ಕೆಂಗೇರಿ ರಸ್ತೆಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದಲ್ಲಿ ಡಿಸೆಂಬರ್ 15 ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿಯವರ ಉತ್ತರಾಧಿಕಾರಿಯಾಗಿ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಗೆ ಪಟ್ಟಾಧಿಕಾರ ಮಹೋತ್ಸವ ಸಂಪನ್ನಗೊಂಡಿತು. ಧಾರ್ಮಿಕ ವಿಧಿ ವಿಧಾನದಂತೆ ಪಟ್ಟಾಧಿಕಾರ ಕಾರ್ಯಕ್ರಮದ ಭಾಗವಾಗಿ ಗಂಗೆ ಪೂಜೆ, ಶಿವಪಾರ್ವತಿ ಪೂಜೆ, ಗಣಪತಿ ಪೂಜೆಯನ್ನು ನೆರವೇರಿತು. ಇದಾಗಿ ನೂತನ ಸ್ವಾಮೀಜಿಗೆ ರುದ್ರಾಕ್ಷಿ ಮುಕುಟ ಧಾರಣೆ ವಿಧಿಯೂ...