Friday, September 18, 2026

Voter List Revision

50% ಮತದಾರರ ಹೆಸರು ಮಾಯ? ಈ 25 ಕ್ಷೇತ್ರಗಳಲ್ಲಿ SIR ಕಂಟಕ!

ಬೆಂಗಳೂರಿನಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಅಂದರೆ ಎಸ್‌ಐಆರ್ ಪ್ರಕ್ರಿಯೆ ರಾಜಕೀಯ ವಲಯದಲ್ಲಿ ಭಾರೀ ನಡುಕ ಹುಟ್ಟಿಸಿದೆ. ಹೌದು 'ಸಿಲಿಕಾನ್‌ ಸಿಟಿಯ ಒಟ್ಟು 25 ವಿಧಾನಸಭಾ ಕ್ಷೇತ್ರಗಳು ಸದ್ಯ 'ಡೇಂಜರ್ ಝೋನ್'ನಲ್ಲಿವೆಯಂತೆ! ಈ ಕ್ಷೇತ್ರಗಳಲ್ಲಿ ದೊಡ್ಡ ಪ್ರಮಾಣದ ಮತದಾರರ ಹೆಸರುಗಳು ಪಟ್ಟಿಯಿಂದ ಡಿಲೀಟ್ ಆಗುವ ಸಾಧ್ಯತೆಯಿದ್ದು, ರಾಜಕೀಯ ನಾಯಕರಿಗೆ ತಲೆನೋವು ಶುರುವಾಗಿದೆ. ಅಂಕಿ-ಅಂಶಗಳ ಪ್ರಕಾರ,...

ಪ್ರಕಾಶ್ ರಾಜ್ ಆಕ್ರೋಶ: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಲೋಪ, ಚುನಾವಣಾ ಆಯೋಗಕ್ಕೆ ಪ್ರಶ್ನೆಗಳ ಸುರಿಮಳೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಕಾರ್ಯದಲ್ಲಿ ಭಾರೀ ಲೋಪಗಳಾಗಿವೆ ಎಂದು ಆರೋಪಿಸಿ ನಟ ಪ್ರಕಾಶ್ ರಾಜ್ ಇಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಸಂತ್ರಸ್ತ ನಾಗರಿಕರು ಹಾಗೂ ನಾಗರಿಕ ಸಂಘಟನೆಗಳ ಪರವಾಗಿ ಪತ್ರಿಕಾಗೋಷ್ಠಿ ನಡೆಸಿದರು. ಬೂತ್ ಮಟ್ಟದ ಅಧಿಕಾರಿಗಳ (BLO) ಮೇಲಿನ ಕೆಲಸದ ಒತ್ತಡ ಮತ್ತು ಸೂಕ್ತ ತರಬೇತಿಯ ಕೊರತೆಯಿಂದಾಗಿ ಗುಳೆ...

SIR: ಕನಿಷ್ಠ 10 ದಿನ ಕಾಲಾವಕಾಶ ನೀಡಿ: ಶಾಸಕ ಡಾ. ರಂಗನಾಥ್

ವಿಶೇಷ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ವ್ಯಾಪಕ ಗೊಂದಲಗಳು ಉಂಟಾಗಿದ್ದು, ಚುನಾವಣಾ ಆಯೋಗ ತಳಮಟ್ಟದಲ್ಲಿ ಕಂಡುಬಂದಿರುವ ಸಮಸ್ಯೆಗಳನ್ನು ತಕ್ಷಣ ಸರಿಪಡಿಸಿ, ಕನಿಷ್ಠ 10 ದಿನಗಳ ಕಾಲಾವಕಾಶ ನೀಡಬೇಕು ಎಂದು ಕುಣಿಗಲ್ ಶಾಸಕ ಡಾ. ರಂಗನಾಥ್ ಒತ್ತಾಯಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಗ್ರಾಮೀಣ ವ್ಯಾಪ್ತಿಯ ಕುಣಿಗಲ್ ಕ್ಷೇತ್ರದಲ್ಲಿಯೇ ಸಾಕಷ್ಟು ಗೊಂದಲಗಳು...

ಎಸ್‌ಐಆರ್ ಪ್ರಕ್ರಿಯೆಗೆ ಒಂದು ತಿಂಗಳ ವಿಸ್ತರಣೆ ಅಗತ್ಯ: ಸಚಿವ ಮಾಗಡಿ ಬಾಲಕೃಷ್ಣ

ಬೆಂಗಳೂರು : ವಿಶೇಷ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಉಂಟಾಗಿರುವ ಗೊಂದಲಗಳ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆಗೆ ಕನಿಷ್ಠ ಒಂದು ತಿಂಗಳ ಕಾಲ ವಿಸ್ತರಣೆ ನೀಡಬೇಕು ಎಂದು ಸಚಿವ ಮಾಗಡಿ ಬಾಲಕೃಷ್ಣ ಆಗ್ರಹಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಐಆರ್ ಪ್ರಕ್ರಿಯೆ ಕರ್ನಾಟಕದಲ್ಲಿ ಮಾತ್ರವಲ್ಲದೆ ದೇಶದ ಹಲವು ರಾಜ್ಯಗಳಲ್ಲಿ ಜಾರಿಯಾಗಿದೆ....

ಗ್ರೇಟರ್ ಬೆಂಗಳೂರು ಚುನಾವಣೆ ಮತ್ತೆ ಫೋಸ್ಟ್‌ಪೋನ್?

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಚುನಾವಣೆ ಮತ್ತೆ ವಿಳಂಬವಾಗುವ ಸಾಧ್ಯತೆ ಎದುರಾಗಿದೆ. ಚುನಾವಣೆಯನ್ನು ಮುಂದೂಡಲು ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್ ಮೊರೆ ಹೋಗಲು ಸಿದ್ಧತೆ ನಡೆಸಿರುವ ಮಾಹಿತಿ ಲಭ್ಯವಾಗಿದೆ. ಜೂನ್ 14ರಿಂದ 24ರೊಳಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸಿದ್ಧತೆ ನಡೆಸಿದ್ದರೂ,...

ಮತದಾರರ ಪಟ್ಟಿಯಲ್ಲಿ 2.89 ಕೋಟಿ ಮಂದಿ ಹೆಸರು ಡಿಲೀಟ್

ಉತ್ತರ ಪ್ರದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪುನರ್ ಪರಿಶೀಲನಾ (SIR) ಪ್ರಕ್ರಿಯೆ ಪೂರ್ಣವಾಗಿದೆ. ಕರಡು ಮತದಾರರ ಅಂತಿಮ ಪಟ್ಟಿ ಬಿಡುಗಡೆ ಮಾಡಲು ಸಿದ್ಧತೆಗಳು ಜಾರಿ ಇದ್ದವು. ಆದಾಗ್ಯೂ, ಸುಮಾರು 2.89 ಕೋಟಿ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಡಿ.26 ರ ಮಧ್ಯರಾತ್ರಿ 12 ಗಂಟೆಯೇ SIR ಪ್ರಕ್ರಿಯೆಯ ಕೊನೆಯ...

2026ರ ಚುನಾವಣೆಗಾಗಿ ಹೊಸ ಹಂತ : ಮತದಾರರ ಪಟ್ಟಿಗೆ ಹೊಸ ಪರಿಷ್ಕರಣೆ!

ಚುನಾವಣಾ ಆಯೋಗವು ದೇಶದಾದ್ಯಂತ ವಿಶೇಷ ತೀವ್ರ ಪರಿಷ್ಕರಣೆ ನಡೆಸಲು ಸಿದ್ಧತೆ ಆರಂಭಿಸಿದೆ. ಈ ಪ್ರಕ್ರಿಯೆ ನವೆಂಬರ್‌ನ ಆರಂಭದಿಂದ ಹಂತ ಹಂತವಾಗಿ ಪ್ರಾರಂಭವಾಗಲಿದ್ದು, 2026ರಲ್ಲಿ ಚುನಾವಣೆಯನ್ನು ಎದುರಿಸಲಿರುವ ರಾಜ್ಯಗಳು ಮತ್ತು ಕೆಲವು ಇತರ ರಾಜ್ಯಗಳಲ್ಲಿ ಮೊದಲು ಜಾರಿಗೆ ಬರಲಿದೆ. ಈ ಹಿನ್ನೆಲೆಯಲ್ಲಿ, ಆಯೋಗವು ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾ ಅಧಿಕಾರಿಗಳೊಂದಿಗೆ...

ಮುಂಗಾರು ಅಧಿವೇಶನ ಅಂತ್ಯ – 12 ಮಸೂದೆಗಳ ಅಂಗೀಕಾರ!

ಪ್ರತಿಭಟನೆಗಳು, ಗದ್ದಲ, ಸಭಾತ್ಯಾಗಗಳ ನಡುವೆ 2025ರ ಮುಂಗಾರು ಅಧಿವೇಶನ ಅಂತ್ಯಗೊಂಡಿದ್ದು, ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಅವರು ಅನಿರ್ದಿಷ್ಟಾವಧಿಗೆ ಮುಂದೂಡಿದ್ದಾರೆ. ಅಧಿವೇಶನದ ಕೊನೆಯ ದಿನವಾದ ಆಗಸ್ಟ್ 21ರಂದು, ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಚರ್ಚೆ ನಡೆಯಬೇಕಾಗಿತ್ತು. ಆದರೆ ವಿರೋಧ ಪಕ್ಷಗಳ ನಿರಂತರ ಗದ್ದಲದ ಕಾರಣ ಮಧ್ಯಾಹ್ನ 12 ಗಂಟೆಗೆ ಕಲಾಪವನ್ನು ಮುಂದೂಡಲಾಗಿತ್ತು. ನಂತರ ಕಲಾಪವನ್ನು...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img