Sunday, July 6, 2025

Speaker Ramesh Kumar

‘ನಾನ್ಯಾಕೆ ರಾಜೀನಾಮೆ ಕೊಡಬೇಕು?’- ಸಿಎಂ ಕುಮಾರಸ್ವಾಮಿ

ಬೆಂಗಳೂರು: ಶಾಸಕರ ಸಾಲು ಸಾಲು ರಾಜೀನಾಮೆಯಿಂದ ಸರ್ಕಾರ ಸಂಖ್ಯಾಬಲವನ್ನೇ ಕಳೆದುಕೊಂಡಿದ್ದು ಸಿಎಂ ರಾಜೀನಾಮೆ ನೀಡಬೇಕು ಅನ್ನೋ ಬಿಜೆಪಿ ಒತ್ತಾಯಕ್ಕೆ ಪ್ರತಿಕ್ರಿಯೆ ನೀಡಿರೋ ಕುಮಾರಸ್ವಾಮಿ, ನಾನೇಕೆ ರಾಜೀನಾಮೆ ಕೊಡಬೇಕು ಅಂತ ಪ್ರಶ್ನಿಸಿದ್ದಾರೆ. ಬೆಂಗಳೂರಿನ ಕೆ.ಕೆ ಗೆಸ್ಟ್ ಹೌಸ್ ಬಳಿ ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಎಚ್. ಡಿ ಕುಮಾರಸ್ವಾಮಿ, ನಾನ್ಯಾಕೆ ರಾಜೀನಾಮೆ...

‘ರಾಜೀನಾಮೆ ಅಂಗೀಕಾರಕ್ಕೆ ಬಿಜೆಪಿಗೆ ಅವಸರವೇಕೆ..?’- ಸ್ಪೀಕರ್ ರಮೇಶ್ ಕುಮಾರ್ ಪ್ರಶ್ನೆ

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಕುರಿತಾಗಿ ಸ್ಪೀಕರ್ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಅನ್ನೋ ಆರೋಪಕ್ಕೆ ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ರಾಜೀನಾಮೆ ಅಂಗೀಕಾರ ವಿಚಾರದಲ್ಲಿ ಬಿಜೆಪಿಯವರು ಅವಸರ ಯಾಕೆ ಅಂತ ಪ್ರಶ್ನಿಸಿದ್ದಾರೆ. ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಶಾಸಕರ ರಾಜೀನಾಮೆ ಅಂಗೀಕರಿಸೋ ವಿಚಾರದಲ್ಲಿ ಪಕ್ಷದ ನಾಯಕರ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಅನ್ನೋ ಬಿಜೆಪಿ ಆರೋಪಕ್ಕೆ...

ವಿಧಾನಸೌಧದಲ್ಲಿ ಬಿಜೆಪಿ-ಕಾಂಗ್ರೆಸ್ ಗಲಾಟೆ..!

ಬೆಂಗಳೂರು: ಸ್ವೀಕರ್ ಗೆ ರಾಜೀನಾಮೆ ಸಲ್ಲಿಸಿ ತೆರಳುತ್ತಿದ್ದ ಶಾಸಕ ಸುಧಾಕರ್ ರನ್ನು ಕಾಂಗ್ರೆಸ್ ಮುಖಂಡರು ಕೂಡಿ ಹಾಕಿದ್ದಾರೆ ಅಂತ ಆರೋಪಿಸಿ ಬಿಜೆಪಿ ವಿಧಾನಸೌಧದಲ್ಲಿ ಕಾಂಗ್ರೆಸ್ ಮುಖಂಡರೊಂದಿಗೆ ವಾಗ್ವಾದಕ್ಕಿಳಿದು ಶಕ್ತಿ ಸೌಧದಲ್ಲಿ ಗದ್ದಲಕ್ಕೆ ನಾಂದಿ ಹಾಡಿದೆ. ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಸುಧಾಕರ್ ರಾಜೀನಾಮೆ ನೀಡಿ ಸ್ಪೀಕರ್ ಕಚೇರಿಯಿಂದ ಹೊರಬರುತ್ತಿದ್ದಂತೆಯೇ ಪ್ರಿಯಾಂಕ್ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ...

ಕಾಂಗ್ರೆಸ್ ನ ಮತ್ತೆರಡು ವಿಕೆಟ್ ಪತನ- ಶಾಸಕ ಸುಧಾಕರ್, ಎಂ.ಟಿ.ಬಿ ನಾಗರಾಜ್ ರಾಜೀನಾಮೆ..!

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಉಂಟಾಗಿರೋ ಬಿಕ್ಕಟ್ಟು ಮತ್ತಷ್ಟು ಕಗ್ಗಾಂಟಾಗುತ್ತಿದ್ದು ಇಂದು ಕಾಂಗ್ರೆಸ್ ನ ಇಬ್ಬರು ಶಾಸಕರು ರಾಜೀನಾಮೆ ನೀಡಿ ದೋಸ್ತಿಗೆ ಗುಡ್ ಬೈ ಹೇಳಿದ್ದಾರೆ. ಈ ಮೂಲಕ ದೋಸ್ತಿಗಳು ಕಣ್ ಕಣ್ ಬಿಡುವಂತಾಗಿದೆ. ಮಂತ್ರಿಗಿರಿ ಕೈ ತಪ್ಪಿದ ಹಿನ್ನೆಲೆಯಲ್ಲಿ ದೋಸ್ತಿ ವಿರುದ್ಧ ಅಸಮಾಧಾನಗೊಂಡು ರೆಬೆಲ್ ಆಗಿದ್ದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಸುಧಾಕರ್ ಸ್ಪೀಕರ್ ಕಚೇರಿಗೆ...

ಕೈ ಚೆಲ್ಲಿದ ರಾಜ್ಯಪಾಲರು- ಬಿಜೆಪಿ ನಿಯೋಗಕ್ಕೆ ಹಿನ್ನಡೆ..!

ಬೆಂಗಳೂರು: ಶಾಸಕರ ರಾಜೀನಾಮೆ ಅಂಗೀಕಾರ ವಿಚಾರದಲ್ಲಿ ಮಧ್ಯ ಪ್ರವೇಶಿಸಿ ಅತೃಪ್ತರ ರಾಜೀನಾಮೆಯನ್ನು ಊರ್ಜಿತ ಗೊಳಿಸಿ ಬಿಜೆಪಿಗೆ ಸರ್ಕಾರ ರಚಿಸಲು ಅನುವು ಮಾಡಿಕೊಡಬೇಕು ಎಂದು ರಾಜ್ಯಪಾಲರನ್ನು ಭೇಟಿ ಮಾಡಿದ್ದ ಬಿಜೆಪಿ ನಿಯೋಗಕ್ಕೆ ಹಿನ್ನಡೆಯಾಗಿದೆ. ಶಾಸಕರ ರಾಜೀನಾಮೆ ಅಂಗೀಕಾರ ವಿಚಾರವಾಗಿ ವಿಧಾನಸಭಾ ಸ್ವೀಕರ್ ರಮೇಶ್ ಕುಮಾರ್ ವಿಳಂಬ ಮಾಡುತ್ತಿದ್ದಾರೆ ಈ ಕೂಡಲೇ ರಾಜ್ಯಪಾಲರು ಮಧ್ಯ ಪ್ರವೇಶಿಸಿ ಶಾಸಕರ ರಾಜೀನಾಮೆಯನ್ನು...

‘ಸಿಎಂಗೆ ಮಾನ ಮರ್ಯಾದೆ ಇದ್ದರೆ ಕೂಡಲೇ ರಾಜೀನಾಮೆ ಕೊಡಲಿ’- ಮಾಜಿ ಸಿಎಂ ಬಿಎಸ್ವೈ

ಬೆಂಗಳೂರು: ಮೈತ್ರಿ ಸರ್ಕಾರ ಅಸ್ಥಿರಗೊಂಡಿದ್ದು ಕೂಡಲೇ ಸಿಎಂ ಎಚ್.ಡಿ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಒತ್ತಾಯಿಸಿದ್ದಾರೆ. ವಿಧಾನಸೌಧ ಬಳಿಯ ಗಾಂಧಿ ಪ್ರತಿಮೆ ಎದುರು ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರೋ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಯಡಿಯೂರಪ್ಪ, ಅತೃಪ್ತ ಶಾಸಕರ ಹಕ್ಕನ್ನು ಕಸಿದುಕೊಂಡು ಸರ್ಕಾರ ಅವರ ಮೇಲೆ ದಬ್ಬಾಳಿಕೆ...

ಸ್ಪೀಕರ್ ಏಟಿಗೆ ಅತೃಪ್ತರ ಎದಿರೇಟು- ಸುಪ್ರೀಂಕೋರ್ಟ್ ಮೊರೆಹೋದ ಶಾಸಕರು..!

ಮುಂಬೈ: ರಾಜೀನಾಮೆ ಅಂಗೀಕಾರ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ವಿಳಂಬ ಧೋರಣೆ ತೋರುತ್ತಿದ್ದಾರೆ ಅಂತ ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಅತೃಪ್ತ ಶಾಸಕರ ರಾಜೀನಾಮೆ ವಿಚಾರ ಇದೀಗ ಮತ್ತೊಂದು ಹಂತಕ್ಕೆ ಹೋಗಿದ್ದು ಮುಂಬೈನಿಂದ ಸುಪ್ರೀಂ ಕೋರ್ಟ್ ತಲುಪಿದೆ. ರಾಜೀನಾಮೆ ನೀಡಿದ ಹೊರತಾಗಿಯೂ ಅದನ್ನು ಅಂಗೀಕಾರಿಸೋದಕ್ಕೆ ಸ್ಪೀಕರ್ ಇಲ್ಲ ಸಲ್ಲದ ಕಾರಣ ನೀಡಿ ವಿಳಂಬ...

‘ಮನೇಲಿದ್ರೂ ಪರವಾಗಿಲ್ಲ, ರಾಜೀನಾಮೆ ಹಿಂಪಡೆಯಲ್ಲ’- ಅತೃಪ್ತ ಶಾಸಕ ಭೈರತಿ ಬಸವರಾಜ್ ಪಟ್ಟು

ಬೆಂಗಳೂರು: ತಮ್ಮನ್ನು ದೋಸ್ತಿ ನಾಯಕರು ನಿರ್ಲಕ್ಷ್ಯ ಮಾಡ್ತಿದ್ದಾರೆ. ಇದ್ರಿಂದ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿದೆ ಅಂತ ಆರೋಪಿಸಿ ಅತೃಪ್ತ ರಾಜೀನಾಮೆ ನೀಡಿರುವ ಕಾಂಗ್ರೆಸ್ ಶಾಸಕ ಬೈರತಿ ಬಸವರಾಜ್, ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯೋದಿಲ್ಲ ಅಂತ ಪಟ್ಟುಹಿಡಿದಿದ್ದಾರೆ. ಮುಂಬೈನ ಸೊಫಿಟೆಲ್ ಹೋಟೆಲ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಬೈರತಿ ಬಸವರಾಜ್, ನನ್ನ ಕಷ್ಟಗಳನ್ನು ಹೇಳಿಕೊಂಡರೂ ಸರ್ಕಾರದಿಂದ ಯಾವುದೇ ಸ್ಪಂದನೆ...

ಕಾನೂನು ಸಮರಕ್ಕೆ ರೆಡಿಯಾದ ಕಾಂಗ್ರೆಸ್..!

ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನಗೊಂಡು ರಾಜೀನಾಮೆ ನೀಡಿರೋ ಕಾಂಗ್ರೆಸ್-ಜೆಡಿಎಸ್ ಶಾಸಕರ ವಿರುದ್ಧ ಕಾನೂನು ಸಮರಕ್ಕೆ ಕಾಂಗ್ರೆಸ್ ಮುಂದಾಗಿದೆ. ದೋಸ್ತಿಗೆ ಟಾಟಾ ಹೇಳಿ ಬಿಜೆಪಿ ಹೊಸ್ತಿಲಲ್ಲಿ ನಿಂತಿರೋ ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರ ವಿರುದ್ಧ ಇದೀಗ ಕಾಂಗ್ರೆಸ್ ಕಾನೂನು ಸಮರ ಸಾರಿದ್ದು, ನಾಲ್ಕೈದು ಶಾಸಕರ ಅನರ್ಹತೆಗೆ ದೂರು ನೀಡಲು ನಿರ್ಧರಿಸಿದೆ. ರಾಜೀನಾಮೆ ನೀಡಿ ಮುಂಬೈ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img