Thursday, December 25, 2025

Supreme Court

ಪಕ್ಷೇತರರ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ಸುಪ್ರೀಂ..!

ನವದೆಹಲಿ: ವಿಶ್ವಾಸಮತ ಸಾಬೀತುಪಡಿಸಲು ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ನಿರ್ದೇಶನ ನೀಡುವಂತೆ ಪಕ್ಷೇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಾಳೆಗೆ ಮುಂದೂಡಿಕೆ ಮಾಡಿದೆ. ಇಂದು ಪಕ್ಷೇತರರ ಅರ್ಜಿ ವಿಚಾರಣೆ ಕೈಗೊಂಡ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಮೊದಲಿಗೆ ಅತೃಪ್ತರ ಪರ ವಕೀಲ ಮುಕುಲ್ ರೋಹ್ಟಗಿ ವಾದವನ್ನು ಆಲಿಸಿದ್ರು. 15ಮಂದಿ ಅತೃಪ್ತ ಶಾಸಕರಿಗೆ ಸ್ಪೀಕರ್ ಎದುರು ವಿಚಾರಣೆಗೆ ಹಾಜರಾಗದಂತೆ...

ಬೀಸೋ ದೊಣ್ಣೆಯಿಂದ ಪಾರಾದ ದೋಸ್ತಿ- ಅಹೋರಾತ್ರಿ ಧರಣಿಗೆ ಬಿಜೆಪಿ ನಿರ್ಧಾರ..!

ಬೆಂಗಳೂರು: ಇಂದು ನಿಗದಿಯಾಗಿದ್ದ ಸದನದ ಕಲಾಪದಲ್ಲಿ ಕೊನೆಗೂ ವಿಶ್ವಾಸಮತ ಯಾಚನೆಯಾಗದೇ ಮುಂದೂಡಿಕೆಯಾಗಿದೆ. ಇಂದು ಬೆಳಗ್ಗಿನಿಂದ ಕಾಂಗ್ರೆಸ್-ಜೆಡಿಎಸ್ ಮತ್ತು ಬಿಜೆಪಿ ಹೈಡ್ರಾಮಾಕ್ಕೆ ಸಾಕ್ಷಿಯಾಗಿದ್ದ ವಿಧಾನಸಭಾ ಕಲಾಪ ಮೈತ್ರಿ ಸರ್ಕಾರದ ಅಳಿವು-ಉಳಿವು ನಿರ್ಧರಿಸಲಾಗಲಿಲ್ಲ. ವಿಶ್ವಾಸಮತ ಯಾಚನೆ ಮಾಡಿದ್ರೆ ಮೈತ್ರಿ ಸರ್ಕಾರಕ್ಕೆ ಕಂಟಕ ಕಟ್ಟಿಟ್ಟ ಬುತ್ತಿ ಅಂತ ಅರಿತಿದ್ದ ದೋಸ್ತಿಗಳೂ ಕೊನೆಗೂ ಇಂದಿನ ಸದನವನ್ನು ಮುಂದೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು...

ಬಿಜೆಪಿಗೆ ಸ್ಪಂದಿಸಿದ ರಾಜ್ಯಪಾಲರು- ಇಂದು ವಿಸ್ವಾಸಮತ ಯಾಚನೆ ಪೂರ್ಣಗೊಳಿಸುವಂತೆ ಸೂಚನೆ

ಬೆಂಗಳೂರು: ವಿಶ್ವಾಸಮತ ಯಾಚನೆ ಕುರಿತು ಸದನದಲ್ಲಿ ಉಂಟಾಗಿರುವ ಗದ್ದಲ ರಾಜ್ಯಪಾಲರ ಬಾಗಿಲು ಬಡಿಸಿತು. ಕಾಂಗ್ರೆಸ್-ಜೆಡಿಎಸ್ ವಿಶ್ವಾಸಮತ ಯಾಚನೆ ಮುಂದೂಡಿಕೆ ಮಾಡಬೇಕೆಂದು ಸ್ಪೀಕರ್ ಗೆ ಮನವಿ ಮಾಡಿದ್ದನ್ನು ವಿರೋಧಿಸಿ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿತ್ತು. ಇದಕ್ಕೆ ಸ್ಪಂದಿಸಿರೋ ರಾಜ್ಯಪಾಲರು ಇಂದೇ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಮುಗಿಸಲು ಸೂಚನೆ ನೀಡಿದ್ದಾರೆ. ಅತೃಪ್ತ ಶಾಸಕರು ವಿಪ್ ಉಲ್ಲಂಘನೆ...

ವಿಶ್ವಾಸಮತ ಯಾಚನೆಗೆ ಪಟ್ಟು- ರಾಜ್ಯಪಾಲರ ಮೊರೆಹೋದ ಬಿಜೆಪಿ

ಬೆಂಗಳೂರು: ಅತೃಪ್ತ ಶಾಸಕರ ವಿಪ್ ಉಲ್ಲಂಘನೆ ವಿಚಾರವಾಗಿ ನಿರ್ಧಾರ ಕೈಗೊಳ್ಳುವವರೆಗೂ ವಿಶ್ವಾಸಮತ ಯಾಚನೆ ಪ್ರಸ್ತಾಪ ಮುಂದೂಡಿಕೆ ಮಾಡಿ ಅನ್ನೋ ದೋಸ್ತಿ ಮನವಿಗೆ ಬಿಜೆಪಿ ಸಿಡಿದೆದ್ದಿದೆ. ಇಂದೇ ವಿಶ್ವಾಸಮತ ಯಾಚನೆಯಾಗಬೇಕು ಅಂತ ಪಟ್ಟು ಹಿಡಿದಿರೋ ಬಿಜೆಪಿ, ಇದೀಗ ರಾಜ್ಯಪಾಲರ ಮೊರೆ ಹೋಗಿದೆ. ಇವತ್ತು ವಿಶ್ವಾಸಮತ ಯಾಚನೆಯಲ್ಲಿ ದೋಸ್ತಿಗಳಿಗೆ ಹಿನ್ನಡೆ ಫಿಕ್ಸ್ ಅಂತ ಬೀಗುತ್ತಿದ್ದ ಬಿಜೆಪಿ...

ಕೈ ಶಾಸಕನನ್ನು ಅಪಹರಿಸಿ ಬಿಜೆಪಿ ಆಸ್ಪತ್ರೆಗೆ ಸೇರಿಸಿದೆ- ದೋಸ್ತಿ ಆರೋಪ

ಬೆಂಗಳೂರು: ನಿನ್ನೆ ರಾತ್ರಿ ವರೆಗೂ ಆರೋಗ್ಯವಾಗಿದ್ದ ಕಾಗವಾಡದ ಕಾಂಗ್ರೆಸ್ ಶಾಸಕ ಆರೋಗ್ಯದ ನೆಪವೊಡ್ಡಿ ಮುಂಬೈನಲ್ಲಿ ಪ್ರತ್ಯಕ್ಷವಾದ ಘಟನೆ ಇದೀಗ ಮತ್ತೊಂದು ತಿರುವು ಪಡೆದಿದೆ. ಇದರ ಹಿಂದೆ ಬಿಜೆಪಿ ಕೈವಾಡ ನಡೆಸಿ ಶಾಸಕರನ್ನು ಬಲವಂತದಿಂದ ಕರೆದೊಯ್ದಿದೆ ಅಂತ ದೋಸ್ತಿ ಆರೋಪಿಸಿದ್ದಾರೆ. ಇಂದಿನ ವಿಶ್ವಾಸಮತ ಯಾಚನೆಯಲ್ಲಿ ಸರ್ಕಾರಕ್ಕೆ ಹಿನ್ನಡೆಯುಂಟು ಮಾಡುವ ಉದ್ದೇಶದಿಂದ ಕಾಗವಾಡದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲರನ್ನು...

ವಿಶ್ವಾಸಮತ ಯಾಚನೆ ಮುಂದೂಡಲು ಮನವಿ- ಕೊನೇ ಕ್ಷಣದಲ್ಲಿ ದೋಸ್ತಿ ಗೇಮ್ ಪ್ಲ್ಯಾನ್…!

ಬೆಂಗಳೂರು: ಸರ್ಕಾರದ ಅಳಿವು ಉಳಿವು ನಿರ್ಧಾರ ಮಾಡುವ ಇಂದಿನ ವಿಶ್ವಾಸಮತ ಯಾಚನೆಯಿಂದ ತಪ್ಪಿಸಿಕೊಳ್ಳಲು ದೋಸ್ತಿ ಇನ್ನಿಲ್ಲದ ಕಸರತ್ತು ನಡೆಸಿದೆ. ಬೆಳಗ್ಗೆಯಿಂದ ವಿಶ್ವಾಸಮತ ಯಾಚನೆ ಪ್ರಕ್ರಿಯೆಗೆ ಕಾದು ಕುಳಿತ ಬಿಜೆಪಿಗೆ ಇದೀಗ ದೋಸ್ತಿ ಶಾಕ್ ನೀಡಲು ತಂತ್ರ ಹೆಣೆದಿದೆ. ಸುಪ್ರೀಂಕೋರ್ಟ್ ಮಧ್ಯಂತರ ಆದೇಶದ ಕುರಿತ ಕ್ರಿಯಾ ಲೋಪದ ಬಗ್ಗೆ ಇಂದು ಸದನದಲ್ಲಿ ಕುತೂಹಲಕಾರಿ ಚರ್ಚೆ ನಡೆಯುತ್ತಿದೆ....

ವಿಪ್ ವಿಚಾರವಾಗಿ ಬಿಎಸ್ವೈ ಗೊಂದಲ- ಡಿಕೆಶಿ ಕೆಂಡಾಮಂಡಲ- ತಬ್ಬಿಬ್ಬಾದ ಯಡಿಯೂರಪ್ಪ..!

ಬೆಂಗಳೂರು: ಅತೃಪ್ತ ಶಾಸಕರ ಅರ್ಜಿ ಕುರಿತ ಸುಪ್ರೀಂಕೋರ್ಟ್ ಆದೇಶದ ಕ್ರಿಯಾಲೋಪದ ಬಗ್ಗೆ ಸದನದಲ್ಲಿ ಚರ್ಚೆ ಜೋರಾಗಿ ನಡೆದಿದೆ. ಕ್ರಿಯಾಲೋಪ ವಿಚಾರವಾಗಿ ಕಾಂಗ್ರೆಸ್ ಶಾಸಕರು ಮಾತನಾಡುತ್ತಿದ್ದ ವೇಳೆ ಮಧ್ಯಪ್ರವೇಶಿಸಿದ ಪ್ರತಿಪಕ್ಷ ನಾಯಕ ಯಡಿಯೂರಪ್ಪ ಶಾಸಕರಿಗೆ ಜಾರಿಮಾಡಲಾಗಿರುವ ವಿಪ್ ಕುರಿತು ಗೊಂದಲದ ಹೇಳಿಕೆ ನೀಡಿ ಬೆಸ್ತು ಬಿದ್ದ ಪ್ರಸಂಗ ನಡೆಯಿತು. ಸದನದಲ್ಲಿ ವಿಶ್ವಾಸಮತಯಾಚನೆ ಕುರಿತಾಗಿ ಮೈತ್ರಿ ಪಕ್ಷ...

ಸುಪ್ರೀಂಕೋರ್ಟ್ ತೀರ್ಪಿಗೆ ದಿನೇಶ್ ಗುಂಡೂರಾವ್ ಅಸಮಾಧಾನ

ಬೆಂಗಳೂರು: ಅತೃಪ್ತ ಶಾಸಕರ ಅರ್ಜಿ ಕುರಿತು ಇಂದು ಸುಪ್ರೀಂಕೋರ್ಟ್ ನೀಡಿರುವ ಮಧ್ಯಂತರ ತೀರ್ಪಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುಪ್ರೀಂಕೋರ್ಟ್ ತೀರ್ಪಿನ ಕುರಿತು ಟ್ವೀಟ್ ಮಾಡಿರುವ ಕೆಪಿಪಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಅತೃಪ್ತ ಶಾಸಕರು ವಿಪ್ ಉಲ್ಲಂಘನೆ ಮಾಡಲು ಸಹಕಾರಿಯಾಗಲೆಂದೇ ಸುಪ್ರೀಂ ಕೋರ್ಟ್ ಆದೇಶ ನೀಡಿದಂತಿದೆ ಅಂತ ಅಸಮಾಧಾನ ಹೊರಹಾಕಿದ್ದಾರೆ. ಬಳಿಕ ಮತ್ತೊಂದು ಟ್ವೀಟ್...

‘ವಿಶ್ವಾಸಮತಕ್ಕೆ ನಾವು ಹಾಜರಾಗಲ್ಲ’- ಅತೃಪ್ತರ ಖಡಕ್ ಸಂದೇಶ…!

ನವದೆಹಲಿ: ಅತೃಪ್ತ ಶಾಸಕರು ಸದನಕ್ಕೆ ಹಾಜರಾಗುವಂತೆ ಒತ್ತಾಯ ಮಾಡುವಂತಿಲ್ಲ ಅನ್ನೋ ಸುಪ್ರೀಂ ತೀರ್ಪಿನ ಬಳಿಕ ಅತೃಪ್ತ ಶಾಸಕರ ನಿಲುವಿಗೆ ಮತ್ತಷ್ಟು ಬಲ ಸಿಕ್ಕಿದೆ. ಯಾವುದೇ ಕಾರಣಕ್ಕೂ ನಾವು ನಾಳೆ ವಿಶ್ವಾಸಮತಕ್ಕೆ ಹಾಜರಾಗೋದಿಲ್ಲ ಅಂತ ದೋಸ್ತಿಗಳಿಗೆ ಸಂದೇಶ ರವಾನಿಸಿದ್ದಾರೆ. ವಿಪ್ ಉಲ್ಲಂಘನೆ ಕುರಿತು ಇಷ್ಟು ದಿನ ತಲೆಕೆಡಿಸಿಕೊಂಡಿದ್ದ ಅತೃಪ್ತ ಶಾಸಕರು ಇದೀಗ ತಮ್ಮ ನಿರ್ಧಾರದಿಂದ ಹಿಂದೆ...

‘ಮಂಗನ ಟೋಪಿ ಹಾಕಿಸಿಕೊಂಡು ಅನರ್ಹತೆ ಅಸ್ತ್ರಕ್ಕೆ ಗುರಿಯಾಬೇಡಿ’- ಅತೃಪ್ತರಿಗೆ ಡಿಕೆಶಿ ಮನವಿ

ಬೆಂಗಳೂರು: ಅತೃಪ್ತ ಶಾಸಕರು ಬಿಜೆಪಿಯ ಮಂಗನ ಟೋಪಿ ಹಾಕಿಸಿಕೊಳ್ಳದೆ ಎಚ್ಚರವಹಿಸಿ ಅನರ್ಹತೆ ಅಸ್ತ್ರಕ್ಕೆ ಬಲಿಯಾಗಬೇಡಿ ಅಂತ ಸಚಿವ ಡಿಕೆಶಿ ಅತೃಪ್ತ ಶಾಸಕರಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್, ಸುಪ್ರೀಂಕೋರ್ಟ್ ಸ್ಪೀಕರ್ ಅಧಿಕಾರವನ್ನು ಎತ್ತಿಹಿಡಿದಿದೆ. ಅತೃಪ್ತ ಶಾಸಕರು ಅಧಿವೇಶನಕ್ಕೆ ಬರಬಹುದು, ಬಿಡಬಹುದು ಅದು ಅವರಿಗೆ ಬಿಟ್ಟದ್ದು. ಆದರೆ ಪಕ್ಷದ ಕೈಯಲ್ಲಿ ವಿಪ್...
- Advertisement -spot_img

Latest News

ಶಬರಿಮಲೆ ಚಿನ್ನ ಕದ್ದವರಿಗೆ ‘ಸೋನಿಯಾ ಗಾಂಧಿ’ ನಂಟು?

ಕೇರಳದ ಅಯ್ಯಪ್ಪಸ್ವಾಮಿ ದೇಗುಲದಲ್ಲಿ 4.5 ಕೆಜಿ ಚಿನ್ನ ಕಳವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಸೋನಿಯಾಗಾಂಧಿಯವರ ಹೆಸರು ಕೇಳಿ ಬರ್ತಾಯಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ...
- Advertisement -spot_img