತ ವಿರೋಧಿ ಕಾಯಿದೆಯನ್ನು ಜಾರಿಗೆ ತಂದಿಲ್ಲ ಅಂತ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಹುಬ್ಬಳ್ಳಿ ನಗರದಲ್ಲಿ ಮಾತನಾಡಿದ ಗೃಹಸಚಿವ ಆರಗ ಜ್ಞಾನೇಂದ್ರ, ಕೇಂದ್ರದಲ್ಲಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ನೇತೃತ್ವದಲ್ಲಿ ಯಾವುದೇ ರೈತ ವಿರೋಧಿ ಕಾಯಿದೆಯನ್ನು ಜಾರಿಗೆ...

‘ಸೋನಿಯಾ ಅಥವಾ ಶರದ್ ಪವಾರ್ ಪ್ರಧಾನಿಯಾಗಿದ್ರೆ ಕಾಂಗ್ರೆಸ್ ಗೆ ಈ ದುರ್ಗತಿ ಬರುತ್ತಿರಲಿಲ್ಲ’

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದಾಗ ಸೋನಿಯಾ ಗಾಂಧಿ ಅಥವಾ ಶರದ್ ಪವಾರ್ ಪ್ರಧಾನ ಮಂತ್ರಿಯಾಗಬಹುದಿತ್ತು  ಅಂತ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ. ಮಧ್ಯಪ್ರದೇಶದ ಇಂಡೋರ್ ನಲ್ಲಿ ಮಾತನಾಡಿದ ಸಚಿವ ಅಠಾವಳೆ,  ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅಮೆರಿಕದ ಉಪಾಧ್ಯಕ್ಷರಾಗುತ್ತಾರೆ ಎಂದಾದ್ರೆ, 2004ರಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಚುನಾವಣೆಯ ನಂತರ ಭಾರತದ...

‘ಬಂದ್ ಮಾಡಿ ಜನರಿಗೆ ತೊಂದ್ರೆ ಕೊಡಬೇಡಿ’- ಸಿಎಂ ಬೊಮ್ಮಾಯಿ ಮನವಿ

ಹುಬ್ಬಳ್ಳಿ: ದೇಶಾದ್ಯಂತ ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ಮಧ್ಯೆ  ಭಾರತ ಬಂದ್ ಮಾಡಿ ಜನರಿಗೆ ತೊಂದರೆ ನೀಡುವ ಕೆಲಸ ಮಾಡಬಾರದು ಅಂತ ಸಿಎಂ ಬಸವರಾಜ ಬೊಮ್ಮಾಯಿ ಜನರಲ್ಲಿ ಮನವಿ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಜನರು ಈಗಷ್ಟೆ ಕೊರೋನಾ ಹೊಡೆತದಿಂದ ಚೇತರಿಸಿಕೊಳ್ಳುತ್ತಿದ್ದಾರೆ....

ರಾಯಚೂರಲ್ಲಿ ಕೇಂದ್ರದ ವಿರುದ್ಧ ರೈತರ ಕೂಗು…!

ರಾಯಚೂರು: ಕೇಂದ್ರ ಸರ್ಕಾರ ಮಂಡಿಸಿರುವ ಕೃಷಿ ಕಾಯ್ದೆ ವಿರೋಧಿಸಿ ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಇಂದು ಮುಂಜಾನೆಯಿಂದ ರೈತ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿವೆ. ಸಂಯುಕ್ತ ಹೋರಾಟ ಸಮಿತಿಯ ಸದಸ್ಯರು ಇಂದು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗೆ ಆಕ್ರೋಶ ವ್ಯಕ್ತಪಡಿಸಿವೆ.  ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಹೋರಾಟಗಾರರು ಕೇಂದ್ರ ಸರ್ಕಾರದ...

ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಗೆಲುವು..!

ಐಪಿಎಲ್ ನ ಇಂದಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 8 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. 135 ರನ್ ಗಳ ಸಾಧಾರಣ ಗುರಿಯ ಬೆನ್ನು ಹತ್ತಿದ ಡೆಲ್ಲಿ ಕ್ಯಾಪಿಟಲ್ಸ್, 17.5 ಓವರ್ ಗಳಲ್ಲಿ ಕೇವ 2 ವಿಕೆಟ್ ಕಳೆದುಕೊಂಡು 139 ರನ್ ಗಳಿಸಿ  ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಮೊದಲು...

ಮುಂದಿನ ವಾರ ‘ಪೆಗಾಸಸ್’ ಕುರಿತ ಮಧ್ಯಂತರ ಆದೇಶ

ಪೆಗಾಸಸ್​ ಗೂಢಚರ್ಯೆ ಪ್ರಕರಣವನ್ನು ಸ್ವತಂತ್ರ ತನಿಖೆಗೆ ವಹಿಸುವಂತೆ ಆಗ್ರಹಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಮುಂದಿನವಾರ ಮಧ್ಯಂತರ ಆದೇಶ ಮುಂದಿನ ವಾರ ಪ್ರಕಟವಾಗಲಿದೆ. ಈ ಅರ್ಜಿ ವಿಚಾರಣೆ ನಡೆಸಿರೋ ಸುಪ್ರೀಂ ಕೋರ್ಟ್, ಕೆಲವು ತಜ್ಞ ಸದಸ್ಯರನ್ನು ಸಮಿತಿಗೆ ಪರಿಗಣಿಸುವ ಕುರಿತು ಚಿಂತನೆ ನಡೆಸುತ್ತಿದ್ದು, ವೈಯಕ್ತಿಕ ಕಾರಣಗಳಿಂದಾಗಿ ಕೆಲವರು ಸಮಿತಿಯ ಭಾಗವಾಗಲು ನಿರಾಕರಿಸಿದ್ದಾರೆ ಹೀಗಾಗಿ ಆದೇಶ ಹೊರಬೀಳಲು ವಿಳಂಬವಾಗುತ್ತಿದೆ....
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img