ಸಾಲ ವಸೂಲಿಗೆ ಹೋದ ಸಿಬ್ಬಂದಿಯನ್ನ ಹಗ್ಗದಿಂದ ಕಟ್ಟಿಹಾಕಲು ಮುಂದಾದ ಮಹಿಳೆಯರು..

Kolar News: ಕೋಲಾರ: ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಸಾಲ ಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ, ಕೋಲಾರದಲ್ಲಿ ಮಹಿಳೆಯರ ಹೋರಾಟ ತೀವ್ರವಾಗಿದೆ. ಇಲ್ಲಿನ ಮಹಿಳೆಯರು ಸಾಲ ವಸೂಲಿಗೆ ಹೋದ ಸಿಬ್ಬಂದಿಯನ್ನು ಹಗ್ಗದಿಂದ ಕಟ್ಟಿಹಾಕಲು ಮುಂದಾಗಿದ್ದು, ದಾಖಲಾತಿ ಪತ್ರಗಳನ್ನು ಹರಿದು ಹಾಕಿ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಆ ಸಿಬ್ಬಂದಿಯನ್ನು ಗ್ರಾಮದಿಂದ ಹೊರಹಾಕಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಬೈರಕೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳ ಬಳಿ ಸಾಲ ವಸೂಲಿಗೆಂದು ಡಿಸಿಸಿ ಬ್ಯಾಂಕ್ ಸಿಬ್ಬಂದಿ ತೆರಳಿದ್ದರು. ಆದರೆ ಆ ಮಹಿಳೆಯರು ಸಿದ್ದರಾಮಯ್ಯ ಸಾಲ ಮನ್ನಾ ಮಾಡ್ತಾರೆ ಎಂದು ಪೇಪರ್ ಕಟ್ಟಿಂಗ್ ತೋರಿಸಿ, ತರಾಟೆಗೆ ತೆಗೆದುಕೊಂಡಿದ್ದಾರೆ.

ಶಾಲಾ ಮಕ್ಕಳೊಂದಿಗೆ ಕುಳಿತು ಬಿಸಿಯೂಟ ಸೇವಿಸಿ ಸರಳತೆ ಮೆರೆದ ಶಿರಹಟ್ಟಿ ಶಾಸಕ..

ನಾಳೆ ಮಂಡ್ಯ ಜನತೆಗೆ ಬೀಗರ ಊಟದ ಔತಣಕ್ಕೆ ಆಮಂತ್ರಿಸಿದ ಸುಮಲತಾ ಅಂಬರೀಷ್..

ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಕೇಂದ್ರ ಸರ್ಕಾರಕ್ಕೆ ಮತ್ತೊಂದು “ಧರ್ಮ” ಸಂಕಟ.

About The Author