ಮೂಲಭೂತ ಸೌಕರ್ಯಗಳ ಕೊರತೆ ಮತ್ತು ಹದಗೆಟ್ಟ ರಸ್ತೆಯಿಂದ ತೀವ್ರ ಸಮಸ್ಯೆ ಎದುರಿಸುತ್ತಿದ್ದ ಮಂಟೂರ್ ಗ್ರಾಮದಲ್ಲಿ ಕರ್ನಾಟಕ ಟಿವಿ ಪ್ರಸಾರ ಮಾಡಿದ ವರದಿಯ ನಂತರ ಆಡಳಿತ ಯಂತ್ರ ಚುರುಕಾಗಿದೆ. ವರದಿ ಪ್ರಸಾರವಾದ ಬೆನ್ನಲ್ಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗ್ರಾಮದಲ್ಲಿ ರಸ್ತೆ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದರಿಂದ ಸಾರ್ವಜನಿಕರು ಸಂಚಾರಕ್ಕೆ ತೀವ್ರ ತೊಂದರೆ ಅನುಭವಿಸುತ್ತಿದ್ದರು....
ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬಡಕನಹಳ್ಳಿ ಗ್ರಾಮದಿಂದ ಗೌಡಗೇರೆ ಮಾರ್ಗವಾಗಿ ಮಾಡಲಾಗಿದ್ದ ಡಾಂಬರ್ ರಸ್ತೆ ಒಂದೇ ದಿನದಲ್ಲಿ ಕಿತ್ತು ಹೋಗಿರುವ ಘಟನೆ ನಡೆದಿದೆ.
ಗ್ರಾಮಗಳಲ್ಲಿ ಡಾಂಬರೀಕರಣ ಮಾಡಿ ರಸ್ತೆಗಳನ್ನು ಅಭಿವೃದ್ದಿಗೊಳಿಸಿ ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಲೋಕೋಪಯೋಗಿ ಇಲಾಖೆ ಸುಮಾರು 60 ಲಕ್ಷ ರೂಪಾಯಿ ವೆಚ್ಚದಲ್ಲಿ ಗ್ರಾಮದಲ್ಲಿ ರಸ್ತೆ ಕಾಮಗಾರಿ ಮಾಡಲಾಗಿತ್ತು. ಆದರೆ ಕಳಪೆ ರಸ್ತೆ ಕಾಮಗಾರಿ...
ಹಾಸನ: ಬೇಲೂರು ತಾಲ್ಲೂಕಿನ ಮಾದಿಹಳ್ಳಿ ಹೋಬಳಿಯ ಕ್ಯಾತನಕೇರೆಯಿಂದ ಮಲ್ಲಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿ ಬಿದ್ದು ಕೆಸರುಗದ್ದೆಯಂತಾಗಿದೆ. ಕೂಡಲೇ ರಸ್ತೆ ಸರಿಪಡಿಸುವಂತೆ ಒತ್ತಾಯಿಸಿ ಕೊಮಾನಹಳ್ಳಿ, ಸಾವಾಸಿಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಕ್ಯಾತನಕೇರೆಯಿಂದ ಮಲ್ಲಾಪುರ ಗ್ರಾಮದ ವರೆಗೆ ಇರುವ 3 ಕಿ.ಮೀ. ಇರುವ ರಸ್ತೆ ಗುಂಡಿಮಯವಾಗಿದ್ದು ವಾಹನ ಸವಾರರು, ಸಾರ್ವಜನಿಕರು ಸಂಚರಿಸಲು ಪರದಾಡುವ ಸ್ಥಿತಿ...