Thursday, August 6, 2026

Mallikarjun Kharge

ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ನೇಣಿಗೆ ಶರಣು: ವಾರ್ಡನ್, ಕಾಲೇಜು ಆಡಳಿತ ಮಂಡಳಿಯ ಕಿರುಕುಳದಿಂದ ಮಗನ ಸಾವೆಂದು ಆರೋಪ

Hassan News: ಹಾಸನ: ನೇಣು ಬಿಗಿದುಕೊಂಡು ದ್ವಿತಿಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ನಗರದ ಉದಯಗಿರಿಯಲ್ಲಿರುವ ಮಾಸ್ಟರ್ ಪಿಯು ಕಾಲೇಜಿನ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದ್ದು, ಚನ್ನರಾಯಪಟ್ಟಣ ತಾಲೂಕು, ಬೆಳಗುಲಿ ಗ್ರಾಮದ ಸುರೇಶ್, ಮಮತಾ ದಂಪತಿ ಏಕೈಕ ಪುತ್ರ ವಿಕಾಸ್(18) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಕುರಿತು ಕಾಲೇಜಿನ...

ಚಾಲಕನ ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ, ಚಾಲಕ ಸ್ಥಳದಲ್ಲೇ ಸಾವು

Hassan News: ಹಾಸನ: ಚಾಲಕನ ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾದ ಘಟನೆ ಹಾಸನದಲ್ಲಿ ನಡೆದಿದೆ. ಸ್ಥಳದಲ್ಲೇ ಟ್ರ್ಯಾಕ್ಟರ್ ಚಾಲಕ ಬಿ.ಪಿ.ಓಂಕಾರ್(55) ಮೃತಪಟ್ಟಿದ್ದಾನೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳೆಬೀಡು ಕೆರೆ ಏರಿ ಮೇಲೆ ಘಟನೆ ನಡೆದಿದ್ದು, ಸುಮಾರು ಐವತ್ತು ಅಡಿ ಆಳಕ್ಕೆ ಟ್ರ್ಯಾಕ್ಟರ್ ಉರುಳಿ ಬಿದ್ದಿದೆ. ಟ್ರ್ಯಾಕ್ಟರ್‌ ಅಡಿ ಸಿಲುಕಿ, ಓಂಕಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ....

ಸಮಾಜವಾದಿ ಪಾರ್ಟಿ ಷರತ್ತಿಗೆ ಒಪ್ಪಿಗೆ ಸೂಚಿಸಿದ ಕಾಂಗ್ರೆಸ್, ಉತ್ತರಪ್ರದೇಶದಲ್ಲಿ 17 ಕ್ಷೇತ್ರದಲ್ಲಿ ಸ್ಪರ್ಧೆ

Political News: ನೀವು ನಮ್ಮ ಷರತ್ತುಗಳಿಗೆ ಒಪ್ಪಿದರಷ್ಟೇ, ನಾವು ಇಂಡಿಯಾ ಒಕ್ಕೂಟದೊಂದಿಗೆ ಮೈತ್ರಿ ಮಾಡಿಕೊಳ್ಳುತ್ತೇವೆ. ಇಲ್ಲದಿದ್ದಲ್ಲಿ ಉತ್ತರಪ್ರದೇಶದಲ್ಲಿ ನಾವು ಏಕಾಂಗಿಯಾಗಿ ಸ್ಪರ್ಧಿಸುತ್ತೇವೆ ಎಂದು ಸಮಾಜವಾದಿ ಪಾರ್ಟಿಯ ಅಖಿಲೇಶ್ ಯಾದವ್ ಕಾಂಗ್ರೆಸ್‌ಗೆ ಷರತ್ತು ಹಾಕಿದ್ದರು. ಇದೀಗ ಉತ್ತರಪ್ರದೇಶದಂಥ ದೊಡ್ಡ ರಾಜ್ಯದಲ್ಲಿ ಮೈತ್ರಿ ಮುರಿದುಕೊಂಡರೆ, ಚುನಾವಣೆಯಲ್ಲಿ ಗೆಲುವು ಕಷ್ಟವೆಂದು ಕಾಂಗ್ರೆಸ್ ಅಖಿಲೇಶ್ ಹಾಕಿದ್ದ ಷರತ್ತಿಗೆ ಒಪ್ಪಿಗೆ ನೀಡಿದೆ. ಉತ್ತರಪ್ರದೇಶದಲ್ಲಿರುವ...

ರಾಜ್ಯದಲ್ಲಿ ಹುಕ್ಕಾಬಾರ್ ನಿಷೇಧ, ಸಿಗರೇಟ್‌ ನಿಷೇಧ ವಯೋಮಿತಿ ಹೆಚ್ಚಳ: ಸಚಿವ ಗುಂಡೂರಾವ್

Political News: ವಿಧಾನಸಭೆಯಲ್ಲಿಂದು, ಹುಕ್ಕಾಬಾರ್ ನಿಷೇಧ ಮತ್ತು ಸಿಗರೇಟ್ ನಿಷೇಧ ವಯೋಮಿತಿ ಹೆಚ್ಚಳ ಮಾಡುವ ತಿದ್ದುಪಡಿ ವಿಧೇಯಕ ಅಂಗೀಕರಿಸಲಾಯಿತು. ರಾಜ್ಯದಲ್ಲಿ ಹುಕ್ಕಾಬಾರ್ ನಿಷೇಧಿಸಲಾಗಿದ್ದು, ಅನಧಿಕೃತವಾಗಿ ಹುಕ್ಕಾಬಾರ್ ನಡೆಸಿದರೆ, 1 ಲಕ್ಷದವರೆಗೂ ದಂಡ ವಿಧಿಸಲಾಗುವುದು ಎಂದು ಗುಂಡೂರಾವ್ ತಿಳಿಸಿದ್ದಾರೆ. ಅಲ್ಲದೇ 21 ವರ್ಷ ದಾಟಿದವರಿಗೆ ಮಾತ್ರ ಸಿಗರೇಟ್ ಮಾರಾಟ ಮಾಡಬಹುದು. ಅದಕ್ಕಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ಮಾರಾಟ...

ಹಿಗ್ಗುತ್ತಿದೆ ಕೇಂದ್ರ ಬಜೆಟ್ ಗಾತ್ರ, ಕುಗ್ಗುತ್ತಿದೆ ರಾಜ್ಯದ ಪಾಲು: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ಕೇಂದ್ರ ಬಜೆಟ್ ಬಗ್ಗೆ ಟ್ವೀಟ್ ಮಾಡಿದ್ದು, ಕೇಂದ್ರ ಬಜೆಟ್‌ನ ಗಾತ್ರ ದೊಡ್ಡದಾಗಿದೆ, ರಾಜ್ಯಕ್ಕೆ ಸಿಗಬೇಕಾದ ಅಮಿದಾನದ ಗಾತ್ರ ಚಿಕ್ಕದಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. 2014ರ ಕೇಂದ್ರ ಬಜೆಟ್‌ಗೆ ಹೋಲಿಸಿದರೆ 2024ನೇ ಸಾಲಿನ ಬಜೆಟ್ ಗಾತ್ರ ಮತ್ತು ಕರ್ನಾಟಕದಿಂದ ಸಂಗ್ರಹವಾಗುವ ತೆರಿಗೆ ಎರಡು ಪಟ್ಟು ಹೆಚ್ಚಾಗಿದೆ. ಆದರೆ ರಾಜ್ಯದ ಪಾಲಿನ ಅನುದಾನ...

ನಾಡಗೀತೆ ಬಗ್ಗೆ ರಾಜ್ಯ ಸರ್ಕಾರದ ನಡೆ ಖಂಡಿಸಿ, ಎಬಿವಿಪಿ ಕಾರ್ಯಕರ್ತರಿಂದ ಪ್ರೊಟೆಸ್ಟ್‌

Hubli News: ಹುಬ್ಬಳ್ಳಿ: ಖಾಸಗಿ ಶಾಲೆಯಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂಬ ರಾಜ್ಯ ಸರ್ಕಾರದ ಆದೇಶವನ್ನು ಖಂಡಿಸಿ, ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಎಬಿವಿಪಿ ಕಾರ್ಯಕರ್ತರು ಬಿವಿಬಿ ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದು, ರಸ್ತೆ ಮಧ್ಯೆ ಬರಲು ಪ್ರಯತ್ನಿದ್ದಾರೆ. ಈ ವೇಳೆ ವಿದ್ಯಾರ್ಥಿಗಳನ್ನು ಪೊಲೀಸರು ತಡೆದಿದ್ದು, ಎಬಿವಿಪಿ ಮುಖಂಡ ಪೃಥ್ವಿ ರೆಡ್ಡಿ ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ. ವಿದ್ಯಾನಗರ ಪೊಲೀಸ್...

ಭಾರತ್ ಜೋಡೋ ನ್ಯಾಯ ಯಾತ್ರೆಗೆ 5 ದಿನ ಬ್ರೇಕ್ ಕೊಡಲಿದೆ ಕಾಂಗ್ರೆಸ್

National Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆಗೆ 5 ದಿನ ವಿರಾಮ ನೀಡಲಾಗಿದೆ. ರಾಹುಲ್ ಗಾಂಧಿಗೆ ಈ 5 ದಿನಗಳ ಕಾಲ ಕೆಲ ಸಭೆಯಲ್ಲಿ ಭಾಗವಹಿಸುವ ಕಾರಣಕ್ಕಾಗಿ ನ್ಯಾಯ ಯಾತ್ರೆಗೆ ಬ್ರೇಕ್ ನೀಡಲಾಗಿದೆ. ಫೆಬ್ರವರಿ 26ರಂದು ರಾಹುಲ್ ಗಾಂಧಿ ದೆಹಲಿಯಲ್ಲಿ ನಡೆಯುವ ಚುನಾವಣಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಫೆಬ್ರವರಿ...

ಅಂಗಡಿ, ಮಾಲ್ ಸೇರಿ ಎಲ್ಲಾ ಕಡೆ 60% ಕನ್ನಡ ಬಳಕೆ ಕಡ್ಡಾಯ ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನೆ

Kolar News: ಕೋಲಾರ: ಕರ್ನಾಟಕದಲ್ಲಿ ಕನ್ನಡ ಭಾಷೆ ಕಡ್ಡಾಯ, ಕೋಲಾರ ಜಿಲ್ಲೆ ಹಾಗೂ ರಾಜ್ಯದಾದ್ಯಂತ ಅಂಗಡಿ , ಮಾಲ್ ಸೇರಿದಂತೆ ಎಲ್ಲಾ ಕಡೆ 60% ಕನ್ನಡ ಬಳಕೆ ಕಡ್ಡಾಯ ಮಾಡಬೇಕು ಎಂದು ಆಗ್ರಹಿಸಿ, ಕರವೇ ಜಿಲ್ಲಾದ್ಯಕ್ಷ ಮೇಡಿಹಾಳ ರಾಘವೇಂದ್ರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡು ಜಿಲ್ಲಾಧಿಕಾರಿ ಹಾಗೂ ಕೋಲಾರ ತಹಸಿಲ್ದಾರ್ ರವರಿಗೆ ಮನವಿ ನೀಡಲಾಯಿತು . ಕರ್ನಾಟಕದಲ್ಲಿ...

ಸುಪ್ರೀಂಕೋರ್ಟ್ ಹಿರಿಯ ವಕೀಲ ಫಾಲಿ ನಾರಿಮನ್ ನಿಧನಕ್ಕೆ ಸಿಎಂ ಸಂತಾಪ

National News: ಸುಪ್ರೀಂಕೋರ್ಟ್ ಹಿರಿಯ ವಕೀಲ ಪಾಲಿ ನಾರಿಮನ್ ಇಂದು ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಾಪ ಸೂಚಿಸಿದ್ದಾರೆ. 95 ವರ್ಷದ ಫಾಲಿ ನಾರಿಮನ್, ದೆಹಲಿಯಲ್ಲಿ ಇಂದು ನಿಧನರಾಗಿದ್ದಾರೆ. 1971ರಿಂದ ಸುಪ್ರೀಂಕೋರ್ಟ್ ವಕೀಲರಾಗಿ ಸೇವೆ ಸಲ್ಲಿಸಲು ಪ್ರಾರಂಭಿಸಿದ ಫಾಲಿ ನಾರಿಮನ್‌ಗೆ, 1991ರಲ್ಲಿ ಕೇಂದ್ರ ಸರ್ಕಾರ ಪದ್ಮಭೂಷಣ, 2007ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು. ಇನ್ನು ಫಾಲಿ ನಾರಿಮನ್‌ ಕಾವೇರಿ...

ರಾಜ್ಯದಲ್ಲಿ ಭೀಕರ ಬರಗಾಲ ಹಿನ್ನೆಲೆ, ಚಕ್ಕಡಿ ಹೊತ್ತು ಉಳವಿಗೆ ಪಾದಯಾತ್ರೆ ಹೊರಟ ಯುವಕರು

Dharwad News: ಧಾರವಾಡ: ರಾಜ್ಯದಲ್ಲಿ ಭೀಕರ ಬರಗಾಲ ಹಿನ್ನೆಲೆ, ಧಾರವಾಡ ಯುವಕರು ಚಕ್ಕಡಿ ಹೊತ್ತು ಉಳವಿಗೆ ಪಾದಯಾತ್ರೆ ಕೈಗೊಂಡಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲ ಹಿನ್ನೆಲೆ ಧಾರವಾಡ ತಾಲೂಕು ಹೆಬ್ಬಳ್ಳಿಯಿಂದ ಈರಣ್ಣ ಕರಿಕಟ್ಟಿ ಎಂಬ ಯುವಕ ಉತ್ತಮ ಮಳೆ, ಬೆಳೆಗಾಗಿ ಪ್ರಾರ್ಥಿಸಿ, ಶ್ರೀಕ್ಷೇತ್ರ ಉಳವಿಗೆ ಪಾದ ಬೆಳೆಸಿದ್ದಾನೆ. ಫೆಬ್ರವರಿ 24ರಂದು ಉಳವಿ ಶ್ರೀ ಚೆನ್ನಬಸವೇಶ್ವರ ಜಾತ್ರೆ ಇದ್ದು,...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img