ಧಾರವಾಡ ತಾಲೂಕಿನ ಮನಸೂರು ಗ್ರಾಮದಲ್ಲಿ ನಿರ್ಮಾಣ ಕಾರ್ಯಕ್ಕಾಗಿ ತೋಡಲಾಗಿದ್ದ ನೀರಿನ ಗುಂಡಿಯಲ್ಲಿ ಬಿದ್ದು ಇಬ್ಬರು 7 ವರ್ಷದ ಬಾಲಕರು ಸಾವನ್ನಪ್ಪಿದ ದುರಂತ ಘಟನೆ ಬುಧವಾರ ತಡರಾತ್ರಿ ನಡೆದಿದೆ. ಮೃತರನ್ನು ಕುಮಾರ್ ನಿಂಗಪ್ಪ ಮುದಕಣ್ಣವರ (7) ಹಾಗೂ ಪ್ರಥಮ್ ಉಳ್ಳಾಗಡ್ಡಿ (7) ಎಂದು ಗುರುತಿಸಲಾಗಿದೆ. ಪ್ರಥಮ್ ಧಾರವಾಡದ ಸತ್ತೂರು ನಿವಾಸಿಯಾಗಿದ್ದು, ರಜೆಗೆಂದು ಮಾವನ ಮನೆಗೆ ಬಂದಿದ್ದಾನೆ...