Hubballi Political News: ಹುಬ್ಬಳ್ಳಿ: ವಿರೋಧ ಪಕ್ಷದ ನಾಯಕನ ಆಯ್ಕೆಗೆ ಶಾಸಕರ ಅಪಸ್ವರ ಹಿನ್ನೆಲೆ, ಬಿಜೆಪಿ ಶಾಸಕರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷದ ಹಿರಿಯ ಕಿರಿಯ ಶಾಸಕರ ಅಭಿಪ್ರಾಯ ಸಂಗ್ರಹಿಸಿ, ವಿರೋಧ ಪಕ್ಷದ ನಾಯಕರ ಆಯ್ಕೆ ಆಗಿದೆ. ಬೆಳಿಗ್ಗೆ ಮೊದಲು ಶಾಸಕರನ್ನ ಪ್ರತ್ಯೇಕವಾಗಿ ಮಾತನಾಡಿಸಲಾಗಿದೆ. ವೀಕ್ಷಕರಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ ಗೌತಮ ಆಗಮಿಸಿದ್ದರು. ಯಾವುದೇ ಭಿನ್ನಾಭಿಪ್ರಾಯ ಬರದಂತೆ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಶಾಸಕರ ಅಭಿಪ್ರಾಯ ಸಂಗ್ರಹಿಸಿ ಕೇಂದ್ರದ ಹಿರಿಯ ನಾಯಕರಿಗೆ ರವಾನೆ ಮಾಡಲಾಗಿದೆ. ವಿರೋಧ ಪಕ್ಷದ ನಾಯಕನ ಆಯ್ಕೆ ಮೊದಲು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಷಯ ಮಂಡನೆ ಮಾಡಲಾಯಿತು. ಎಲ್ಲ ಶಾಸಕರು ಇದಕ್ಕೆ ವಿರೋಧ ಮಾಡದೇ ಅನುಮೋದನೆ ನೀಡಿದರು. ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ.ಇದರೊಂದಿಗೆ ಹಿರಿಯ ಶಾಸಕರಾದ ಆರ್ ಅಶೋಕ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದರು. ಸತತವಾಗಿ ಏಳು ಸಲ ಶಾಸಕರಾಗಿ ಆಯ್ಕೆಯಾದವರು. ಹಿರಿಯ ಶಾಸಕರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ನಾಯಕ ಅವರು ಎಂದು ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ.
ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ ಯಾವುದೇ ಜನಪರ ಕೆಲಸ ಆಗ್ತಾ ಇಲ್ಲ. ಡಿಸೆಂಬರ್ 4 ರಿಂದ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನದಲ್ಲಿ ಸಮರ್ಥವಾಗಿ ಮಾತನಾಡುತ್ತೇವೆ. ಯಾವುದೇ ರೀತಿಯ ಸರ್ಕಾರದ ಪರ ಸಾಫ್ಟ್ ಕಾರ್ನರ್ ಇಲ್ಲ ಎಂದು ಮಹೇಶ್ ಟೆಂಗಿನಕಾಯಿ ಹೇಳಿದರು.
ಇನ್ನು ನಾಳೆ ಅಹಮದಾಬಾದ್ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ವಿಶ್ವಕಪ್ ಪಂದ್ಯ ನಡೆಯಲಿದ್ದು, ಕ್ರಿಕೇಟ್ ವಿಶ್ವಕಪ್ ಬಗ್ಗೆ ಮಾತನಾಡಿದ ಟೆಂಗಿನಕಾಯಿ, ಕ್ರಿಕೆಟ್ ವಿಶ್ಚ ಕಪ್ ಗೆದ್ದು ಬರಲಿ. ನಾಳಿನ ಪಂದ್ಯದಲ್ಲಿ ಭಾರತ ಗೆಲ್ಲಲಿದೆ. ಈಗಾಗಲೇ 10 ಪಂದ್ಯಗಳಲ್ಲಿ ಭಾರತ ಗೆದ್ದಿದೆ. ನಾಳಿನ ಪಂದ್ಯದಲ್ಲಿ ಸಹ ಭಾರತ ಗೆಲ್ಲುತ್ತದೆ. ರೋಹಿತ್ ಶರ್ಮಾ ನೇತೃತ್ವದಲ್ಲಿನ ತಂಡ ಒಳ್ಳೆಯ ಆಟ ಆಡಲಿದೆ ಎಂದು ಶುಭಹಾರೈಸಿದರು.
ತುಮಕೂರು ತಾಲೂಕು ಕಚೇರಿಗೆ ಸಚಿವರ ಧಿಡೀರ್ ಭೇಟಿ: ಕಕ್ಕಾಬಿಕ್ಕಿಯಾದ ಅಧಿಕಾರಿಗಳು
‘ಪ್ರಧಾನಿ ಮೋದಿಯವರ ಈ ನಡೆಯನ್ನು ರಾಜಕೀಯ ಇಬ್ಬಂದಿತನ ಎಂದು ಕರೆಯದೆ ಬೇರೇನು ಹೇಳಬೇಕು?’
‘ಕುಮಾರಸ್ವಾಮಿಯವರಿಗೆ ಸುಳ್ಳು ಹೇಳುವುದು ಬಿಟ್ಟರೆ ಬೇರೇನೂ ತಿಳಿದಿಲ್ಲ. ಸುಳ್ಳೇ ಅವರ ಮನೆದೇವರು’

