ಪ್ರತಿಷ್ಠಿತ ಹುಕ್ಕೇರಿ ಸಹಕಾರ ಸಂಘದ ಚುನಾವಣಾ ಕಣ ರಣರಂಗವಾಗಿದೆ. ಬಿಜೆಪಿಯ ಮಾಜಿ ಸಂಸದ ರಮೇಶ್ ಕತ್ತಿ ಬಣ ಚುನಾವಣೆಯಲ್ಲಿ ಕ್ಲೀನ್ ಸ್ವೀಪ್ ಮಾಡಿದೆ. ಸಚಿವ ಸತೀಶ್ ಜಾರಕಿಹೊಳಿ ಬಣ ಸೋಲಿಸಿ, ಎಲ್ಲಾ 15 ಸ್ಥಾನಗಳನ್ನು ಗೆದ್ದುಕೊಳ್ಳುವಲ್ಲಿ ಸಕ್ಸಸ್ ಆಗಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಬಾಪೂಜಿ ಕಾಲೇಜಿನಲ್ಲಿ ಮತ ಎಣಿಕೆ ನಡೆಸಲಾಯ್ತು.
ಗೆಲುವಿನ ಸಂಭ್ರಮಾಚರಣೆಯಲ್ಲಿದ್ದ ರಮೇಶ್ ಕತ್ತಿ...
ಹುಬ್ಬಳ್ಳಿ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯಲ್ಲಿ, ಖಾಲಿ ಕುರ್ಚಿಗಳ ದರ್ಬಾರ್ ಹೆಚ್ಚಾಗಿದೆ. ಬೆಳಗ್ಗೆ ಇರಲಿ... ಮಧ್ಯಾಹ್ನವೇ ಆಗ್ಲಿ.. ಕಚೇರಿ ಅವಧಿ ಮುಗಿಯುವ ಸಮಯಕ್ಕೆ ಹೋದರೂ, ಅಧಿಕಾರಿಗಳು ಇರೋದೇ ಇಲ್ಲ. ಮುಖ್ಯ ಕಾರ್ಯ ನಿರ್ವಾಹಕ ಇಂಜಿನಿಯರ್ ಚೇಂಬರ್, ಆಡಳಿತ ಶಾಖೆ, ಇಂಜಿನಿಯರ್ ವಿಭಾಗ, ಮೀಟಿಂಗ್ ಹಾಲ್ ಎಲ್ಲಾ ವಿಭಾಗದಲ್ಲೂ, ಖಾಲಿ ಕುರ್ಚಿಗಳ ದರ್ಶನವಾಗುತ್ತಿದೆ.
ಈ...
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ, ಜಾರಕಿಹೊಳಿ ಕುಟುಂಬದ ಪಾಲಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಉಮೇಶ್ ಕತ್ತಿ ಬದುಕಿರುವ ತನಕ ಹಿಡಿತ ಸಾಧ್ಯವಾಗಿರಲಿಲ್ಲ. ಆದ್ರೀಗ, ಬದಲಾದ ಪರಿಸ್ಥಿತಿಯ ಲಾಭ ಪಡೆಯೋಕೆ, ಜಾರಕಿಹೊಳಿ ಫ್ಯಾಮಿಲಿ ಹವಣಿಸುತ್ತಿದೆ. 3 ದಶಕಗಳ ಕಾಲ ಪಾರಮ್ಯ ಸಾಧಿಸಿದ್ದ ಕತ್ತಿ ಕುಟುಂಬವನ್ನು, ಡಿಸಿಸಿ ಬ್ಯಾಂಕಿನಿಂದಲೇ ದೂರು ಇಡಲು, ಸ್ಟ್ರ್ಯಾಟಜಿ ರೂಪಿಸುತ್ತಿದ್ದಾರೆ. ಆದ್ರೆ, ಜಾರಕಿಹೊಳಿ...
ಸಚಿವ ಸತೀಶ್ ಜಾರಕಿಹೊಳಿಯನ್ನು ಬೆಂಬಲಿಸಿದ್ದಕ್ಕೆ, ಗಂಡನ ಕೊರಳಪಟ್ಟಿ ಹಿಡಿದು ಪತ್ನಿಯೇ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ. ಸೆಪ್ಟೆಂಬರ್ 8ರಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದಲ್ಲಿ ಭಾರೀ ಹೈಡ್ರಾಮವೇ ನಡೆದಿತ್ತು. ಸೋಮವಾರ ಮಧ್ಯಾಹ್ನ ಮದಿಹಳ್ಳಿ ಗ್ರಾಮದಲ್ಲಿ, ಅಕ್ಷರಶಃ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ದೊಡ್ಡವರೇ ತೊಡೆ ತಟ್ಟಿ ಅಖಾಡಕ್ಕೆ ನಿಂತಿದ್ದು, ಇಡೀ ಜಿಲ್ಲೆಯ ಜನರನ್ನೇ...
ಬೆಳಗಾವಿ ಜಿಲ್ಲೆ ಸಹಕಾರಿ ಕ್ಷೇತ್ರದ ಮೇಲೆ ಹಿಡಿತ ಸಾಧಿಸಲು, ಪ್ರತಿಷ್ಠಿತ ಕುಟುಂಬಗಳ ಕಾಳಗ ಶುರುವಾಗಿದೆ. ಕತ್ತಿ ಮತ್ತು ಜಾರಕಿಹೊಳಿ ಕುಟುಂಬಗಳು ಜಿದ್ದಾಜಿದ್ದಿಗೆ ಬಿದ್ದಿವೆ. ಇನ್ನೆರಡು ತಿಂಗಳಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ನಡೆಯುತ್ತಿದೆ. ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ಹಾಗೂ ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಅಧಿಕಾರಕ್ಕಾಗಿ ನೇರ ಹಣಾಹಣಿ ಶುರುವಾಗ್ತಿದೆ.
ಬಿಜೆಪಿ ಹಿರಿಯ ನಾಯಕ ಉಮೇಶ್ ಕತ್ತಿ...
ವಿಧಾನಸಭೆಯಲ್ಲಿ RSS ಗೀತೆ ಹಾಡಿದ್ದಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಕೊನೆಗೂ ಕ್ಷಮೆಯಾಚಿಸಿದ್ದಾರೆ. ನನ್ನಿಂದ ಯಾರಿಗಾದರೂ ನೋವಾಗಿದ್ದರೆ, ತಪ್ಪು ಮಾಡಿದ್ದೇನೆಂದು ಭಾವಿಸಿದ್ರೆ ಕ್ಷಮೆ ಇರಲಿ ಅಂತಾ ಮನವಿ ಮಾಡಿದ್ದಾರೆ.
ಕಳೆದ ಆಗಸ್ಟ್ 22ರಂದು ವಿಧಾನಸಭಾ ಅಧಿವೇಶನದಲ್ಲಿ, ನಮಸ್ತೆ ಸದಾ ವತ್ಸಲೇ ಮಾತೃಭೂಮಿ ಎಂಬ ಗೀತೆಯನ್ನ ಡಿಕೆಶಿ ಹಾಡಿದ್ರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಕುರಿತು ಚರ್ಚೆ ನಡೆಯುತ್ತಿದ್ದಾಗ ಗದ್ದಲ...
ನಮಸ್ತೇ ಸದಾ ವತ್ಸಲೇ.. ವಿಧಾನಸಭೆಯಲ್ಲಿ RSS ಗೀತೆ ಹಾಡಿದ್ದ ಡಿಸಿಎಂ ಡಿಕೆಶಿ ವಿರುದ್ಧ, ಸ್ವಪಕ್ಷದವರೇ ಆದ ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ಟೀಕಿಸಿದ್ದಾರೆ. ಡಿ.ಕೆ ಶಿವಕುಮಾರ್ ಸಂಸ್ಕೃತ ಬಲ್ಲವರು. ಹೀಗಾಗಿ ಅಧಿವೇಶನದಲ್ಲಿ ಸಮಯಕ್ಕೆ ತಕ್ಕಂತೆ ಉತ್ತರಿಸುವ ಬದಲು, RSS ಗೀತೆ ಹಾಡಿದ್ದಾರೆ.
RSS ಗೀತೆ ಹಾಡಿದ್ರೆ ಮುಖ್ಯಮಂತ್ರಿ ಸ್ಥಾನ ಸಿಗುವುದಾದ್ರೆ, ನಾನು ಮತ್ತು ಶಾಸಕ ಚನ್ನಾರೆಡ್ಡಿ ಪಾಟೀಲ್...
ಕೆ.ಎನ್. ರಾಜಣ್ಣರನ್ನ ಸಚಿವ ಸಂಪುಟದಿಂದ ವಜಾಗೊಳಿಸಿದಕ್ಕೆ, ವಾಲ್ಮೀಕಿ ಸಮುದಾಯದ ನಾಯಕರು ರೊಚ್ಚಿಗೆದ್ದಿದ್ದಾರೆ. ಈ ಹಿಂದೆ ವಾಲ್ಮೀಕಿ ಹಗರಣದಲ್ಲಿ ನಾಗೇಂದ್ರ ಅವರ, ರಾಜೀನಾಮೆ ಪಡೆದುಕೊಳ್ಳಲಾಗಿತ್ತು. ಅವರೂ ಎಸ್ಟಿ ಸಮುದಾಯಕ್ಕೆ ಸೇರಿದವರು. ಈಗ ಮತ ಕಳ್ಳತನ ವಿಚಾರವಾಗಿ ಹೇಳಿಕೆ ನೀಡಿದ್ದಕ್ಕೆ, ರಾಜಣ್ಣ ಅವರನ್ನು ವಜಾ ಮಾಡಲಾಗಿದೆ. ರಾಜಣ್ಣ ಕೂಡ ವಾಲ್ಮೀಕಿ ಸಮುದಾಯಕ್ಕೆ ಸೇರಿದವರು. ಈ ನಿಟ್ಟಿನಲ್ಲಿ ಸಮುದಾಯದ...
ರಾಜಣ್ಣ ರಾಜೀನಾಮೆ ವಿಚಾರ, ರಾಜ್ಯ ಕಾಂಗ್ರೆಸ್ನಲ್ಲಿ ಬಿರುಗಾಳಿ ಎಬ್ಬಿಸಿದೆ. ವಾಲ್ಮೀಕಿ ಹಗರಣದಲ್ಲಿ 14 ತಿಂಗಳ ಹಿಂದೆ, ನಾಗೇಂದ್ರ ಕೂಡ ರಾಜೀನಾಮೆ ಕೊಟ್ಟಿದ್ರು. ಇದೀಗ ರಾಜಣ್ಣ ಕೂಡ ರಾಜೀನಾಮೆ ಕೊಟ್ಟಿದ್ದಾರೆ. ಈ ಇಬ್ಬರು ನಾಯಕರು ಪರಿಶಿಷ್ಟ ಪಂಗಡಕ್ಕೆ ಸೇರಿದವರು. ಒಂದೇ ಸಮುದಾಯದ ಇಬ್ಬರು ನಾಯಕರು ರಾಜೀನಾಮೆ ನೀಡಿದಂತಾಗಿದೆ. ಇಬ್ಬರೂ ಕೂಡ ಸಿಎಂ ಆಪ್ತ ವಲಯದಲ್ಲಿ ಗುರುತಿಸಿಕೊಂಡವರು....
ಬೆಳಗಾವಿ ಜಿಲ್ಲೆಯಲ್ಲಿ ಹೊಸ ಬಸ್ಗಳಿಗೆ ಬೇಡಿಕೆ ಇದೆ. ಇನ್ನು ಮುಂದೆ 300 ಹೊಸ ಬಸ್ ಗಳು, 100 ಎಲೆಕ್ಟಿಕಲ್ ಬಸ್ಗಳು ಬರಲಿದೆ. ಬೆಳಗಾವಿ ಜಿಲ್ಲೆಯಲ್ಲಿನ ಬಸ್ಗಳ ಕೊರತೆಯಿಂದಾಗಿ ಸಾರ್ವಜನಿಕರು ಪರದಾಡುತ್ತಿದ್ದಾರೆ. ಇನ್ನು ಮುಂದೆ ಆ ಸಮಸ್ಯೆ ಪರಿಹಾರವಾಗಲಿದೆ. ಶೀಘ್ರದಲ್ಲೇ 300 ಹೊಸ ಬಸ್ಗಳನ್ನು ಜಿಲ್ಲೆಗೆ ಒದಗಿಸಲಾಗುವುದು. ಇದರ ಪೈಕಿ 100 ಎಲೆಕ್ಟ್ರಿಕ್ ಬಸ್ಗಳು ಇರಲಿವೆ....
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...