Wednesday, December 3, 2025

Latest Posts

ಹೆಣ್ಣು ಗಂಡು ನೋಡೊಕೆ ಹೋದಂಗೆ ಈ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ಗಳು: KN Rajanna

- Advertisement -

Tumakuru: ತುಮಕೂರು: ತುಮಕೂರಿನಲ್ಲಿಂದು ಮಾತನಾಡಿರುವ ಕೆ.ಎನ್.ರಾಜಣ್ಣ ಅವರು ಸಿಎಂ-ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ವಿಚಾರ ಕುರಿತಂತೆ ಪ್ರತಿಕ್ರಿಯಿಸಿದ್ದಾರೆ.

ಬ್ರೇಕ್ ಫಾಸ್ಟ್ ಮೀಟಿಂಗ್ ಬೀಗತನ ಮಾಡಿದಂತೆ. ಮೊದ್ಲು ಒಂದು ಕಡೆ ಹೆಣ್ಣು ನೋಡೋಕೆ ಬರ್ತಾರೆ.
ಆ ಮೇಲೆ ಗಂಡು ನೋಡೋಕೆ ಬರ್ತಾರೆ. ಆ ರೀತಿಯಾಗಿದೆ ಈ ಬ್ರೇಕ್ ಫಾಸ್ಟ್ ಮೀಟಿಂಗ್. ಇರೋದು ಏನಿದಿಯೋ ಅದೇ ಮುಂದುವರಿದುಕೊಂಡು ಹೋಗುತ್ತೆ. ಯಾವುದೇ ರಿವರ್ಸ್ ಆಗಲ್ಲ. ಈ ಹಳ್ಳಿಗಳಲ್ಲಿ ಶಾಂತಿ ಆಗಬೇಕು ಅಂದ್ರೆ ಕುರಿ ಕೋಳಿ ಬಲಿ ಕೊಡ್ತಾರೆ. ಆ ರೀತಿಯಾಗಿ ಎರಡು ಮನೆಯಲ್ಲಿ ಆಗಿದೆ. ಬದಲಾವಣೆ ಇಲ್ಲ ಅಂತ ನಾವು ಅಂದುಕೊಂಡಿದ್ದೇವೆ. ಬದಲಾವಣೆ ಇದ್ರೆ ಹೈಕಮಾಂಡ್ ಹೇಳ್ತಾರೆ. ಸಚಿವ ಸಂಪುಟ ವಿಸ್ತರಣೆ ಬೆಳಗಾವಿ ಅಧಿವೇಶನದ ನಂತರ ಆಗುತ್ತೆ ಎಂದು ರಾಜಣ್ಣ ಹೇಳಿದ್ದಾರೆ.

ದಲಿತ ಸಿಎಂ ಪರಮೇಶ್ವರ್ ಆಗಬೇಕೇಂಬ ಒತ್ತಾಯ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ರಾಜಣ್ಣ, ಅನಿವಾರ್ಯವಾಗಿ ಸಿದ್ದರಾಮಯ್ಯ ನವರನ್ನ ಪದಚ್ಯುತಿ ಆದರೆ ದಲಿತ ಸಿಎಂ ಪರಮೇಶ್ವರ್ ಆಗಬೇಕು ಎಂದು ರಾಜಣ್ಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸಚಿವರನ್ನ ರಾಜಣ್ಣ ಪುತ್ರ ರಾಜೇಂದ್ರ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ರಾಜಣ್ಣ, ಸ್ಕ್ರೀಪ್ಕೋ ದಲ್ಲಿ ರಾಜೇಂದ್ರ ಸಿನೀಯರ್ ನಿರ್ದೇಶಕ ಇದ್ದಾನೆ. ಸ್ಕ್ರೀಪ್ಕೋ ಇಸ್ಕೋದಲ್ಲಿ ಆರ್ಟಿಫಿಸಿಯಲ್ ಮೆನ್ಯೂರ್ ಮಾಡಬೇಕಾಗಿದೆ. ಆ ಎರಡು ಸಮಿತಿಗಳು ಏಷ್ಯಾ ಖಂಡದಲ್ಲಿ ದೊಡ್ಡ ಸಹಕಾರಿ ಸಂಸ್ಥೆಗಳು. ಇದೆಲ್ಲವೂ ಕೇಂದ್ರ ಸಹಕಾರಿ ಸಚಿವರ ಅಡಿಯಲ್ಲಿ ಬರ್ತವೆ. ಇದರ ಬಗ್ಗೆ ಚರ್ಚೆಗಳಿದ್ದಾಗ ಅವರೊಬ್ಬರೇ ಅಲ್ಲ ಇತರೆ ಎಲ್ಲಾ ನಿರ್ದೇಶಕರು ಹೋಗ್ತಾರೆ. ಅಮಿತ್ ಶಾ ಕೂಡಾ ಸಭೆ ಕರೆತಾ ಇರ್ತಾರೆ. ಅದಕ್ಕೆ ವಿಶೇಷ ಅರ್ಥ ಕಲ್ಪಿಸೋದು ಬೇಡ. ಡೆಲ್ಲಿಗೆ ಹೋಗಿ ಬಂದ ಶಾಸಕರ ಪ್ರಯತ್ನವೂ ಸಫಲವೂ ಆಗಿಲ್ಲ ವಿಫಲವೂ ಆಗಿಲ್ಲ.

- Advertisement -

Latest Posts

Don't Miss