ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗುತ್ತಿದ್ದಂತೆ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿಗೆ ಮೊದಲ ಶಾಕ್ ಕೊಟ್ಟಿದ್ದಾರೆ.
ಉತ್ತರ ಪ್ರದೇಶದ ಯೋಗಿ ಸರ್ಕಾರದಂತೆ ಚಂದ್ರಬಾಬು ನಾಯ್ಡು ಸರ್ಕಾರ, ಬೆಳ್ಳಂಬೆಳಗ್ಗೆ ಬುಲ್ಡೋಜರ್ ಕಾರ್ಯಾಚರಣೆ ಮಾಡಿದೆ. ಗುಂಟೂರು ಜಿಲ್ಲೆಯ ತಡೆಪಲ್ಲಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಕೇಂದ್ರ ಕಚೇರಿಯನ್ನು ನೆಲಸಮಗೊಳಿಸಲಾಗಿದೆ.
ಆಂಧ್ರ ಪ್ರದೇಶ ರಾಜಧಾನಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಮಂಗಲಗಿರಿ ತಡೆಪಲ್ಲಿ ನಗರ ಪಾಲಿಕೆ ಅಧಿಕಾರಿಗಳು ಪೊಲೀಸರ ಸಹಕಾರದೊಂದಿಗೆ ಜಗನ್ ಪಕ್ಷದ ಕೇಂದ್ರ ಕಚೇರಿಯ ಕಟ್ಟಡ ನೆಲಸಮಗೊಳಿಸಿದ್ದಾರೆ.
ನಾಯ್ಡು ಸರ್ಕಾರದ ಬುಲ್ಡೋಜರ್ ಕಾರ್ಯಾಚರಣೆಗೆ ವಿರುದ್ಧ ವೈಎಸ್ಆರ್ ಕಾಂಗ್ರೆಸ್ ಕಿಡಿಕಾರಿದೆ. ತೆಲುಗು ದೇಶಂ ಪಕ್ಷ ಸೇಡಿನ ರಾಜಕಾರಣ ಮಾಡುತ್ತಿದೆ. ಆಂಧ್ರ ಪ್ರದೇಶ ರಾಜಧಾನಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕ್ರಮವನ್ನು ಪ್ರಶ್ನಿಸಿ ನಮ್ಮ ಪಕ್ಷವು ಹೈಕೋರ್ಟ್ ಮೆಟ್ಟಿಲೇರಿದೆ. ನ್ಯಾಯಾಲಯವು ನೆಲಸಮ ಪ್ರಕ್ರಿಯೆ ನಿಲ್ಲಿಸುವಂತೆ ಆದೇಶಿಸಿದೆ. ಆದರೂ, ಕಟ್ಟಡ ಧ್ವಂಸಗೊಳಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ವೈಎಸ್ಆರ್ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಅವರು, ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಿರುದ್ಧ ಕಿಡಿಕಾರಿದ್ದಾರೆ. ಚಂದ್ರಬಾಬು ಅವರು ದ್ವೇಷ ರಾಜಕೀಯವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿದ್ದಾರೆ. ಸರ್ವಾಧಿಕಾರಿಯಂತೆ, ಬುಲ್ಡೋಜರ್ಗಳನ್ನು ಬಳಸಿ ವೈಎಸ್ಆರ್ಸಿಪಿ ಕೇಂದ್ರ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಆರೋಪಿಸಿದ್ದಾರೆ.
ಒಟ್ನಲ್ಲಿ 31 ತಿಂಗಳ ನಂತರ ಶಪಥದಂತೆ ಚಂದ್ರಬಾಬು ನಾಯ್ಡು ಅವರು ಸಿಎಂ ಆಗಿಯೇ ವಿಧಾನಸಭೆಗೆ ಎಂಟ್ರಿಕೊಟ್ಟಿದ್ರು. ನಂತರದ ದಿನವೇ ಜಗನ್ಗೆ ದೊಡ್ಡ ಆಘಾತ ನೀಡಿದ್ದಾರೆ.
ಜಗನ್ಗೆ ಚಂದ್ರಬಾಬು ನಾಯ್ಡು ಮೊದಲ ಶಾಕ್!
- Advertisement -
- Advertisement -