ಕೋಲ್ಡ್ರಿಫ್ ಕೆಮ್ಮಿನ ಸಿರಪ್ಗೆ ತಮಿಳುನಾಡು ಸರ್ಕಾರ ನಿಷೇಧ ಹೇರಿದೆ. ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸಂಭವಿಸಿದ 11 ಮಕ್ಕಳ ಸಾವಿಗೆ ಕಾರಣ, ಕೋಲ್ಡ್ರಿಫ್ ಸಿರಪ್ ಎಂದು ಶಂಕಿಸಲಾಗಿದೆ. ಚೆನ್ನೈ ಮೂಲದ ಕಂಪನಿ ತಯಾರಿಸಿದ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಅನ್ನು, ತಮಿಳುನಾಡಿನಾದ್ಯಂತ ಇನ್ಮುಂದೆ ಮಾರಾಟ ಮಾಡುವಂತಿಲ್ಲ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.
ಈ ಕಂಪನಿಯು ರಾಜಸ್ಥಾನ, ಮಧ್ಯಪ್ರದೇಶ, ಪುದುಚೇರಿಗೆ ಔಷಧಿಗಳನ್ನು ಪೂರೈಸುತ್ತಿತ್ತು. ಇದರಲ್ಲಿ ಡೈಥಿಲೀನ್ ಗ್ಲೈಕಾಲ್ ರಾಸಾಯನಿಕ ಇದೆ ಎನ್ನಲಾಗಿದೆ. ಹೀಗಾಗಿ ಕಾಂಚೀಪುರಂನಲ್ಲಿರುವ ಔಷಧ ಕಂಪನಿಯ ಉತ್ಪಾದನಾ ಘಟಕದಲ್ಲಿ ತಪಾಸಣೆ ನಡೆಸಲಾಗಿದೆ. ಔಷಧಿಯ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ಪರೀಕ್ಷೆಗಾಗಿ ಪ್ರಯೋಗಾಲಯಕ್ಕೂ ಕಳಿಸಲಾಗಿದೆ.
ಕೇಂದ್ರ ಸರ್ಕಾರದ ಆರೋಗ್ಯ ಸೇವೆಗಳ ಮಹಾ ನಿರ್ದೇಶನಾಲಯವು, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಇಲಾಖೆಯ ನಿರ್ದೇಶಕರಿಗೆ ಪತ್ರ ಬರೆದಿದೆ. ಕೆಮ್ಮು ಮತ್ತು ಶೀತಕ್ಕೆ ಸಂಬಂಧಿಸಿದಂತೆ ಎರಡೂ ವರ್ಷದೊಳಗಿನ ಮಕ್ಕಳಿಗೆ ಔಷಧ ಶಿಫಾರಸು ಮಾಡಬಾರದು. 5 ವರ್ಷದೊಳಗಿನ ಮಕ್ಕಳಿಗೆ ಸಾಮಾನ್ಯವಾಗಿ ಅಗತ್ಯವಿರುವುದಿಲ್ಲ. ಅತ್ಯಗತ್ಯ ಬಿದ್ರೆ ಮಾತ್ರ ಸೂಕ್ತ ಪ್ರಮಾಣದಲ್ಲಿ ಕಡಿಮೆ ಅವಧಿಗೆ ಒದಗಿಸಬೇಕೆಂದು ಸೂಚಿಸಿದೆ.
ವೈದ್ಯರು ವಿವೇಚನೆ ಬಳಸಿ ಔಷಧವನ್ನು ಶಿಫಾರಸು ಮಾಡ್ಬೇಕು. ಬಹುತೇಕ ಕೆಮ್ಮಿನ ಸಮಸ್ಯೆಗಳು ಔಷಧಗಳಿಲ್ಲದೇ ಕಡಿಮೆಯಾಗುತ್ತವೆ. ಅನಗತ್ಯವಾಗಿ ಔಷಧ ಬಳಕೆ ತಪ್ಪಿಸಿ, ವೈದ್ಯರ ಸಲಹೆ ಪಾಲಿಸುವಂತೆ ಜನರಲ್ಲಿ ಜಾಗೃತಿ ಮೂಡಿಸುವಂತೆಯೂ ಸೂಚಿಸಿದೆ.