ಹಾವೇರಿ ನಗರದ ಪಿ.ಬಿ ರಸ್ತೆಯಲ್ಲಿರುವ ಸಂಸದ ಬಸವರಾಜ್ ಬೊಮ್ಮಾಯಿ ಅವರ ಕಚೇರಿ ಎದುರು ಜಮಾಯಿಸಿದ ಯೂತ್ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅವ್ಯವಸ್ಥೆ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ತಂದಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಗಂಭೀರವಾಗಿ...