‘ನಂದಿನಿ’ ಹೆಸರಿನ ಬಳಕೆಗೆ ಸಂಬಂಧಿಸಿದ ಕಾನೂನು ಕದನದಲ್ಲಿ ಕರ್ನಾಟಕ ಹಾಲು ಮಹಾಮಂಡಳಿಗೆ ಮಹತ್ವದ ಜಯ ಲಭಿಸಿದೆ. ನಂದಿನಿ ಬ್ರಾಂಡ್ ಸಂಪೂರ್ಣವಾಗಿ ಕೆಎಂಎಫ್ಗೆ ಸೇರಿದ್ದು, ಇತರ ಯಾವುದೇ ಸಂಸ್ಥೆಗಳು ಈ ಹೆಸರನ್ನು ಬಳಸುವಂತಿಲ್ಲ ಎಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ.
ನಂದಿನಿ ಎಂಬ ಹೆಸರನ್ನು ಅಗರಬತ್ತಿ ಮತ್ತು ಧೂಪ ಉತ್ಪನ್ನಗಳಿಗೆ ಟ್ರೇಡ್ಮಾರ್ಕ್ ಆಗಿ ಬಳಸಲು ಮುಂದಾಗಿದ್ದ ಶಾಲಿಮಾರ್...
ಕರ್ನಾಟಕ ಹಾಲು ಮಹಾ ಮಂಡಳಿ ಅಂದ್ರೆ KMF ಅಧ್ಯಕ್ಷರ ಚುನಾವಣೆಯ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿದ್ದು, ಶೀಘ್ರದಲ್ಲೇ ಚುನಾವಣೆ ನಡೆಯುವ ಸಾಧ್ಯತೆ ಇದೆ. ಈಗಾಗಲೇ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಗಳಿಗೆ ಡೆಲಿಗೇಷನ್ ಫಾರಂಗಳನ್ನು ಹಂಚಲಾಗಿದ್ದು, ಈ ಫಾರಂ ಪಡೆದ ಪ್ರತಿನಿಧಿಗಳು ಮಾತ್ರ ಮತ ಚಲಾಯಿಸಲು ಅವಕಾಶವಿದೆ ಎಂದು ಮೂಲಗಳು ತಿಳಿಸಿವೆ.
ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಒಕ್ಕೂಟವನ್ನು...
ಕರ್ನಾಟಕದ ಪ್ರಸಿದ್ಧ ನಂದಿನಿ ಬ್ರ್ಯಾಂಡ್ ತುಪ್ಪ ಈಗ ಅಂತರಾಷ್ಟ್ರೀಯ ಮಾರುಕಟ್ಟೆಗೂ ಕಾಲಿಟ್ಟಿದೆ. ಅಮೆರಿಕಾ, ಆಸ್ಟ್ರೇಲಿಯಾ ಮತ್ತು ಸೌದಿ ಅರೇಬಿಯಾ ದೇಶಗಳಿಗೆ ನಂದಿನಿ ತುಪ್ಪ ರಫ್ತು ಮಾಡುವ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಕಾವೇರಿ ನಿವಾಸದಲ್ಲಿ ಚಾಲನೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ನಂದಿನಿ ಉತ್ಪನ್ನಗಳಿಗೆ ದೇಶ–ವಿದೇಶಗಳಲ್ಲಿ ಭಾರೀ ಬೇಡಿಕೆ ಇದೆ. ನಂದಿನಿ ತುಪ್ಪದ ಗುಣಮಟ್ಟಕ್ಕೆ...
ಕೆಎಂಎಫ್ ನಂದಿನಿ ತುಪ್ಪದ ಬೆಲೆ ದಿಢೀರ್ ಏರಿಕೆಯಾಗಿದ್ದು, 1 ಕೆ.ಜಿ.ಗೆ 90 ರೂಪಾಯಿ ಹೆಚ್ಚಿಸಲಾಗಿದೆ. ಈ ಬಗ್ಗೆ ಮಾತನಾಡಿದ ಬಮೂಲ್ ಅಧ್ಯಕ್ಷ ಡಿ.ಕೆ ಸುರೇಶ್ ಅವರು ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ದೇಶದಾದ್ಯಂತ ಬೆಣ್ಣೆ ಕೊರತೆ ಇದೆ. ಆದ್ದರಿಂದ ತುಪ್ಪ ಮತ್ತು ಬೆಣ್ಣೆಗೆ ಬೇಡಿಕೆ ಹೆಚ್ಚಾಗಿದೆ. ರಾಜ್ಯದಲ್ಲಿ ಬೆಣ್ಣೆ ಮತ್ತು ತುಪ್ಪಕ್ಕೆ ಕಡಿಮೆ ಬೆಲೆ ಇತ್ತು....
ದಿನೋಪಯೋಗಿ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನತೆ ಈಗಾಗಲೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇತ್ತೀಚಿಗೆ ಹಾಲು ಮತ್ತು ಮೊಸರಿನ ಬೆಲೆ ಹೆಚ್ಚಳದಿಂದ ಗ್ರಾಹಕರು ಬೆಚ್ಚಿಬಿದ್ದಿದ್ದರು. ಈಗ ಮತ್ತೊಂದು ಶಾಕಿಂಗ್ ಸುದ್ದಿ ಹೊರಬಿದ್ದಿದ್ದು ನಂದಿನಿ ತುಪ್ಪದ ಬೆಲೆ ಕೂಡ ಏರಿಕೆಯಾಗಿದೆ.
ಕೆಎಂಎಫ್ ನಿಂದ ಬಿಡುಗಡೆಗೊಂಡ ಮಾಹಿತಿಯ ಪ್ರಕಾರ, ಇಂದಿನಿಂದಲೇ ಪರಿಷ್ಕೃತ ದರ ಜಾರಿಗೆ ಬಂದಿದೆ. ವಿಶ್ವ ಮಾರುಕಟ್ಟೆಯಲ್ಲಿ ತುಪ್ಪದ...
ಇತ್ತೀಚೆಗೆ ಅನೇಕ ವಸ್ತುಗಳ ಬೆಲೆ ಏರಿಕೆ ಜನ ಸಾಮಾನ್ಯರ ಆರ್ಥಿಕ ಪರಿಸ್ಥಿತಿಗೆ ಬಿಕ್ಕಟ್ಟಿನ ಪರಿಸ್ಥಿತಿ ಉಂಟಾಗಿತ್ತು. GST ದರ ಏರಿಕೆಯಿಂದ ತತ್ತರಿಸಿ ಹೋಗಿದ್ರು. ಆದ್ರೆ ಈಗ ‘ನಂದಿನಿ’ ಉತ್ಪನ್ನ ಬಳಕೆದಾರರಿಗೆ ಇದೀಗ ಗುಡ್ ನ್ಯೂಸ್ ಸಿಕ್ಕಿದೆ. ಹೌದು ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ GST ದರವನ್ನು ಶೇಕಡಾ 12 ರಿಂದ 5ಕ್ಕೆ ಇಳಿಸುವ...
ಕೆಎಂಎಫ್ ಚುನಾವಣೆ, ವಿಧಾನಸಭಾ, ಲೋಕಸಭಾ ಚುನಾವಣೆಗಳಿಗೂ ಕಮ್ಮಿ ಇಲ್ಲ. ಘಟಾನುಘಟಿ ನಾಯಕರ ಪ್ರತಿಷ್ಠೆ ಕಣವಾಗಿ ಮಾರ್ಪಟ್ಟಿದೆ. ಅಧ್ಯಕ್ಷ ಹುದ್ದೆಗೆ ನಾಲ್ವರು ಕಾಂಗ್ರೆಸ್ ನಾಯಕರ ನಡುವೆ ಭಾರೀ ಪೈಪೋಟಿ ನಡೆಯುತ್ತಿದೆ. ಹೀಗಾಗಿ ಈ ವಿಚಾರ ಹೈಕಮಾಂಡ್ ಅಂಗಳ ತಲುಪಿದೆ.
23 ಲಕ್ಷ ಸದಸ್ಯತ್ವವನ್ನು ಹೊಂದಿರುವ ಕೆಎಂಎಫ್, 4 ಒಕ್ಕೂಟದಿಂದ ಆರಂಭವಾಗಿ 16 ಒಕ್ಕೂಟಗಳವರೆಗೆ ಬೆಳೆದು ನಿಂತಿದೆ. ಗುಜರಾತ್...
ಹೊಸ ವರ್ಷಕ್ಕೆ ಕರ್ನಾಟಕದಲ್ಲಿ ಹಾಲಿನ ದರ ಏರಿಕೆಯ ಪ್ರಸ್ತಾವನೆ ಸರ್ಕಾರದ ಮುಂದಿದೆ. ಇತ್ತ ರೈತರಿಗೆ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡದ ಸರ್ಕಾರ, ನೂರಾರು ಕೋಟಿ ರೂಪಾಯಿ ಹಣ ನೀಡದೇ ಬಾಕಿ ಉಳಿಸಿಕೊಂಡಿದೆ. ರಾಜ್ಯ ಸರ್ಕಾರ ಹಾಲು ಉತ್ಪಾದಕರಿಗೆ ನೀಡಬೇಕಾಗಿರೋ ಹಾಲಿನ ಪ್ರೋತ್ಸಾಹ ಧನದ ಬಾಕಿ ಹಣ ಸುಮಾರು 622.54 ಕೋಟಿಗೆ ಏರಿದೆ. ಕಳೆದ...
ಮುಂದಿನ ವರ್ಷವು ಹಾಲಿನ ದರದ ಏರಿಕೆಯ ಬಗ್ಗೆ ಪ್ರಸ್ತಾವನೆ ಬಂದಿದ್ದು, ಸಂಕ್ರಾಂತಿ ಹಬ್ಬದ ಬಳಿಕ ಹಾಲಿನ ದರದ ಪರಿಷ್ಕರಣೆ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ.ಸುದ್ದಿಗೋಷ್ಠಿ ನಡೆಸಿದ ಅವರು, ಬುಧವಾರ ನಡೆದ ಹಾಲಿನ ಒಕ್ಕೂಟದ ಸಭೆಯಲ್ಲಿ 5 ರೂ. ದರ ಏರಿಕೆಗೆ ಪ್ರಸ್ತಾವನೆ ಬಂದಿದೆ. ಈ ಬಗ್ಗೆ ನಾವು ಪರಿಶೀಲಿಸುತ್ತೇವೆ. ಇನ್ನೂ...
ಆರ್ಸಿಬಿ ಗತ್ತು ಊರಿಗೆಲ್ಲಾ ಗೊತ್ತು ಅಂತಾ ಆರ್ಸಿಬಿ ಅಭಿಮಾನಿಗಳು ಹೇಳ್ತಾನೆ ಇರ್ತಾರೆ.ಐಪಿಎಲ್ನಲ್ಲಿ ಎಲ್ಲ ಟೀಮ್ಗಳ ಹೆಸರು ಒಂದು ಕಡೆಯಾದರೆ, ಆರ್ಸಿಬಿಯ ಹೆಸರಿಗೆ ಇರುವ ಕ್ರೇಜ್ ಬೇರೆಯದ್ದೆ ಇದೆ. ವಿದೇಶದಲ್ಲೂ ಆರ್ಸಿಬಿ ಅಭಿಮಾನಿಗಳು ಇರುವುದು ಸಾಮಾನ್ಯವಾಗಿದೆ. ಐಪಿಎಲ್ ಬಂದರೆ ಆರ್ಸಿಬಿಯ ಪ್ರತಿ ಸುದ್ದಿಯು ಕೂಡ ಅಭಿಮಾನಿಗಳಿಗೆ ಮುಖ್ಯವಾಗಿರುತ್ತದೆ. ಟೂರ್ನಿಯಲ್ಲಿ ಹವಾ ಕ್ರಿಯೇಟ್ ಮಾಡುವ ಆರ್ಸಿಬಿಗೆ ಕೆಎಂಎಫ್...