Monday, July 27, 2026

zodiac signs

ಟ್ರ್ಯಾಕ್ಟರ್‌ನಿಂದ ಆಯತಪ್ಪಿ ವಿದ್ಯಾರ್ಥಿನಿ ಸಾವು..!

ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಡಕೋಳ ಗ್ರಾಮದಲ್ಲಿ ಟ್ರ್ಯಾಕ್ಟರ್‌ನಿಂದ ಆಯತಪ್ಪಿ ಬಿದ್ದು ವಿದ್ಯಾರ್ಥಿನಿ ಮೃತಪಟ್ಟ ಘಟನೆ ನಡೆದಿದೆ. ಶೋಭಾ ಹಂಗನಕಟ್ಟಿ ಎಂಬ 10 ವರ್ಷದ ಬಾಲಕಿ ಗ್ರಾಮಕ್ಕೆ ಕೆಎಸ್‌ಆರ್‌ಟಿಸಿ ಬಸ್ ಬಾರದ ಹಿನ್ನೆಲೆ ಟ್ರ್ಯಾಕ್ಟರ್‌ನಲ್ಲಿ ವಿದ್ಯಾರ್ಥಿನಿ ಶಾಲೆಗೆ ಹೋಗುತ್ತಿದ್ದಳು. ಈ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾಳೆ. ಶಿಹರಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು...

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ: ಫೈನಾನ್ಸಿಯರ್ ರಾಜು

ಬೆಂಗಳೂರು: ಡೆತ್‌ನೋಟ್ ಬರೆದಿಟ್ಟು ಫೈನಾನ್ಶಿಯರ್ ಕಚೇರಿಯಲ್ಲೇ ನೇಣಿಗೆ ಶರಣಾದ ಘಟನೆ ಯಲಚೇನಹಳ್ಳಿಯ ಇಂಡಸ್ಟ್ರಿಯಲ್‌ನ ಕಚೇರಿಯಲ್ಲಿ ನಡೆದಿದೆ.ಬೆಳಗ್ಗೆ 7 ಗಂಟೆ ಸುಮಾರಿಗೆ ಯಲಚೇನಹಳ್ಳಿಯ ಇಂಡಸ್ಟ್ರಿಯಲ್‌ನ ಕಚೇರಿಯಲ್ಲಿ ರಾಜು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಇತ್ತೀಚೆಗೆ ಹಣಕಾಸಿನ ವಿಚಾರವಾಗಿ ಕೆಲ ಮಾತುಕತೆ ನಡೆದಿತ್ತು. ಇದೇ ವಿಚಾರವಾಗಿ ರಾಜು ಕಳೆದ ಮೂರು ದಿನಗಳ ಹಿಂದೆ ಸಿಸಿಬಿ ವಿಚಾರಣೆಗೂ ಹೋಗಿಬಂದಿದ್ದ....

ಸೇನೆಗೆ ಸೇರಲು ನಕಲಿ ದಾಖಲೆ ಪೋರ್ಜರಿ:ಇಬ್ಬರು ಪೊಲೀಸ್ ಸಿಬ್ಬಂದಿ ಸೇರಿ ಒಂಬತ್ತು ಜನ ಬಂಧನ

ವಿಜಯನಗರ: ಸೇನೆಯಲ್ಲಿ ಕೆಲಸ ಕೊಡಿಸಲು ದಾಖಲಾತಿಗಳ ತಿದ್ದುಪಡಿ, ನಕಲಿ ದಾಖಲೆ ಕೊಟ್ಟ ಆರೋಪದಡಿಯಲ್ಲಿ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿ ಒಟ್ಟು 9 ಜನರನ್ನು ಬಂಧಿಸಿದ್ದಾರೆ.ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಸೇರಿದಂತೆ ಹಲವು ನಕಲಿ ದಾಖಲೆಗಳನ್ನು ಆರೋಪಿಗಳಾದಪೊಲೀಸ್ ಸಿಬ್ಬಂದಿ ಅಂಕಲೇಶ್, ರಾಮಾಂಜನಿ ಹಾಗೂ ವೈಭವ್, ನೇತಾಜಿ ರಾಮ್ ಸಾವಂತ್, ಜಂಬಣ್ಣ,...

ಮಕ್ಕಳಿಗೆ ಆನ್ ಲೈನ್ ಪಾಠ ಮಾಡಿ: ಎಚ್.ವಿಶ್ವನಾಥ್

ಮೈಸೂರು: ಕೋವಿಡ್ ರೂಪಾಂತರದ ತೀವ್ರತೆ ಬಗ್ಗೆ ತಜ್ಞರು ಹೇಳಿದ್ದಾರೆ. ಆದರೆ ಶಾಲಾ ಕಾಲೇಜುಗಳಲ್ಲಿ ದನ ತುಂಬಿದಂತೆ ತುಂಬಲಾಗುತ್ತಿದೆ. ಶಿಕ್ಷಣ ಸಚಿವರು ಏನು‌ ಮಾಡುತ್ತಿದ್ದಾರೆ ಎಂದು ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್ಚು ಕಡಿಮೆಯಾದರೆ ದೊಡ್ಡ ಅನಾಹುತವಾಗುತ್ತದೆ. ಇದು ಮಕ್ಕಳ ವಿಚಾರ, ಗಂಭೀರವಾಗಿ ಪರಿಗಣಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದರು. ಹೊಸ ವೈರಸ್ ವೇಗವಾಗಿ...

13 ರ ಬಾಲಕಿ ಮೇಲೆ 70 ರ ವೃದ್ಧನಿಂದ ಅತ್ಯಾಚಾರ

ಕಲಬುರಗಿ‌ : ಅಫಜಲಪುರ ತಾಲ್ಲೂಕಿನ ಗ್ರಾಮವೊಂದರಲ್ಲಿ 13 ವರ್ಷದ ಬಾಲಕಿ ಮೇಲೆ 70 ವರ್ಷದ ವೃದ್ಧ ಅತ್ಯಾಚಾರ ಎಸಗಿದ್ದು, ಗುರುವಾರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಚನಬಸಯ್ಯ ಸಾತಯ್ಯ ಝಳಕಿ ಬಂಧಿತ ಆರೋಪಿ. ಈತ ತಮ್ಮ ಪಕ್ಕದ ಮನೆಯ ಬಾಲಕಿಗೆ ಮೇಣಸಿನ ಕಾಯಿ ಭಜ್ಜಿ ಕೊಡಿಸುವುದಾಗಿ ನಂಬಿಸಿ ಹೊಲಕ್ಕೆ ಕರೆದುಕೊಂಡು ಹೋಗಿ, ಅಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿಯ...

ಬೆಂಗಳೂರಿಗೆ ಕಠಿಣ ರೂಲ್ಸ್ ಜಾರಿ ಅಗತ್ಯವಿದೆ : ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ

ಬೆಂಗಳೂರು : ವಿಶ್ವದಾದ್ಯಂತ ಆತಂಕ ಸೃಷ್ಟಿಸಿರುವ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕಿನ  ಬಗ್ಗೆ ಜನರು ಎಚ್ಚರಿಕೆಯಿಂದ ಇರಬೇಕು ಇಲ್ಲದಿದರೆ ಹಿಂದಿನ ಇತಿಹಾಸ ಮರುಕಳಿಸುತ್ತೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಮಿಕ್ರಾನ್ ಸೋಂಕಿನ ಬಗ್ಗೆ ಬೆಂಗಳೂರಿನ ಜನತೆ ಎಚ್ಚರಿಕೆಯಿಂದ ಇರಬೇಕು. ದೈಹಿಕ ಅಂತರ, ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು....

ಕಿರಿಕ್ ಕೀರ್ತಿಯ ಕಿರಿಕ್..!   

ಬೆಂಗಳೂರು: ಸದಾಶಿವನಗರದ  ಪಬ್ ನಲ್ಲಿ  ಕಿರಿಕ್ ಕೀರ್ತಿ ಯ ಮೇಲೆ ಬಿಯರ್ ಬಾಟಲಿನಿಂದ ಹಲ್ಲೆ. ಸದಾಶಿವನಗರದ ಪಬ್ ಗೆ ತನ್ನ ಸ್ನೇಹಿತರೊಡನೆ  ನಿನ್ನೆ ರಾತ್ರಿ ಕಿರಿಕ್ ಕೀರ್ತಿ ಹೋಗಿದ್ದರು. ಆ ವೇಳೆ ಪಕ್ಕದ ಟೇಬಲ್ ನ  ವ್ಯಕ್ತಿಯೊಬ್ಬ ಫೋಟೋವನ್ನು ತೆಗೆದಿದ್ದ, ಇದನ್ನು ಗಮನಿಸಿದ ಕಿರಿಕ್ ಕೀರ್ತಿ ಅದನ್ನು ಪ್ರಶ್ನಿಸಿದ್ದಾನೆ. ಆಗ ಆ ವ್ಯಕ್ತಿ ಕ್ಷಮೆ...

ಶ್ರೀಕಾಂತ ದೇಸಾಯಿ ಅವರ ಯಶೋಗಾಥೆ.

ಬೆಳಗಾವಿ: ಪ್ರಸ್ತುತ, ಸಾಮಾಜಿಕ ಮಾಧ್ಯಮ ಸದ್ಬಳಕೆಗಿಂತ ದುರ್ಬಳಕೆ ಕುರಿತಾಗಿಯೇ ಹೆಚ್ಚು ಚರ್ಚೆಗೀಡಾಗುತ್ತಿದೆ. ಆದರೆ, ಇಲ್ಲೊಬ್ಬರ ಬಾಳಿಗೆ ಸಾಮಾಜಿಕ ಮಾಧ್ಯಮವೇ ಪ್ರೇರಣೆ ನೀಡಿದೆ. 'ನನ್ನ ಬದುಕೇ ಮುಗಿದ್ಹೋಯ್ತು' ಎಂದು ಭಾವಿಸಿದ್ದ ವ್ಯಕ್ತಿ, ಇಂದು ರಾಷ್ಟ್ರಮಟ್ಟದ ಈಜು ಸ್ಪರ್ಧೆಗಳಲ್ಲಿ ಮಿಂಚುತ್ತಿದ್ದಾರೆ. ಇದು ಬೆಳಗಾವಿ ತಾಲ್ಲೂಕಿನ ಹಲಭಾವಿಯ 44ನೇ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಬಟಾಲಿಯನ್‌ನಲ್ಲಿ ಕಾನ್‌ಸ್ಟೆಬಲ್‌ ಆಗಿರುವ ಶ್ರೀಕಾಂತ ದೇಸಾಯಿ ಅವರ...

ಮುಂದಿನ ಬಾರಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ : ಗುಲಾಂ ನಬಿ ಆಜಾದ್

ನವದೆಹಲಿ : ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 300 ಸಂಸದರನ್ನು ಗೆಲ್ಲಿಸಿಕೊಂಡು ಸ್ವಂತ ಬಲದ ಮೇಲೆ ಸರ್ಕಾರ ರಚಿಸುವ ಪರಿಸ್ಥಿತಿ ಕಾಣಿಸುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಹೇಳುವ ಮೂಲಕ ಸಂಚಲನ ಮೂಡಿಸಿದ್ದಾರೆ. ಜಮ್ಮುವಿನಲ್ಲಿ ಗಡಿ ಜಿಲ್ಲೆ ಪೂಂಚ್‍ನಲ್ಲಿ ಪಕ್ಷದ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು ನಾನು...

ಶಿವಮೊಗ್ಗದ 23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಶಿವಮೊಗ್ಗ : ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಸೋಂಕಿನ ಭೀತಿ ಎದುರಾಗಿದೆ. ಕೇರಳದಿಂದ ವಾಪಸ್ ಆಗಿದ್ದ ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಖಾಸಗಿ ಆಸ್ಪತ್ರೆಯೊಂದನ್ನು ಸೀಲ್ ಡೌನ್ ಮಾಡಲಾಗಿದೆ. ಶಿವಮೊಗ್ಗದ ಗಾಡಿಕೊಪ್ಪ ಸಮೀಪದ ನಂಜಪ್ ಲೈಫ್ ಕೇರ್ ಆಸ್ಪತ್ರೆಯ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. 23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿದೆ. ಈ ವಿಚಾರ...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img