Tuesday, January 20, 2026

Siddaramaiah

CM-DCM ಜಂಟಿ ಸಂದೇಶ, ಎಲ್ಲ ಗೊಂದಲಕ್ಕೆ ಬ್ರೇಕ್!

ಅನಗತ್ಯವಾಗಿ ಕೆಲವು ಗೊಂದಲ ನಿರ್ಮಾಣವಾಗಿದೆ. ನಮ್ಮ ಉದ್ದೇಶ 2028ರ ಚುನಾವಣೆ. ನಮ್ಮ ನಡುವೆ ಭಿನ್ನಾಭಿಪ್ರಾಯಗಳು ಇಲ್ಲ. ಮುಂದೆಯೂ ಯಾವುದೇ ವ್ಯತ್ಯಾಸಗಳು ಇರಲ್ಲ. ನಾವಿಬ್ಬರು ಒಟ್ಟಿಗೆ ಹೋಗ್ತೀವಿ ಎಂದು ಸುದ್ದಿಗೋಷ್ಠಿಯಲ್ಲಿ ಡಿಕೆಶಿ ಎದುರು ಸಿದ್ದರಾಮಯ್ಯ ಹೇಳಿದ್ದಾರೆ. ನಾವಿಬ್ಬರು ಹೈಕಮಾಂಡ್‌ ಏನ್‌ ಹೇಳ್ತಾರೋ ಅದನ್ನೇ ಕೇಳ್ತೀವಿ. ಸುಳ್ಳು ಅಪವಾದ ಬಿಜೆಪಿ, ಜೆಡಿಎಸ್‌ನವರ ಚಾಳಿ. ಅವರ ಸುಳ್ಳು ಆರೋಪಗಳನ್ನು ಸಮರ್ಥವಾಗಿ...

ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಸಿದ್ದು, ಡಿಕೆಶಿ ದೆಹಲಿ ಮಿಷನ್!

ರಾಜ್ಯ ಕಾಂಗ್ರೆಸ್‌ನಲ್ಲಿ ಪವರ್‌ ಶೇರಿಂಗ್‌ ಗದ್ದಲದ ನಡುವೆ ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಡೆಸಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿದೆ. ಮೂಲಗಳ ಪ್ರಕಾರ, ಡಿಕೆ ಶಿವಕುಮಾರ್ ನಿನ್ನೆ ದೆಹಲಿಗೆ ತೆರಳಬೇಕಾಗಿದ್ದರೂ, ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಕಾರಣದಿಂದ ಅವರ ದೆಹಲಿ ಪ್ರವಾಸವನ್ನು ಮುಂದೂಡಲಾಗಿದೆ. ಡಿಕೆಶಿ ಸಹೋದರ ಡಿ.ಕೆ. ಸುರೇಶ್ ನಿನ್ನೆ...

CM-DCM ಬ್ರೇಕ್‌ಫಾಸ್ಟ್: ಶಾಸಕರ ಡಿನ್ನರ್ ಮೀಟಿಂಗ್!

ರಾಜ್ಯ ಕಾಂಗ್ರೆಸ್ ನಲ್ಲಿ ಪವರ್ ಶೇರಿಂಗ್ ಗದ್ದಲ ಜೋರಾಗಿದೆ. ಈ ಮಧ್ಯೆ ಸಿಎಂ ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಜೋರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಬ್ರೇಕ್‌ಫಾಸ್ಟ್ ಮೀಟಿಂಗ್ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಇದೇ ವೇಳೆ, ಸುಮಾರು 10 ಶಾಸಕರು ರೆಸಾರ್ಟ್‌ನಲ್ಲಿ ಪ್ರತ್ಯೇಕ ಸಭೆ ಸೇರಿದ್ದು, ಈ ಬೆಳವಣಿಗೆಗಳು...

ಸಿದ್ದರಾಮಯ್ಯ 2.5 ವರ್ಷ CM: ಅಧಿಕಾರ ಹಂಚಿಕೆ ಚರ್ಚೆ ಇಲ್ಲ!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು, ತಮ್ಮ ತಂದೆಯ ಮೇಲೆ ಯಾವುದೇ ಆರೋಪವಿಲ್ಲದೆ, ಅಧಿಕಾರ ಹಂಚಿಕೆಯ ಸೂತ್ರವೂ ರಚನೆಯಾಗಿಲ್ಲ ಎಂದು ದೃಢಪಡಿಸಿದ್ದಾರೆ. ಸಿದ್ದರಾಮಯ್ಯ ಇನ್ನೂ ಎರಡೂವರೆ ವರ್ಷ ತಮ್ಮ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಅವರು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಯತೀಂದ್ರ ಅವರು, ಸಿಎಂ ಸಿದ್ದರಾಮಯ್ಯ ಪೂರ್ಣಾವಧಿಗೆ ಕಾರ್ಯನಿರ್ವಹಿಸುತ್ತಾರೆ. ಇಂತಹ ಸಂದರ್ಭದಲ್ಲಿ ನಾಯಕತ್ವ...

ಟ್ವಿಸ್ಟ್ ಮೇಲೆ ಟ್ವಿಸ್ಟ್ ಹೈಕಮ್ಯಾಂಡ್ ನಡೆ: ದೆಹಲಿಯಲ್ಲಿ ‘ಹೈಲೇವೆಲ್’ ಮೀಟಿಂಗ್!

ರಾಜ್ಯದಲ್ಲಿ ನಾಯಕತ್ವ ಬಿಕ್ಕಟ್ಟು ಗರಿಷ್ಠ ಮಟ್ಟಕ್ಕೆ ಏರಿರುವ ಹಿನ್ನೆಲೆ, ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಭೆ ನಡೆಸಲು ಸಿದ್ಧವಾಗುತ್ತಿದೆ. ಬಿಹಾರ ಚುನಾವಣೆ ತಂತ್ರ ಹಾಗೂ ಹಿಂದುಳಿದ ವರ್ಗಗಳ ಪರ ಕಾರ್ಯಕ್ರಮ ರೂಪಿಸುವ ವಿಚಾರಗಳೊಂದಿಗೆ, ಕರ್ನಾಟಕದ ರಾಜಕೀಯ ಪರಿಸ್ಥಿತಿಯ ಮೇಲೂ ಈ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ವಿದೇಶ ಪ್ರವಾಸದಲ್ಲಿದ್ದ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ...

ʻಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿʼ ಸಿಎಂ ಸಿದ್ದರಾಮಯ್ಯ ಕಡೆಗೆ ಶಾರ್ಪ್ ಮೆಸೇಜ್?

ರಾಜ್ಯದಲ್ಲಿ ಸಿಎಂ–ಡಿಸಿಎಂ ಪವರ್ ಶೇರಿಂಗ್ ವಿವಾದ ತೀವ್ರವಾಗಿರುವ ಸಂದರ್ಭದಲ್ಲಿ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹೊಸ ಸೋಷಿಯಲ್ ಮೀಡಿಯಾ ಪೋಸ್ಟ್ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. “Word Power is World Power. ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ ಅಂತ ಇಂದು ತಮ್ಮ ಎಕ್ಸ್‌ನಲ್ಲಿ ಬರೆದುಕೊಂಡಿದ್ದು, ಇದು ನೇರವಾಗಿ ಸಿಎಂ ಸಿದ್ದರಾಮಯ್ಯ...

ಪವರ್ ಶೇರಿಂಗ್ ಗದ್ದಲಕ್ಕೆ ತೆರೆ! CM-DCM ಸಂಧಾನ ಸೂತ್ರಕ್ಕೆ ಇಂದೇ ಕ್ಲಾರಿಟಿ?

ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ಫೈಟ್ ಕ್ಲೈಮ್ಯಾಕ್ಸ್‌ ಹಂತಕ್ಕೆ ಬಂದು ನಿಂತಿದೆ. ಪಕ್ಷದ ಒಳಕಲಹಕ್ಕೆ ತೆರೆ ಎಳೆಯುವ ಪ್ರಯತ್ನವಾಗಿ, ಇಂದೇ ದೆಹಲಿಯ ಕಾಂಗ್ರೆಸ್ ಭವನದಲ್ಲಿ ನಿರ್ಣಾಯಕ ಹೈಕಮಾಂಡ್ ಸಭೆ ನಡೆಯಲಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುವ ಈ ಮಹತ್ವದ ಸಭೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಇಬ್ಬರೂ ಹಾಜರಾಗುವ ಸಾಧ್ಯತೆ ರಾಜಕೀಯ...

ಕುರ್ಚಿ ಬೆಲೆ ಗೊತ್ತಿಲ್ಲ ಎಂದ DCM : ಸಿದ್ದುಗೆ ಪರೋಕ್ಷ ಸಂದೇಶ ಕೊಟ್ರಾ ಡಿಕೆಶಿ?

ಕ್ಷಣಕ್ಕೊಂದು ಹೇಳಿಕೆ, ದಿನಕ್ಕೊಂದು ಟ್ವಿಸ್ಟ್​. ಪವರ್ ಶೇರಿಂಗ್ ವಿಚಾರ ರಾಜ್ಯ ಕಾಂಗ್ರೆಸ್​ ಅಂಗಳದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ಸಿಎಂ ಸ್ಥಾನಕ್ಕಾಗಿ ನಡೆಯುತ್ತಿರುವ ಆಂತರಿಕ ಪೈಪೋಟಿ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದಂತಿದೆ. ಇದೇ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಹೊಸ ಹೇಳಿಕೆಗಳು ಪಕ್ಷದ ಒಳರಾಜಕೀಯಕ್ಕೆ ಮತ್ತಷ್ಟು ಬೆಂಕಿ ಹಚ್ಚಿವೆ. ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಆಗ್ತಿದ್ದಂತೆ...

ಡಿಕೆಶಿ–ಸತೀಶ್ ಜಾರಕಿಹೊಳಿ ಸೀಕ್ರೆಟ್ ಮೀಟಿಂಗ್: ರಹಸ್ಯ ಬಿಚ್ಚಿಟ್ಟ ‘ಸಾಹುಕಾರ’

ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ. ನಾಯಕತ್ವಕ್ಕಾಗಿ ನಡೆಯುತ್ತಿರುವ ಆಂತರಿಕ ಕಚ್ಚಾಟ ಕ್ಲೈಮಾಕ್ಸ್ ಹಂತಕ್ಕೆ ಬಂದು ತಲುಪಿದೆ. ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪ್ತರನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರತ್ಯೇಕವಾಗಿ ಭೇಟಿ ಮಾಡುತ್ತಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಸಚಿವರಾದ ಕೆಜೆ ಜಾರ್ಜ್, ಜಮೀರ್ ಅಹ್ಮದ್ ಖಾನ್ ಹಾಗೂ ಸತೀಶ್ ಜಾರಕಿಹೊಳಿ ಅವರನ್ನು...

ಸಂಧಾನಕ್ಕೆ ಮುಹೂರ್ತ ಫಿಕ್ಸ್, CM – DCM ದೆಹಲಿಗೆ ಬುಲಾವ್!?

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ಪಕ್ಷದ ನಾಯಕರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ದೆಹಲಿಗೆ ವಾಪಸ್ಸಾಗಿದ್ದಾರೆ. ಅವರ ಮುಂದಿನ ಹೆಜ್ಜೆ ಕುರಿತು ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಎದ್ದಿದೆ. ಇಂತಹ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ಸಂಧಾನ ಮಾತುಕತೆಗೆ ಹೈಕಮಾಂಡ್ ದಿನಾಂಕ ನಿಗದಿ ಮಾಡಿದೆ ಎಂಬ ಎಕ್ಸ್‌ಕ್ಲೂಸಿವ್ ಮಾಹಿತಿ...
- Advertisement -spot_img

Latest News

Mandya: ಪುರಾಣ ಪ್ರಸಿದ್ಧ ಹೇಮಗಿರಿ ದನಗಳ ಜಾತ್ರೆಯಲ್ಲಿ ಹಳ್ಳಿಕಾರ್ ತಳಿಯ ಹೋರಿಗಳ ಪಾರಮ್ಯ

Mandya: ಮಂಡ್ಯ: ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಪುರಾಣ ಪ್ರಸಿದ್ಧ ಹೇಮಗಿರಿ ದನಗಳ ಜಾತ್ರೆ ಶುರುವಾಗಿದ್ದು, ರಾಜ್ಯದ ಬೇರೆ ಬೇರೆ ಸ್ಥಳಗಳಿಂದ ರೈತರು ತಮ್ಮ ಹಸುಗಳನ್ನು ಜಾತ್ರೆಗೆ...
- Advertisement -spot_img