ಕಾಂಗ್ರೆಸ್ ಪಕ್ಷದ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಮುಂದಿನ ವಿಧಾನಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ನೂರಕ್ಕೆ ನೂರರಷ್ಟು ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.
ನೆಲಮಂಗಲದಲ್ಲಿ ಜೆಡಿಎಸ್ ಹಮ್ಮಿಕೊಂಡಿದ್ದ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಸಂಘಟನಾ ಪ್ರವಾಸವನ್ನು ಉದ್ದೇಶಿಸಿ ಅವರು ಮಾತನಾಡಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ 151 ವಿಧಾನಸಭಾ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಇದು ನಮ್ಮ ಗೆಲುವಿಗೆ ದಿಕ್ಸೂಚಿಯಾಗಿದೆ. ಆದ್ದರಿಂದ ಯಾರೂ ಹತಾಶರಾಗದೆ ಇಂದಿನಿಂದಲೇ ಸಂಘಟನೆಯಲ್ಲಿ ಕಾರ್ಯಪ್ರವೃತ್ತರಾಗಿ ಎಂದು ಕರೆ ಕೊಟ್ಟಿದ್ದಾರೆ.
ಬೆಂಗಳೂರಿನ ಕೊಳಚೆ ನೀರನ್ನು ವೃಷಭಾವತಿ ಯೋಜನೆ ಮೂಲಕ ಕೆರೆಗಳಿಗೆ ತುಂಬಿಸುವ ಯೋಜನೆಯನ್ನು ಕಾಂಗ್ರೆಸ್ ಹಮ್ಮಿಕೊಂಡಿದೆ.ಇದರ ವಿರುದ್ಧ ಹೋರಾಟ ರೂಪಿಸುತ್ತೇವೆ ಎಂದು ಹೇಳಿದ್ದಾರೆ. ಇದೇ ವೇಳೆ ನಗೆಸಭೆ ವ್ಯಾಪ್ತಿಯ ಯುವ ಘಟಕದ ಅಧ್ಯಕ್ಷರನ್ನಾಗಿ ಸಿ.ಪಾಲ್ಯಾತೀಥ ಅವರನ್ನಯ ನೇಮಿಸಿ, ನೇಮಕಾತಿ ಪತ್ರ ನೀಡಿದರು.
ಕಾರ್ಯಕ್ರಮಕ್ಕೂ ಮುನ್ನ ಚೌಡೇಶ್ವರಿ ದೇವಸ್ಥಾನದಿಂದ ವೇದಿಕೆವರೆಗೆ ಬೈಕ್ ರ್ಯಾಲಿ ಮೂಲಕ ನಿಖಿಲ್ ಅವರನ್ನು ತೆರದ ವಾಹನದಲ್ಲಿ ಮೆರವಣಿಗೆ ಮಾಡಲಾಯಿತು. ನಿಖಿಲ್ ಜೊತೆ ಮಾಜಿ ಶಾಸಕರಾದ ಕೆ.ಶ್ರೀನಿವಾಸಮೂರ್ತಿ, ಎ.ಮಂಜು, ಇ.ಕೃಷ್ಣಪ್ಪ,ಬಮೂಲ್ ನಿರ್ದೇಶಕ ಭವಾನಿ ಶಂಕರ್ ಬೈರೇಗೌಡ, ಮತ್ತುತರು ಸಾಥ್ ನೀಡಿದರು.
ವರದಿ:ರಂಜಿತ ರೇವಣ್ಣ ನಾಟನಹಳ್ಳಿ