ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಬುಧವಾರ ಪ್ರಕಟಿಸಿದ ಪಟ್ಟಿಯಲ್ಲಿ, ಕರ್ನಾಟಕ ಬೀಜಾಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ನಂದಿ ಆಂಜನಪ್ಪ ಅವರ ಹೆಸರಿತ್ತು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೊರಡಿಸಿದ ಅಂತಿಮ ಪಟ್ಟಿಯಿಂದ ಅವರ ಹೆಸರು ಕೈಬಿಡಲಾಗಿದೆ. ಈ ಬೆಳವಣಿಗೆ ಚಿಕ್ಕಬಳ್ಳಾಪುರ ಕಾಂಗ್ರೆಸ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಪಕ್ಷದೊಳಗಿನ ಬಣ ರಾಜಕೀಯವೇ ಇದಕ್ಕೆ ಕಾರಣವೇ...