ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಜೈಲಿನ ಕಠಿಣ ಜೀವನದಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಐಷಾರಾಮಿ ಜೀವನಕ್ಕೆ ಅಭ್ಯಾಸ ಹೊಂದಿದ್ದ ದರ್ಶನ್, ಜೈಲಿನಲ್ಲಿ ಸಿಗದ ಸೌಲಭ್ಯಗಳಿಂದ ತೊಂದರೆಯಾಗಿದೆ ಎಂದು ಕೋರ್ಟ್ನಲ್ಲಿ ಅಳಲು ತೋಡಿಕೊಂಡಿದ್ದಾರೆ. ಚಳಿ ತುಂಬಾ ಇದೆ, ನಾವು ಮಲಗಲೂ ಆಗುತ್ತಿಲ್ಲ ಎಂದು ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದಲ್ಲಿ ಮನವಿ...
ದರ್ಶನ್ ಅವರು ಜೈಲಿನಲ್ಲಿ ಹೇಗಿದ್ದಾರೆ ಎಂಬ ಕುತೂಹಲ ಅಭಿಮಾನಿಗಳಲ್ಲೂ, ಜನಸಾಮಾನ್ಯರಲ್ಲೂ ಹೆಚ್ಚಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಿಗಳು ನವೆಂಬರ್ 3ರಂದು ಬೆಂಗಳೂರಿನ 64ನೇ ಸಿಸಿಹೆಚ್ ಕೋರ್ಟ್ಗೆ ಹಾಜರಾಗಿದ್ದರು. ವಿಚಾರಣೆ ವೇಳೆ ಪವಿತ್ರಾ ಗೌಡ ತುಂಬಾ ಟೆನ್ಷನ್ನಲ್ಲಿದ್ದರೆಂದು ಮೂಲಗಳು ಹೇಳುತ್ತಿವೆ.
ವಿಚಾರಣೆ ಮುಗಿದ ಬಳಿಕ...
ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎರಡನೇ ಬಾರಿಗೆ ಜೈಲು ಸೇರಿ ಈಗಾಗಲೇ ಎರಡೂವರೆ ತಿಂಗಳು ಕಳೆದಿದೆ. ಆಗಸ್ಟ್ 14ರಂದು ಅವರು ಬಂಧಿತರಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿತ್ತು. ಈ ಅವಧಿಯಲ್ಲಿ ದರ್ಶನ್ ಅವರ ದೇಹದ ತೂಕ ಸುಮಾರು 13 ಕಿಲೋ ಇಳಿದಿದೆ ಎಂಬ ಮಾಹಿತಿ ವರದಿಯಾಗಿದೆ.
ಜೈಲಿನಲ್ಲಿರುವಾಗ ದರ್ಶನ್ ತಮ್ಮ ಬೇಡಿಕೆಗಳಿಗಾಗಿ ಕೋರ್ಟ್...
ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಕೆಲವು ಮೂಲಭೂತ ಸೌಲಭ್ಯಗಳಿಗಾಗಿ, ಹಾಸಿಗೆ, ದಿಂಬು, ಕನ್ನಡಿ, ಬಾಚಣಿಗೆ ಸೇರಿದಂತೆ ಬೇಡಿಕೆ ಇಟ್ಟಿದ್ದಾರೆ. ಈ ಕುರಿತು ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲದಿಂದ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.
ಇತ್ತೀಚೆಗೆ ಕಾನೂನು ಸೇವಾ ಪ್ರಾಧಿಕಾರದ ಸಮಿತಿ ಜೈಲಿಗೆ ಭೇಟಿ ನೀಡಿ, ದರ್ಶನ್ನ ಸ್ಥಿತಿ ಮತ್ತು ಜೈಲಿನ ಪರಿಸ್ಥಿತಿ...
ಚಿತ್ರದುರ್ಗದ ರೇಣುಕಾಸ್ವಾಮಿ ಸಾವಿನಿಂದ, ಕುಟುಂಬಸ್ಥರು ಕಂಗಾಲಾಗಿದ್ದಾರೆ. ಪತ್ನಿ ಸಹನಾಗೆ ಗಂಡು ಮಗುವಾಗಿದ್ದು, ಭವಿಷ್ಯದ ಚಿಂತೆ ಕಾಡ್ತಿದೆ. ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಕೆಲಸ ನೀಡುವಂತೆ, ಸರ್ಕಾರಕ್ಕೆ ಪದೇ ಪದೇ ಮನವಿ ಮಾಡ್ತಿದ್ರು. ಇದೀಗ ರೇಣುಕಾಸ್ವಾಮಿ ಪತ್ನಿಗೆ, ಸರ್ಕಾರಿ ಕೆಲಸ ಕೊಡಿಸುವ ಭರವಸೆಯನ್ನು, ಚಳ್ಳಕೆರೆ ಶಾಸಕ ರಘುಮೂರ್ತಿ ನೀಡಿದ್ದಾರೆ. ಮಠಗಳಲ್ಲಿ ಅಥವಾ ಸರ್ಕಾರಿ ಸಂಸ್ಥೆಗಳಲ್ಲಿ ಉದ್ಯೋಗ ಕೊಡಿಸಲು...
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ, ಪರಪ್ಪನ ಅಗ್ರಹಾರ ಸೇರಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ನರಕಯಾತನೆ ಅನುಭವಿಸುತ್ತಿದ್ದಾರೆ. ಡೆವಿಲ್ ಮಾನಸಿಕವಾಗಿ ಕುಸಿದು ಹೋಗಿದ್ದು, ಜಡ್ಜ್ ಎದುರು ವಿಷಕ್ಕಾಗಿ ಅಂಗಲಾಚಿದ್ದಾರೆ.
ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರ ಮತ್ತು ವಿಶೇಷ ಸೌಲಭ್ಯಗಳಿಗಾಗಿ ಮನವಿ ಮಾಡಿ, ಬೆಂಗಳೂರಿನ 57ನೇ CCH ನ್ಯಾಯಾಲದಲ್ಲಿ ಅರ್ಜಿ ವಿಚಾರಣೆ ನಡೆಸಲಾಯ್ತು. ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್...
'ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣದ ವ್ಯವಹಾರ ನಡೆದಿದೆ’ ಎಂಬ ವದಂತಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ. ಅವರು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಅಪಪ್ರಚಾರದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, 20 ಕೋಟಿ, 10 ಕೋಟಿ ಕೊಟ್ಟರು ಎಂಬುದು ಶುದ್ಧ ಸುಳ್ಳು. ಯಾರಿಂದಲೂ ನಾವು ಹಣ ತೆಗೆದುಕೊಂಡಿಲ್ಲ ಎಂದು ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.
ಫೇಸ್ಬುಕ್ನಲ್ಲಿ ಏನೇನೋ...
ನಟ ದರ್ಶನ್ ಅವರಿಗೆ ಮತ್ತೊಂದು ಕಾನೂನು ಹೊಡೆತ ಬಿದ್ದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಈಗ ತಕ್ಷಣವೇ ಶರಣಾಗಬೇಕು ಅಥವಾ ಬಂಧನ ಎದುರಿಸಬೇಕು ಎಂಬ ಸ್ಥಿತಿಯಲ್ಲಿದ್ದಾರೆ.
ದರ್ಶನ್ ಪರ ವಕೀಲರು ಈವರೆಗೆ ಎಫ್ಐಆರ್ ರದ್ದುಪಡಿಸುವ ಸಲುವಾಗಿ...